ಬೆಂಗಳೂರು: ಕಾಂಗ್ರೆಸ್ನ ಅಸಮಾಧಾನಿತ ಶಾಸಕರ ಮನವೊಲಿಕೆ ಕಾರ್ಯಕ್ಕೆ ವೇಗ ಸಿಕ್ಕಿದ್ದು, ಸಚಿವ ಎನ್. ಚಲುವರಾಯಸ್ವಾಮಿ ಇಂದು ಶಾಸಕ ಎಂ. ಕೃಷ್ಣಪ್ಪ ಹಾಗೂ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನಿವಾಸಗಳಿಗೆ ಭೇಟಿ ನೀಡಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಎಂ. ಕೃಷ್ಣಪ್ಪ ನಿವಾಸದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, “ಕೃಷ್ಣಪ್ಪ ಅವರು ಕೆಲವು ವಿಚಾರಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸೂಚನೆ ಮೇರೆಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ” ಎಂದು ಹೇಳಿದರು. “ಬುಧವಾರ ಮುಖ್ಯಮಂತ್ರಿ ಸ್ವತಃ ಕೃಷ್ಣಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಅವರು ನಮಗೆ ಹಿರಿಯಣ್ಣನಂತಹವರು. ಇಲ್ಲಿ ಸಂಧಾನ ಎಂಬ ಪ್ರಶ್ನೆಯೇ ಇಲ್ಲ. ಅಷ್ಟು ದೊಡ್ಡವರು ನಾವಲ್ಲ. ಕುಟುಂಬದೊಳಗಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲಾಗುತ್ತದೆ” ಎಂದು ಅವರು ತಿಳಿಸಿದರು. ಇದೇ ವೇಳೆ, ಈ ಹಿಂದೆ ಉಂಟಾಗಿದ್ದ ಕೆಲವು ಭಿನ್ನಾಭಿಪ್ರಾಯಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು…
Blog
ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು
ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೆಲವೇ ಗಂಟೆಗಳಲ್ಲಿ ಮದ್ರಾಸ್ ಹೈಕೋರ್ಟ್ ನಿರ್ದೇಶನದ ಮೇರೆಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ತಂಜಾವೂರಿನಲ್ಲಿ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಡಿಎಂಕೆ ಆಯೋಜಿಸಿದ್ದ ರೈತರ ಪ್ರತಿಭಟನಾ ಸಭೆಯಲ್ಲಿ ಮಾತನಾಡುವ ವೇಳೆ ನಟಿ ತ್ರಿಷಾ ಕೃಷ್ಣನ್ ಕುರಿತು ದ್ವಂದ್ವಾರ್ಥ ಮೂಡಿಸುವ ರೀತಿಯ ಹೇಳಿಕೆ ನೀಡಿದ್ದರೆಂಬ ಆರೋಪ ಉದಯನಿಧಿ ವಿರುದ್ಧ ಕೇಳಿಬಂದಿದೆ. ಕಾರ್ಯಕ್ರಮದ ವೇಳೆ ಕೆಲವರು ತ್ರಿಷಾ ಹೆಸರನ್ನು ಕೂಗುತ್ತಿದ್ದಾಗ, “ನಾನು ಹೇಳಿದ್ದು ಕಾವೇರಿ ನೀರಿನ ಬಗ್ಗೆ” ಎಂದು ನಗುತ್ತಲೇ ಪ್ರತಿಕ್ರಿಯಿಸಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಾಗ ವೆಟ್ರಿ ಕಳಗಂ (TVK) ಪಕ್ಷ, ತಂಜಾವೂರು ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ…
ದಿನೇಶ್ ಗುಂಡೂರಾವ್ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬ್ರಾಹ್ಮಣ ಸಮುದಾಯದ ಮುಖಂಡರು ಮಂಗಳವಾರ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಬ್ರಾಹ್ಮಣ ಸಮುದಾಯದ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷವು ಈ ಬಾರಿ ಬ್ರಾಹ್ಮಣ ಸಮುದಾಯವನ್ನು ಸಚಿವ ಸಂಪುಟದಲ್ಲಿ ಕಡೆಗಣಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಆರು ಬಾರಿ ಶಾಸಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿರುವ ದಿನೇಶ್ ಗುಂಡೂರಾವ್ ಅವರು ಕಳೆದ ಹಲವು ದಶಕಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಇಂತಹ ಹಿರಿಯ ನಾಯಕನಿಗೆ ಸಚಿವ ಸ್ಥಾನ ನೀಡದಿರುವುದು ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.…
ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಮೂಲಕ ಮನವಿ ಮಾಡಿದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ, “ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ದಯವಿಟ್ಟು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ” ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಬಸವರಾಜ ಹೊರಟ್ಟಿ, “ಇದು ಕಲುಷಿತ ರಾಜಕಾರಣ. ಈ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ” ಎಂದು ಹೇಳಿದ್ದಾರೆ. ಇದಲ್ಲದೆ, ಕಾಂಗ್ರೆಸ್ ಪಕ್ಷದ ಲೆಟರ್ಹೆಡ್ನಲ್ಲಿ ನೂತನ ವಿಧಾನ ಪರಿಷತ್ ಸಭಾಪತಿ ಹೆಸರನ್ನು ಪ್ರಕಟಿಸಿರುವ ಕ್ರಮಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಭಾಪತಿ ಹಾಗೂ ಸಭಾಧ್ಯಕ್ಷರ ಹುದ್ದೆಗಳು ಸಾಂವಿಧಾನಿಕ ಹುದ್ದೆಗಳಾಗಿವೆ. ಆ ಹುದ್ದೆಯಲ್ಲಿರುವವರನ್ನು ಬದಲಾಯಿಸಲು ಬಯಸಿದರೆ ಮೊದಲು ನೋಟಿಸ್ ನೀಡಬೇಕು. ಅದಕ್ಕೆ ನಾನು ಸೂಕ್ತ ಉತ್ತರ…
‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ
ಬೆಂಗಳೂರು: ಕರ್ನಾಟಕ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವರ ಅಧಿಕಾರಾವಧಿ ಜನಪರ ಹಾಗೂ ಯಶಸ್ವಿಯಾಗಲಿ ಎಂದು ಅವರು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಶುಭಾಶಯ ಕೋರಿರುವ ಸುರ್ಜೇವಾಲ, ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್ನ ಬದ್ಧತೆಯನ್ನು ಪ್ರತಿಬಿಂಬಿಸುವ ಸಚಿವ ಸಂಪುಟ ರಚನೆಯಾಗಿದ್ದು, ಯುವಶಕ್ತಿ ಮತ್ತು ಅನುಭವದ ಸಮನ್ವಯಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆರಂಭಗೊಂಡಿರುವ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವುದು ಹಾಗೂ ಅಭಿವೃದ್ಧಿಯ ಕಾರ್ಯಸೂಚಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ಸಚಿವರು ಮತ್ತು ಕಾರ್ಯಕರ್ತರ ಮೇಲಿದೆ ಎಂದು ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿವೃದ್ಧಿಯ ಪಯಣವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದು, ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು…
ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕವೂ ರಾಜ್ಯದ ಎಂಟು ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ಸಿಕ್ಕಿಲ್ಲ. ವಿಸ್ತರಣೆಯ ನಂತರ ಒಟ್ಟು 23 ಜಿಲ್ಲೆಗಳಿಗೆ ಸಚಿವ ಸ್ಥಾನ ದೊರೆತಿದ್ದರೆ, ಎಂಟು ಜಿಲ್ಲೆಗಳು ಸಂಪುಟದಲ್ಲಿ ಸ್ಥಾನ ಪಡೆಯದೇ ಉಳಿದಿವೆ. ಈ ಬಾರಿ ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಉಡುಪಿ, ರಾಯಚೂರು, ಯಾದಗಿರಿ, ಗದಗ ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿಲ್ಲ. ಇನ್ನೊಂದೆಡೆ, ಬೆಂಗಳೂರು ನಗರ ಜಿಲ್ಲೆ ಅತಿ ಹೆಚ್ಚು ಪ್ರಾತಿನಿಧ್ಯ ಪಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಈ ಜಿಲ್ಲೆಯಿಂದ ಆರು ಸಚಿವರು ಸ್ಥಾನ ಪಡೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಯಿಂದ ಮೂವರು ಸಚಿವರು ಸಂಪುಟದಲ್ಲಿದ್ದಾರೆ. ರಾಮನಗರ, ಬೆಳಗಾವಿ, ಕೊಪ್ಪಳ ಹಾಗೂ ಮಂಡ್ಯ ಜಿಲ್ಲೆಗಳಿಂದ ತಲಾ ಇಬ್ಬರು ಸಚಿವರು ಸ್ಥಾನ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ, ತುಮಕೂರು, ದಕ್ಷಿಣ ಕನ್ನಡ, ಉತ್ತರ…
ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಅಸಮಾಧಾನದ ಅಲೆ ಎದ್ದಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಲವು ಶಾಸಕರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಕೆಲ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮೂಲಗಳು ತಿಳಿಸಿವೆ. ಇದೇ ವೇಳೆ, ಬೇಳೂರು ಶಾಸಕ ಗೋಪಾಲಕೃಷ್ಣ ಅವರು ಉದ್ದೇಶಪೂರ್ವಕವಾಗಿ ಸಚಿವ ಸ್ಥಾನದಿಂದ ವಂಚಿಸಲಾಗಿದೆ ಎಂದು ಆರೋಪಿಸಿ, ಶಾಸಕ ಸ್ಥಾನ ಹಾಗೂ ನಿಗಮ–ಮಂಡಳಿ ಹುದ್ದೆಗೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರು ಮುಂದಿನ ರಾಜಕೀಯ ನಡೆ ಕುರಿತು ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಮೈಸೂರು,…
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲೇ ಕಮಲಕ್ಕೆ ಶಾಕ್; ಜಯಭೇರಿಯೊಂದಿಗೆ ಶಾಸಕನಾದ ಪ್ರಶಾಂತ್ ಕಿಶೋರ್
ಬಂಕಿಪುರ: ಚುನಾವಣಾ ತಂತ್ರಜ್ಞ ಎಂದೇ ಗುರುತಿಸಿಕೊಂಡಿದ್ದ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಹಾರದ ಬಂಕಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ಅವರು 19,324 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿ ಸಕ್ರಿಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಚುನಾವಣಾ ಫಲಿತಾಂಶದ ಪ್ರಕಾರ, ಪ್ರಶಾಂತ್ ಕಿಶೋರ್ 64,151 ಮತಗಳನ್ನು ಪಡೆದು ಜಯ ಸಾಧಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ನೀರಜ್ ಕುಮಾರ್ 44,827 ಮತಗಳನ್ನು ಪಡೆದರೆ, ಆರ್ಜೆಡಿ ಅಭ್ಯರ್ಥಿ ರೇಖಾ ಕುಮಾರಿ 14,273 ಮತಗಳಿಗೆ ತೃಪ್ತಿಪಟ್ಟಿದ್ದಾರೆ. ಕಳೆದ ಎರಡು ವರ್ಷಗಳಿಂದ ‘ಜನ್ ಸುರಾಜ್’ ಪಾದಯಾತ್ರೆಯ ಮೂಲಕ ಬಿಹಾರದಾದ್ಯಂತ ಸಂಚರಿಸಿದ್ದ ಪ್ರಶಾಂತ್ ಕಿಶೋರ್, ಪರ್ಯಾಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದ್ದರು. ಇದೀಗ ಬಂಕಿಪುರದಲ್ಲಿ ದಾಖಲಿಸಿದ ಗೆಲುವಿನೊಂದಿಗೆ ಅವರ ರಾಜಕೀಯ ಪಯಣಕ್ಕೆ ಮಹತ್ವದ ಬಲ ಸಿಕ್ಕಿದೆ. ಬಂಕಿಪುರ ಕ್ಷೇತ್ರವು ಈ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್…
ಭ್ರಷ್ಟರಿಗೆ, ಪಬ್ ಗಳಲ್ಲಿ ಗಲಾಟೆ ಮಾಡಿದವರಿಗೆ ಮಂತ್ರಿಸ್ಥಾನ; ವಿಜಯೇಂದ್ರ ಟೀಕೆ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವವರು, ಪಬ್ಗಳಲ್ಲಿ ಗಲಾಟೆ ನಡೆಸಿದವರು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ವಿಫಲರಾದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, “ಎರಡು ತಿಂಗಳು ಹೈಕಮಾಂಡ್ ಮನೆಬಾಗಿಲು ಕಾದು, ಭ್ರಷ್ಟಾಚಾರ ಆರೋಪ ಹೊತ್ತವರು, ಪಬ್ಗಳಲ್ಲಿ ಗಲಾಟೆ ಮಾಡಿದವರು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯದವರಿಗೆ ಮಂತ್ರಿ ಸ್ಥಾನ ನೀಡಿ ರಾಜ್ಯಕ್ಕೆ ಅದ್ಭುತ ಸಚಿವ ಸಂಪುಟ ನೀಡಿದ್ದಾರೆ” ಎಂದು ಟೀಕಿಸಿದ್ದಾರೆ. ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಅವಕಾಶ ನೀಡದಿರುವುದನ್ನು ಪ್ರಶ್ನಿಸಿರುವ ಅವರು, ಮಹಿಳೆಯರ ಪರವಾಗಿ ಮಾತನಾಡುವ ಕಾಂಗ್ರೆಸ್, ಮಹಿಳಾ ಪ್ರಾತಿನಿಧ್ಯದ ವಿಚಾರದಲ್ಲಿ ತನ್ನ ನಿಲುವಿಗೆ ವಿರುದ್ಧವಾಗಿ ನಡೆದುಕೊಂಡಿದೆ…
ಬರ ಘೋಷಣೆಗೆ ಕೇಂದ್ರದ ನಿಯಮ ಅಡ್ಡಿ; ಸಡಿಲಿಕೆಗೆ ಪತ್ರ ಬರೆದಿದ್ದೇವೆ: ಡಾ.ಜಿ. ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕಾರಣ ಆಗಸ್ಟ್ ಅಂತ್ಯದವರೆಗೆ ಬರ ಘೋಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಯಮಗಳನ್ನು ಸಡಿಲಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದ್ದು, ಕೆಲವು ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ಮೂರು ಪ್ರಮುಖ ಜಲಾಶಯಗಳಲ್ಲಿ ಶೇ.90ರಷ್ಟು ನೀರು ಸಂಗ್ರಹವಾಗಿದ್ದು, ಕೆಆರ್ಎಸ್ ಜಲಾಶಯವೂ ಮುಂದಿನ ಎರಡು-ಮೂರು ದಿನಗಳಲ್ಲಿ ಇದೇ ಮಟ್ಟ ತಲುಪುವ ಸಾಧ್ಯತೆ ಇದೆ ಎಂದು ಹೇಳಿದರು. ಇನ್ನೊಂದೆಡೆ, ಉತ್ತರ ಕರ್ನಾಟಕದ 111 ತಾಲ್ಲೂಕುಗಳಲ್ಲಿ ಕಳೆದ ನಾಲ್ಕು ವಾರಗಳಿಂದ ಒಣಹವೆ ಮುಂದುವರಿದಿದ್ದು, ಮಳೆ ಕೊರತೆಯಿಂದ ಬರದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರು…
