Blog

ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

ಬೆಂಗಳೂರು: ಕಾಂಗ್ರೆಸ್ ಸಂಘಟನೆಯನ್ನು ಬೂತ್ ಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ರಾಜ್ಯದಲ್ಲಿ ‘ಸಂಘಟನ್ ಸೃಜನ್’ ಅಭಿಯಾನವನ್ನು ಆಗಸ್ಟ್ 8ರಿಂದ ಆರಂಭಿಸಲಾಗುವುದು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ನಡೆಯುತ್ತಿರುವ ಈ ಅಭಿಯಾನದ ಭಾಗವಾಗಿ ಕರ್ನಾಟಕದಲ್ಲೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅರ್ಹರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದರು. ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿಯಾಗಿ ಚಾಂಡಿ ಓಮನ್ ನೇಮಕಗೊಂಡಿದ್ದು, ಆಗಸ್ಟ್ 8ರಿಂದ 15ರವರೆಗೆ ಜಯನಗರ, ಬಿಟಿಎಂ, ಆನೇಕಲ್, ಬೊಮ್ಮನಹಳ್ಳಿ, ಪದ್ಮನಾಭನಗರ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆಗಳು ನಡೆಯಲಿವೆ ಎಂದು ಹೇಳಿದರು. ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದ್ದು, ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ವರದಿಯನ್ನು ಎಐಸಿಸಿಗೆ ಸಲ್ಲಿಸಲಾಗುತ್ತದೆ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು/ಹಾಸನ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶಕ್ಕೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದೇಶದ ವಿರುದ್ಧ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಾಸನದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ಹಲವು ಭಾಗಗಳಲ್ಲಿ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಲಾಶಯಗಳು ಸಮರ್ಪಕವಾಗಿ ಭರ್ತಿಯಾಗಿಲ್ಲ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ನಿರ್ದೇಶನ ನೀಡಿರುವುದು ಅವೈಜ್ಞಾನಿಕ ಮತ್ತು ಕರ್ನಾಟಕದ ಹಿತಾಸಕ್ತಿಗೆ ಮಾರಕ ಎಂದು ಹೇಳಿದರು. ಮೊದಲು ರಾಜ್ಯದ ರೈತರು ಮತ್ತು ಜನರಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ಒತ್ತಾಯಿಸಿದರು. ಈ ನಡುವೆ ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ…

SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ 84,31,612 ಅನುಮಾನಾಸ್ಪದ ಮತದಾರರನ್ನು (ASDDO) ಗುರುತಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ವಿತರಿಸಲಾದ 5,54,32,314 ಎನ್ಯುಮರೇಷನ್ ಫಾರಂಗಳ ಪೈಕಿ 4,26,75,861 ಫಾರಂಗಳು ಡಿಜಿಟಲೀಕರಣಗೊಂಡಿದ್ದು, ಶೇ.76.99ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು. ಪರಿಶೀಲನೆಯಲ್ಲಿ 11,61,231 ಮತದಾರರು ನಾಪತ್ತೆ, 51,74,968 ಮಂದಿ ಶಾಶ್ವತವಾಗಿ ಸ್ಥಳಾಂತರ, 14,99,799 ಮಂದಿ ಮೃತಪಟ್ಟಿರುವುದು, 5,62,572 ದ್ವಿ-ಮತದಾರರು ಹಾಗೂ 33,042 ಇತರೆ ಪ್ರಕರಣಗಳು ಪತ್ತೆಯಾಗಿವೆ ಎಂದು ವಿವರಿಸಿದರು. ಮತದಾರರು ಗೈರುಹಾಜರಾಗಿರುವುದು ಅಥವಾ ಸ್ಥಳಾಂತರಗೊಂಡಿರುವುದಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರ್ ಮತ್ತು ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಹೆಸರು ಕೈಬಿಟ್ಟಿರುವ ಅರ್ಹ ಮತದಾರರು ಆನ್‌ಲೈನ್ ಅಥವಾ ಫಾರ್ಮ್-6 ಮೂಲಕ ಮರು ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು. ಇನ್ನೂ 43,24,847 ಎನ್ಯುಮರೇಷನ್ ಫಾರಂಗಳು ಸಾರ್ವಜನಿಕರಿಂದ ವಾಪಸ್ ಬರಬೇಕಿದ್ದು, ಅವುಗಳನ್ನು…

‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

ನವದೆಹಲಿ: ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ಗೆ ಅವಮಾನ ಮಾಡುವುದನ್ನು ಕ್ರಿಮಿನಲ್ ಅಪರಾಧವಾಗಿ ಪರಿಗಣಿಸುವ ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ವಿಧೇಯಕ–2026’ವನ್ನು ರಾಜ್ಯಸಭೆ ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಿತು. ಈ ಮೂಲಕ ರಾಷ್ಟ್ರಗೀತೆಯಾದ ‘ಜನ ಗಣ ಮನ’ಗೆ ಇರುವ ಶಾಸನಬದ್ಧ ರಕ್ಷಣೆಯನ್ನು ‘ವಂದೇ ಮಾತರಂ’ಗೂ ವಿಸ್ತರಿಸುವ ಉದ್ದೇಶವನ್ನು ಸರ್ಕಾರ ಮುಂದಿಟ್ಟಿದೆ. ಕಲಾಪ ಆರಂಭದಿಂದಲೇ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು. ಗದ್ದಲದ ನಡುವೆಯೂ ಉಪಸಭಾಪತಿ ಹರಿವಂಶ್ ಕಲಾಪ ಮುಂದುವರಿಸಿ, ವಿಧೇಯಕದ ಮೇಲಿನ ಚರ್ಚೆಗೆ ಅವಕಾಶ ನೀಡಿದರು. ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ, ಸ್ವಾತಂತ್ರ್ಯ ಹೋರಾಟಗಾರರ ಹೋರಾಟದಲ್ಲಿ ‘ವಂದೇ ಮಾತರಂ’ ಪ್ರಮುಖ ಪ್ರೇರಣೆಯ ಘೋಷಣೆಯಾಗಿತ್ತು ಎಂದು ಸ್ಮರಿಸಿದರು. ದೇಶದ ರಾಷ್ಟ್ರೀಯ…

ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧ್ಯಕ್ಷೆಯಾಗಿ ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನ ಮತ್ತು ರಾಷ್ಟ್ರಪತಿ ಎಸ್ಟೇಟ್‌ನಲ್ಲಿ ಹಸಿರು, ಡಿಜಿಟಲ್ ಹಾಗೂ ಮಕ್ಕಳ ಸ್ನೇಹಿ ಹಲವು ನಾಗರಿಕ ಕೇಂದ್ರಿತ ಯೋಜನೆಗಳಿಗೆ ಮಂಗಳವಾರ ಚಾಲನೆ ನೀಡಿದರು. ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡುವ ಪ್ರವಾಸಿಗರ ಅನುಕೂಲಕ್ಕಾಗಿ ಮೊಬೈಲ್ ಆ್ಯಪ್ ಆಧಾರಿತ ಇ-ಆಡಿಯೊ ಮಾರ್ಗದರ್ಶಿ ಸೇವೆಯನ್ನು ಉದ್ಘಾಟಿಸಲಾಯಿತು. ಈ ಸೇವೆ ಹಿಂದಿ, ಇಂಗ್ಲಿಷ್ ಸೇರಿದಂತೆ 16 ಭಾರತೀಯ ಭಾಷೆಗಳಲ್ಲಿ ಲಭ್ಯವಿದ್ದು, ಸಂಕೇತ ಭಾಷೆಯ ವ್ಯವಸ್ಥೆಯನ್ನೂ ಒಳಗೊಂಡಿದೆ. ಆಗಸ್ಟ್ 5ರಿಂದ ಸೆಪ್ಟೆಂಬರ್ 5ರವರೆಗೆ ನಡೆಯಲಿರುವ ಇ-ಉಪಹಾರ್ ಮೂರನೇ ಆವೃತ್ತಿಗೂ ಚಾಲನೆ ನೀಡಲಾಗಿದ್ದು, ರಾಷ್ಟ್ರಪತಿಗಳಿಗೆ ಲಭಿಸಿದ 300 ಆಯ್ದ ಉಡುಗೊರೆಗಳನ್ನು ಸಾರ್ವಜನಿಕ ಹರಾಜಿಗೆ ಇಡಲಾಗುತ್ತದೆ. ಮಕ್ಕಳಿಗಾಗಿ ‘ಬಚ್‌ಪನ್–ಬಾಲ್ ಪರಿಸರ’, ‘ಕಿಲ್ಕರಿ’ ಆಟದ ವಲಯ ಹಾಗೂ ‘ಸಮರ್ಥ ಅಂಗನವಾಡಿ-ಕಮ್-ಪಲ್ನಾ’ ಕೇಂದ್ರವನ್ನು ಉದ್ಘಾಟಿಸಲಾಯಿತು. ರಾಷ್ಟ್ರಪತಿ ಭವನ ಮತ್ತು ಸಮೀಪದ ಮೆಟ್ರೋ ನಿಲ್ದಾಣದ ನಡುವೆ ಮಹಿಳಾ…

ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಹಂತಹಂತವಾಗಿ ಸುಧಾರಿಸುತ್ತಿದ್ದರೂ, ಮೇಲಿನ ಅಸ್ಸಾಂನ ಏಳು ಜಿಲ್ಲೆಗಳಲ್ಲಿ ಇನ್ನೂ 5 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ತಿಳಿಸಿದೆ. ಎಎಸ್‌ಡಿಎಂಎ ಮಾಹಿತಿ ಪ್ರಕಾರ, ಶಿವಸಾಗರ್, ಚರೈಡಿಯೊ, ಗೋಲಾಘಾಟ್, ಜೋರ್ಹತ್, ನಾಗಾಂವ್, ಸೋನಿತ್ಪುರ್ ಹಾಗೂ ಕಾಮರೂಪ್ (ಮೆಟ್ರೋ) ಜಿಲ್ಲೆಗಳ 622 ಗ್ರಾಮಗಳ ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ. ಸುಮಾರು 45,342 ಹೆಕ್ಟೇರ್ ಕೃಷಿ ಭೂಮಿ ಇನ್ನೂ ನೀರಿನಲ್ಲಿ ಮುಳುಗಿದ್ದು, ರೈತರಿಗೆ ಭಾರೀ ನಷ್ಟ ಉಂಟಾಗಿದೆ. ಗೋಲಾಘಾಟ್ ಜಿಲ್ಲೆಯ ನುಮಾಲಿಗಢದಲ್ಲಿ ಧನ್ಸಿರಿ (ದಕ್ಷಿಣ) ನದಿ ಇನ್ನೂ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇತರ ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಸಾವಿನ ಪ್ರಕರಣ ವರದಿಯಾಗಿಲ್ಲ. ಆದರೆ ಈ ವರ್ಷದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.…

ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮೇಲೆ ಸೈಬರ್ ದಾಳಿ ನಡೆದಿರುವ ಕುರಿತು ಪ್ರಕಟವಾದ ಮಾಧ್ಯಮ ವರದಿಗಳನ್ನು ಕೇಂದ್ರ ರಕ್ಷಣಾ ಸಚಿವಾಲಯ ತಳ್ಳಿಹಾಕಿದೆ. ಈ ಸಂಬಂಧ ನಡೆದ ತನಿಖೆಯಲ್ಲಿ ಯಾವುದೇ ಸಕ್ರಿಯ ಸೈಬರ್ ದಾಳಿ, ಅನಧಿಕೃತ ನೆಟ್‌ವರ್ಕ್ ಒಳನುಗ್ಗುವಿಕೆ ಅಥವಾ ಹೊಸ ಡೇಟಾ ಸೋರಿಕೆಯ ಪುರಾವೆಗಳು ಪತ್ತೆಯಾಗಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಸಚಿವಾಲಯದ ಪ್ರಕಾರ, ಸೋರಿಕೆಯಾಗಿದೆ ಎಂದು ಹೇಳಲಾಗುತ್ತಿರುವ ಹೆಚ್ಚಿನ ಮಾಹಿತಿಯು ಗೌಪ್ಯ ಅಥವಾ ವರ್ಗೀಕೃತ ದಾಖಲೆಗಳಲ್ಲ. ಕೆಲವು ದಾಖಲೆಗಳು 2020ರಿಂದ 2022ರ ಅವಧಿಯ ಹಳೆಯ ಉಲ್ಲಂಘನೆಗೆ ಸಂಬಂಧಿಸಿದ್ದು, ಅವುಗಳನ್ನು ಇತ್ತೀಚಿನ ಮತ್ತು ಸೂಕ್ಷ್ಮ ದಾಖಲೆಗಳಂತೆ ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ತಿಳಿಸಿದೆ. ತನಿಖೆಯಲ್ಲಿ ಒಂದೇ ಹಳೆಯ ಮಾಹಿತಿಯನ್ನು ಹಲವು ಸೈಬರ್ ಬೆದರಿಕೆ ಕಾರ್ಯಕರ್ತರು ಮಾರಾಟಕ್ಕೆ ಇಟ್ಟಿರುವುದು ಬೆಳಕಿಗೆ ಬಂದಿದ್ದು, ಅದಕ್ಕೆ ಪ್ರಸ್ತುತ ಡಿಆರ್‌ಡಿಒ ಅಥವಾ ರಕ್ಷಣಾ ಸಚಿವಾಲಯದ ಕಾರ್ಯಾಚರಣೆಗಳೊಂದಿಗೆ ಯಾವುದೇ ಸಂಬಂಧ ಇಲ್ಲ…

Curiosity builds as ‘Ramayana’ trailer release date is announced

Bengaluru: The makers of the much-awaited mythological epic ‘Ramayana’ have officially announced that the film’s trailer, titled ‘The Dawn of Ramayana’, will be released on July 30 at 4.15 am, heightening anticipation among movie enthusiasts. Producer Namit Malhotra shared a special poster on social media confirming that the trailer will premiere worldwide during Brahma Muhurta, a time considered highly auspicious in Hindu tradition. The trailer was originally expected to be released earlier but was postponed due to changes in the film’s business and release strategy. With the new announcement, fans…

ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ರಾಮಾಯಣ’ ಟ್ರೇಲರ್ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಯಶ್, ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಬಿಗ್‌ಬಜೆಟ್ ಚಿತ್ರದ ಟ್ರೇಲರ್ ಜುಲೈ 30ರಂದು ಬೆಳಗಿನ ಜಾವ 4.15ಕ್ಕೆ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಅಧಿಕೃತವಾಗಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟರ್ ಹಂಚಿಕೊಂಡಿರುವ ನಮಿತ್ ಮಲ್ಹೋತ್ರಾ, ‘ದಿ ಡಾನ್ ಆಫ್ ರಾಮಾಯಣ’ ಟ್ರೇಲರ್ ಅನ್ನು ಬ್ರಹ್ಮ ಮುಹೂರ್ತದಲ್ಲಿ ವಿಶ್ವದಾದ್ಯಂತ ಅನಾವರಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಪವಿತ್ರ ಹಾಗೂ ಆಧ್ಯಾತ್ಮಿಕ ಸಮಯವೆಂದು ಪರಿಗಣಿಸುವ ಹಿನ್ನೆಲೆಯಲ್ಲಿ ಇದೇ ವೇಳೆಯನ್ನು ಟ್ರೇಲರ್ ಬಿಡುಗಡೆಗೆ ಆಯ್ಕೆ ಮಾಡಲಾಗಿದೆ. ಎಲ್ಲವೂ ಯೋಜನೆಯಂತೆ ನಡೆದಿದ್ದರೆ ಟ್ರೇಲರ್ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರದ ವ್ಯಾಪಾರ ಮತ್ತು ಬಿಡುಗಡೆ ತಂತ್ರಕ್ಕೆ ಸಂಬಂಧಿಸಿದ ಕೆಲವು ಬದಲಾವಣೆಗಳ ಹಿನ್ನೆಲೆಯಲ್ಲಿ ಟ್ರೇಲರ್…

ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

ನವದೆಹಲಿ: ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವ ಹಾಗೂ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಯನ್ನು ಸರ್ಕಾರ ಈಡೇರಿಸದಿದ್ದರೆ ದೇಶಾದ್ಯಂತ ಮತ್ತೆ ಶಾಂತಿಯುತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಎಚ್ಚರಿಕೆ ನೀಡಿದೆ. ಟೈಫಾಯಿಡ್‌ಗೆ ಚಿಕಿತ್ಸೆ ಪಡೆಯುತ್ತಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ವಿದ್ಯಾರ್ಥಿಗಳಿಗೆ ಪೊಲೀಸರಿಂದ ಕಿರುಕುಳ ಮುಂದುವರಿದರೆ ಪಕ್ಷವು ಬೃಹತ್ ಶಾಂತಿಯುತ ಪ್ರತಿಭಟನೆ ನಡೆಸಲಿದೆ. ಸರ್ಕಾರ ವಿದ್ಯಾರ್ಥಿಗಳನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಭಿಜೀತ್ ದೀಪ್ಕೆ ಅವರು X ನಲ್ಲಿ ಹಾಕಿರುವ ಪೋಸ್ಟ್ ಹೀಗಿದೆ: “If the harassment of students at the hands of the police continues, the Cockroach Janta Party will respond with a massive peaceful protest soon. The Govt must stop targeting and…