ಬೆಂಗಳೂರು: ಸಮಾಜದಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ಸರಿಯಾದ ಸದುಪಯೋಗ ಮತ್ತು ರಕ್ಷಣೆ ಈ ಸಂಸ್ಥೆ ಮುಂದಾಗಿರುವುದು ಸಂತೋಷದ ವಿಷಯ ಎಂದು ಮಾಜಿ ಶಾಸಕ ಎಸ್ ಮುನಿರಾಜು ಹೇಳಿದ್ದಾರೆ. ಪೀಣ್ಯ ದಾಸರಹಳ್ಳಿ ಸಮೀಪ, ಕೆರೆ ಗುಡ್ಡದಹಳ್ಳಿಯಲ್ಲಿ ಜನ್ಮಭೂಮಿ ನಾಗರಾಜು ನೇತೃತ್ವದಲ್ಲಿ ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸೇವಾ ಸಮಿತಿಯ ಉದ್ಘಾಟನೆ ನೆರವೇರಿತು. ಸಮಿತಿ ಉದ್ಘಾಟಿಸಿ ಮಾತನಾಡಿದ ಎಸ್ ಮುನಿರಾಜು, ಸರ್ಕಾರದ ಸೌಲಭ್ಯಗಳನ್ನು ಪಡೆಯಲು ನಿಶಕ್ತರಾದ ಜನರಿಗೆ ಈ ಸಂಸ್ಥೆ ದಾರಿದೀಪವಾಗಲಿ , ಮುಂದೆಯೂ ಕೂಡ ಈ ಸಂಸ್ಥೆ ನಿಂತ ನೀರಾಗದೆ ನಿರಂತರ ಚಟುವಟಿಕೆಯಿಂದ ಜನರ ರಕ್ಷಣೆಯ ಗುರಿ ಹೊಂದಲಿ ಎಂದರು. ಉಪ ಪೊಲೀಸ್ ಆಯುಕ್ತ ಶಿವರಾಜು ಮಾತನಾಡಿ ಮಾನವನ ಹಕ್ಕು ಹಗರಣವಾಗುತ್ತಿರುವ ಈ ಕಾಲಘಟ್ಟದಲ್ಲಿ ಅದನ್ನು ಕೇಳಲು ಶಕ್ತಿ ಇರುವುದಿಲ್ಲ ಅಂತಹ ಜನರ ಬಾಳಿಗೆ ನಿಂತ ಈ ಸಂಸ್ಥೆ ನಮ್ಮೆಲ್ಲರ ಸಹಾಯ ಸಲಹೆ…