ಚೆನ್ನೈ: ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಚೆನ್ನೈನಲ್ಲಿ ಆಯೋಜಿಸಿದ್ದ ‘ಸ್ಟಾರ್ಟ್ ರನ್, ಸ್ಟಾಪ್ ಡ್ರಗ್ಸ್’ ಮ್ಯಾರಥಾನ್ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ Thalapathy Vijay ಅವರು ಭಾಗವಹಿಸಿ ಸಾರ್ವಜನಿಕರ ಗಮನ ಸೆಳೆದರು. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ನಡೆದ ಈ ಓಟದಲ್ಲಿ ಸಿಎಂ ವಿಜಯ್ ಅವರು ಬರೋಬ್ಬರಿ 6 ಕಿಲೋಮೀಟರ್ ಓಡಿ ಮಾದರಿಯಾದರು. ಸಾಮಾನ್ಯವಾಗಿ ಇಂತಹ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು ಕೇವಲ ಚಾಲನೆ ನೀಡಿ ನಿರ್ಗಮಿಸುವುದು ರೂಢಿ. ಆದರೆ ಯಾವುದೇ ರಾಜಕೀಯ ಹಮ್ಮು-ಬಿಮ್ಮು ಇಲ್ಲದೆ, ಸಾಮಾನ್ಯ ನಾಗರಿಕನಂತೆ ಜನರೊಂದಿಗೆ ಹೆಜ್ಜೆ ಹಾಕಿದ ದಳಪತಿ ವಿಜಯ್ ಅವರ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮ್ಯಾರಥಾನ್ ವೇಳೆ ಸಿಎಂ ವಿಜಯ್ ಅವರನ್ನು ಕಂಡ ಯುವಕ-ಯುವತಿಯರು ಸೆಲ್ಫೀಗಾಗಿ ಮುಗಿಬಿದ್ದ ದೃಶ್ಯಗಳು ಗಮನಸೆಳೆದವು. ಎಲ್ಲರೊಂದಿಗೆ ಹೆಜ್ಜೆಗೂಡಿ, ನಂತರ ಸಾರ್ವಜನಿಕರ ಜೊತೆ ಜೊತೆಯಾಗಿಯೇ 6 ಕಿಲೋಮೀಟರ್ ದೂರವನ್ನು ಓಡಿ…
Blog
ಐಸ್ಲ್ಯಾಂಡ್ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ
ರೇಕ್ಜಾವಿಕ್: ಭಾರತ ಮೊದಲ ಬಾರಿಗೆ ಐಸ್ಲ್ಯಾಂಡ್ನಲ್ಲಿ ತನ್ನ ಮಾವಿನ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಿದೆ. Embassy of India in Reykjavik ಹಾಗೂ APEDA ಸಹಯೋಗದಲ್ಲಿ ಜೂನ್ 24 ಮತ್ತು 25ರಂದು Reykjavik ಮತ್ತು Akureyriಗಳಲ್ಲಿ ಭಾರತೀಯ ಮಾವಿನ ಪ್ರಚಾರ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮಗಳಲ್ಲಿ ದಶೇರಿ, ಚೌಸಾ, ಲ್ಯಾಂಗ್ರಾ ಮತ್ತು ಕೇಸರ್ ಸೇರಿದಂತೆ ಪ್ರೀಮಿಯಂ ಭಾರತೀಯ ಮಾವಿನ ಪ್ರಭೇದಗಳನ್ನು ಪ್ರದರ್ಶಿಸಲಾಗಿದ್ದು, ಐಸ್ಲ್ಯಾಂಡ್ನ ಆಮದುದಾರರು, ರಾಜತಾಂತ್ರಿಕರು ಹಾಗೂ ವ್ಯಾಪಾರ ವಲಯದಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಭಾರತೀಯ ರಾಯಭಾರಿ ಆರ್. ರವೀಂದ್ರ ಅವರು ಭಾರತೀಯ ಮಾವಿನ ವಿಶಿಷ್ಟ ಸುವಾಸನೆ ಹಾಗೂ ಉನ್ನತ ಗುಣಮಟ್ಟವನ್ನು ಉಲ್ಲೇಖಿಸಿ, ಐಸ್ಲ್ಯಾಂಡ್ ಮಾರುಕಟ್ಟೆಯಲ್ಲಿ ರಫ್ತು ವಿಸ್ತರಣೆಗೆ ಮಹತ್ವದ ಅವಕಾಶಗಳಿವೆ ಎಂದು ಹೇಳಿದರು. ಐಸ್ಲ್ಯಾಂಡ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವ್ಯಾಪಾರ ಒಪ್ಪಂದಗಳ ನಿರ್ದೇಶಕ ಸ್ವೀನ್ ಕೆ. ಐನಾರ್ಸನ್, ಭಾರತ–ಇಎಫ್ಟಿಎ ವ್ಯಾಪಾರ ಹಾಗೂ ಆರ್ಥಿಕ ಪಾಲುದಾರಿಕೆ ಒಪ್ಪಂದದಿಂದ ಭಾರತೀಯ…
2024ರಿಂದ 21 ಬಾರಿ ಕೈಕೊಟ್ಟ ನಮ್ಮ ಮೆಟ್ರೋ; ಬಿಎಂಆರ್ಸಿಎಲ್ಗೆ ತೇಜಸ್ವಿ ಸೂರ್ಯ ತರಾಟೆ
ಬೆಂಗಳೂರು: ನಗರದ ಸಾರ್ವಜನಿಕ ಸಾರಿಗೆಯ ಪ್ರಮುಖ ಆಧಾರವಾಗಿರುವ ನಮ್ಮ ಮೆಟ್ರೋ ಮತ್ತೊಮ್ಮೆ ತಾಂತ್ರಿಕ ದೋಷದಿಂದಾಗಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸರಣಿ ಅಡಚಣೆಗಳು ವರದಿಯಾಗಿದ್ದು, 2024ರಿಂದ 2026ರ ಜೂನ್ 26ರವರೆಗೆ ಒಟ್ಟು 21 ಬಾರಿ ತಾಂತ್ರಿಕ ಸಮಸ್ಯೆಗಳು ಉಂಟಾಗಿವೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಆಡಳಿತ ಮಂಡಳಿಯು ಸಾರ್ವಜನಿಕರಿಗೆ ಉತ್ತರ ನೀಡಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. ಮೆಟ್ರೋದಲ್ಲಿ ಮರುಮರು ಸಂಭವಿಸುತ್ತಿರುವ ತಾಂತ್ರಿಕ ವೈಫಲ್ಯಗಳನ್ನು ಗಂಭೀರವಾಗಿ ಪರಿಗಣಿಸಿರುವ ತೇಜಸ್ವಿ ಸೂರ್ಯ, ರೈಲ್ವೆ ಸುರಕ್ಷತಾ ಆಯುಕ್ತರಿಗೆ (ದಕ್ಷಿಣ ವಲಯ) ಹಾಗೂ ರಾಜ್ಯದ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದಿದ್ದಾರೆ. “ಬಿಎಂಆರ್ಸಿಎಲ್ ದೇಶದಲ್ಲೇ ಅತ್ಯಧಿಕ ಮೆಟ್ರೋ ಪ್ರಯಾಣ ದರಗಳನ್ನು…
‘ಗೃಹಲಕ್ಷ್ಮಿ ಯೋಜನೆ’ ಅಕ್ರಮಗಳಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದ ಅಶೋಕ್
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳ ಕುರಿತಂತೆ ರಾಜ್ಯ ಸರ್ಕಾರವನ್ನು ತೆಗೆದುಕೊಂಡಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಅಕ್ರಮದಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳು ನಡೆದಿದ್ದು, ಸಾವಿರಾರು ವಂಚನೆ ಖಾತೆಗಳಿಗೆ ಕೋಟ್ಯಂತರ ರೂಪಾಯಿಗಳನ್ನು ವಿತರಿಸಲಾಗಿದೆ. ಖಾತರಿ ಅನುಷ್ಠಾನ ಸಮಿತಿಗೆ 150 ಕೋಟಿ ಖರ್ಚು ಮಾಡುವುದು ಅರ್ಥಹೀನ. ಇದರ ಜೊತೆಗೆ, ಖಾತರಿಗಳಿಗಾಗಿ ಅರ್ಜಿಗಳನ್ನು ಮರುಸಲ್ಲಿಸುವ ನಾಟಕ ಪ್ರಾರಂಭವಾಗಿದೆ. ಒಟ್ಟಾರೆಯಾಗಿ, ಕಾಂಗ್ರೆಸ್ ಖಾತರಿಗಳಲ್ಲಿ ಅವ್ಯವಸ್ಥೆ ಇದೆ ಎಂದವರು ವಾಗ್ದಾಳಿ ನಡೆಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳಾಗಿವೆ, ಸಾವಿರಾರು ಅಕ್ರಮ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ಪಾವತಿಸಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗೆ 150 ಕೋಟಿ ಖರ್ಚು ಮಾಡುತ್ತಿರುವುದು ನಿರರ್ಥಕ. ಇದರ ಮೇಲೆ ಗ್ಯಾರಂಟಿಗಳಿಗೆ ಮರು ಅರ್ಜಿ ಸಲ್ಲಿಸುವ ನಾಟಕ ಆರಂಭಿಸಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಗೋಲ್ಮಾಲ್ ಆಗುತ್ತಿದೆ.… pic.twitter.com/jm6lj4CnU9 — R. Ashoka (@RAshokaBJP) June 25,…
ಬಿಡದಿ ಟೌನ್ಶಿಪ್ ವಿವಾದ: ಬೈರಮಂಗಲಕ್ಕೆ ಬಂದು ರೈತರ ಅಹವಾಲು ಆಲಿಸಿ; ಸಿಎಂಗೆ ಕುಮಾರಸ್ವಾಮಿ ಮತ್ತೆ ಆಹ್ವಾನ
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ಆತಂಕಗಳನ್ನು ಆಲಿಸಲು ಬೈರಮಂಗಲಕ್ಕೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಆಹ್ವಾನ ನೀಡಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವುದಲ್ಲದೆ, ಅದರ ವಿವರವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, ಬಿಡದಿ ಟೌನ್ಶಿಪ್ ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ರೈತರ ಕಳವಳಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳನ್ನು ಮತ್ತೊಮ್ಮೆ ಬೈರಮಂಗಲಕ್ಕೆ ಆಹ್ವಾನಿಸಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡನೇ ಬಾರಿ ಪತ್ರ ಬರೆದಿರುವುದಾಗಿ ಹೇಳಿರುವ ಅವರು, “ಈ ಹಿಂದೆ ತಿಳಿಸಿದಂತೆ ಜೂನ್ 27, 2026ರಂದು ನಾನು ಬೈರಮಂಗಲದಲ್ಲಿ ರೈತರು ಹಾಗೂ ಇತರ ಬಾಧಿತ ಪಾಲುದಾರರೊಂದಿಗೆ ಸಂವಾದ ನಡೆಸಲು ಲಭ್ಯವಿರುತ್ತೇನೆ. ಮುಖ್ಯಮಂತ್ರಿಗಳು ಸಹ ಸಕಾರಾತ್ಮಕ ಮನೋಭಾವದಿಂದ ಸ್ಪಂದಿಸಿ, ಜನರ ಸಮಸ್ಯೆಗಳನ್ನು ಅವರಿರುವ ಸ್ಥಳದಲ್ಲೇ…
ಡಿಕೆಶಿ ಜೊತೆ ಯಾವುದೇ ರಾಜಕೀಯ, ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ ಸ್ಪಷ್ಟನೆ
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗೆ ಯಾವುದೇ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪಕ್ಷದ ಹಿರಿಯ ನಾಯಕರ ಸಲಹೆಯಂತೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ. ಧರ್ಮಸ್ಥಳಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು ವಿವಿಧ ಕೈಂಕರ್ಯಗಳಲ್ಲಿ ಭಾಗವಹಿಸಿದರು. ಈ ವೇಳೆ ಅವರೊಂದಿಗೆ ಒಬ್ಬ ಸಂಸದ, ಎಂಟು ಶಾಸಕರು ಹಾಗೂ ಇಬ್ಬರು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಧರ್ಮಸ್ಥಳ ಕ್ಷೇತ್ರದ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳಿಗೆ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂರ್ಣವಿರಾಮ ಇಟ್ಟಿರುವುದಾಗಿ ಹೇಳಿದರು. “ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ವಿಚಾರ ನನಗೆ ಮಾತ್ರವಲ್ಲ, ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೂ ತೀವ್ರ ನೋವು ಮತ್ತು ಆಘಾತ ಉಂಟುಮಾಡಿದೆ. ನಾನು ಭಾವನಾತ್ಮಕ ವ್ಯಕ್ತಿಯಾಗಿರುವ ಕಾರಣ ಸತ್ಯಾಸತ್ಯತೆ…
ಲಸಿಕೆ, ಕ್ಯಾನ್ಸರ್ ಔಷಧಿಗಳಿಗೆ QR ಕೋಡ್ ಕಡ್ಡಾಯ: ಔಷಧ ಟ್ರ್ಯಾಕಿಂಗ್ ವ್ಯವಸ್ಥೆ ವಿಸ್ತರಿಸಿದ ಕೇಂದ್ರ
ನವದೆಹಲಿ: ಔಷಧಗಳ ಸುರಕ್ಷತೆ ಹೆಚ್ಚಿಸುವ ಹಾಗೂ ನಕಲಿ ಔಷಧಿಗಳ ಹಾವಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವಾಲಯವು QR ಕೋಡ್ ಆಧಾರಿತ ಔಷಧ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಮತ್ತಷ್ಟು ವಿಸ್ತರಿಸಿದೆ. ಇನ್ನು ಮುಂದೆ ಲಸಿಕೆಗಳು, ಆಂಟಿಮೈಕ್ರೊಬಿಯಲ್ ಔಷಧಿಗಳು, ಕ್ಯಾನ್ಸರ್ ವಿರೋಧಿ ಔಷಧಿಗಳು ಹಾಗೂ ಮಾದಕ ಮತ್ತು ಸೈಕೋಟ್ರೋಪಿಕ್ ಔಷಧಿಗಳ ಮೇಲೂ ಈ ನಿಯಮ ಅನ್ವಯವಾಗಲಿದೆ. ಈ ಸಂಬಂಧ 1945ರ ಔಷಧ ನಿಯಮಗಳಿಗೆ ತಿದ್ದುಪಡಿ ಪ್ರಕಟಿಸಿರುವ ಸಚಿವಾಲಯ, ಮೇಲ್ಕಂಡ ಔಷಧ ವರ್ಗಗಳನ್ನು ‘ಷೆಡ್ಯೂಲ್ H2’ ವ್ಯಾಪ್ತಿಗೆ ಸೇರಿಸಿದೆ. ಇದರ ಅನ್ವಯ, ಔಷಧಗಳ ಪ್ಯಾಕೇಜಿಂಗ್ ಮೇಲೆ ಬಾರ್ಕೋಡ್ ಅಥವಾ QR ಕೋಡ್ ಅಳವಡಿಸುವುದು ಕಡ್ಡಾಯವಾಗಲಿದೆ. ಹೊಸ ನಿಯಮಗಳ ಪ್ರಕಾರ, ಔಷಧ ತಯಾರಕರು ಉತ್ಪನ್ನದ ಜೆನೆರಿಕ್ ಮತ್ತು ಬ್ರಾಂಡ್ ಹೆಸರು, ತಯಾರಕ ಸಂಸ್ಥೆಯ ವಿವರ, ಬ್ಯಾಚ್ ಸಂಖ್ಯೆ, ಉತ್ಪಾದನೆ ಹಾಗೂ ಅವಧಿ ಮುಕ್ತಾಯ ದಿನಾಂಕ, ಪರವಾನಗಿ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು…
ವಾಣಿಜ್ಯ ಎಲ್ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು: ಸಿಲಿಂಡರ್ ಸರಬರಾಜು ಯಥಾಸ್ಥಿತಿ
ನವದೆಹಲಿ: ಕೈಗಾರಿಕಾ ಹಾಗೂ ವಾಣಿಜ್ಯ ಗ್ರಾಹಕರಿಗೆ ಮಹತ್ವದ ಪರಿಹಾರ ನೀಡಿರುವ ಕೇಂದ್ರ ಸರ್ಕಾರ, ದೇಶೀಯವಲ್ಲದ ಪ್ಯಾಕ್ ಮಾಡಲಾದ ಎಲ್ಪಿಜಿ (LPG) ಪೂರೈಕೆಯ ಮೇಲಿನ ಎಲ್ಲಾ ವಲಯವಾರು ನಿರ್ಬಂಧಗಳನ್ನು ತೆರವುಗೊಳಿಸಿದೆ. ಇಂಧನ ಲಭ್ಯತೆ ಸುಧಾರಿಸಿರುವ ಹಿನ್ನೆಲೆಯಲ್ಲಿ ಎಲ್ಪಿಜಿ ಸರಬರಾಜನ್ನು ಬಿಕ್ಕಟ್ಟಿನ ಪೂರ್ವ ಮಟ್ಟಕ್ಕೆ ಮರುಸ್ಥಾಪಿಸಲಾಗಿದೆ. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಸಂದರ್ಭದಲ್ಲಿ ಕಡಿತಗೊಳಿಸಲಾಗಿದ್ದ ಬೃಹತ್ ಎಲ್ಪಿಜಿ ಸರಬರಾಜನ್ನು ಈಗ ಬಿಕ್ಕಟ್ಟಿನ ಪೂರ್ವ ಬಳಕೆಯ ಮಟ್ಟದ ಶೇ.50ರಷ್ಟು ಪುನಃಸ್ಥಾಪಿಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ ವಾಣಿಜ್ಯ ಹಾಗೂ ಕೈಗಾರಿಕಾ ಬಳಕೆದಾರರಿಗೆ ಗಮನಾರ್ಹ ನೆರವು ದೊರೆಯಲಿದೆ. ಪಶ್ಚಿಮ ಏಷ್ಯಾದಲ್ಲಿ ಉಂಟಾದ ಬಿಕ್ಕಟ್ಟಿನ ವೇಳೆ ದೇಶೀಯ ಅಡುಗೆ ಅನಿಲ ಪೂರೈಕೆ ಅಡಚಣೆಯಾಗದಂತೆ ನೋಡಿಕೊಳ್ಳಲು, ಅಗತ್ಯ ಸರಕುಗಳ ಕಾಯ್ದೆಯಡಿ ಎಲ್ಪಿಜಿ ಉತ್ಪಾದನೆಗೆ ಬಳಸುವ ಸಿ3-ಸಿ4 ಹೈಡ್ರೋಕಾರ್ಬನ್ ಸ್ಟ್ರೀಮ್ಗಳನ್ನು ಸರ್ಕಾರ ಮರುನಿರ್ದೇಶಿಸಿತ್ತು. ಈಗ ಸ್ಥಳೀಯ ಉತ್ಪಾದನೆ ಹಾಗೂ ಎಲ್ಪಿಜಿ ಆಮದು ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಈ…
ಆಂಧ್ರ-ತೆಲಂಗಾಣ-ಕರ್ನಾಟಕ ಸಿಎಂಗಳ ಒಗ್ಗಟ್ಟಿಗೆ ಸಾಕ್ಷಿಯಾದ ‘ತುಂಗಭದ್ರಾ’
ಕೊಪ್ಪಳ: ಮುನಿರಾಬಾದ್ನ ಐತಿಹಾಸಿಕ ತುಂಗಭದ್ರಾ ಜಲಾಶಯದಲ್ಲಿ ನೂತನ 18, 19, 20 ಮತ್ತು 21ನೇ ಕ್ರಸ್ಟ್ ಗೇಟ್ಗಳನ್ನು ಗುರುವಾರ ಅದ್ಧೂರಿಯಾಗಿ ಲೋಕಾರ್ಪಣೆ ಮಾಡಲಾಯಿತು. ಈ ಮಹತ್ವದ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಭಾಗವಹಿಸಿದರು. ಗಣ್ಯರು ಜಂಟಿಯಾಗಿ ಬಟನ್ ಒತ್ತುವ ಮೂಲಕ ನೂತನ ಗೇಟ್ಗಳ ಉದ್ಘಾಟನೆ ನೆರವೇರಿಸಿದರು. ಲೋಕಾರ್ಪಣೆ ಬಳಿಕ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಗೇಟ್ಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಈ ವೇಳೆ ತುಂಗಭದ್ರಾ ಜಲಾಶಯದ ಅಧಿಕಾರಿಗಳು ನೂತನ ಕ್ರಸ್ಟ್ ಗೇಟ್ಗಳ ತಾಂತ್ರಿಕ ವೈಶಿಷ್ಟ್ಯಗಳು ಹಾಗೂ ಅವುಗಳ ಕಾರ್ಯವೈಖರಿ ಕುರಿತು ವಿವರಿಸಿದರು. ಜಲಾಶಯದ ಸುರಕ್ಷತೆ ಮತ್ತು ನೀರು ನಿರ್ವಹಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಗೇಟ್ಗಳನ್ನು ಅಳವಡಿಸಲಾಗಿದೆ. ಇದರಿಂದ ನೀರಿನ ಹರಿವಿನ ನಿಯಂತ್ರಣ ಸುಧಾರಣೆಯಾಗಲಿದ್ದು, ಕರ್ನಾಟಕ,…
ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ
ಕ್ಯಾರಕಾಸ್: ದಕ್ಷಿಣ ಅಮೆರಿಕಾದ ರಾಷ್ಟ್ರ ವೆನೆಜುವೆಲಾದಲ್ಲಿ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ಭಾರಿ ಆತಂಕ ಸೃಷ್ಟಿಸಿದ್ದು, ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದೆ. ಶತಮಾನ ಕಂಡರಿಯದ ಈ ಭೀಕರ ಸಾವಿರಾರು ಜನರು ಸಾವನ್ನಾಪಿರುವ ಶಂಕೆ ಇದ್ದು, ಈ ಸಂಖ್ಯೆ ಲಕ್ಷ ದಾಟುವ ಆತಂಕವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ಮೊದಲು 7.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು ಒಂದು ನಿಮಿಷದೊಳಗೆ 7.5 ತೀವ್ರತೆಯ ಮತ್ತೊಂದು ಪ್ರಬಲ ಭೂಕಂಪ ದಾಖಲಾಗಿದೆ. ಎರಡೂ ಭೂಕಂಪಗಳ ಕೇಂದ್ರಬಿಂದು ರಾಜಧಾನಿ ಕ್ಯಾರಕಾಸ್ನ ಪಶ್ಚಿಮಕ್ಕೆ ಸುಮಾರು 160 ಕಿಲೋಮೀಟರ್ ದೂರದಲ್ಲಿರುವ ಮೊರೊನ್ ಕರಾವಳಿ ಪ್ರದೇಶದ ಸಮೀಪ ಇತ್ತು. ಭೂಕಂಪಗಳ ಪರಿಣಾಮವಾಗಿ ಕ್ಯಾರಕಾಸ್ ಸೇರಿದಂತೆ ಹಲವು ನಗರಗಳಲ್ಲಿ ಕಟ್ಟಡಗಳಿಗೆ ಹಾನಿಯಾಗಿದ್ದು, ಕೆಲವು ಕಟ್ಟಡಗಳು ಕುಸಿದಿರುವ ವರದಿಗಳು ಬಂದಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹಾನಿಯ ದೃಶ್ಯಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಭೂಕಂಪಗಳು ಕೇವಲ 10 ಕಿಲೋಮೀಟರ್…
