Blog

ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ: ರಾಜ್ಯ ಪರಿಷತ್‌ಗೆ ಶಿಫಾರಸಿಗೆ ನಿರ್ಧಾರ

ಬೆಂಗಳೂರು: ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ಅನುದಾನ ಹಂಚಿಕೆ ಹಾಗೂ ಬಳಕೆಗೆ ಸಂಬಂಧಿಸಿದಂತೆ ಕೆಲವು ಮಹತ್ವದ ಶಿಫಾರಸುಗಳನ್ನು ರಾಜ್ಯ ಪರಿಷತ್‌ಗೆ ಕಳುಹಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನೋಡಲ್ ಏಜೆನ್ಸಿ ಉಪಾಧ್ಯಕ್ಷ ಟಿ.ರಘುಮೂರ್ತಿ ಅವರ ನೇತೃತ್ವದಲ್ಲಿ ಸತತ ಎರಡನೇ ದಿನ ನಡೆದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. 2026-27ನೇ ಸಾಲಿನಲ್ಲಿ ವಿವಿಧ ಇಲಾಖೆಗಳು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ನಿಗದಿಪಡಿಸಲಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳದಿರುವ ಕುರಿತು ಸಚಿವತ್ರಯರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಂದ ಸಮಗ್ರ ಮಾಹಿತಿ ಪಡೆದು, ಅನುದಾನ ಬಳಕೆ ಹಾಗೂ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳ ಕುರಿತು ಸೂಕ್ತ ಶಿಫಾರಸುಗಳನ್ನು ರಾಜ್ಯ ಪರಿಷತ್‌ಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣಗೆ 2 ದಿನ ಪೊಲೀಸ್ ಕಸ್ಟಡಿ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಸಹ ಆರೋಪಿ ಪ್ರತಾಪ್ ರೈ ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ಒಪ್ಪಿಸಿದೆ. ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಬಳಕೆಯಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಮಂಗಳವಾರ ಇಬ್ಬರನ್ನೂ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಮೊಬೈಲ್ ಫೋನ್ ಜೈಲಿನೊಳಗೆ ಹೇಗೆ ತಲುಪಿತು? ಅದನ್ನು ಪ್ರಜ್ವಲ್ ರೇವಣ್ಣ ಅವರಿಗೆ ಯಾರು ನೀಡಿದರು? ಪ್ರಕರಣದಲ್ಲಿ ಜೈಲು ಸಿಬ್ಬಂದಿ ಅಥವಾ ಇತರರು ಭಾಗಿಯಾಗಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಮತ್ತು ಪ್ರತಾಪ್ ರೈ ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಅತ್ಯಾಚಾರ…

ವಡೋದರಾದಲ್ಲಿ ₹35,000 ಕೋಟಿ ಯೋಜನೆಗಳಿಗೆ ಮೋದಿ ಚಾಲನೆ

ವಡೋದರಾ,: ಗುಜರಾತ್‌ನ ವಡೋದರಾದಲ್ಲಿ ₹35,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಿದರು. ಹಲವು ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಅವರು, ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮಹಾರಾಜ ಸಯಾಜಿರಾವ್ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಮೂಲಸೌಕರ್ಯ, ಉತ್ಪಾದನೆ, ಕೌಶಲ್ಯಾಭಿವೃದ್ಧಿ ಹಾಗೂ ಕೃತಕ ಬುದ್ಧಿಮತ್ತೆ (AI) ಭಾರತದ ಆರ್ಥಿಕ ಬೆಳವಣಿಗೆಯ ಪ್ರಮುಖ ಚಾಲಕಗಳಾಗಿವೆ ಎಂದರು. 2,800 ಕಿ.ಮೀ ಉದ್ದದ ಮೀಸಲು ಸರಕು ಸಾಗಣೆ ಕಾರಿಡಾರ್ (DFC) ಪೂರ್ಣಗೊಂಡಿರುವುದನ್ನು ಮೋದಿ ಪ್ರಮುಖ ಸಾಧನೆ ಎಂದು ಬಣ್ಣಿಸಿದರು. ಪೂರ್ವ ಮತ್ತು ಪಶ್ಚಿಮ ಡಿಎಫ್‌ಸಿಗಳಿಂದ ಸರಕು ಸಾಗಣೆಯನ್ನು ಪ್ರಯಾಣಿಕರ ರೈಲು ಸೇವೆಯಿಂದ ಪ್ರತ್ಯೇಕಿಸಲಾಗಿದೆ. ಇದರಿಂದ ಪ್ರತಿದಿನ 430ಕ್ಕೂ ಹೆಚ್ಚು ಸರಕು ರೈಲುಗಳು ಸಂಚರಿಸುತ್ತಿವೆ ಎಂದು ಹೇಳಿದರು. ಹಿಂದೆ ಸುಮಾರು 30 ಗಂಟೆ ತೆಗೆದುಕೊಳ್ಳುತ್ತಿದ್ದ ಸರಕು ಸಾಗಣೆ ಇದೀಗ 10–12 ಗಂಟೆಗಳಲ್ಲಿ…

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕೆಂಬ CWRC ಆದೇಶ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಕರ್ನಾಟಕ ಸರ್ಕಾರದ ಚಿಂತನೆ

ಬೆಂಗಳೂರು,: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. CWRC ಆದೇಶ ರಾಜ್ಯಕ್ಕೆ ತೀವ್ರ ನೋವು ಹಾಗೂ ಬೇಸರ ತಂದಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, CWRC ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಿದ್ದಾರೆ. ತಮಿಳುನಾಡು 17 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಬೇಡಿಕೆ ಇಟ್ಟಿತ್ತು. ಆದರೆ ಕಳೆದ ಒಂದು ವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಒಳಹರಿವು ಗಣನೀಯವಾಗಿ ಕುಸಿದಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವುದೂ ರಾಜ್ಯಕ್ಕೆ ಕಷ್ಟಕರವಾಗಿದೆ ಎಂದು ಹೇಳಿದರು. “ರಾಜ್ಯದ ರೈತರ ಹಿತ ಹಾಗೂ ಕುಡಿಯುವ ನೀರಿನ ಅಗತ್ಯ ಗಮನದಲ್ಲಿಟ್ಟುಕೊಂಡು…

ದೆಹಲಿಯಲ್ಲಿ ಕಾವೇರಿ ಸಂಕಷ್ಟದ ವಾಸ್ತವ ಚಿತ್ರಣ; ಪ್ರಾಧಿಕಾರದ ಮುಂದೆ ರಾಜ್ಯದ ವಾದ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ತೀವ್ರ ನೀರಿನ ಕೊರತೆ ಹಾಗೂ ರೈತರ ಹಿತರಕ್ಷಣೆಯ ಹಿನ್ನೆಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಬಲವಾಗಿ ಮಂಡಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ರಾಜ್ಯದಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿರುವುದನ್ನು ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲು ಅಧಿಕಾರಿಗಳ ತಂಡ ಈಗಾಗಲೇ ದೆಹಲಿಗೆ ತೆರಳಿದೆ. ಈ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮಂಗಳವಾರ ಸಭೆ ನಡೆಸಿ, ರಾಜ್ಯದ ಪರವಾಗಿ ಮಂಡಿಸಬೇಕಾದ ಅಂಶಗಳು ಹಾಗೂ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಪದೇಪದೇ ಅರ್ಜಿ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವೂ ಪ್ರತಿಯೊಂದು ವಿಚಾರಕ್ಕೂ ನ್ಯಾಯಾಲಯದ ಮೆಟ್ಟಿಲೇರುವ ಅಗತ್ಯವಿಲ್ಲ ಎಂಬ ಸಲಹೆ ನೀಡಿದೆ. ರಾಜ್ಯದ ಪಾಲಿನ ನೀರನ್ನು ತಮಿಳುನಾಡು ಕೃಷಿ ಚಟುವಟಿಕೆಗಳಿಗೆ…

ಸೆ.22ರಂದು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ; ಕನ್ನಡ ಚಿತ್ರರಂಗಕ್ಕೂ ಹಲವು ವಿಭಾಗಗಳಲ್ಲಿ ಗೌರವ

ನವದೆಹಲಿ: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ರಾಷ್ಟ್ರಪತಿ ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕ್ತಾ ನಗರದಲ್ಲಿ (ಕೆವಾಡಿಯಾ) ಪ್ರದಾನ ಮಾಡಲಿದ್ದಾರೆ. 2024ರಲ್ಲಿ ಭಾರತೀಯ ಚಿತ್ರರಂಗದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಚಲನಚಿತ್ರಗಳು, ನಟರು, ತಂತ್ರಜ್ಞರು ಹಾಗೂ ಕಲಾವಿದರನ್ನು ಪ್ರಶಸ್ತಿಗಳು ಗೌರವಿಸಲಿವೆ. 1954ರಲ್ಲಿ ಸ್ಥಾಪನೆಯಾದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಗೌರವಗಳಲ್ಲಿ ಒಂದಾಗಿವೆ. ಇದೇ ಮೊದಲ ಬಾರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಷ್ಟ್ರ ರಾಜಧಾನಿಯ ಹೊರಗೆ ನಡೆಸಲಾಗುತ್ತಿದ್ದು, ದೇಶದ ವಿವಿಧ ಭಾಗಗಳಿಗೆ ಪ್ರತಿಷ್ಠಿತ ಕಾರ್ಯಕ್ರಮವನ್ನು ಕೊಂಡೊಯ್ಯುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉಪಕ್ರಮದ ಭಾಗವಾಗಿದೆ. ‘ಆರ್ಟಿಕಲ್ 370’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ‘ಆರ್ಟಿಕಲ್ 370’ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ‘ಭಂಗಾರ್’ ಅತ್ಯುತ್ತಮ ನಾನ್-ಫೀಚರ್ ಚಿತ್ರ ಹಾಗೂ ‘ರಾಮ್-ನಾಮಿ’ ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಪಡೆದಿವೆ. ‘ಬ್ರಹ್ಮಯುಗಂ’ ಚಿತ್ರಕ್ಕಾಗಿ ಮಮ್ಮುಟ್ಟಿ ಹಾಗೂ ‘ಚಂದು ಚಾಂಪಿಯನ್’ ಚಿತ್ರಕ್ಕಾಗಿ ಕಾರ್ತಿಕ್ ಆರ್ಯನ್…

ಯಶವಂತಪುರ ಎಪಿಎಂಸಿಯಲ್ಲಿ ಬಾಲಕಾರ್ಮಿಕ ಪದ್ಧತಿಗೆ ಬ್ರೇಕ್: ತಪ್ಪಿತಸ್ಥರ ಬಂಧನಕ್ಕೆ ಡಿಕೆಶಿ ಸೂಚನೆ

ಬೆಂಗಳೂರು: ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಬಾಲಕಾರ್ಮಿಕರಿಂದ ಕೆಲಸ ಮಾಡಿಸುವುದನ್ನು ತಕ್ಷಣವೇ ನಿಲ್ಲಿಸಬೇಕು. ಮಕ್ಕಳನ್ನು ದುಡಿಸಿಕೊಳ್ಳುವವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳವಾರ ಯಶವಂತಪುರ ಎಪಿಎಂಸಿಗೆ ದಿಢೀರ್ ಭೇಟಿ ನೀಡಿದ ಡಿಕೆಶಿ, ರೈತರು, ವರ್ತಕರು, ಮಧ್ಯವರ್ತಿಗಳು ಹಾಗೂ ಕೂಲಿ ಕಾರ್ಮಿಕರೊಂದಿಗೆ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಣ್ಣ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವ ಪದ್ಧತಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದರು. ರಾಜ್ಯದ ಇತರೆ ಎಪಿಎಂಸಿ ಮಾರುಕಟ್ಟೆಗಳಿಗೂ ಸಚಿವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿ, ರೈತರು ಮತ್ತು ವರ್ತಕರ ದೂರುಗಳನ್ನು ಪರಿಹರಿಸುವಂತೆ ಸೂಚಿಸಲಾಗುವುದು ಎಂದು ಹೇಳಿದರು. ಎಪಿಎಂಸಿ ಮಾರುಕಟ್ಟೆ ರೈತರು ಮತ್ತು ವ್ಯಾಪಾರಸ್ಥರ ನಡುವಿನ ಪ್ರಮುಖ ಕೊಂಡಿಯಾಗಿದೆ. ದೇಶದ ವಿವಿಧ ಭಾಗಗಳಿಂದ ಈರುಳ್ಳಿ, ಆಲೂಗಡ್ಡೆ ಸೇರಿದಂತೆ ಹಲವು ಕೃಷಿ ಉತ್ಪನ್ನಗಳು ಯಶವಂತಪುರ ಮಾರುಕಟ್ಟೆಗೆ ಬರುತ್ತಿವೆ. ಇಲ್ಲಿನ…

ಐಫೆಲ್ ಟವರ್ ಸಿಬ್ಬಂದಿ ಮುಷ್ಕರ ಅಂತ್ಯ; ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ

ಪ್ಯಾರಿಸ್: ವಿಶ್ವಪ್ರಸಿದ್ಧ ಐಫೆಲ್ ಟವರ್‌ನಲ್ಲಿ ಸಿಬ್ಬಂದಿ ನಡೆಸುತ್ತಿದ್ದ ದಿಢೀರ್ ಮುಷ್ಕರ ಅಂತ್ಯಗೊಂಡಿದೆ. ಮಹಿಳಾ ಉದ್ಯೋಗಿಗಳಿಗೆ ತಾರತಮ್ಯ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿದ್ದರು. ಇದೀಗ ಐಫೆಲ್ ಟವರ್ ನಿರ್ವಹಣಾ ಸಂಸ್ಥೆ (SETE) ಕ್ಷಮೆಯಾಚಿಸಿದ ಬಳಿಕ ಮಂಗಳವಾರದಿಂದ ಪ್ರವಾಸಿಗರಿಗೆ ಗೋಪುರವನ್ನು ಮತ್ತೆ ತೆರೆಯಲಾಗಿದೆ. ಫ್ರಾನ್ಸ್‌ನಲ್ಲಿ ಹೊಸ ದೇವಾಲಯ ಉದ್ಘಾಟನೆಗೆ ಆಗಮಿಸಿದ್ದ ಬಿಎಪಿಎಸ್ ಸ್ವಾಮಿನಾರಾಯಣ ಸಂಸ್ಥೆಯ ಸುಮಾರು 100 ಸದಸ್ಯರ ನಿಯೋಗ ಐಫೆಲ್ ಟವರ್‌ಗೆ ಖಾಸಗಿ ಭೇಟಿಗೆ ತೆರಳಿತ್ತು. ಈ ವೇಳೆ ನಿಯೋಗದ ಮನವಿಯ ಮೇರೆಗೆ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯನ್ನು ತಮ್ಮ ಸ್ಥಳದಿಂದ ದೂರ ಸರಿದು, ‘ಕಾಣಿಸದಂತೆ’ ಇರುವಂತೆ ಆಡಳಿತ ಸೂಚಿಸಿತ್ತು ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ. ಅಷ್ಟೇ ಅಲ್ಲದೆ, ಮಹಿಳಾ ಸಿಬ್ಬಂದಿ ಇದ್ದ ಸ್ಥಳದಲ್ಲಿ ಪುರುಷ ಉದ್ಯೋಗಿಗಳನ್ನು ನಿಯೋಜಿಸಲಾಗಿತ್ತು ಎನ್ನಲಾಗಿದೆ. ಇದನ್ನು ಮಹಿಳಾ ಉದ್ಯೋಗಿಗಳ ಅವಮಾನ ಮತ್ತು ಲಿಂಗ ತಾರತಮ್ಯ ಎಂದು ಖಂಡಿಸಿ ಸಿಬ್ಬಂದಿ…

ಐಫೆಲ್ ಟವರ್ ಸಿಬ್ಬಂದಿ ಮುಷ್ಕರ ಅಂತ್ಯ; ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ

ಪ್ಯಾರಿಸ್: ವಿಶ್ವಪ್ರಸಿದ್ಧ ಐಫೆಲ್ ಟವರ್‌ನಲ್ಲಿ ಸಿಬ್ಬಂದಿ ನಡೆಸುತ್ತಿದ್ದ ದಿಢೀರ್ ಮುಷ್ಕರ ಅಂತ್ಯಗೊಂಡಿದೆ. ಮಹಿಳಾ ಉದ್ಯೋಗಿಗಳಿಗೆ ತಾರತಮ್ಯ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿದ್ದರು. ಇದೀಗ ಐಫೆಲ್ ಟವರ್ ನಿರ್ವಹಣಾ ಸಂಸ್ಥೆ (SETE) ಕ್ಷಮೆಯಾಚಿಸಿದ ಬಳಿಕ ಮಂಗಳವಾರದಿಂದ ಪ್ರವಾಸಿಗರಿಗೆ ಗೋಪುರವನ್ನು ಮತ್ತೆ ತೆರೆಯಲಾಗಿದೆ. ಫ್ರಾನ್ಸ್‌ನಲ್ಲಿ ಹೊಸ ದೇವಾಲಯ ಉದ್ಘಾಟನೆಗೆ ಆಗಮಿಸಿದ್ದ ಬಿಎಪಿಎಸ್ ಸ್ವಾಮಿನಾರಾಯಣ ಸಂಸ್ಥೆಯ ಸುಮಾರು 100 ಸದಸ್ಯರ ನಿಯೋಗ ಐಫೆಲ್ ಟವರ್‌ಗೆ ಖಾಸಗಿ ಭೇಟಿಗೆ ತೆರಳಿತ್ತು. ಈ ವೇಳೆ ನಿಯೋಗದ ಮನವಿಯ ಮೇರೆಗೆ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯನ್ನು ತಮ್ಮ ಸ್ಥಳದಿಂದ ದೂರ ಸರಿದು, ‘ಕಾಣಿಸದಂತೆ’ ಇರುವಂತೆ ಆಡಳಿತ ಸೂಚಿಸಿತ್ತು ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ. ಅಷ್ಟೇ ಅಲ್ಲದೆ, ಮಹಿಳಾ ಸಿಬ್ಬಂದಿ ಇದ್ದ ಸ್ಥಳದಲ್ಲಿ ಪುರುಷ ಉದ್ಯೋಗಿಗಳನ್ನು ನಿಯೋಜಿಸಲಾಗಿತ್ತು ಎನ್ನಲಾಗಿದೆ. ಇದನ್ನು ಮಹಿಳಾ ಉದ್ಯೋಗಿಗಳ ಅವಮಾನ ಮತ್ತು ಲಿಂಗ ತಾರತಮ್ಯ ಎಂದು ಖಂಡಿಸಿ ಸಿಬ್ಬಂದಿ…

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೂ SIR ನೋಟಿಸ್; ತಪ್ಪು ಅರಿತು ಕ್ಷಮೆಯಾಚಿಸಿದ ಚುನಾವಣಾ ಆಯೋಗ

ಮಂಗಳೂರು: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪುರಸ್ಕೃತ, ಮಂಗಳೂರಿನ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗದ ಎಸ್‌ಐಆರ್‌ ನೋಟಿಸ್ ಜಾರಿಯಾಗಿದ್ದು, ಕೆಲವೇ ಗಂಟೆಗಳಲ್ಲಿ ಅಧಿಕಾರಿಗಳು ಅದನ್ನು ವಾಪಸ್ ಪಡೆದ ಘಟನೆ ನಡೆದಿದೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಹಿನ್ನೆಲೆಯಲ್ಲಿ ಹಾಜಬ್ಬ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್ ಜಾರಿಯಾಗಲು ಕಾರಣವಾಗಿದ್ದು ತಾಂತ್ರಿಕ ದೋಷ ಎಂಬುದು ಬಳಿಕ ಅಧಿಕಾರಿಗಳ ಗಮನಕ್ಕೆ ಬಂದಿದೆ. ಇದಾದ ಬಳಿಕ ಹಿರಿಯ ಅಧಿಕಾರಿಗಳು ಖುದ್ದಾಗಿ ಹಾಜಬ್ಬ ಅವರ ಮನೆಗೆ ತೆರಳಿ ಕ್ಷಮೆಯಾಚಿಸಿ ನೋಟಿಸ್ ಹಿಂಪಡೆದಿದ್ದಾರೆ. ಹಾಜಬ್ಬರಿಗೆ ನೋಟಿಸ್ ನೀಡಿದ್ದೇಕೆ? 2002ರ ಮತದಾರರ ಪಟ್ಟಿಯಲ್ಲಿ ಹಾಜಬ್ಬ ಅವರ ಹೆಸರು ಕೇವಲ ‘ಹಾಜಬ್ಬ’ ಎಂದು ದಾಖಲಾಗಿತ್ತು. ಆದರೆ ಪ್ರಸ್ತುತ ಅವರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್‌ಪೋರ್ಟ್ ಹಾಗೂ ಪದ್ಮಶ್ರೀ ಪ್ರಶಸ್ತಿ ಪತ್ರ ಸೇರಿದಂತೆ ಅಧಿಕೃತ ದಾಖಲೆಗಳಲ್ಲಿ ‘ಹರೇಕಳ…