ರಾಜ್ಯದಲ್ಲಿ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಕೆಲ ಸಮಯದ ಹಿಂದೆ ಪಾಸಿಟಿವ್ ಸಂಖ್ಯೆಗಳು ಕಡಿನೆಯಾಗುತ್ತಾ ಆಶಾವಾದ ಮೂಡಿತ್ತು. ಆದರೆ ಪ್ರಸಕ್ತ ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ದೃಢಪಡುತ್ತಿದೆ. ಸೋಮವಾರ ಕೂಡಾ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್ಉಗಳು 2,792 ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,89,804ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಸೋಮವಾರ ಸಂಜೆಯ ಹೊತ್ತಿಗೆ 1,742 ಮಂದಿಗೆ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,29,915ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಈ ನಡುವೆ, ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 16 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,520ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತಬುಲೆಟಿನ್ ಮೂಲಕ ಮಾಹಿತಿ ನೀಡಿದೆ‌.

ಅಲ್ಲಿ ಕಣ್ ಸನ್ನೆ.. ಕನ್ನಡಲ್ಲಿ ಕೈ ಸನ್ನೆ.. ಪ್ರಿಯಾ ವಾರಿಯರ್ ಕುತೂಹಲ

ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಕನ್ನಡದಲ್ಲಿ ನಟಿಸುತ್ತಿರುವ ‘ವಿಷ್ಣುಪ್ರಿಯ’ ಚಿತ್ರ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಶ್ರೇಯಸ್ ಮಂಜು ಕೂಡಾ ನಟಿಸಿದ್ದಾರೆ.

‘ಕಟ್ಟಿಂಗ್ ಶಾಪ್’ನಲ್ಲಿ ಪ್ರವೀಣ್, ಅರ್ಚನಾ ಆಕರ್ಷಣೆ

ಕನ್ನಡ ಸಿನಿಮಾ ಕ್ಷೇತ್ರದಲ್ಲೀಗ ಬಗೆಬಗೆಯ ಟೈಟಲ್ ನಲ್ಲಿ ಚಿತ್ರಗಳು ಹೊರಬರುತ್ತಿವೆ. ಇದೀಗ ಕೆಬಿ ಪ್ರವೀಣ್ ಮತ್ತು ಅರ್ಚನಾ ಕೊಟ್ಟಿಗೆ ಅಭಿನಯದ ‘ಕಟ್ಟಿಂಗ್ ಶಾಪ್’ ಚಿತ್ರ ಕೂಡಾ ವಿಭಿನ್ನ ಟೈಟಲ್’ನಿಂದ ಗಮನಸೆಳೆದಿದೆ. ಪವನ್ ಭಟ್ ನಿರ್ದೇಶಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಜಾಲತಾಣಗಳಲ್ಲಿ ಈ ಟೀಸರ್ ಸಕತ್ ಸದ್ದು ಮಾಡುತ್ತಿದೆ.    

ಮಂಜೂರಾದ ಕಲಬುರಗಿ ರೈಲ್ವೆ ಡಿವಿಷನ್ ರದ್ದು? ರಾಜ್ಯಸಭೆಯಲ್ಲಿ ಜಿ.ಸಿ.ಚಂದ್ರಶೇಖರ್ ಆಕ್ರೋಶ

ದೆಹಲಿ: 8 ವರ್ಷಗಳಾದರೂ ಕಲಬುರಗಿ ರೈಲ್ವೆ ಡಿವಿಷನ್ ಕಾರ್ಯರೂಪಕ್ಕೆ ಬಂದಿಲ್ಲ. ಈ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿರುವ ಕಾಂಗ್ರೆಸ್ ಸಂಸದ ಜಿ.ಸಿ.ಚಂದೇರಶೇಖರ್, 2014 ರ ಕೇಂದ್ರ ಬಜೆಟ್ ನಲ್ಲಿ ಮಂಜೂರಾಗಿದ್ದರು ಸಹ ಕಾರ್ಯರೂಪಕ್ಕೆ ಬರದ ಬಗ್ಗೆ ಕೇಂದ್ರ ಸರ್ಕಾರವನ್ನು ತಾರಾಟೆಗೆ ತೆಗೆದುಕೊಂಡಿದ್ದಾರೆ. ಮಂಜೂರಾಗಿದ್ದ ಕಲಬುರಗಿ ರೈಲ್ವೆ ಡಿವಿಷನ್ ಕಚೇರಿಯನ್ನು ಸಂಪೂರ್ಣವಾಗಿ ಕೈಬಿಡಲಾಗಿದೆ ಎಂದ ರೈಲ್ವೆ ಮಂತ್ರಿ ಪಿಯೂಷ್ ಗೋಯಲ್ ಹೇಳಿಕೆಗೆ ಸಂಸದರಾದ ಜಿ.ಸಿ ಚಂದ್ರಶೇಖರ್  ಮತ್ತು ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಆಕ್ರೋಶವ್ಯಕ್ತಪಡಿಸಿದರು. ಇದಕ್ಕೆ ಮಣಿದ ಸಚಿವರು ಸರ್ಕಾರದ ನಿರ್ಧಾರವನ್ನು ಪುನರ್ ಪರಿಶೀಲಿಸುವುದಾಗಿ ಪಿಯೂಷ್ ಗೋಯಲ್ ಭರವಸೆ ನೀಡಿದರು. ಕಲ್ಯಾಣ ಕರ್ನಾಟಕದಿಂದ 5 ಎಂಪಿ ಗಳನ್ನು ಕೊಟ್ಟಿದ್ದರು 8 ವರ್ಷಗಳಾದರೂ ಕಾರ್ಯರೂಪಕ್ಕೆ ಬರದ ಕಲಬುರಗಿ ರೈಲ್ವೆ ಡಿವಿಷನ್ ಕಚೇರಿಯನ್ನು ಸಂಪೂರ್ಣವಾಗಿ ಕೈಬಿಡಲಾಗಿದೆ ಎಂದ ರೈಲ್ವೆ ಮಂತ್ರಿ ಹೇಳಿಕೆಗೆ ನಾನು ಮತ್ತು ಖರ್ಗೆಯವರು ಆಕ್ರೋಶವ್ಯಕ್ತಪಡಿಸಿದ್ದಕ್ಕೆ ಪುನರ್ ಪರಿಶೀಲಿಸುವುದಾಗಿ ಹೇಳಿದ ಮಂತ್ರಿ.…

ಲಯನ್ಸ್ ಕ್ಲಬ್ ಸಂಚಾರಿ ರಕ್ತ ಸಂಗ್ರಹಣೆ ಬಸ್ಸು; ಮುಖ್ಯಮಂತ್ರಿ ಚಾಲನೆ

ಬೆಂಗಳೂರು; ರಕ್ತದಾನ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಲು ಸರ್ಕಾರದೊಂದಿಗೆ ಸಂಘ, ಸಂಸ್ಥೆಗಳು ಕೂಡ ಕೈ ಜೋಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು. ಲಯನ್ಸ್ ಕ್ಲಬ್ ವತಿಯಿಂದ ಮೂರು ಸಂಚಾರಿ ರಕ್ತ ಸಂಗ್ರಹಣೆ ಹಾಗೂ ಸಾಗಾಣಿಕೆ ಬಸ್ಸುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವರು, ರಕ್ತದಾನ ಮಹಾದಾನವೆಂದು ಪರಿಗಣಿಸಲ್ಪಟ್ಟಿದೆ. ಕೋವಿಡ್ ಬಂದ ಬಳಿಕ ಕಳೆದೊಂದು ವರ್ಷದಿಂದ ರಕ್ತಸಂಗ್ರಹ ಪ್ರಮಾಣ ಬಹಳ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ಸಂಘ, ಸಂಸ್ಥೆಗಳು ಮುಂದೆ ಬಂದು ಸರ್ಕಾರದೊಂದಿಗೆ ಕೈ ಜೋಡಿಸಿ ರಕ್ತಸಂಗ್ರಹದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದರು. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ನಮ್ಮ ದೇಶದಲ್ಲಿ ಪ್ರತಿ ವರ್ಷ 4 ಕೋಟಿ ಯುನಿಟ್ ನಷ್ಟು ರಕ್ತದ ಬೇಡಿಕೆ ಇದೆ. ಶೇ.1 ರಷ್ಟು ಜನರು ರಕ್ತ ನೀಡಿದರೂ ಈ ಅವಶ್ಯಕತೆಯನ್ನು ನೀಗಿಸಬಹುದು. ಇದಕ್ಕಾಗಿ ಜನರಲ್ಲಿ ಹೆಚ್ಚು…

ಆಶ್ರಯ ಮನೆ ಹಾಗೂ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅಗ್ಗ ದರದಲ್ಲಿ ಮರಳು; ಸರ್ಕಾರದ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು ₹10 ಲಕ್ಷದೊಳಗೆ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರದಲ್ಲೇ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಶುಕ್ರವಾರ ವಿಧಾನಸಭೆಯಲ್ಲಿ ಘೋಷಿಸಿದರು. ಪ್ರಶ್ನೋತ್ತರ ಅವಯಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸೆಯನ್ನು ನೀಗಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಆಶ್ರಯ ಮನೆ ಹಾಗೂ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುವ ₹10 ಲಕ್ಷದೊಳಗಿನ ಮನೆಗೆ 100ರಿಂದ 200 ರೂ. ಟನ್ ದರದಲ್ಲಿ ಪೂರೈಕೆ ಮಾಡುವ ಉಚಿತ ಮರಳು ನೀತಿಯನ್ನು ಜಾರಿಗೆ ಮಾಡುತ್ತೇವೆ ಎಂದು ಪ್ರಕಟಿಸಿದರು. ಬಡವರು ಹೆಚ್ಚಿನ ಹಣ ಭರಿಸಿ ಮನೆ ಕಟ್ಟಲು ಮರಳು ಖರೀದಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರ್ಕಾರದಿಂದಲೇ ಉಚಿತವಾಗಿ ಮರಳು ಪೂರೈಕೆ ಮಾಡುವ ಯೋಜನೆ ಇದೆ. ಗ್ರಾಮಪಂಚಾಯ್ತಿಯಿಂದ ಹಿಡಿದು ನಗರಸಭೆ ವ್ಯಾಪ್ತಿಯಲ್ಲಿ ಮನೆ…

ಕೊವಿಡ್ ಮರಣ ಮೃದಂಗ ಹಿನ್ನೆಲೆ; ನಾಲ್ಕು‌ ನಗರಗಳಲ್ಲಿ ನೈಟ್ ಕರ್ಫ್ಯೂ

ದೆಹಲಿ: ಬೇಸಿಗೆ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ಕೊವಿಡ್ ಎರಡನೇ ಅಲೆ ಜನರನ್ನು ಆತಂಕಕ್ಕೀಡುಮಾಡಿದೆ. ಒಂದು ವರ್ಷದ ಅವಧಿಯಲ್ಲಿ ಕೊರೋನಾ ಸೃಷ್ಟಿಸಿದ ತಲ್ಲಣದಿಂದಾಗಿ ಜನ ಕಂಗಾಲಾಗಿದ್ದಾರೆ. ಇದೀಗ ಮತ್ತೆ ನಿತ್ಯವೂ ಸಾವಿರಾರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗಿದೆ. ಗುಜರಾತ್‌ನಲ್ಲೂ ಕೊರೋನಾ ಸೋಂಕು ಉಲ್ಬಣಗೊಂಡಿದೆ. ಕೋವಿಡ್ ಪ್ರಕರಣಗಳ ನಿಯಂತ್ರಣ ಸಂಬಂಧ ನಾಲ್ಕು ಪ್ರಮುಖ ನಗರಗಳಲ್ಲಿ ನೈಟ್ ಕರ್ಫ್ಯೂ ಹೇರಲಾಗಿದೆ. ಅಹಮದಾಬಾದ್, ಸೂರತ್, ವಡೋದರಾ ಮತ್ತು ರಾಜ್‌ಕೋಟ್‌ನಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಗುಜರಾತ್ ಸರ್ಕಾರ ತಿಳಿಸಿದೆ. ಮಾರ್ಚ್ 31ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತವೆ ಸರ್ಕಾರ ಹೇಳಿಕೆದೆ.

ಮರ್ಡರ್ ಮಿಸ್ಟರಿಯ ‘ಅಮೃತ ಅಪಾರ್ಟ್‌ಮೆಂಟ್ ಟೀಸರ್‌ನಲ್ಲೇ ಇದೆ ಥ್ರಿಲ್

  ತರ್ಕ, ಉತ್ಕರ್ಷದಂತಹಾ ಹಲವು ಥ್ರಿಲ್ಲರ್ ಮೂವೀಗಳು ಸಿನಿಮಾ ಇಂಡಸ್ಟ್ರಿಯಲ್ಲಿ ಗೆದ್ದೇ ಗೆಲ್ಲುತ್ತದೆ ಎಂಬ ನಂಬಿಕೆ ಚಿತ್ರಲೋಕದ ದಿಗ್ಗಜರದ್ದು. ಇದೀಗ ಅದೇ ಕಾನ್ಸೆಪ್ಟ್‌ನಲ್ಲಿ ‘ಅಮೃತ ಅಪಾರ್ಟ್‌ಮೆಂಟ್’ ಚಿತ್ರ ತೆರೆಗೆ ಬರಲು ಸಿದ್ದವಾಗುತ್ತಿದೆ. ಗುರುರಾಜ್ ಕುಲಕರ್ಣಿ ಅವರು ಮರ್ಡರ್ ಮಿಸ್ಟರಿ ಕಥೆಯಾಧಾರಿತ ‘ಅಮೃತ ಅಪಾರ್ಟ್ಮೆಂಟ್ಸ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರೇ ಒಂಥರಾ ಧ್ರಿಲ್ ಕೊಡುತ್ತೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೈಸೂರಿನಲ್ಲಿ ಜಿಟಿಡಿ-ಹೆಚ್ಡಿಡಿ ಫ್ಯಾಮಿಲಿ ಫೈಟ್; ಮೈಮೂಲ್‌ನಲ್ಲಿ ಹೆಚ್ಡಿಕೆ ಬಣ ಸೈಡ್

ಮೈಸೂರು: ಜೆಡಿಎಸ್ ನಾಯಕರ ಗುಂಪುಗಳ ನಡುವಿನ ಮುಸುಕಿನ‌ ಗುದ್ದಾಟ ಇದೀಗ ಎಲೆಕ್ಷನ್ ಫೈಟ್ ವರೆಗೂ ಸಾಗಿದೆ. ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯ ಕಣವೆನಿಸಿದ್ದ ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ ದೇವೇಗೌಡ ಕುಟುಂಬಕ್ಕೆ ತೀವ್ರ ನಿರಾಸೆಯಾಗಿದೆ. ಮೈಮುಲ್‌ನ 15 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 12 ಸ್ಥಾನಗಳು ಜಿಟಿಡಿ ಬಣದ ಪಾಲಾದರೆ, 3 ಸ್ಥಾನಗಳಿಗೆ ಮಾತ್ರ ಹೆಚ್‌ಡಿಕೆ ಬಣ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಒಬ್ಬ ಸದಸ್ಯ ಮಾತ್ರ ಗೆದ್ದಿದ್ದಾರೆ.   ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಚಾರ ನಡೆಸಿದರು. ಹೆಚ್.ಡಿ.ಕೆ ಬಣದಲ್ಲಿದ್ದ ಹೆಚ್.ಡಿ.ರೇವಣ್ಣ ಭಾಮೈದ ಎಸ್.ಕೆ.ಮಧುಚಂದ್ರ ಸಹ ಸೋಲನಪ್ಪಿದ್ದಾರೆ. ಮೈಸೂರು ವಿಭಾಗದ 7 ಹಾಗೂ ಹುಣಸೂರು ವಿಭಾಗದ 8 ಸೇರಿ ಒಟ್ಟು 15 ನಿರ್ದೇಶಕ ಸ್ಥಾನಗಳಿಗೆ ಮತದಾನ…