ಬೆಂಗಳೂರು: ರೌಡಿಶೀಟರ್ ಪಟ್ಟಿಯಿಂದ 66 ಮಂದಿಯ ಹೆಸರುಗಳನ್ನು ತೆಗೆದುಹಾಕುವ ವಿಚಾರ ಚರ್ಚೆಗೆ ಬರುತ್ತಿದ್ದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ ಕ್ರಮಕ್ಕೆ ಮುಂದಾಗಿದ್ದಾರೆ. 66 ಮಂದಿ ರೌಡಿಶೀಟರ್ಗಳ ಹೆಸರುಗಳನ್ನು ಪಟ್ಟಿಯಿಂದ ಕೈಬಿಡದಂತೆ ಗೃಹ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿದ್ದು, ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವಂತಹ ಲೋಪ ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಸಮಗ್ರ ಪರಿಶೀಲನೆ ನಡೆಸುವಂತೆ ಸೂಚಿಸಿರುವುದಾಗಿ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ಕಾರ್ಯವೈಖರಿಯಲ್ಲಿ ಆಗಿರುವ ತಪ್ಪನ್ನು ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ರೌಡಿಶೀಟರ್ ಪಟ್ಟಿಯಲ್ಲಿರುವ 66 ಮಂದಿಯಲ್ಲಿ 8 ಮಂದಿ ಬಿಜೆಪಿ ಕಾರ್ಯಕರ್ತರು ಎಂಬ ವಿಚಾರವೂ ಚರ್ಚೆಗೆ ಬಂದಿದೆ ಎನ್ನಲಾಗಿದೆ. ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆಯಲ್ಲಿ ಲೋಪಗಳಿಗೆ ಅವಕಾಶ ನೀಡುವುದಿಲ್ಲ. ತಪ್ಪು…
Blog
UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಭಾರತೀಯ ಅರಣ್ಯ ಸೇವೆ (IFS) ಪೂರ್ವಭಾವಿ ಪರೀಕ್ಷೆ-2026ರ ಫಲಿತಾಂಶವನ್ನು ಪ್ರಕಟಿಸಿದ್ದು, 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಮೇ 24, 2026ರಂದು ನಡೆದಿದ್ದ ಪ್ರಾಥಮಿಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಾರಿ ಭಾರತೀಯ ಅರಣ್ಯ ಸೇವೆಯ 80 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಶಾರ್ಟ್ಲಿಸ್ಟ್ ಆಗಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆ ತಾತ್ಕಾಲಿಕವಾಗಿದ್ದು, ಮುಂದಿನ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ ಎಂದು UPSC ತಿಳಿಸಿದೆ. ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿ, ಅಗತ್ಯ ದಾಖಲೆಗಳ ಸಲ್ಲಿಕೆ ಹಾಗೂ ಇತರ ಮಾಹಿತಿಗಳನ್ನು ಆನ್ಲೈನ್ ಮೂಲಕ ಅಪ್ಡೇಟ್ ಮಾಡಬೇಕಿದೆ. ಮಹಿಳೆಯರು, ಅಂಗವಿಕಲರು, ಎಸ್ಸಿ ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳು ₹200 ಶುಲ್ಕ ಪಾವತಿಸಬೇಕು. ಮುಖ್ಯ ಪರೀಕ್ಷೆಯ ಇ-ಅಡ್ಮಿಟ್ ಕಾರ್ಡ್…
ಡಿಆರ್ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ
ನವದೆಹಲಿ: ಭಾರತದ ರಕ್ಷಣಾ ಸಾಮರ್ಥ್ಯಕ್ಕೆ ಮತ್ತೊಂದು ಮಹತ್ವದ ಬಲ ಸಿಕ್ಕಿದ್ದು, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ದೇಶೀಯವಾಗಿ ಅಭಿವೃದ್ಧಿಪಡಿಸಿದ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ (ಎಲ್ಆರ್ಎಲ್ಎಸಿಎಂ) ಯ ಯಶಸ್ವಿ ಹಾರಾಟ ಪರೀಕ್ಷೆ ನಡೆಸಿದೆ. ಒಡಿಶಾ ಕರಾವಳಿಯ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಸೋಮವಾರ ಕ್ಷಿಪಣಿ ಪರೀಕ್ಷೆ ನಡೆಸಲಾಗಿದ್ದು, ಎಲ್ಲಾ ಮಿಷನ್ ಉದ್ದೇಶಗಳನ್ನು ಯಶಸ್ವಿಯಾಗಿ ಪೂರೈಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಚಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ಮೂಲಕ ಅಳವಡಿಸಲಾಗಿದ್ದ ವಿವಿಧ ಟ್ರ್ಯಾಕಿಂಗ್ ವ್ಯವಸ್ಥೆಗಳಿಂದ ಸಂಗ್ರಹಿಸಿದ ಮಾಹಿತಿಯು ಕ್ಷಿಪಣಿಯ ಕಾರ್ಯಕ್ಷಮತೆಯನ್ನು ದೃಢಪಡಿಸಿದೆ. ಎಲ್ಆರ್ಎಲ್ಎಸಿಎಂ ಕ್ಷಿಪಣಿಯನ್ನು ಡಿಆರ್ಡಿಒದ ಹಲವು ಪ್ರಯೋಗಾಲಯಗಳು ಹಾಗೂ ಭಾರತೀಯ ಕೈಗಾರಿಕಾ ಪಾಲುದಾರರ ಸಹಯೋಗದೊಂದಿಗೆ ಸಂಪೂರ್ಣ ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರಿನ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ಈ ಯೋಜನೆಯ ಪ್ರಮುಖ ಪ್ರಯೋಗಾಲಯವಾಗಿ ಕಾರ್ಯನಿರ್ವಹಿಸಿದೆ. ಪರೀಕ್ಷೆಯ ವೇಳೆ ಡಿಆರ್ಡಿಒ ಹಿರಿಯ ಅಧಿಕಾರಿಗಳು,…
UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ-2026ರ ಫಲಿತಾಂಶವನ್ನು ಪ್ರಕಟಿಸಿದೆ. ಒಟ್ಟು 13,343 ಅಭ್ಯರ್ಥಿಗಳು ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. 2026ರ ಮೇ 24ರಂದು ನಡೆದಿದ್ದ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಆಯೋಗ ಮಂಗಳವಾರ ಬಿಡುಗಡೆ ಮಾಡಿದೆ. ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆ ತಾತ್ಕಾಲಿಕವಾಗಿದ್ದು, ಮುಂದಿನ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ ಎಂದು UPSC ತಿಳಿಸಿದೆ. ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಸಲ್ಲಿಕೆ, ಪರೀಕ್ಷಾ ಶುಲ್ಕ ಪಾವತಿ ಹಾಗೂ ಇತರ ವಿವರಗಳನ್ನು ಪೂರ್ಣಗೊಳಿಸಬೇಕು. ವಿನಾಯಿತಿ ಪಡೆದ ವರ್ಗಗಳನ್ನು ಹೊರತುಪಡಿಸಿ ಇತರ ಅಭ್ಯರ್ಥಿಗಳಿಗೆ ₹200 ಶುಲ್ಕ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಜೂನ್ 19ರಿಂದ ಜೂನ್ 28ರವರೆಗೆ UPSC ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅಗತ್ಯ ಮಾಹಿತಿಗಳನ್ನು ಸಲ್ಲಿಸಬಹುದಾಗಿದೆ. ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಪಡೆಯಲು ಈ ಪ್ರಕ್ರಿಯೆ ಕಡ್ಡಾಯವಾಗಿದೆ. ಈ ಬಾರಿ ನಾಗರಿಕ ಸೇವೆಗಳ…
ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ
ಬ್ರಾಟಿಸ್ಲಾವಾ: ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ಸ್ಲೋವಾಕಿಯಾ ಭೇಟಿಯ ವೇಳೆ ಭಾರತ ಮತ್ತು ಸ್ಲೋವಾಕಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳು ಸಮಗ್ರ ಪಾಲುದಾರಿಕೆ ಹಂತಕ್ಕೆ ಏರಿವೆ. ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಮಧ್ಯ ಯುರೋಪಿನ ರಾಷ್ಟ್ರಕ್ಕೆ ಭೇಟಿ ನೀಡಿದ್ದು, 1993ರಲ್ಲಿ ಸ್ಲೋವಾಕಿಯಾ ಸ್ವತಂತ್ರ ರಾಷ್ಟ್ರವಾದ ಬಳಿಕ ಭಾರತೀಯ ಪ್ರಧಾನಿಯೊಬ್ಬರ ಮೊದಲ ಭೇಟಿಯಾಗಿದೆ. ಜಂಟಿ ಹೇಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಧಾನಿ ರಾಬರ್ಟ್ ಫಿಕೊ ರಕ್ಷಣೆ, ವ್ಯಾಪಾರ, ತಂತ್ರಜ್ಞಾನ, ಇಂಧನ, ಶಿಕ್ಷಣ, ಆರೋಗ್ಯ ಮತ್ತು ಭದ್ರತೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಿಸಲು ಒಪ್ಪಿಕೊಂಡಿದ್ದಾರೆ. ಎರಡೂ ನಾಯಕರು ನಿಯಮ ಆಧಾರಿತ ಜಾಗತಿಕ ವ್ಯವಸ್ಥೆ ಹಾಗೂ ವಿಶ್ವಸಂಸ್ಥೆಯ ಸುಧಾರಣೆಗಳಿಗೆ ಬೆಂಬಲ ವ್ಯಕ್ತಪಡಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವಿಸ್ತರಣೆ ಹಾಗೂ ಸುಧಾರಣೆಗಳ ಅಗತ್ಯವನ್ನು ಒತ್ತಿಹೇಳಿದರು. ರಕ್ಷಣಾ ಕ್ಷೇತ್ರದಲ್ಲಿ ತಂತ್ರಜ್ಞಾನ, ಸಂಶೋಧನೆ, ಕೈಗಾರಿಕಾ…
ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ
ಬ್ರಾಟಿಸ್ಲಾವಾ: ಭಾರತ-ಸ್ಲೋವಾಕಿಯಾ ಸಂಬಂಧಗಳನ್ನು ಬಲಪಡಿಸುವಲ್ಲಿ ನೀಡಿದ ಕೊಡುಗೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ರಾಜ್ಯ ಗೌರವವಾದ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್, ಫಸ್ಟ್ ಕ್ಲಾಸ್’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಸ್ಲೋವಾಕ್ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ ಅವರು ವಿಶೇಷ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಪ್ರತಿಷ್ಠಿತ ಗೌರವವನ್ನು ನೀಡಿ ಸನ್ಮಾನಿಸಿದರು. ಗೌರವ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಸ್ಲೋವಾಕಿಯಾ ಸರ್ಕಾರ, ಅಧ್ಯಕ್ಷರು ಹಾಗೂ ಅಲ್ಲಿನ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಈ ಗೌರವವು ತಮ್ಮೊಬ್ಬರಿಗೆ ಮಾತ್ರವಲ್ಲ, ಭಾರತದ 140 ಕೋಟಿ ಜನರಿಗೆ ಸಲ್ಲುವ ಗೌರವವಾಗಿದೆ ಎಂದು ಹೇಳಿದರು. ಭಾರತ ಮತ್ತು ಸ್ಲೋವಾಕಿಯಾ ನಡುವಿನ ಸ್ನೇಹ, ಪರಸ್ಪರ ನಂಬಿಕೆ ಹಾಗೂ ಆತ್ಮೀಯ ಸಂಬಂಧಗಳ ಪ್ರತೀಕವಾಗಿ ಈ ಪ್ರಶಸ್ತಿಯನ್ನು ಪರಿಗಣಿಸುವುದಾಗಿ ಪ್ರಧಾನಿ ಮೋದಿ ತಿಳಿಸಿದರು. ಈ ಗೌರವವು ಎರಡೂ ದೇಶಗಳ ಭವಿಷ್ಯದ…
ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್ಡಿಕೆಗೆ ಚಲುವರಾಯಸ್ವಾಮಿ ಸವಾಲು,
ಬೆಂಗಳೂರು: ‘ನಿಮ್ಮ ಇಡೀ ಕುಟುಂಬದ ಆಸ್ತಿಯನ್ನು ಘೋಷಣೆ ಮಾಡಲು ನೀವು ಸಿದ್ಧರಿದ್ದೀರಾ? ನಿಮ್ಮ ಕುಟುಂಬದಲ್ಲಿ ಎಷ್ಟು ಆಸ್ತಿ ಇದೆ, ಅದು ಎಲ್ಲಿಂದ ಬಂತು ಎಂದು ಸ್ವಯಂ ತನಿಖೆಗೆ ಒಳಪಡಿಸಿಕೊಳ್ಳಿ’ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಸವಾಲು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಹಾಗೂ ಮೈಶುಗರ್ ಅಧ್ಯಕ್ಷರಾದ ಸಿ.ಡಿ. ಗಂಗಾಧರ್ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲುವರಾಯಸ್ವಾಮಿ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ನಿಲುವುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಡಿ.ಕೆ. ಶಿವಕುಮಾರ್ ಅವರಿಗೆ 1,400 ಕೋಟಿ ರೂ. ಎಲ್ಲಿಂದ ಉದುರಿತು?” ಎಂದು ಕೇಳುತ್ತಿರುವ ಕುಮಾರಸ್ವಾಮಿ ಅವರಿಗೆ ಚಲುವರಾಯಸ್ವಾಮಿ ತಿರುಗೇಟು ನೀಡಿದರು. “ಡಿ.ಕೆ. ಶಿವಕುಮಾರ್ ಅವರು ಮೊದಲಿನಿಂದಲೂ ಬ್ಯುಸಿನೆಸ್ಮೆನ್, ಅವರಿಗೆ ರಾಜಕಾರಣ ಒಂದು ಪ್ಯಾಶನ್ ಅಷ್ಟೇ. ಆದರೆ, ಹೆಚ್.ಡಿ. ದೇವೇಗೌಡರನ್ನು ಹೊರತುಪಡಿಸಿ ನಿಮ್ಮ ಇಡೀ ಕುಟುಂಬದ ಆಸ್ತಿಯನ್ನು…
ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ
ಬೆಂಗಳೂರು: ರಸಗೊಬ್ಬರ ಅಭಾವ ಹಾಗೂ ಬಿಡದಿ ಟೌನ್ಶಿಪ್ ವಿಚಾರದಲ್ಲಿ ವಿರೋಧ ಪಕ್ಷಗಳು ದ್ವಂದ್ವ ರಾಜಕಾರಣ ಮಾಡುತ್ತಿವೆ. ಅದರಲ್ಲೂ ಜೆಡಿಎಸ್ ಅವಧಿಯಲ್ಲಿ ನಡೆದ ಟಿಕೆಟ್ ಫಿಕ್ಸಿಂಗ್ ಹಾಗೂ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮಾಜಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಹಾಗೂ ಮೈಶುಗರ್ ಅಧ್ಯಕ್ಷರಾದ ಸಿ.ಡಿ. ಗಂಗಾಧರ್ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ನಿಲುವುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಕಳೆದ ಎರಡು ವರ್ಷಗಳ ಹಿಂದೆಯೇ ರಾಜ್ಯ ಸರ್ಕಾರ ಸಾವಯವ ಗೊಬ್ಬರ ಬಳಕೆಗೆ ಒತ್ತು ನೀಡಿದಾಗ, ‘ಬರೀ ಸಾವಯವದಿಂದ ರೈತ ಬದುಕಲು ಸಾಧ್ಯವಿಲ್ಲ’ ಎಂದು ಇದೇ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಆದರೆ,…
ಬಿಡದಿ ಟೌನ್ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯೋಜನೆಯನ್ನು ಮುಂದುವರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ತೇಜಸ್ವಿ ಸೂರ್ಯ, ಬಿಡದಿ ಟೌನ್ಶಿಪ್ ಯೋಜನೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ “ವ್ಯರ್ಥ ಯೋಜನೆ”ಯಾಗಿ ಪರಿಣಮಿಸಿದೆ ಎಂದು ಟೀಕಿಸಿದ್ದಾರೆ. ಯೋಜನೆ ಜಾರಿಗೆ ಮುನ್ನ ರೈತರೊಂದಿಗೆ ಸಮಾಲೋಚನೆ ನಡೆಸಿಲ್ಲ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಹಾಗೂ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಗತ್ಯ ಪಾರದರ್ಶಕತೆ ಪಾಲಿಸಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ. ಯಾವುದೇ ಭೂಸ್ವಾಧೀನಕ್ಕೂ ಮುನ್ನ ರೈತರಿಗೆ ಸ್ಪಷ್ಟ ಮಾಹಿತಿ, ಸಮಾಲೋಚನೆ ಮತ್ತು ನ್ಯಾಯಸಮ್ಮತ ಪ್ರಕ್ರಿಯೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವೇಳೆ ಬಿಡದಿ ಟೌನ್ಶಿಪ್…
ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಆರಂಭಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ರಸಗೊಬ್ಬರ ಪೂರೈಕೆಯಾದರೂ ರಾಜ್ಯ ಸರ್ಕಾರ ಅಗತ್ಯವಿರುವಲ್ಲಿ ರೈತರಿಗೆ ರಸಗೊಬ್ಬರ ತಲುಪಿಸದೆ ತೀರಾ ಬೇಜವಾಬ್ದಾರಿಯಾಗಿ ವರ್ತಿಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಜನವರಿ-ಮಾರ್ಚ್ ಅವಧಿಯಲ್ಲೇ ಅಗತ್ಯಕ್ಕಿಂತ ಹೆಚ್ಚುವರಿ 0.33 ಲಕ್ಷ ಮೆಟ್ರಿಕ್ ಟನ್ ಯೂರಿಯಾ, 1.29 ಲಕ್ಷ ಮೆಟ್ರಿಕ್ ಟನ್ ಡಿಎಪಿ ಮತ್ತು 1.58 ಲಕ್ಷ ಮೆಟ್ರಿಕ್ ಟನ್ ಎನ್ಪಿಕೆಎಸ್ ಅನ್ನು ರಾಜ್ಯಕ್ಕೆ ನೀಡಲಾಗಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅದಾಗಲೇ ಜೂನ್ 10 ರ ವರೆಗೆ ಯೂರಿಯಾ 3.13 ಲಕ್ಷ ಮೆಟ್ರಿಕ್ ಟನ್ (LMT) ಅಗತ್ಯತೆಯಲ್ಲಿ 5.59 LMT ಲಭ್ಯತೆಯನ್ನು ಖಾತರಿಪಡಿಸಿದೆ. ಡಿಎಪಿ 1.89 LMT ಅಗತ್ಯತೆಯಲ್ಲಿ 2.57 LMT ಲಭ್ಯತೆ ಖಚಿತಪಡಿಸಿದ್ದು, ಪ್ರಸ್ತುತ ದಾಸ್ತಾನು 1.09 LMT ಇದೆ. ಹೆಚ್ಚುವರಿ ರಸಗೊಬ್ಬರ ಪೂರೈಕೆಯಲ್ಲಿದೆ.…
