Blog

‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ಕೈ ಬಿಡದ ಕಾಂಗ್ರೆಸ್‌ ಸರ್ಕಾರ ಸಮಿತಿ ರಚಿಸುವ ಹೊಸ ನಾಟಕ ಮಾಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜನರ ಸಿಂಪತಿ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಎಂದಿಗೂ ಸ್ವಾಧೀನಕ್ಕೆ ಆದೇಶ ಹೊರಡಿಸಿರಲಿಲ್ಲ, ಕಾಂಗ್ರೆಸ್‌ ಕೂಡ ಯೋಜನೆಯನ್ನು ವಿರೋಧ ಮಾಡಿತ್ತು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್‌ ವಿರುದ್ಧ ರೈತರು ಉಗ್ರ ಹೋರಾಟ ಮಾಡುತ್ತಿದ್ದರೂ ಸರ್ಕಾರ ಪೊಲೀಸರನ್ನು ಕಳಿಸಿ ಹಲ್ಲೆ ಮಾಡಿದೆ. ಕೊಲೆ, ಬೆದರಿಕೆ ಎಂಬುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈಗ ಇದಕ್ಕಾಗಿ ಸದನ ಸಮಿತಿ ನೇಮಿಸಿರುವುದು ಹಾಸ್ಯಾಸ್ಪದವಾಗಿದೆ. ರೈತರು ಜಮೀನು ಕೊಡುವುದಿಲ್ಲ ಎಂದಮೇಲೂ ಸದನ ಸಮಿತಿ ಅಗತ್ಯವಿರಲಿಲ್ಲ. ಆದರೆ ಅಧಿವೇಶನ ನಡೆಯಲಿರುವುದರಿಂದ, ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡಲಾಗಿದೆ ಎಂದರು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಈ ಹಿಂದೆ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರೇ ಹೊರತು, ಆದೇಶ…

‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದ ಬಿಜೆಪಿ ಟೀಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚಿನ ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಖರ್ಗೆ, “ಕೈದಿಗಳ ಪರಾರಿ ಪ್ರಕರಣವನ್ನು ‘ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ’ ಸಂಭ್ರಮಿಸುತ್ತಾ ನನ್ನನ್ನು ಟೀಕಿಸುತ್ತಿರುವ ಬಿಜೆಪಿ ನಾಯಕರು ಮೊದಲು ತಮ್ಮ ಆಡಳಿತದ ವೈಫಲ್ಯವನ್ನು ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದು ಹೇಳಿದ್ದಾರೆ. 2010ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಿಂದ ಒಂದೇ ಬಾರಿ ಎಂಟು ಕೈದಿಗಳು ಪರಾರಿಯಾಗಿದ್ದರು. ಪರಾರಿಯಾದವರಲ್ಲಿ ಇಬ್ಬರನ್ನು 14 ವರ್ಷಗಳ ಬಳಿಕವೇ ಬಂಧಿಸಲು ಸಾಧ್ಯವಾಯಿತು ಎಂದು ಅವರು ಉಲ್ಲೇಖಿಸಿದ್ದಾರೆ. ಬಿಜೆಪಿ ಆಡಳಿತದಲ್ಲಿ 2010ರಲ್ಲಿ 26, 2011ರಲ್ಲಿ 18, 2012ರಲ್ಲಿ 17, 2020ರಲ್ಲಿ 11, 2021ರಲ್ಲಿ 4 ಹಾಗೂ 2022ರಲ್ಲಿ 10 ಕೈದಿಗಳು ಪರಾರಿಯಾಗಿದ್ದರು…

ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ

ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, “2010ರಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಿ ಈಗಿನ ವೈಫಲ್ಯವನ್ನು ಸಮರ್ಥಿಸಿಕೊಳ್ಳಬೇಡಿ. ನಿಮ್ಮ ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಹೇಳಬೇಡಿ” ಎಂದು ಟೀಕಿಸಿದ್ದಾರೆ. “ನಿಮಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಲು ಸಮಯ ಇದೆ. ಆದರೆ ಜೈಲು ಭದ್ರತೆ ಮತ್ತು ಕಾನೂನು-ಸುವ್ಯವಸ್ಥೆ ಕಾಪಾಡಲು ಸಮಯ ಇಲ್ಲವೇ?” ಎಂದು ವ್ಯಂಗ್ಯವಾಡಿದ್ದಾರೆ. ಗೃಹ ಸಚಿವರ ತವರು ಜಿಲ್ಲೆಯಲ್ಲೇ ಕೈದಿಗಳು ಜೈಲಿನಿಂದ ಪರಾರಿಯಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿರುವ ಅವರು, “ಮಹತ್ವದ ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವರು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಅವರ ಯೋಗ್ಯತೆಯನ್ನು ತೋರಿಸುತ್ತದೆ” ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಮೂರು…

ಭಾರತ ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ; ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ದಾಖಲೆ

ನವದೆಹಲಿ: ಭಾರತ ಎಲೆಕ್ಟ್ರಾನಿಕ್ಸ್ ಉತ್ಪಾದನೆಯಲ್ಲಿ ಮಹತ್ವದ ಸಾಧನೆ ಮಾಡಿದ್ದು, ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ ರಾಷ್ಟ್ರವಾಗಿ ಹೊರಹೊಮ್ಮಿದೆ. ಸ್ಮಾರ್ಟ್‌ಫೋನ್‌ಗಳು ದೇಶದ ಅತಿದೊಡ್ಡ ರಫ್ತು ಉತ್ಪನ್ನವಾಗಿ ದಾಖಲೆ ನಿರ್ಮಿಸಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 2014-15ರಲ್ಲಿ ₹1.9 ಲಕ್ಷ ಕೋಟಿ ಇದ್ದ ಎಲೆಕ್ಟ್ರಾನಿಕ್ಸ್ ಉತ್ಪಾದನೆ 2025-26ರಲ್ಲಿ ₹13.11 ಲಕ್ಷ ಕೋಟಿಗೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ರಫ್ತುಗಳು ₹4.24 ಲಕ್ಷ ಕೋಟಿಗೆ ಏರಿಕೆಯಾಗಿದ್ದು, ಮೊಬೈಲ್ ಫೋನ್ ರಫ್ತು ಮಾತ್ರ ₹2.6 ಲಕ್ಷ ಕೋಟಿ ತಲುಪಿದೆ. ಕಳೆದ ದಶಕದಲ್ಲಿ ಈ ವಲಯದಲ್ಲಿ 25 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿದ್ದು, ಮೊಬೈಲ್ ಉತ್ಪಾದನಾ ವಲಯದಲ್ಲೇ 12 ಲಕ್ಷ ನೇರ ಮತ್ತು ಪರೋಕ್ಷ ಉದ್ಯೋಗಗಳು ಲಭಿಸಿವೆ. ನೇರ ಕಾರ್ಯಪಡೆಯ ಸುಮಾರು 70% ಮಹಿಳೆಯರು ಎಂಬುದು ವಿಶೇಷ. ತಮಿಳುನಾಡಿನ ಹೊಸೂರು, ಶ್ರೀಪೆರಂಬದೂರು ಹಾಗೂ ಕರ್ನಾಟಕದ ಬೆಂಗಳೂರಿನ ಮೊಬೈಲ್ ಉತ್ಪಾದನಾ ಘಟಕಗಳು ಸೇರಿ ಒಂದು ಲಕ್ಷಕ್ಕೂ…

ಭಾರತ–ಲಂಡನ್ CETA ಜಾರಿ; ಭಾರತದ 99% ರಫ್ತಿಗೆ ಯುಕೆಯಲ್ಲಿ ಶೂನ್ಯ ಸುಂಕ

ನವದೆಹಲಿ: ಭಾರತ–ಯುನೈಟೆಡ್ ಕಿಂಗ್‌ಡಮ್ ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (CETA) ಹಾಗೂ ಸಾಮಾಜಿಕ ಭದ್ರತಾ ಒಪ್ಪಂದ ಬುಧವಾರದಿಂದ ಜಾರಿಗೆ ಬಂದಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧದಲ್ಲಿ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದೆ. ಒಪ್ಪಂದದಡಿ ಯುಕೆಗೆ ಭಾರತದ ಸುಮಾರು 99% ರಫ್ತಿಗೆ ಶೂನ್ಯ ಸುಂಕ ಸೌಲಭ್ಯ ದೊರೆಯಲಿದ್ದು, ಜವಳಿ, ಚರ್ಮ, ರತ್ನಾಭರಣ, ಎಂಜಿನಿಯರಿಂಗ್, ಸಮುದ್ರ ಉತ್ಪನ್ನ, ರಾಸಾಯನಿಕ ಹಾಗೂ ಸಂಸ್ಕರಿತ ಆಹಾರ ವಲಯಗಳಿಗೆ ಹೆಚ್ಚಿನ ಲಾಭವಾಗಲಿದೆ. ಒಪ್ಪಂದ ಜಾರಿಯಾದ ಮೊದಲ ದಿನವೇ ದೇಶದ 20ಕ್ಕೂ ಹೆಚ್ಚು ಬಂದರು, ವಿಮಾನ ನಿಲ್ದಾಣ, ಐಸಿಡಿ, ಎಸ್‌ಇಝಡ್ ಹಾಗೂ ಉತ್ಪಾದನಾ ಘಟಕಗಳಿಂದ 140 ಮಿಲಿಯನ್ ಡಾಲರ್‌ಗಿಂತ ಹೆಚ್ಚು ಮೌಲ್ಯದ ರಫ್ತು ಸರಕುಗಳನ್ನು ರವಾನಿಸಲಾಯಿತು. ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಇದು ಭಾರತ–ಯುಕೆ ಸಂಬಂಧದಲ್ಲಿ “ನಿರ್ಣಾಯಕ ಮೈಲಿಗಲ್ಲು” ಎಂದು ಬಣ್ಣಿಸಿದ್ದು, MSMEಗಳು, ರೈತರು, ತಯಾರಕರು ಹಾಗೂ ಐಟಿ, ಹಣಕಾಸು, ಶಿಕ್ಷಣ ಮತ್ತು ವೃತ್ತಿಪರ…

ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಇರಾನ್‌ನ ಪಿಕಾಕ್ಸ್ ಪರ್ವತದಲ್ಲಿರುವ ಪರಮಾಣು ತಾಣದ ಮೇಲೆ ಅಮೆರಿಕ ನಿರಂತರ ನಿಗಾ ವಹಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಲ್ಲಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣವೇ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, ಅಮೆರಿಕದ ಬಾಹ್ಯಾಕಾಶ ಕಣ್ಗಾವಲು ವ್ಯವಸ್ಥೆಗಳು ಪಿಕಾಕ್ಸ್ ಸೇರಿದಂತೆ ಇರಾನ್‌ನ ಪ್ರಮುಖ ಪರಮಾಣು ತಾಣಗಳನ್ನು ಮೇಲ್ವಿಚಾರಣೆ ಮಾಡುತ್ತಿವೆ ಎಂದು ಹೇಳಿದರು. ಸ್ವಲ್ಪ ಮಟ್ಟಿನ ಚಲನೆಯಾದರೂ ಕಂಡುಬಂದರೆ ನಾವು ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಕಣ್ಗಾವಲು ವ್ಯವಸ್ಥೆಗಳು ಅತ್ಯಂತ ಸುಧಾರಿತವಾಗಿವೆ ಎಂದು ಟ್ರಂಪ್ ಹೇಳಿದರು. ಪಿಕಾಕ್ಸ್ ತಾಣದಲ್ಲಿ ಪರಮಾಣು ಚಟುವಟಿಕೆ ನಡೆಯುತ್ತಿದೆಯೇ ಎಂಬುದು ಸ್ಪಷ್ಟವಾಗಿಲ್ಲವಾದರೂ, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಉಪಗ್ರಹ ಚಿತ್ರಗಳಲ್ಲಿ ಟ್ರಕ್‌ಗಳು, ಕ್ರೇನ್‌ಗಳು ಹಾಗೂ ಹೊಸದಾಗಿ ಕಾಂಕ್ರೀಟ್ ಸುರಿದಿರುವ ಲಕ್ಷಣಗಳು ಕಂಡುಬಂದಿವೆ ಎಂದು ಹೇಳಿದ ಟ್ರಂಪ್, ಪ್ರವೇಶದ್ವಾರಗಳನ್ನು ಮುಚ್ಚಲು…

ಬಿಡದಿ ಟೌನ್‌ಶಿಪ್‌; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಯೋಜನೆಗಾಗಿ ಬಿಡದಿ ಹೋಬಳಿಯ ಮೂರು ಗ್ರಾಮಗಳ ಒಟ್ಟು 2,550 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಆದೇಶಿಸಿದೆ. ಅಧಿಸೂಚನೆಯ ಪ್ರಕಾರ ಕೆಜಿ ಗೊಲ್ಲರಪಾಳ್ಯದಲ್ಲಿ 315 ಎಕರೆ, ಬನ್ನಿಗಿರಿ ಗ್ರಾಮದಲ್ಲಿ 775 ಎಕರೆ 6 ಗುಂಟೆ ಹಾಗೂ ಅರಳಾಳುಸಂದ್ರದಲ್ಲಿ 1,460 ಎಕರೆ 21 ಗುಂಟೆ ಭೂಮಿ ಸ್ವಾಧೀನಕ್ಕೆ ಒಳಪಡಲಿದೆ. ಈ ನಡುವೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಬಿಡದಿ ಟೌನ್‌ಶಿಪ್ ನನ್ನ ಕನಸಿನ ಯೋಜನೆಯಲ್ಲ. ಈ ಯೋಜನೆಗೆ ನಾನು ಪಿತಾಮಹನಾಗಲು ಬಯಸುವುದಿಲ್ಲ. ಯಾರ ಆಸ್ತಿಯನ್ನೂ ಬಲವಂತವಾಗಿ ತೆಗೆದುಕೊಳ್ಳುವುದಿಲ್ಲ. ರೈತರು ಸ್ವಇಚ್ಛೆಯಿಂದ ಭೂಮಿ ನೀಡಿದರೆ ಮಾತ್ರ ಸ್ವಾಧೀನ ಪ್ರಕ್ರಿಯೆ ನಡೆಯಲಿದೆ. ಜಮೀನು ನೀಡುವಂತೆ ಯಾರ ಮೇಲೂ ಒತ್ತಡ ಹೇರಲ್ಲ” ಎಂದು ಸ್ಪಷ್ಟಪಡಿಸಿದರು. ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಈ ಹಿಂದೆ…

ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

ಚೆನ್ನೈ: ಕಾಲಿವುಡ್ ಸ್ಟಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ ಜುಲೈ 23ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಬಹುನಿರೀಕ್ಷಿತ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಕಳೆದ ಏಳು ತಿಂಗಳಿಂದ ಸೆನ್ಸಾರ್ ಹಾಗೂ ಕಾನೂನು ಪ್ರಕ್ರಿಯೆಗಳಿಂದ ವಿಳಂಬವಾಗಿದ್ದ ಚಿತ್ರಕ್ಕೆ ಇದೀಗ ಎಲ್ಲಾ ಅಡೆತಡೆಗಳು ನಿವಾರಣೆಯಾಗಿದ್ದು, ಇತ್ತೀಚೆಗೆ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣಪತ್ರ ದೊರೆತಿದೆ. ನಟ ವಿಜಯ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡು ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದಾರೆ. ನಿರ್ಮಾಣ ಸಂಸ್ಥೆಯೂ “ಹೋರಾಟ ಎಷ್ಟು ಕಠಿಣವೋ, ಗೆಲುವು ಅಷ್ಟೇ ಭರ್ಜರಿ” ಎಂದು ಪೋಸ್ಟ್ ಮಾಡಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. Tested by fire. Forged by time. Built for history. The tougher the battle, The louder the victory.#JanaNayaganFromJuly23#JanaNayakuduFromJuly23#JanNetaFromJuly23…

ಬಡವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಕ್ರಮ ವ್ಯವಹಾರ; ಸಿಬಿಐ, ಇ.ಡಿ ತನಿಖೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಚಿಕ್ಕಮಗಳೂರು, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಬಡಜನರ ಹೆಸರಲ್ಲಿ ನಕಲಿ ಖಾತೆಗಳನ್ನು ತೆರೆದು ಅಕ್ರಮವಾಗಿ ಹಣ ವರ್ಗಾವಣೆ ಮಾಡಿ ವಂಚಿಸಿರುವ ಪ್ರಕರಣವನ್ನು ಸಿಬಿಐ ಹಾಗೂ ಇ.ಡಿ ತನಿಖೆಗೆ ವಹಿಸಲು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹೇಳಿದ್ದಾರೆ. ಮಾನ್ಯ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಡಜನರ ಆಧಾರ್ ಕಾರ್ಡ್ ಪಡೆದು ಅವರ ಹೆಸರಲ್ಲಿ ಹೊಸ ಸಿಮ್ ಖರೀದಿಸಿ, ಜನರಿಗೆ ಯಾವುದೇ ದಾಖಲೆ ನೀಡದೆ ಬ್ಯಾಂಕ್ ಅಧಿಕಾರಿಗಳ ಜೊತೆ ಶಾಮೀಲಾಗಿ ಅವರ ಹೆಸರಲ್ಲಿ ಕೋಟ್ಯಂತರ ರೂ. ವ್ಯವಹಾರ ಮಾಡಿದ್ದರ ಬಗ್ಗೆ ದೂರುಗಳು ಹುಬ್ಬಳ್ಳಿ, ಶಿವಮೊಗ್ಗದಲ್ಲಿ ದಾಖಲಾಗಿವೆ. ̇ರೂ. 87 ಕೋಟಿ ವಹಿವಾಟು ನಡೆದಿರುವುದು ದೃಢಪಡಿಸಲಾಗಿದೆ ಎಂದರು. ಈ ಪ್ರಕರಣದಲ್ಲಿ ಮೂವರ ಬಂಧನವಾಗಿದೆ. ಚಿಕ್ಕಮಗಳೂರಿನಲ್ಲಿ ಪೌರ ಕಾರ್ಮಿಕರು, ಹಮಾಲರು, ಪೇಂಟರ್‍ಗಳು…

‘ಶಾಶ್ವತ ನಿವಾಸ ಪ್ರಮಾಣಪತ್ರ’ ಪ್ರಸ್ತಾವನೆ ಕಾನೂನುಬಾಹಿರ; ಒಕ್ಕೂಟ ವ್ಯವಸ್ಥೆಗೂ ಅಪಾಯಕಾರಿ

ಬೆಂಗಳೂರು: ರಾಜ್ಯ ಸರ್ಕಾರವು ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ನೀಡುವ ಅಧಿಕಾರವನ್ನು ಸ್ವತಃ ಪಡೆದುಕೊಳ್ಳಲು ಮುಂದಾಗಿರುವುದು ಕಾನೂನುಬಾಹಿರ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೂ ಧಕ್ಕೆ ತರುವ ಅಪಾಯಕಾರಿ ನಡೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬಿಜೆಪಿ ನಿಯೋಗದೊಂದಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಈ ಸಂಬಂಧ ಅಧಿಸೂಚನೆ ಸಿದ್ಧಪಡಿಸಿದರೆ ಅದಕ್ಕೆ ಅಂಕಿತ ಹಾಕದಂತೆ ರಾಜ್ಯಪಾಲರನ್ನು ಕೋರಿದ್ದೇವೆ ಎಂದು ಹೇಳಿದರು. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅಶೋಕ್, ಪೌರತ್ವ, ವಿದೇಶಿಯರ ಗುರುತಿಸುವಿಕೆ ಹಾಗೂ ವಲಸೆ ಸಂಬಂಧಿತ ವಿಷಯಗಳು ಸಂವಿಧಾನದ ಪ್ರಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಮುಂದಾಗಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ದೇಶಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ…