ಶಿವಮೊಗ್ಗ ಕಲ್ಲು ಕ್ವಾರಿ ಘಟನೆ ದುರಂತ: ಕಂದಾಯ ಇಲಾಖೆ ಆಯುಕ್ತರಿಂದ ತನಿಖೆ

ಬೆಂಗಳೂರು-ಶಿವಮೊಗ್ಗದ ಹುಣಸೋಡಿನ ಕಲ್ಲು ಕ್ವಾರಿ ಬಳಿ ಸಂಭವಿಸಿದ ಘಟನೆಯನ್ನು ಕಂದಾಯ ಇಲಾಖೆಯ ಆಯುಕ್ತರಿಂದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ವಿಧಾನಪರಿಷತನಲ್ಲಿ ಪ್ರಕಟಿಸಿದರು. ನಿಯಮ 68ರಡಿ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಈ ಸಂಬಂಧ ಸ್ಟೋನ್ ಕ್ರಷರ್ ಮಾಲೀಕ ಡಿ.ವಿ.ಸುಧಾಕರ್ ಮತ್ತು ಜಮೀನು ಮಾಲೀಕ ಕುಲಕರ್ಣಿ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ಕ್ರಷರ್ ಘಟಕದ ಲೈಸೆನ್ಸ್ ರದ್ದುಪಡಿಸಲಾಗಿದೆ ಎಂದು ಹೇಳಿದರು. ಘಟನೆಗೆ ಕಾರಣವಾದ 65 ಸಾವಿರ ಡಿಟೋನೇಟರ್ಸ್,1275 ಕೆಜಿ ಜಿಲೆಟಿನ್, 17500 ಮೀಟರ್ ಸೇಫ್ಟಿ ಫ್ಯೂಸ್ ವಶಪಡಿಸಿಕೊಳ್ಳಲಾಗಿದೆ. ಹೊಸದಾಗಿ ಕ್ರಷರ್ ಘಟಕಗಳಿಗೆ ಲೈಸೆನ್ಸ್ ಮಂಜೂರು ಮತ್ತು ನವೀಕರಣ ಮಾಡದಂತೆ ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಘಟನೆ ನಡೆದ ಪ್ರದೇಶದಲ್ಲಿ ಮಂಜೂರಾಗಿರುವ ಜಮೀನುಗಳ ಗ್ರಾಂಟ್‍ಗಳನ್ನು ರದ್ದುಪಡಿಸಲಾಗಿದ್ದು, ಸೋಟದಲ್ಲಿ ಮೃತಪಟ್ಟ 6…

‘ಎಂಬಿಎ’ ಪ್ರಯತ್ನದಲ್ಲಿ ಪುನೀತ್ ಮತ್ತು ಕಾವ್ಯ

ಕನ್ನಡ ಸಿನಿಮಾ ರಂಗ ಚೇತರಿಸಿಕೊಂಡಿದ್ದು ಒಂದೊಂದೇ ಚಿತ್ರಗಳು ಸದ್ದು ಮಾಡುತ್ತಿದೆ. ಇದೀಗ ‘ಎಂಬಿಎ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ಗಳಿಸುತ್ತಿದೆ. ಈ ಚಿತ್ರವದಲ್ಲಿ ಪುನೀತ್ ಗೌಡ ಮತ್ತು ಕಾವ್ಯ ಗೌಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಬೆಂಗಳೂರು: ಸಮಾಜದಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ಸರಿಯಾದ ಸದುಪಯೋಗ ಮತ್ತು ರಕ್ಷಣೆ ಈ ಸಂಸ್ಥೆ ಮುಂದಾಗಿರುವುದು ಸಂತೋಷದ ವಿಷಯ ಎಂದು ಮಾಜಿ ಶಾಸಕ ಎಸ್ ಮುನಿರಾಜು ಹೇಳಿದ್ದಾರೆ. ಪೀಣ್ಯ ದಾಸರಹಳ್ಳಿ ಸಮೀಪ, ಕೆರೆ ಗುಡ್ಡದಹಳ್ಳಿಯಲ್ಲಿ ಜನ್ಮಭೂಮಿ ನಾಗರಾಜು ನೇತೃತ್ವದಲ್ಲಿ ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸೇವಾ ಸಮಿತಿಯ ಉದ್ಘಾಟನೆ ನೆರವೇರಿತು. ಸಮಿತಿ ಉದ್ಘಾಟಿಸಿ ಮಾತನಾಡಿದ ಎಸ್ ಮುನಿರಾಜು, ಸರ್ಕಾರದ ಸೌಲಭ್ಯಗಳನ್ನು ಪಡೆಯಲು ನಿಶಕ್ತರಾದ ಜನರಿಗೆ ಈ ಸಂಸ್ಥೆ ದಾರಿದೀಪವಾಗಲಿ , ಮುಂದೆಯೂ ಕೂಡ ಈ ಸಂಸ್ಥೆ ನಿಂತ ನೀರಾಗದೆ ನಿರಂತರ ಚಟುವಟಿಕೆಯಿಂದ ಜನರ ರಕ್ಷಣೆಯ ಗುರಿ ಹೊಂದಲಿ ಎಂದರು. ಉಪ ಪೊಲೀಸ್ ಆಯುಕ್ತ ಶಿವರಾಜು ಮಾತನಾಡಿ ಮಾನವನ ಹಕ್ಕು ಹಗರಣವಾಗುತ್ತಿರುವ ಈ ಕಾಲಘಟ್ಟದಲ್ಲಿ ಅದನ್ನು ಕೇಳಲು ಶಕ್ತಿ ಇರುವುದಿಲ್ಲ ಅಂತಹ ಜನರ ಬಾಳಿಗೆ ನಿಂತ ಈ ಸಂಸ್ಥೆ ನಮ್ಮೆಲ್ಲರ ಸಹಾಯ ಸಲಹೆ…

ಸರ್ಕಾರದ ವಿರುದ್ಧ ಸಮರ; ಇದೀಗ ವಾಹನ ಚಾಲಕರ ಸರದಿ.

ಬೆಂಗಳೂರು: ಚಾಲಕರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅರೆಬೆತ್ತಲೆ ಮೆರವಣಿಗೆ ಕೈಗೊಂಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾವಿರಾರು ಚಾಲಕರೊಂದಿಗೆ ಉಪವಾಸ ಸತ್ಯಾಗ್ರಹ ನಡೆಸಿ ಶಕ್ತಿ ಪ್ರದರ್ಶನ ಏರ್ಪಡಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.1ರಿಂದ ಚಾಲಕರ ಒಕ್ಕೂಟದ ವತಿಯಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಚಾಲಕರ ನಿಗಮ ಮಂಡಳಿ, ಪೆಟ್ರೋಲ್ ಮತ್ತು ಡಿಸೆಲ್ ದರ ಇಳಿಕೆ ತುರ್ತಾಗಿ ಮಾಡಬೇಕು, ಸಾರಥಿ ಸೂರು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಕಾಲಕರ ದಿನಾಚರಣೆ ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಸುಮಾರು 110 ಸಂಘಟನೆಗಳ ಮುಖ್ಯಸ್ಥರು ಬೆಂಬಲ ಸೂಚಿಸಿವೆ

ಕಾಲೇಜು ಉಪನ್ಯಾಸಕರ ವರ್ಗಾವಣೆಗೆ ಕೌನ್ಸೆಲಿಂಗ್; ಹೊಸ ಮಾರ್ಗಸೂಚಿ

ಬೆಂಗಳೂರು: ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ.15ರಷ್ಟು ಮೀರದಂತೆ ವರ್ಗಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಪದವಿ ಹಾಗೂ ತಾಂತ್ರಿಕ ಕಾಲೇಜುಗಳ ಬೋಧನಾ ಸಿಬ್ಬಂದಿ ವರ್ಗಕ್ಕೆ ಹೊಸ ನಿಯಮಾವಳಿ ರೂಪಿಸಿ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಒಂದೇ ಕಡೆ 4 ವರ್ಷ ಕೆಲಸ ಮಾಡಿರುವ ಬೋಧಕರು ವರ್ಗಾವಣೆಗೆ ಅರ್ಹರಾಗಿದ್ದು, ಈ ಅಂಶವನ್ನು ಆಧಾರವಾಗಿಟ್ಟುಕೊಂಡು ವರ್ಗಾವಣೆ ಪ್ರಮಾಣವನ್ನು ನಿಗದಿಪಡಿಸಲಾಗಿದೆ. ಪದವಿ ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಬೋಧಕರಿಗೆ ಇದು ಅನ್ವಯವಾಗುತ್ತದೆ ಎಂದು ಎಂದು ಅವರು ತಿಳಿಸಿದ್ದಾರೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವರ್ಗಾವಣೆಗೆ ಚಾಲನೆ ಸಿಗಲಿದೆ. ಆದಷ್ಟು ಬೇಗ ಕೌನ್ಸೆಲಿಂಗ್ ದಿನಾಂಕಗಳನ್ನು ಪ್ರಕಟಿಸಲಾಗುವುದು.…