ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಮೂರು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಈ ಭಾಗಗಳಲ್ಲಿ ಬಲವಾದ…
Category: ರಾಜ್ಯ
ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ
ಮಂಗಳೂರು: ಭಾರತೀಯ ಕ್ಯಾಥೋಲಿಕ್ ಯುವ ಚಳವಳಿ (ICYM) ಮಂಗಳೂರು ಡಯಾಸಿಸ್ನ 2026–27ನೇ ಸಾಲಿನ ಅಧ್ಯಕ್ಷರಾಗಿ ಕ್ರಿಸ್ಟನ್ ಜೋಶುವಾ ಮೆನೆಜಸ್ ದಾಖಲೆ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ರೊಸಾರಿಯೊ ಕ್ಯಾಥೆಡ್ರಲ್ ಹಾಲ್ನಲ್ಲಿ ನಡೆದ 80ನೇ ಐಸಿವೈಎಂ ಸಾರ್ವತ್ರಿಕ ಚುನಾವಣೆಯಲ್ಲಿ ಕ್ರಿಸ್ಟನ್ 269 ಮತಗಳನ್ನು ಪಡೆದು ಅವಿತ್ ಪ್ರೆಮ್ಸನ್ ಲೋಬೊ (99 ಮತ) ಅವರನ್ನು ಸೋಲಿಸಿದರು. ಇದು ಐಸಿವೈಎಂ ಮಂಗಳೂರು ಡಯಾಸಿಸ್ ಚುನಾವಣೆಯ ಇತಿಹಾಸದಲ್ಲೇ ಅಭ್ಯರ್ಥಿಯೊಬ್ಬರು ಪಡೆದ ಅತ್ಯಧಿಕ ಮತಗಳಾಗಿದೆ. ಡೆರೆಬೈಲ್ನ ಎಡ್ವರ್ಡ್ ಮತ್ತು ಬೆನೆಡಿಕ್ಟಾ ಮೆನೆಜಸ್ ದಂಪತಿಯ ಪುತ್ರರಾದ ಕ್ರಿಸ್ಟನ್, ಶೈಕ್ಷಣಿಕ, ಧಾರ್ಮಿಕ ಹಾಗೂ ವಿದ್ಯಾರ್ಥಿ ಸಂಘಟನೆಗಳಲ್ಲಿ ಹಲವು ನಾಯಕತ್ವ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಕುಂಟಿಕಾನದ ಸೇಂಟ್ ಆನ್ಸ್ ಶಾಲೆಯ ವಿದ್ಯಾರ್ಥಿ ನಾಯಕನಾಗಿ ಆರಂಭವಾದ ಅವರ ನಾಯಕತ್ವದ ಪಯಣ, ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮಂಡಳಿ ಅಧ್ಯಕ್ಷರ ಹುದ್ದೆಯವರೆಗೂ ವಿಸ್ತರಿಸಿದೆ. ಚರ್ಚ್ ಚಟುವಟಿಕೆಗಳಲ್ಲಿ ವೈಸಿಎಸ್ ಘಟಕದ ಅಧ್ಯಕ್ಷ, ಡೆರೆಬೈಲ್ ಐಸಿವೈಎಂ ಅಧ್ಯಕ್ಷ,…
ಮೊಬೈಲ್ ಟಾರ್ಚ್ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್
ಬೆಂಗಳೂರು: ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುತ್ತಿದ್ದ ಕೆಕೆಆರ್ಟಿಸಿ (KKRTC) ಬಸ್ನಲ್ಲಿ ಹೆಡ್ಲೈಟ್ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ನಿರ್ವಾಹಕರ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಲಾಗಿದೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಜೆಡಿಎಸ್ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿಡಿಯೊ ಹಂಚಿಕೊಂಡಿರುವ ಜೆಡಿಎಸ್, “ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ” ಎಂದು ಟೀಕಿಸಿದೆ. “ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಪಕ್ಷ ಆರೋಪಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅನುದಾನದಲ್ಲಿ ಖರೀದಿಸಿದ ಹೊಸ ಬಸ್ಗಳನ್ನು ಬೇರೆ ಪ್ರದೇಶಗಳಿಗೆ ನಿಯೋಜಿಸಿ, ಗುಜರಿಗೆ ಸೇರಬೇಕಾದ ಹಳೆಯ ಬಸ್ಗಳನ್ನು ಚಿಂಚೋಳಿ ಭಾಗಕ್ಕೆ ಬಿಡಲಾಗಿದೆ…
ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್ ಗೆ ಜನರಿಂದ ತಕ್ಕ ಪಾಠ; ಬಿಜೆಪಿ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿವೆ. ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವ ಬೆನ್ನಲ್ಲೇ, ಬಿಜೆಪಿ ನಿಯೋಗವೂ ಆಯೋಗಕ್ಕೆ ಪ್ರತ್ಯೇಕ ಮನವಿ ಸಲ್ಲಿಸಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಿಯಮಾನುಸಾರ ಮನೆ ಮನೆಗೆ ತೆರಳಿ ನಡೆಸಬೇಕಾದರೂ, ಕೆಲವು ಕಡೆಗಳಲ್ಲಿ ಮಸೀದಿಗಳಲ್ಲಿ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ. “ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಬೇಕು. ಅದು ಯಾವುದೇ ರಾಜಕೀಯ ಹಿತಾಸಕ್ತಿಯ ಸಾಧನವಾಗಬಾರದು. ನಿಯಮಗಳನ್ನು ಉಲ್ಲಂಘಿಸಿ ಪ್ರಕ್ರಿಯೆ ನಡೆಸುತ್ತಿರುವ ಕುರಿತು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಬಿಜೆಪಿ ಆಗ್ರಹಿಸಿದೆ.…
ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 5ರಿಂದ 7ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ 204.5 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ನದಿಗಳ ನೀರಿನ ಮಟ್ಟ ಏರಿಕೆ, ಪ್ರವಾಹ, ತಗ್ಗು ಪ್ರದೇಶಗಳಲ್ಲಿ ಜಲಾವೃತ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಅಪಾಯವಿದೆ. ಜುಲೈ 3 ಮತ್ತು 4ರಂದು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿರಲಿದೆ. ಈ ಅವಧಿಯಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ, ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಮೈಸೂರು,…
ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ
ಬೆಂಗಳೂರು: ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿವೆ. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿ ಹಾಗೂ ಸುರಕ್ಷತಾ ನಿಯಮಗಳ ಅನುಷ್ಠಾನದಲ್ಲಿನ ವೈಫಲ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದರು. ಕಾರ್ಮಿಕರ ಜೀವ ರಕ್ಷಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿ, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಕ್ವಾರಿ ಮತ್ತು…
‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ
ಬೆಂಗಳೂರು: ಗೃಹಜ್ಯೋತಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ವೇಳೆ ಜಾತಿ ಪ್ರಮಾಣಪತ್ರ ಸೇರಿದಂತೆ ಹೆಚ್ಚುವರಿ ದಾಖಲೆಗಳನ್ನು ಕೇಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಗೃಹಜ್ಯೋತಿ ಯೋಜನೆಗೆ ಮತದಾರರ ಗುರುತಿನ ಚೀಟಿ ಸಾಕಾಗದಿದ್ದರೆ, ಪ್ಯಾನ್ ಕಾರ್ಡ್ ಹಾಗೂ ಜಾತಿ ಪ್ರಮಾಣಪತ್ರವನ್ನು ಏಕೆ ಕೇಳಲಾಗುತ್ತಿದೆ ಎಂದು ಪ್ರಶ್ನಿಸಿದೆ. “200 ಯೂನಿಟ್ ಉಚಿತ ವಿದ್ಯುತ್ ಅನ್ನು ಯಾವುದೇ ಷರತ್ತಿಲ್ಲದೆ ನೀಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಈಗ ಗೃಹಜ್ಯೋತಿ ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳಿಂದ ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಹಾಗೂ ಜಾತಿ ಪ್ರಮಾಣಪತ್ರದ ಮಾಹಿತಿಯನ್ನು ಕೇಳುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ” ಎಂದು ಬಿಜೆಪಿ ಆರೋಪಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಬಿಜೆಪಿ, “ವಿದ್ಯುತ್ ಬಳಕೆಯನ್ನು ಅಳೆಯಲು ಜಾತಿ…
ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ
ಬೆಂಗಳೂರು: ಹೊರ ವರ್ತುಲ ರಸ್ತೆ (ORR) ಸಮಗ್ರ ಅಭಿವೃದ್ಧಿ ಯೋಜನೆಯ ಅಂತಿಮ ವಿನ್ಯಾಸ ರೂಪಿಸುವ ಮುನ್ನ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಬೃಹತ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸಚಿವರು ಲೌರಿ ಜಂಕ್ಷನ್ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ಹಾಗೂ ಅಲ್ಲಿಂದ ಇಬ್ಲೂರು ಜಂಕ್ಷನ್ವರೆಗೆ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದರು. ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗಿನ 17.1 ಕಿಲೋಮೀಟರ್ ಉದ್ದದ ಕಾರಿಡಾರ್ ಅನ್ನು ವಿಶ್ವದರ್ಜೆಯ ನಗರ ರಸ್ತೆಯಾಗಿ ಅಭಿವೃದ್ಧಿಪಡಿಸುವುದು ಯೋಜನೆಯ ಉದ್ದೇಶವಾಗಿದೆ. ಪರಿಶೀಲನೆ ವೇಳೆ ಸಚಿವರು ಪಾದಚಾರಿ ಮಾರ್ಗಗಳ ಅತಿಕ್ರಮಣ ತೆರವುಗೊಳಿಸಿ ಸುರಕ್ಷತೆ ಹೆಚ್ಚಿಸುವುದು, ಹಾನಿಗೊಳಗಾದ ಸೇವಾ ರಸ್ತೆಗಳು ಮತ್ತು ಗುಂಡಿಗಳನ್ನು ತಕ್ಷಣ ದುರಸ್ತಿಪಡಿಸುವುದು, ಬಸ್ ಬೇ, ಪಾದಚಾರಿ ಮಾರ್ಗ, ಚರಂಡಿ, ಮೀಡಿಯನ್ ಹಾಗೂ ಸೇವಾ ರಸ್ತೆಗಳಿಗೆ ಏಕರೂಪದ ವಿನ್ಯಾಸ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಅಪಾಯಕಾರಿಯಾಗಿರುವ ಬೆಸ್ಕಾಂ…
ಫುಟ್ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರದ ಔಟರ್ ರಿಂಗ್ ರೋಡ್ (ORR) ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ರಸ್ತೆ ಹಾಗೂ ಫುಟ್ಪಾತ್ ಅವ್ಯವಸ್ಥೆ ಕುರಿತು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ರಸ್ತೆ ವ್ಯವಸ್ಥೆಯನ್ನು ಪರಿಶೀಲಿಸಿದ ಸಚಿವರು, ದೊಡ್ಡಾನೆಕ್ಕುಂದಿ ಜಂಕ್ಷನ್ನಲ್ಲಿ ಹೊಸದಾಗಿ ಡಾಂಬರು ಹಾಕಿದ್ದ ರಸ್ತೆಯನ್ನೇ ಮತ್ತೆ ಅಗೆದಿರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡ ಸಚಿವರು, ನಗರದಲ್ಲಿ ಫುಟ್ಪಾತ್ಗಳ ಮೇಲಿನ ಅತಿಕ್ರಮಣದಿಂದ ಪಾದಚಾರಿಗಳು ರಸ್ತೆಯಲ್ಲೇ ನಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. “ವ್ಯಾಪಾರ ಮಾಡಬೇಡಿ ಎಂದು ನಾವು ಹೇಳುತ್ತಿಲ್ಲ. ಆದರೆ ಮುಖ್ಯ ರಸ್ತೆಗಳ ಫುಟ್ಪಾತ್ಗಳನ್ನು ಅತಿಕ್ರಮಿಸಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು. ಪಾದಚಾರಿಗಳಿಗೆ ಸುರಕ್ಷಿತವಾಗಿ…
ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ
ಬೆಂಗಳೂರು: ರಾಮನಗರ ಜಿಲ್ಲೆಯ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ನಲ್ಲಿ ಸಂಭವಿಸಿದ ಭೀಕರ ಕಲ್ಲು ಕ್ವಾರಿ ದುರಂತದಲ್ಲಿ ಬಿಹಾರ ಮೂಲದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಐವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಕೈ, ಕಾಲು, ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್, “10 ಕಾರ್ಮಿಕರ ಪೈಕಿ 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಈ ಹಿಂದೆಯೇ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ದುರಂತಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು” ಎಂದು ಆಗ್ರಹಿಸಿದರು. ಇದೇ…
