ಗಾಂಧಿನಗರ: ಗುಜರಾತ್ನಲ್ಲಿ ಚಂಡಿಪುರ ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ಜೂನ್ 30ರಿಂದ ಆಗಸ್ಟ್ 8ರವರೆಗೆ 217 ಶಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 39 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 23 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಶನಿವಾರ ತಿಳಿಸಿದೆ. ಒಟ್ಟು 217 ಮಾದರಿಗಳಲ್ಲಿ 208ರ ಪರೀಕ್ಷಾ ವರದಿ ಲಭ್ಯವಾಗಿದ್ದು, ಇನ್ನೂ ಒಂಬತ್ತು ಮಾದರಿಗಳ ಫಲಿತಾಂಶ ಬಾಕಿಯಿದೆ. ರಾಜ್ಯದಲ್ಲಿ ಕಣ್ಗಾವಲು ಮತ್ತು ಪರೀಕ್ಷೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಜುಲೈ 14ರಂದು 27 ಶಂಕಿತ ಪ್ರಕರಣಗಳು ವರದಿಯಾಗಿದ್ದವು. ಈ ಪೈಕಿ ಏಳು ಮಂದಿಗೆ ಸೋಂಕು ದೃಢಪಟ್ಟಿದ್ದು, ಮೂವರು ಮಕ್ಕಳು ಮೃತಪಟ್ಟಿದ್ದರು. ಪಂಚಮಹಲ್ ಜಿಲ್ಲೆಯ ಗೋಧ್ರಾ ತಾಲ್ಲೂಕಿನ ಗ್ರಾಮಗಳಲ್ಲಿ ಇಬ್ಬರು ಮಕ್ಕಳು ಸೋಂಕಿನಿಂದ ಮೃತಪಟ್ಟ ಬಳಿಕ ಪ್ರಕರಣಗಳು ಗಮನ ಸೆಳೆದಿದ್ದವು. ಬಳಿಕ ಆರೋಗ್ಯ ಇಲಾಖೆ ಪೀಡಿತ ಪ್ರದೇಶಗಳಲ್ಲಿ ಮನೆ-ಮನೆಗೆ ತೆರಳಿ ತಪಾಸಣೆ, ಮಾದರಿ ಸಂಗ್ರಹ ಹಾಗೂ…
Blog
‘ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?’; ಕುಮಾರಸ್ವಾಮಿ ಕಿಡಿ
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೈಸ್ ಕಂಪನಿ ಮಾಲೀಕರ ಪರ ಸರ್ಕಾರ ನಿಂತಿದೆ ಎಂದು ಆರೋಪಿಸಿದ ಅವರು, ರೈತರ ಹಿತ ಕಡೆಗಣಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, “ಅಕ್ರಮ ಎಸಗಿರುವ ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?” ಎಂದು ಪ್ರಶ್ನಿಸಿದರು. 2018ರ ವರದಿಯಲ್ಲೇ ನೈಸ್ ಯೋಜನೆಯಲ್ಲಿ ಅಕ್ರಮ ಹಾಗೂ ಲೂಟಿ ನಡೆದಿರುವ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದ್ದರೂ, ಕಾಂಗ್ರೆಸ್ ಸರ್ಕಾರ ಈವರೆಗೆ ಯಾವ ಕ್ರಮ ಕೈಗೊಂಡಿದೆ ಎಂದು ಅವರು ಪ್ರಶ್ನಿಸಿದರು. 136 ಸ್ಥಾನಗಳನ್ನು ನೀಡಿ ಅಧಿಕಾರಕ್ಕೆ ತಂದ ಜನರಿಗೆ ಸರ್ಕಾರ ನೀಡುತ್ತಿರುವ ಉತ್ತರ ಇದೇನಾ ಎಂದು ವಾಗ್ದಾಳಿ ನಡೆಸಿದರು. ಸಾವಿರಾರು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿ, ಸುಮಾರು 20 ಸಾವಿರ ಎಕರೆ ಭೂಮಿಯನ್ನು ಕಬಳಿಸಲಾಗಿದೆ…
E20 ಪೆಟ್ರೋಲ್ ಸುರಕ್ಷಿತ; 500 ppm ಕ್ಲೋರೈಡ್ ಆರೋಪ ತಳ್ಳಿಹಾಕಿದ ತೈಲ ಕಂಪನಿಗಳು
ನವದೆಹಲಿ: E20 ಪೆಟ್ರೋಲ್ನಲ್ಲಿ ಹೆಚ್ಚಿನ ಪ್ರಮಾಣದ ಕ್ಲೋರೈಡ್ ಮತ್ತು ತೇವಾಂಶ ಮಾಲಿನ್ಯವಿದೆ ಎಂಬ ಆರೋಪಗಳನ್ನು ತೈಲ ಮಾರುಕಟ್ಟೆ ಕಂಪನಿಗಳು (OMC) ತಳ್ಳಿಹಾಕಿವೆ. ದೇಶಾದ್ಯಂತ ನಡೆಸಿದ ವ್ಯಾಪಕ ಪರೀಕ್ಷೆಗಳಲ್ಲಿ ಇಂಧನದ ಗುಣಮಟ್ಟ ನಿಗದಿತ ಮಾನದಂಡಗಳಲ್ಲೇ ಇರುವುದು ದೃಢಪಟ್ಟಿದೆ ಎಂದು ಕಂಪನಿಗಳು ತಿಳಿಸಿವೆ. E20 ಪೆಟ್ರೋಲ್ನಲ್ಲಿ 500 ppm ವರೆಗೆ ಕ್ಲೋರೈಡ್ ಮತ್ತು ತೇವಾಂಶ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಹೆಚ್ಚುವರಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸಂಸ್ಕರಣಾಗಾರದಿಂದ ಚಿಲ್ಲರೆ ಮಾರಾಟ ಮಳಿಗೆಗಳವರೆಗೆ ಸಂಪೂರ್ಣ ಪೂರೈಕೆ ಸರಪಳಿಯಲ್ಲಿ ವೈಜ್ಞಾನಿಕ ವಿಧಾನದಲ್ಲಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದೆ ಎಂದು OMCಗಳು ಹೇಳಿವೆ. ಸಂಸ್ಕರಣಾಗಾರಗಳಿಂದ ಸಂಗ್ರಹಿಸಿದ 100ಕ್ಕೂ ಹೆಚ್ಚು ಪೆಟ್ರೋಲ್ ಮಾದರಿಗಳಲ್ಲಿ ಕ್ಲೋರೈಡ್ ಪ್ರಮಾಣ 1 ppm ಅಥವಾ ಅದಕ್ಕಿಂತ ಕಡಿಮೆ ಇತ್ತು. ಇದೇ ವೇಳೆ, OMCಗಳು ಮತ್ತು ಸೆಂಟರ್ ಫಾರ್ ಹೈ ಟೆಕ್ನಾಲಜಿ (CHT) ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ಕಳೆದ 10 ದಿನಗಳಲ್ಲಿ 80 ಡಿಸ್ಟಿಲರಿಗಳಿಂದ ಎಥೆನಾಲ್…
ಸಚಿವ ಸ್ಥಾನ ಸಿಗದ ಶಾಸಕರಿಗೆ JDS ಓಪನ್ ಆಫರ್; ರಾಜ್ಯ ಕಾಂಗ್ರೆಸ್ನಲ್ಲಿ ಮತ್ತಷ್ಟು ಸಂಚಲನ
ಹಾಸನ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಮಂತ್ರಿ ಸ್ಥಾನ ಸಿಗದ ಶಾಸಕರು ಪಕ್ಷದ ನಡೆಗೆ ಬೇಸರಗೊಂಡಿದ್ದು, ಅನೇಕರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಬಹುತೇಕ ಮಂದಿ ರಾಜೀನಾಮೆಯಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡರೂ ಕಾಂಗ್ರೆಸ್ ಶಾಸಕರ ಪಾಳಯದಲ್ಲಿ ಅಸಮಾಧಾನ ಇನ್ನೂ ಹೊಗೆಯಾಡುತ್ತಿದೆ. ಇದೀಗ ಅವರನ್ನು ಸಮಾಧಾನಪಡಿಸಲು ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಹಾಗೂ ಸಚಿವರು ಮನೆ ಮನೆಗೆ ತೆರಳಿ ಮಾತುಕತೆ ಮೂಲಕ ಮನವೊಲಿಸುವ ಯತ್ನ ನಡೆಸಿದ್ದಾರೆ. ಈ ಬೆಳವಣಿಗೆಗಳ ನಡುವೆ ಜೆಡಿಎಸ್ ನಾಯಕರೂ ಆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುತೂಹಲಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್ ಅಸಮಧಾನಿತ ಶಾಸಕರಿಗೆ ಅವರು ಗಾಳ ಹಾಕಿದಂತಿದ್ದು, ಜೆಡಿಎಸ್ಗೆ ಬರುವಂತೆ ಓಪನ್ ಆಫರ್ ನೀಡಿದ್ದಾರೆ. ಹಾಸನದ ಹರದನಹಳ್ಳಿಯಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ನೋವು ಮತ್ತು ಸಮಸ್ಯೆಯಲ್ಲಿರುವವರಿಗೆ ಪರಿಹಾರ ನೀಡುವ ಪಕ್ಷ…
‘ದೈನಂದಿನ UPI ವಹಿವಾಟಿಗೆ ಶುಲ್ಕವಿಲ್ಲ’; ಗ್ರಾಹಕರಿಗೆ ಕೇಂದ್ರ ಸರ್ಕಾರದ ಭರವಸೆ
ನವದೆಹಲಿ: ಯುಪಿಐ ಮೂಲಕ ಹಣ ಪಾವತಿಸುವ ಗ್ರಾಹಕರಿಗೆ ಯಾವುದೇ ವಹಿವಾಟು ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪಾವತಿ ಮತ್ತು ವಸಾಹತು ವ್ಯವಸ್ಥೆಗಳ (PSS) ಕಾಯ್ದೆಗೆ ಇತ್ತೀಚೆಗೆ ಮಾಡಲಾದ ತಿದ್ದುಪಡಿ ಕುರಿತು ಮೂಡಿದ್ದ ಗೊಂದಲದ ನಡುವೆಯೇ ಸರ್ಕಾರ ಈ ಸ್ಪಷ್ಟನೆ ನೀಡಿದೆ. ಎಲ್ಲಾ ವ್ಯಕ್ತಿಯಿಂದ ವ್ಯಕ್ತಿಗೆ (P2P) ಯುಪಿಐ ವಹಿವಾಟುಗಳು ಉಚಿತವಾಗಿಯೇ ಮುಂದುವರಿಯಲಿವೆ. ಭವಿಷ್ಯದಲ್ಲಿ ವ್ಯಾಪಾರಿ ರಿಯಾಯಿತಿ ದರ (MDR) ಜಾರಿಗೊಳಿಸಿದರೂ, ಅದು ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಸೀಮಿತ ವ್ಯಾಪಾರಿ ವಹಿವಾಟುಗಳಿಗೆ ಮಾತ್ರ ಅನ್ವಯಿಸಲಿದೆ ಎಂದು ಸರ್ಕಾರ ತಿಳಿಸಿದೆ. ಅಲ್ಲದೆ, MDR ನಾಮಮಾತ್ರವಾಗಿದ್ದು, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ಗಳಿಗೆ ವಿಧಿಸುವ MDRಗಿಂತ ಕಡಿಮೆ ಇರಲಿದೆ ಎಂದು ಸ್ಪಷ್ಟಪಡಿಸಿದೆ. ಯುಪಿಐನಲ್ಲಿನ ಬಹುಪಾಲು ವ್ಯಾಪಾರಿ ವಹಿವಾಟುಗಳೂ ಉಚಿತವಾಗಿಯೇ ಮುಂದುವರಿಯಲಿವೆ ಎಂದು ಕೇಂದ್ರ ಹೇಳಿದೆ. PSS ಕಾಯ್ದೆಗೆ ತಿದ್ದುಪಡಿ ಮಾಡಿದ ಹಿನ್ನೆಲೆಯಲ್ಲಿ ಯುಪಿಐ ಬಳಕೆದಾರರಿಗೆ ಶೀಘ್ರದಲ್ಲೇ ದೈನಂದಿನ ವಹಿವಾಟುಗಳಿಗೆ ಶುಲ್ಕ…
ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್, ಕಿಯಾರಾ ಅಡ್ವಾಣಿ ಹಾಗೂ ನಯನತಾರಾ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಟ್ರೈಲರ್ ಕೊನೆಗೂ ಬಿಡುಗಡೆಯಾಗಿದೆ. ಶನಿವಾರ ಅದ್ಧೂರಿ ಕಾರ್ಯಕ್ರಮದಲ್ಲಿ ಚಿತ್ರತಂಡ ಟ್ರೈಲರ್ ಅನಾವರಣಗೊಳಿಸಿದೆ. ಈಗಾಗಲೇ ‘ಟಾಕ್ಸಿಕ್’ ಚಿತ್ರದ ಟೀಸರ್, ಹಾಡುಗಳು ಹಾಗೂ ಕೆಲ ತುಣುಕುಗಳು ಬಿಡುಗಡೆಯಾಗಿ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿವೆ. ಟೀಸರ್ ಮತ್ತು ಹಾಡುಗಳಿಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಕೆಲವರು ಚಿತ್ರತಂಡದ ಪ್ರಯತ್ನದ ಬಗ್ಗೆ ಟೀಕೆಯನ್ನೂ ವ್ಯಕ್ತಪಡಿಸಿದ್ದರು. ಇದೀಗ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಿನಿಮಾ ಕುರಿತ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಹೈ-ವೋಲ್ಟೇಜ್ ಆ್ಯಕ್ಷನ್, ಅದ್ಧೂರಿ ದೃಶ್ಯಗಳು ಹಾಗೂ ಯಶ್ ಅವರ ವಿಭಿನ್ನ ಲುಕ್ ಈಗಾಗಲೇ ಅಭಿಮಾನಿಗಳ ಗಮನ ಸೆಳೆದಿದೆ. ಹೈದರಾಬಾದ್ನ ಎಎಂಬಿ ಮಾಲ್ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ‘ಟಾಕ್ಸಿಕ್’ ಚಿತ್ರದ ಟ್ರೈಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಪ್ರಮುಖರು ಹಾಗೂ…
ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ
ಚೆನ್ನೈ: ದೇವಾಲಯಗಳ ಪಾವಿತ್ರ್ಯ ಕಾಪಾಡುವುದು ಹಾಗೂ ಅನಧಿಕೃತ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸೆಪ್ಟೆಂಬರ್ 1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಹಿಂದೂ ಧಾರ್ಮಿಕ ಮತ್ತು ದತ್ತಿ (HR&CE) ಇಲಾಖೆ ನಿರ್ಧರಿಸಿದೆ. ದೇವಾಲಯಗಳಿಗೆ ಭೇಟಿ ನೀಡುವ ನಟರು, ರಾಜಕೀಯ ನಾಯಕರು ಹಾಗೂ ಇತರ ಗಣ್ಯರಿಗೆ ಸಂಬಂಧಿಸಿದ ನಿಯಮಗಳನ್ನೂ ಇಲಾಖೆ ಬಿಗಿಗೊಳಿಸಿದೆ. ಗಣ್ಯರ ಭೇಟಿಯಿಂದ ಸಾಮಾನ್ಯ ಭಕ್ತರಿಗೆ ತೊಂದರೆಯಾಗದಂತೆ ಹಾಗೂ ದರ್ಶನಕ್ಕೆ ಅಡ್ಡಿಯಾಗದಂತೆ ವ್ಯವಸ್ಥೆ ಮಾಡುವಂತೆ ದೇವಾಲಯ ಆಡಳಿತಗಳಿಗೆ ಸೂಚಿಸಲಾಗಿದೆ. ಗಣ್ಯರ ಭೇಟಿಯ ಕುರಿತು ಕನಿಷ್ಠ ಒಂದು ದಿನ ಮುಂಚಿತವಾಗಿ HR&CE ಆಯುಕ್ತರಿಗೆ ಮಾಹಿತಿ ನೀಡಬೇಕು. ಭೇಟಿಯ ದಿನಾಂಕ, ಸಮಯ ಹಾಗೂ ಅವರೊಂದಿಗೆ ಬರುವವರ ಸಂಖ್ಯೆಯ ವಿವರಗಳನ್ನು ನೀಡಬೇಕಿದೆ. ತುರ್ತು ಭೇಟಿಗಳ ಸಂದರ್ಭದಲ್ಲೂ ತಕ್ಷಣ ಇಲಾಖೆಗೆ ಮಾಹಿತಿ ನೀಡಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ದೇವಾಲಯದ ಆವರಣದಲ್ಲಿ ಗಣ್ಯರ ಭೇಟಿಯ ವೇಳೆ…
‘ಜೀವನ ಲೀಡರ್ಬೋರ್ಡ್ ಅಲ್ಲ, ನಿಮ್ಮ ಸ್ಪರ್ಧೆ ನಿಮ್ಮೊಂದಿಗೇ’; ಯುವಕರಿಗೆ ಪ್ರಧಾನಿ ಮೋದಿ ಸಲಹೆ
ನವದೆಹಲಿ: ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಕುತೂಹಲವನ್ನು ಜೀವಂತವಾಗಿರಿಸಿಕೊಂಡು, ನಿರಂತರವಾಗಿ ಕಲಿಯುತ್ತಾ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಐಐಟಿ ದೆಹಲಿ ಪದವೀಧರರಿಗೆ ಕರೆ ನೀಡಿದ್ದಾರೆ. ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮೋದಿ, ಪದವಿ ಪಡೆದ ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ಅಧ್ಯಾಪಕರಿಗೆ ಅಭಿನಂದನೆ ಸಲ್ಲಿಸಿದರು. ಐಐಟಿ ಪದವಿ ಕೇವಲ ಉತ್ತಮ ಅಂಕಗಳು ಅಥವಾ ಉದ್ಯೋಗ ಪಡೆಯುವುದಕ್ಕೆ ಸೀಮಿತವಾಗಬಾರದು. ಸಂಕೀರ್ಣ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನು ಪ್ರತಿಬಿಂಬಿಸಬೇಕು ಎಂದರು. ತಂತ್ರಜ್ಞಾನ ಹಾಗೂ ಭೌಗೋಳಿಕ ರಾಜಕೀಯ ಕ್ಷೇತ್ರಗಳಲ್ಲಿ ವೇಗವಾಗಿ ಬದಲಾಗುತ್ತಿರುವ ಪರಿಸ್ಥಿತಿ ಹೊಸ ಸವಾಲುಗಳು ಮತ್ತು ಅವಕಾಶಗಳನ್ನು ಸೃಷ್ಟಿಸುತ್ತಿದೆ. ಇಂತಹ ಸಂದರ್ಭದಲ್ಲಿ ಪದವೀಧರರು ತಮ್ಮ ಕಲಿಕೆಯ ಮನೋಭಾವವನ್ನು ಸದಾ ಜೀವಂತವಾಗಿರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜನರು ಸಾಮಾನ್ಯವಾಗಿ ಪ್ರಶ್ನಿಸದೇ ಸ್ವೀಕರಿಸುವ ಸಂಗತಿಗಳನ್ನು ಪ್ರಶ್ನಿಸುವಂತೆ ಕರೆ ನೀಡಿದ ಪ್ರಧಾನಿ, ಪ್ರಶ್ನೆಗಳನ್ನು ಕೇಳುವುದರಲ್ಲೇ ನಿಲ್ಲದೆ…
ಮಂಡ್ಯದಲ್ಲಿ ಮಳೆ ಕೊರತೆ; 24,123 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ
ಮಂಡ್ಯ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆ, ಬೆಳೆಗಳ ಸ್ಥಿತಿಗತಿ ಹಾಗೂ ಕೆರೆಗಳಲ್ಲಿನ ನೀರಿನ ಲಭ್ಯತೆ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಚಿವ ಪಿ.ಎಂ. ನರೇಂದ್ರಸ್ವಾಮಿ ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಳೆ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದ ರೈತರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳನ್ನು ಮುಂಚಿತವಾಗಿ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೃಷಿ ಮತ್ತು ಕಂದಾಯ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಪೂರ್ವ ಮುಂಗಾರು ಮಳೆ ಕೊರತೆಯಿಂದ 6,175 ಹೆಕ್ಟೇರ್ ಪ್ರದೇಶದಲ್ಲಿ ಶೇ.31.83ರಷ್ಟು ಮಾತ್ರ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲೂ ಮಳೆ ಕೊರತೆ ಮುಂದುವರಿದಿದ್ದು, 17,948 ಹೆಕ್ಟೇರ್…
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ,, ಜೀವ ಬೆದರಿಕೆ ಹಾಕಿರುವ ಆರೋಪದದಲ್ಲಿರುವ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯಿತು. ಗೋಪಾಲ್ ಜೋಶಿ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯದ ಆರೋಪಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ನಾಯಕರು ಆಗ್ರಹಿಸಿದೂರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ “ಮಹಿಳೆಯೊಬ್ಬರು ಮಾಡಿರುವ ಅತ್ಯಂತ ಗಂಭೀರ ಆರೋಪಗಳ ಬಗ್ಗೆ ಸರ್ಕಾರ ಹಾಗೂ ಪೊಲೀಸ್ ತನಿಖಾ ಸಂಸ್ಥೆಗಳು ಯಾವುದೇ ರಾಜಕೀಯ ಒತ್ತಡವಿಲ್ಲದೆ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಆರೋಪಗಳು ಸಾಬೀತಾದಲ್ಲಿ ತಪ್ಪಿತಸ್ಥ ಆರೋಪಿಯನ್ನು ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೀಗ ಅವರ ಸಹೋದರ ಗೋಪಾಲ್ ಜೋಶಿ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ರವರ…
