Blog

ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

ಕ್ಯಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ಅವಳಿ ಭೂಕಂಪಗಳ ಸಾವಿನ ಸಂಖ್ಯೆ 3,342ಕ್ಕೆ ಏರಿಕೆಯಾಗಿದ್ದು, 16,740 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಇದುವರೆಗೆ 6,462 ಮಂದಿಯನ್ನು ರಕ್ಷಿಸಲಾಗಿದ್ದು, 17,345 ಮಂದಿ ಸ್ಥಳಾಂತರಗೊಂಡಿದ್ದಾರೆ. ಪೀಡಿತರಿಗೆ ನೆರವು ನೀಡಲು 80 ತಾತ್ಕಾಲಿಕ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಜೂನ್ 24ರಂದು ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಅವಳಿ ಭೂಕಂಪಗಳ ಬಳಿಕ ಇದುವರೆಗೆ 995 ನಂತರದ ಕಂಪನಗಳು ದಾಖಲಾಗಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ 29,567 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅವರಲ್ಲಿ 3,281 ಮಂದಿ ವಿದೇಶಿ ರಕ್ಷಣಾ ಸಿಬ್ಬಂದಿಯಾಗಿದ್ದಾರೆ. ಭೂಕಂಪ ದುರಂತದ ಹಿನ್ನೆಲೆಯಲ್ಲಿ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ. ಸಂತ್ರಸ್ತರ ಕುಟುಂಬಗಳೊಂದಿಗೆ ಸರ್ಕಾರ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ. ಇನ್ನೂ ಹತ್ತಾರು ಸಾವಿರ ಮಂದಿ ನಾಪತ್ತೆಯಾಗಿರುವ…

ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

ದೋಹಾ (ಕತಾರ್): ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಭಾರತದ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತಾರವಾಗಿ ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿ (Deputy Chief of Mission) ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು. ಸಂಘದ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, 2026–28ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಪರಿಚಯಿಸಲಾಯಿತು. ಜೊತೆಗೆ, ಮುಂದಿನ ಎರಡು ವರ್ಷಗಳಲ್ಲಿ ಹಮ್ಮಿಕೊಳ್ಳಲಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮುದಾಯ ಸೇವಾ ಕಾರ್ಯಕ್ರಮಗಳ ರೂಪುರೇಷೆಯನ್ನು ಉಪ ರಾಯಭಾರಿಗಳ ಮುಂದೆ ಮಂಡಿಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂದೀಪ್ ಕುಮಾರ್, ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಚಟುವಟಿಕೆಗಳನ್ನು ಶ್ಲಾಘಿಸಿ, ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರನ್ನು ಒಳಗೊಂಡ ಒಗ್ಗಟ್ಟಿನ ಕಾರ್ಯಪದ್ಧತಿ ಅಗತ್ಯವೆಂದು ಹೇಳಿದರು. ದೊಡ್ಡ ಪ್ರಮಾಣದ…

ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

ಮಂಗಳೂರು: ಭಾರತೀಯ ಕ್ಯಾಥೋಲಿಕ್ ಯುವ ಚಳವಳಿ (ICYM) ಮಂಗಳೂರು ಡಯಾಸಿಸ್‌ನ 2026–27ನೇ ಸಾಲಿನ ಅಧ್ಯಕ್ಷರಾಗಿ ಕ್ರಿಸ್ಟನ್ ಜೋಶುವಾ ಮೆನೆಜಸ್ ದಾಖಲೆ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ರೊಸಾರಿಯೊ ಕ್ಯಾಥೆಡ್ರಲ್ ಹಾಲ್‌ನಲ್ಲಿ ನಡೆದ 80ನೇ ಐಸಿವೈಎಂ ಸಾರ್ವತ್ರಿಕ ಚುನಾವಣೆಯಲ್ಲಿ ಕ್ರಿಸ್ಟನ್ 269 ಮತಗಳನ್ನು ಪಡೆದು ಅವಿತ್ ಪ್ರೆಮ್ಸನ್ ಲೋಬೊ (99 ಮತ) ಅವರನ್ನು ಸೋಲಿಸಿದರು. ಇದು ಐಸಿವೈಎಂ ಮಂಗಳೂರು ಡಯಾಸಿಸ್ ಚುನಾವಣೆಯ ಇತಿಹಾಸದಲ್ಲೇ ಅಭ್ಯರ್ಥಿಯೊಬ್ಬರು ಪಡೆದ ಅತ್ಯಧಿಕ ಮತಗಳಾಗಿದೆ. ಡೆರೆಬೈಲ್‌ನ ಎಡ್ವರ್ಡ್ ಮತ್ತು ಬೆನೆಡಿಕ್ಟಾ ಮೆನೆಜಸ್ ದಂಪತಿಯ ಪುತ್ರರಾದ ಕ್ರಿಸ್ಟನ್, ಶೈಕ್ಷಣಿಕ, ಧಾರ್ಮಿಕ ಹಾಗೂ ವಿದ್ಯಾರ್ಥಿ ಸಂಘಟನೆಗಳಲ್ಲಿ ಹಲವು ನಾಯಕತ್ವ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಕುಂಟಿಕಾನದ ಸೇಂಟ್ ಆನ್ಸ್ ಶಾಲೆಯ ವಿದ್ಯಾರ್ಥಿ ನಾಯಕನಾಗಿ ಆರಂಭವಾದ ಅವರ ನಾಯಕತ್ವದ ಪಯಣ, ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮಂಡಳಿ ಅಧ್ಯಕ್ಷರ ಹುದ್ದೆಯವರೆಗೂ ವಿಸ್ತರಿಸಿದೆ. ಚರ್ಚ್ ಚಟುವಟಿಕೆಗಳಲ್ಲಿ ವೈಸಿಎಸ್ ಘಟಕದ ಅಧ್ಯಕ್ಷ, ಡೆರೆಬೈಲ್ ಐಸಿವೈಎಂ ಅಧ್ಯಕ್ಷ,…

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಮೂರು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಈ ಭಾಗಗಳಲ್ಲಿ ಬಲವಾದ…

ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಮುಂಬೈ: ಧಾರಾಕಾರ ಮಳೆ ಮತ್ತು ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಭಾರೀ ಮಳೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಮುಂಬೈ ವಿಶ್ವವಿದ್ಯಾಲಯವು ಸೋಮವಾರ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ. ನಿರಂತರ ಮಳೆ ಮತ್ತು ಹವಾಮಾನ ವೈಪರೀತ್ಯದಿಂದ ಸಂಚಾರ ಹಾಗೂ ಪರೀಕ್ಷೆಗಳ ಸುಗಮ ನಿರ್ವಹಣೆಗೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ಪರೀಕ್ಷೆಗಳ ಹೊಸ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಪರಿಷ್ಕೃತ ವೇಳಾಪಟ್ಟಿಗಾಗಿ ವಿದ್ಯಾರ್ಥಿಗಳು ಮುಂಬೈ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಪರಿಶೀಲಿಸದ ಮಾಹಿತಿಯನ್ನು ನಂಬದಂತೆ ವಿಶ್ವವಿದ್ಯಾಲಯ ಮನವಿ ಮಾಡಿದೆ.

ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

ಮುಂಬೈ: ಧಾರಾಕಾರ ಮಳೆಯಿಂದ ಮಹಾರಾಷ್ಟ್ರದ ರಾಜಧಾನಿ ಮುಂಬೈ ತತ್ತರಿಸಿದೆ. ಭಾನುವಾರ ಮುಂಬೈನ ಹಲವು ಭಾಗಗಳಲ್ಲಿ 200 ರಿಂದ 300 ಮಿ.ಮೀ.ವರೆಗೆ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ. ಸೋಮವಾರವೂ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆ ಸಂದರ್ಭದಲ್ಲಿ ಮನ್ಖುರ್ಡ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ. ಓರ್ವ ಗಾಯಗೊಂಡಿದ್ದು, ಮತ್ತೊಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ, ಬಿಎಂಸಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಾನುವಾರ ರಾತ್ರಿ ಮನ್ಖುರ್ಡ್‌ನ ಜನತಾ ನಗರದಲ್ಲಿ ಹನುಮಾನ್ ಮಂದಿರದ ಸಮೀಪ ಕಟ್ಟಡದ ಒಂದು ಭಾಗ ಏಕಾಏಕಿ ಕುಸಿದಿದೆ. ಅವಶೇಷಗಳಡಿಯಿಂದ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ನಡುವೆ, ಮಳೆಯ ಅಬ್ಬರದಿಂದ ನಗರದಲ್ಲಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಹಾಗೂ ಜನಜೀವನ…

ಮೊಬೈಲ್ ಟಾರ್ಚ್‌ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್

ಬೆಂಗಳೂರು: ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುತ್ತಿದ್ದ ಕೆಕೆಆರ್‌ಟಿಸಿ (KKRTC) ಬಸ್‌ನಲ್ಲಿ ಹೆಡ್‌ಲೈಟ್ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ನಿರ್ವಾಹಕರ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಲಾಗಿದೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಜೆಡಿಎಸ್ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಜೆಡಿಎಸ್, “ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ” ಎಂದು ಟೀಕಿಸಿದೆ. “ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಪಕ್ಷ ಆರೋಪಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅನುದಾನದಲ್ಲಿ ಖರೀದಿಸಿದ ಹೊಸ ಬಸ್‌ಗಳನ್ನು ಬೇರೆ ಪ್ರದೇಶಗಳಿಗೆ ನಿಯೋಜಿಸಿ, ಗುಜರಿಗೆ ಸೇರಬೇಕಾದ ಹಳೆಯ ಬಸ್‌ಗಳನ್ನು ಚಿಂಚೋಳಿ ಭಾಗಕ್ಕೆ ಬಿಡಲಾಗಿದೆ…

ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್‌ ಗೆ ಜನರಿಂದ ತಕ್ಕ ಪಾಠ; ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿವೆ. ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವ ಬೆನ್ನಲ್ಲೇ, ಬಿಜೆಪಿ ನಿಯೋಗವೂ ಆಯೋಗಕ್ಕೆ ಪ್ರತ್ಯೇಕ ಮನವಿ ಸಲ್ಲಿಸಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಿಯಮಾನುಸಾರ ಮನೆ ಮನೆಗೆ ತೆರಳಿ ನಡೆಸಬೇಕಾದರೂ, ಕೆಲವು ಕಡೆಗಳಲ್ಲಿ ಮಸೀದಿಗಳಲ್ಲಿ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ. “ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಬೇಕು. ಅದು ಯಾವುದೇ ರಾಜಕೀಯ ಹಿತಾಸಕ್ತಿಯ ಸಾಧನವಾಗಬಾರದು. ನಿಯಮಗಳನ್ನು ಉಲ್ಲಂಘಿಸಿ ಪ್ರಕ್ರಿಯೆ ನಡೆಸುತ್ತಿರುವ ಕುರಿತು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಬಿಜೆಪಿ ಆಗ್ರಹಿಸಿದೆ.…

ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

ಅಮರಾವತಿ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಎಲೂರು ಜಿಲ್ಲೆಯ ಉಂಗುತೂರ್ ಮಂಡಲದ ಚೆಬ್ರೋಲ್ ಸಮೀಪ ಶನಿವಾರ ತಡರಾತ್ರಿ ಚೆರ್ಲಪಲ್ಲಿ–ಶಾಲಿಮಾರ್ ವಿಶೇಷ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತದೇಹಗಳು ಗುರುತಿಸಲಾಗದಷ್ಟು ನಜ್ಜುಗುಜ್ಜಾಗಿದ್ದು, ತಾಡೇಪಲ್ಲಿಗುಡೆಮ್ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಮೃತಪಟ್ಟವರು ಒಂದೇ ಕುಟುಂಬದವರಾಗಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳದಲ್ಲಿ ದೊರೆತ ಎಟಿಎಂ ಕಾರ್ಡ್, ಬೈಕ್ ಪಾರ್ಕಿಂಗ್ ರಶೀದಿ ಹಾಗೂ ಮೊಬೈಲ್ ಫೋನ್‌ಗಳ ಆಧಾರದ ಮೇಲೆ ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಆತ್ಮಹತ್ಯೆ ಶಂಕೆಯೂ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಇದೇ ವೇಳೆ, ತೆಲಂಗಾಣದ ನಲ್ಗೊಂಡ ಜಿಲ್ಲೆಯ ಪೆದ್ದಕಪರ್ತಿ ಗ್ರಾಮದ ಬಳಿ…

ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

ನವದೆಹಲಿ: ಭಾರತದಲ್ಲಿ ಯಕೃತ್ತಿನ ಕಾಯಿಲೆ ಮತ್ತು ಟೈಪ್-2 ಮಧುಮೇಹ ಪ್ರಕರಣಗಳು ಹೆಚ್ಚುತ್ತಿರುವುದು ಚಯಾಪಚಯ ಅಸ್ವಸ್ಥತೆಗಳ ಪರಿಣಾಮವಾಗಿದ್ದು, ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಜೀವನಶೈಲಿಗೆ ಒತ್ತು ನೀಡುವ ರಾಷ್ಟ್ರೀಯ ಜಾಗೃತಿ ಅಭಿಯಾನದ ಅಗತ್ಯವಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ. ನವದೆಹಲಿದ ಇನ್‌ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ILBS)ನಲ್ಲಿ ನಡೆದ ಲಿವರ್ ಮತ್ತು ಮೆಟಬಾಲಿಕ್ ಕಾಯಿಲೆ ಜಾಲ (InFLiMeN) ಮೂರನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಬ್ಬಿನ ಯಕೃತ್ತು, ಅಧಿಕ ರಕ್ತದೊತ್ತಡ, ಡಿಸ್ಲಿಪಿಡೆಮಿಯಾ ಹಾಗೂ ಇನ್ಸುಲಿನ್ ಪ್ರತಿರೋಧದಂತಹ ಸಮಸ್ಯೆಗಳು ಪರಸ್ಪರ ಸಂಬಂಧ ಹೊಂದಿದ್ದು, ಯುವಜನರಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ ಎಂದು ಹೇಳಿದರು. ಅನಾರೋಗ್ಯಕರ ಆಹಾರ ಪದ್ಧತಿ, ದೈಹಿಕ ಚಟುವಟಿಕೆಗಳ ಕೊರತೆ, ಅಸಮರ್ಪಕ ನಿದ್ರೆ, ಒತ್ತಡ ಮತ್ತು ಪರಿಸರ ಮಾಲಿನ್ಯ ಯಕೃತ್ತಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಅವರು…