ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಸಹಚರರಿಂದ BJP ನಾಯಕನ ಮೇಲೆ ಹಲ್ಲೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಬಿಜೆಪಿ ಎಸ್‍ಸಿ ಮೋರ್ಚಾದ ಮುಖಂಡ ಪೃಥ್ವಿ ಸಿಂಗ್ ಅವರ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಹಾಗೂ ಎಂಎಲ್‍ಸಿ ಚನ್ನರಾಜ್ ಹಟ್ಟಿಹೊಳಿ ಅವರ ಗನ್‍ಮ್ಯಾನ್ ಮತ್ತು ಸಹಚರರು ಗಂಭೀರ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಲಿತ ಮುಖಂಡ, ಬಿಜೆಪಿ ಎಸ್‍ಸಿ ಮೋರ್ಚಾದ ಮುಖಂಡ ಪೃಥ್ವಿ ಸಿಂಗ್ ಅವರ ಮನೆಯ ಬಳಿ ಹಲ್ಲೆ ನಡೆದಿದೆ. ಈ ಸಂಬಂಧ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ, ಇತರ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ಇವತ್ತು ರಾತ್ರಿಯೇ ಅವರನ್ನು ಬಂಧಿಸಿ ಎಂದು ಒತ್ತಾಯಿಸಿದರು. ಪೊಲೀಸ್ ವ್ಯವಸ್ಥೆ ಬಗ್ಗೆ ನಮಗೆ ವಿಶ್ವಾಸ ಇಲ್ಲ ಎಂದು ಪೃಥ್ವಿ ಸಿಂಗ್ ಹೇಳಿದ್ದಾರೆ. ಮನೆಯವರಿಗೆ ರಕ್ಷಣೆ ಕೊಡಿಸಿ ಎಂದು ಕೋರಿದ್ದಾರೆ. ಅಧಿಕಾರದ ದರ್ಪದಿಂದ ಸಚಿವರು, ಅವರ ಸಹೋದರ ನಡೆದುಕೊಂಡದ್ದನ್ನು ಬೆಳಗಾವಿಯ ಜನರು…

ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರ ಶವ ಪತ್ತೆ

ಚಾಮರಾಜನಗರ: ನಾಪತ್ತೆಯಾಗಿದ್ದ ಮಾಜಿ ಸಚಿವ ಸಿಪಿ ಯೋಗೇಶ್ವರ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಅವರನ್ನು ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಡಿಸೆಂಬರ್ 2ರಂದು ಮಹದೇವಯ್ಯ ನಾಪತ್ತೆಯಾಗಿದ್ದರು. ಅವರ ಕಾರು ಚಾಮರಾಜನಗರ ಜಿಲ್ಲೆಯ ಹನೂರು ಸಮೀಪದ ರಾಮಾಪುರದಲ್ಲಿ ಭಾನುವಾರ ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ರಾಮಾಪುರ ಕಾಡಿನಲ್ಲಿ ಶೋಧಕಾರ್ಯ ನಡೆಸಿದಾಗ ಮಹದೇವಯ್ಯ ಶವ ಇಂದು ಪತ್ತೆಯಾಗಿದೆ.

ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ವಿಧಿವಶ

ಹಾಸನ: ಮೈಸೂರು ದಸಾರಾದಲ್ಲಿ ಈ ಹಿಂದೆ ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ. ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಅರ್ಜುನ ಅಸುನೀಗಿದೆ. ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಯ ಸಂದರ್ಭದಲ್ಲಿ ಕಾಡಾನೆಯು ಅರ್ಜುನನ ಹೊಟ್ಟೆ ಭಾಗಕ್ಕೆ ತಿವಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ ಸಾವನ್ನಪ್ಪಿದೆ ಎನ್ನಲಾಗಿದೆ.

ಮಿಚಾಂಗ್ ಅವಾಂತರ; ಆಂಧ್ರದ ಹಲವೆಡೆ ರೆಡ್ ಅಲರ್ಟ್

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚಾಂಗ್ ಚಂಡಮಾರುತದಿಂದಾಗಿ ಆಂಧಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೆಲ್ಲೂರು ಮತ್ತು ಮಚಲಿಪಟ್ನಂ, ಬಾಪಟ್ಲಾ ಮತ್ತು ಗುಂಟೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಿಚಾಂಗ್ ಚಂಡಮಾರುತದಿಂದಾಗಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಂದ್ರಪ್ರದೇಶದ ಹಲವು ಜೆಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆಂಧ್ರ ಪ್ರದೇಶದ ಹಲವೆಡೆ ರೆಡ್ ಅಲರ್ಟ್..  ಮೈಚಾಂಗ್ ಚಂಡಮಾರುತ ಹಿನ್ನೆಲೆಯಲ್ಲಿ, ಪಶ್ಚಿಮ ಗೋದಾವರಿ ಮತ್ತು ಉತ್ತರ ಕರಾವಳಿ ಆಂಧ್ರ ಪ್ರದೇಶದ ಡಾ ಅಂಬೇಡ್ಕರ್ ಕೋನಸೀಮಾ, ನೆಲ್ಲೂರು, ಪ್ರಕಾಶಂ, ಕೃಷ್ಣ, ಬಾಪಟ್ಲಾ, ಗುಂಟೂರು ಮತ್ತು ರಾಯಲಸೀಮಾ ಪ್ರದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡಮಾರುತದ ತೀವ್ರತೆಯ ಆಧಾರದ ಮೇಲೆ ರಜೆ ಘೋಷಿಸುವಂತೆ ಶಾಲಾ ಶಿಕ್ಷಣ ಆಯುಕ್ತರು ಶಿಕ್ಷಣ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತಗಳು…

ಮಿಚಾಂಗ್ ಚಂಡಮಾರುತ; ಭಾತೀ ಮಳೆಯಿಂದಾಗಿ ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ತಮಿಳುನಾಡು ಹಾಗೂ ಪೂರ್ವದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಮಳೆ ಹಿನ್ನೆಲೆಯಲ್ಲಿ ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು,ಕಾಂಚೀಪುರಂ ಸಹಿತ ಹಲವು ಜಿಲ್ಲೆಗಳಲ್ಲಿ ಸೋಮವಾರ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮಿಚಾಂಗ್ ಚಂಡಮಾರುತದ ಪರಿಣಾಮ ತಮಿಳುನಾಡಿನ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ, ತಮಿಳುನಾಡಿನ ಚೆನ್ನೈನಲ್ಲಿ ಭಾರಿ ಮಳೆ: ಮೈಸೂರು, ಬೆಂಗಳೂರು ಎಕ್ಸ್‌ಪ್ರೆಸ್ ಸೇರಿದಂತೆ 11 ರೈಲುಗಳು ರಡಾಗಿವೆ. ಡಿಸೇಂಬರ್ 7ರವರೆಗೆ ಸುಮಾರು 144 ರೈಲುಗಳ ಸೇವೆಯನ್ನು ರದ್ದಾಗಿವೆ ಎಂದು ಮೂಲಗಳು ತಿಳಿಸಿವೆ.

ಎರಡು ವರ್ಷದ ಹೆಣ್ಣು ಮಗುವಿನ ಶವ ಪತ್ತೆ.. ಪಾಪಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ

ಬೆಂಗಳೂರು (ಗ್ರಾ): ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣದ ಚರಂಡಿಯಲ್ಲಿ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ, ಮಗುವಿನ ಕೆಳಗಡೆ ಸೀರೆ ಹಾಕಿದ್ದು, ಮಗುವಿಗೆ ಸ್ವೇಟರ್ ಹಾಕಲಾಗಿತ್ತು. ಮಗು ಸತ್ತ ನಂತರ ಶವವನ್ನ ಚರಂಡಿಯಲ್ಲಿ ಮಲಗಿಸಿ ಹೋಗಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ ಬಾಶೆಟ್ಟಿಹಳ್ಳಿಯಲ್ಲಿ ಕೈಗಾರಿಕೆಗಳಲ್ಲಿ ಸಾಕಷ್ಟು ಮಂದಿ ಉತ್ತರ ಭಾರತೀಯರು ಕೆಲಸ ಮಾಡುತ್ತಿದ್ದು, ಬಾಡಿಗೆ ಮನೆಗಳಲ್ಲಿ ವಾಸವಾಗಿದ್ದಾರೆ, ಸತ್ತಿರುವ ಮಗು ಉತ್ತರ ಭಾರತೀಯರ ಕುಟುಂಬಕ್ಕೆ ಸೇರಿರಬಹುದು, ಯಾವುದೋ ಕಾರಣಕ್ಕೆ ಮಗು ಸತ್ತಿರಬಹುದು, ಅಥವಾ ಮಗುವನ್ನ ಕೊಂದಿರಲು ಬಹುದು ಎನ್ನಲಾಗುತ್ತಿದೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

‘ಕಮಲ ಮುಕ್ತ ದಕ್ಷಿಣ ಭಾರತ’; ಫಲಿಸಿದ ‘ಇಂಡಿಯಾ’ ಮೈತ್ರಿಕೂಟದ ತಂತ್ರ

ಹೈದರಾಬಾದ್: ಪಂಚರಾಜ್ಯಗಳ ಚುನಾವಣಾ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಆಡಳಿತಾರೂಢ BRS ಪಕ್ಷದ ಜೊತೆ ತೀವ್ರ ಸೆಣಸಾಟ ನಡೆಸಿರುವ ಕಾಂಗ್ರೆಸ್ ಸರಳ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ. ಅಷ್ಟೇ ಅಲ್ಲ, ‘ಕಮಲ ಮುಕ್ತ ದಕ್ಷಿಣ ಭಾರತ’ ಮಾಡುವ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ತಂತ್ರ ಫಲಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುವ ಮೂಲಕ ದಕ್ಷಿಣ ಭಾರತದಲ್ಲಿ ಪ್ರಾಬಲ್ಯವನ್ನು ಹೆಚ್ಚಿಸಿಕೊಂಡಿದೆ. ಕೆಲವು ತಿಂಗಳ ಹಿಂದಷ್ಟೇ ಕರ್ನಾಟಕದಲ್ಲಿ ಗೆದ್ದ ಕಾಂಗ್ರೆಸ್ ಇದೀಗ ತೆಲಂಗಾಣಕ್ಕೂ ತನ್ನ ಚಕ್ರಾಧಿಪತ್ಯವನ್ನು ವಿಸ್ತರಿಸಿದಂತಾಗಿದೆ. ಅಷ್ಟೇ ಅಲ್ಲ, ಗೋವಾವನ್ನು ಹೊರತುಪಡಿಸಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ‘I.A.N.D.I.A.’ ಮೈತ್ರಿಕೂಟ ಯಶಸ್ವಿಯಾಗಿದೆ. 119 ಸದಸ್ಯಬಲದ ತೆಲಂಗಾಣ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 60 ಸ್ಥಾನಗಳ ಅಗತ್ಯವಿದ್ದು, ಆಡಳಿತಾರೂಢ ತೆಲಂಗಾಣದ ಕನಸು ನುಚ್ಚು ನೂರಾಗಿದೆ. ಕಾಂಗ್ರೆಸ್ ಪಕ್ಷ ಸರಳ ಬಹುಮತದೊಂದಿಗೆ ಗದ್ದುಗೆ ಏರಿದೆ.

ಮಿನಿ ಮಹಾಸಮರದಲ್ಲಿ ಬಿಜೆಪಿ ಪ್ರಾಬಲ್ಯ; ಕಾಂಗ್ರೆಸ್‌ಗೆ ‘ಕೈ’ ಕೊಟ್ಟ ‘ಗ್ಯಾರೆಂಟಿ’

ದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹಿರಂಗಗೊಂಡಿದ್ದು, ಈ ಮಹಾಸಮರದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ, ತೆಲಂಗಾಣ, ಮಿಜೋರಾಂ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಭಾನುವಾರ ನಡೆದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಭದ್ರವಾಗಿವೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಬಿಜೆಪಿ ಪಾರುಪಥ್ಯ ಮೆರೆದರೆ, ಛತ್ತೀಸ್‌ಗಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಬಲ ಹೋರಾಟ ನೀಡಿದೆ. ತೆಲಂಗಾಣ ಕಾಂಗ್ರೆಸ್ ಪಾಲಾದರೆ ಮಿಜೋರಾಂ‌ನಲ್ಲಿ ಪ್ರಾದೇಶಿಕ ಪಕ್ಷವೇ ಕಿಂಗ್. ಈ ಮಿನಿ ಮಹಾಸಮರವು ಮು.ಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿದೆ. ಹಾಗಾಗಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಭವಿಷ್ಯ ಈ ಫಲಿತಾಂಶದಲ್ಲಿ ಅಡಗಿದೆ ಎಂದು ಪಂಡಿತರು ವಿಶ್ಲೇಷಣೆ ಮಾಡುತ್ತಿದ್ದಾರೆ. ಈ ನಡುವೆ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ ರಾಜ್ಯಗಳಲ್ಲಿನ ಪ್ರತೀ ಚುನಾವಣೆಗಳಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರುವುದು ಸಾಮಾನ್ಯ. ಅದೇ ರೀತಿ, ಈ ಬಾರಿ…

ಛತ್ತೀಸ್‌ಗಡ ಎಲೆಕ್ಷನ್ : ಹಾವು ಏಣಿಯಾಟದಲ್ಲಿ ‘ಕೈ’ ಎದುರು ಮೇಲುಗೈ ಸಾಧಿಸಿದ್ದು ಬಿಜೆಪಿ

ದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿದ್ದ ಪಂಚ ರಾಜ್ಯಗಳ ಮಿನಿ ಮಹಾಸಮರದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ತೋರಿಸಿದೆ. ಮಧ್ಯಪ್ರದೇಶ, ರಾಜಸ್ಥಾನದ ರೀತಿಯಲ್ಲೇ ಛತ್ತೀಸ್‌ಗಡ ರಾಜ್ಯದಲ್ಲೂ ಕಮಲ ಪಕ್ಷ ಪ್ರಾಬಲ್ಯ ಮೆರೆದಿದೆ. ಮತ ಎಣಿಕೆಯುದ್ದಕ್ಕೂ ಕಾಂಗ್ರೆಸ್-ಬಿಜೆಪಿ ನಡುವೆ ಹಾವು ಏಣಿಯಾಟ ಮಾದರಿಯಲ್ಲೇ ಕಾಂಗ್ರೆಸ್-ಬಿಜೆಪಿ ನಡುವೆ ಬಲಾಬಲ ವ್ಯಕ್ತವಾಗುತ್ತಿತ್ತು. 90 ಸದಸ್ಯ ಬಲದ ಛತ್ತೀಸ್‌ಗಡದಲ್ಲಿ ಒಂದೊಮ್ಮೆ ಕಾಂಗ್ರೆಸ್ ಪಕ್ಷ ಬಹುಮತ ಗಾಳಿಸುವಷ್ಟು ಸ್ಥಾನಗಳಲ್ಲಿ ಮುಂದೆ ಇದ್ದರೆ, ಮತ್ತೊಂದು ಸುತ್ತಿನಲ್ಲಿ ಬಿಜೆಪಿ ಪಕ್ಷವು ಬಹುಮತ ಸಾಧಿಸುವಷ್ಟು ಮುನ್ನಡೆ ಸಾಧಿಸಿತು. ಹೀಗೆ ಮತಎಣಿಕೆಯುದ್ದಕ್ಕೂ ಕುತೂಹಲಕಾರಿ ಬೆಳವಣಿಗೆ ಸಾಗುತ್ತಾ ಹೋಯಿತು. 90 ಸದಸ್ಯಬಲದ ಛತ್ತೀಸ್‌ಗಡ ವಿಧಾನಸಭೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಛತ್ತೀಸ್‌ಗಡ ವಿಧಾನಸಭೆಯಲ್ಲಿ 46 ಸ್ಥಾನಗಳನ್ನು ಗೆದ್ದ ಪಕ್ಷ ಸರ್ಕಾರ ರಚನೆ ಮಾಡಬಹುದಾಗಿದ್ದು, ಬಿಜೆಪಿ ಅದಕ್ಕಿಂತಲೂ ಹೆಚ್ಚಿನ ಬಹುಮತದೊಂದಿಗೆ ಜಯಭೇರಿ ಭಾರಿಸಿದೆ. ಅಂತಿಮ ಫಲಿತಾಂಶ ಹೀಗಿದೆ. ಒಟ್ಟು…

5 ಸ್ಟೇಟ್ಸ್ ಎಲೆಕ್ಷನ್ : ರಾಜಸ್ಥಾನದಲ್ಲಿ ‘ಬಿಜೆಪಿ’ಯೇ ರಾಜ

ದೆಹಲಿ: ಮಿನಿ ಮಹಾಸಮರದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ತೋರಿಸಿದ್ದು, ರಾಜಸ್ಥಾನದಲ್ಲೂ ಕಮಲ ಪಕ್ಷವೇ ‘ರಾಜ’ ಎನಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಯಂತೆಯೇ ಜಯಭೇರಿ ಭಾರಿಸಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಣ್ಣಿಸಲಾಗುತ್ತಿರುವ ಈ ಚುನಾವಣಾ ಪೈಕಿ ರಾಜಸ್ಥಾನದಲ್ಲೂ ಬಿಜೆಪಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿಕೊಂಡಿದೆ. 199 ಸದಸ್ಯಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ 100 ಸ್ಥಾನಗಳನ್ನು ಗೆದ್ದ ಪಕ್ಷ ಸರ್ಕಾರ ರಚನೆ ಮಾಡಬಹುದಾಗಿದ್ದು, ಬಿಜೆಪಿ ಅದಕ್ಕಿಂತಲೂ ಹೆಚ್ಚಿನ ಬಹುಮತದೊಂದಿಗೆ ಜಯಭೇರಿ ಭಾರಿಸಿದೆ. ಬಲಾಬಲ ಹೀಗಿದೆ. ಒಟ್ಟು ಸ್ಥಾನಗಳು: 199 ಮ್ಯಾಜಿಕ್ ನಂಬರ್: 100  ಬಿಜೆಪಿ – 115 ಕಾಂಗ್ರೆಸ್ – 70 ಇತರರು – 14