ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 4ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ತನ್ನ ವ್ಯಾಪ್ತಿಯಲ್ಲಿರುವ ಎಲ್ಲಾ ಅಧಿಕೃತ ಹಾಗೂ ಅನಧಿಕೃತ ಕಸಾಯಿಖಾನೆಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಿದೆ. ಅಲ್ಲದೆ, ಚಿಕನ್, ಮಟನ್, ಬೀಫ್ ಹಾಗೂ ಮೀನು ಮಾರಾಟ ಮಾಡುವ ಚಿಲ್ಲರೆ ಅಂಗಡಿಗಳನ್ನೂ ಸೆಪ್ಟೆಂಬರ್‌ 4ರಂದು ತೆರೆಯದಂತೆ ಆದೇಶಿಸಲಾಗಿದೆ. ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿಯೂ ಹಸಿ ಮಾಂಸದ ಮಾರಾಟ ಅಥವಾ ಸಂಸ್ಕರಣೆಗೆ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. ಧಾರ್ಮಿಕ ಹಬ್ಬದ ಹಿನ್ನೆಲೆಯಲ್ಲಿ ಈ ನಿರ್ಬಂಧ ಜಾರಿಗೊಳಿಸಲಾಗಿದ್ದು, ಸುತ್ತೋಲೆಯನ್ನು ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಜನ್ಮಾಷ್ಟಮಿ ದಿನ ಬೆಂಗಳೂರಿನಲ್ಲಿ ಮಾಂಸಾಹಾರ ಪ್ರಿಯರಿಗೆ ಮಾಂಸ ಸಿಗುವುದು ಕಷ್ಟವಾಗಲಿದೆ. ಮಾಂಸ ಮಾರಾಟಕ್ಕೆ ಸಂಬಂಧಿಸಿದ ಅಂಗಡಿಗಳು ಹಾಗೂ ಕಸಾಯಿಖಾನೆಗಳು ಒಂದು ದಿನ…

ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

ಬೆಂಗಳೂರು: ಕೆಪಿಎಸ್‌ಸಿ ಹಗರಣದ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಸಚಿವ ಎನ್‌. ಚಲುವರಾಯಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಆರೋಪ-ಪ್ರತ್ಯಾರೋಪಗಳ ನಡುವೆ ಇದೀಗ ವೈಯಕ್ತಿಕ ವಿಚಾರಗಳೂ ಮುನ್ನೆಲೆಗೆ ಬಂದಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಕುಮಾರಸ್ವಾಮಿಗೆ ನೇರ ಚರ್ಚೆಗೆ ಬಹಿರಂಗ ಸವಾಲು ಹಾಕಿದ್ದಾರೆ. “ಧೈರ್ಯವಿದ್ದರೆ ವಿಧಾನಸೌಧದ 313 ಅಥವಾ 334ನೇ ಕೊಠಡಿಗೆ ಬನ್ನಿ. ಮಾಧ್ಯಮಗಳ ಎದುರೇ ಮುಖಾಮುಖಿ ಚರ್ಚೆ ಮಾಡೋಣ” ಎಂದು ಹೇಳಿದ್ದಾರೆ. ಇದೇ ವೇಳೆ 2006ರ ರಾಜಕೀಯ ಬೆಳವಣಿಗೆಯನ್ನು ಪ್ರಸ್ತಾಪಿಸಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎರಡು ದಿನಗಳ ಕಾಲ ಕಾಣೆಯಾಗಿದ್ದರು ಎಂದು ಆರೋಪಿಸಿದ್ದಾರೆ. ಆಗ ಅವರ ತಂದೆ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ತಮಗೆ ಕರೆ ಮಾಡಿ ಕುಮಾರಸ್ವಾಮಿಯನ್ನು ಹುಡುಕಿ ವಿಧಾನಸೌಧಕ್ಕೆ ಕರೆತರುವಂತೆ ಸೂಚಿಸಿದ್ದರು ಎಂದು ಹೇಳಿದ್ದಾರೆ. “ಬೆಳಗ್ಗೆ 10 ಗಂಟೆಯೊಳಗೆ ಅವರನ್ನು ಪತ್ತೆಹಚ್ಚಿ ಕರೆತನ್ನಿ ಎಂದು ದೇವೇಗೌಡರು ಹೇಳಿದ್ದರು. ನಾನು ಬೆಳಗ್ಗೆ 5…

ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

ಬೆಳಗಾವಿ: ಹಿಂಡಲಗಾ ಜೈಲಿನ ವಿಚಾರಣಾಧೀನ ಕೈದಿಯೊಂದಿಗೆ ಅಕ್ರಮ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ಪಿಎಸ್‌ಐ ಜಯಶ್ರೀ ಅವರನ್ನು ಅಮಾನತುಗೊಳಿಸಲಾಗಿದೆ. ಜೈಲಿನಲ್ಲಿರುವ ಕುಣಿಗಲ್ ಮೂಲದ ವಿಚಾರಣಾಧೀನ ಕೈದಿ ಹಾಗೂ ರೌಡಿಶೀಟರ್ ಸೈಕುಮಾರ್ ಅಲಿಯಾಸ್ ಸುರೇಶ್ ಜೊತೆ ಜಯಶ್ರೀ ವಿಡಿಯೋ ಕಾಲ್‌ನಲ್ಲಿ ಮಾತನಾಡಿರುವ ಆರೋಪದ ವಿಡಿಯೋ ಹಾಗೂ ಆಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದರಿಂದ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೂಚನೆ ಮೇರೆಗೆ ಇಲಾಖಾ ಮಟ್ಟದಲ್ಲಿ ತನಿಖೆ ನಡೆಸಲಾಗಿತ್ತು. ತನಿಖೆ ವೇಳೆ ಕೈದಿ ಹಾಗೂ ಆತನ ಕುಟುಂಬದವರ ಖಾತೆಗಳಿಗೆ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಿರುವ ಬಗ್ಗೆ ಚಾಟ್‌ಗಳು ಹಾಗೂ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ. ಅಲ್ಲದೆ, ಕೈದಿಗೆ ಸಂಬಂಧಿಸಿದ ಸ್ಕೂಟರ್ ಮತ್ತು ಸ್ವಿಫ್ಟ್ ಕಾರು ಜಯಶ್ರೀ ಅವರ ಹೆಸರಿಗೆ ವರ್ಗಾವಣೆಯಾಗಿರುವುದಕ್ಕೆ…

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

ಚೆನ್ನೈ: ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಚೆನ್ನೈ ಮೂಲದ ಗ್ರಾನೈಟ್ಸ್ ಉದ್ಯಮಿ ಹಾಗೂ ಜೆಮ್ ಗ್ರೂಪ್ ಅಧ್ಯಕ್ಷ ಆರ್. ವೀರಮಣಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ವೀರಮಣಿ ಅವರ ಸಹಚರಿ ಶಾಂತಿ ಹಾಗೂ ಆಕೆಯ ಪತಿ ಮಹೇಂದ್ರ ಸಿಂಹನ್ ಕೂಡ ಬಂಧಿತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 2025ರ ಅಕ್ಟೋಬರ್ 6ರಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಆಂಟಿ-ವೈಸ್ ಸ್ಕ್ವಾಡ್ ಪೊಲೀಸರಿಗೆ ಪೆನ್‌ಡ್ರೈವ್‌ವೊಂದನ್ನು ನೀಡಿದ್ದರು. ಅದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ನಡೆಸುತ್ತಿರುವ ದೃಶ್ಯಗಳಿವೆ ಎಂದು ಆರೋಪಿಸಲಾಗಿತ್ತು. ವಿಡಿಯೋ ಪರಿಶೀಲಿಸಿದ ಬಳಿಕ ಅಕ್ಟೋಬರ್ 7ರಂದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು. ತನಿಖೆ ವೇಳೆ ವಿಡಿಯೋದಲ್ಲಿರುವ ವ್ಯಕ್ತಿ ವೀರಮಣಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ತೇನಾಂಪೇಟೆಯಲ್ಲಿ ವೀರಮಣಿ ಬಾಡಿಗೆಗೆ ಪಡೆದಿದ್ದ ಮನೆಯನ್ನು ಶಾಂತಿ ಮತ್ತು ಮಹೇಂದ್ರ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಹಲವು ಅಪ್ರಾಪ್ತ ಬಾಲಕಿಯರನ್ನು ಅಲ್ಲಿಗೆ…

ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್‌ ಲೈನ್ ಅನ್ನು ಈ ತಿಂಗಳಾಂತ್ಯಕ್ಕೆ ಉದ್ಘಾಟಿಸಲು ಬಿಎಂಆರ್‌ಸಿಎಲ್ ಗುರಿ ನಿಗದಿಪಡಿಸಿದ್ದು, ನಿಗದಿತ ಗಡುವಿನೊಳಗೆ ಕಾಮಗಾರಿ ಹಾಗೂ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಜಯದೇವ ನಿಲ್ದಾಣದಿಂದ ಕಾಳೇನ ಅಗ್ರಹಾರವರೆಗೆ ಪಿಂಕ್‌ ಲೈನ್ ಪರಿಶೀಲನೆ ನಡೆಸಿದ ಬಳಿಕ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಾಸಕ ಕೃಷ್ಣಪ್ಪ ಅವರೊಂದಿಗೆ ಮೆಟ್ರೋ ಮಾರ್ಗವನ್ನು ಪರಿಶೀಲಿಸಿರುವುದಾಗಿ ತಿಳಿಸಿದ್ದಾರೆ. ಪಿಂಕ್‌ ಲೈನ್ ಉದ್ಘಾಟನೆಗೆ ಬಿಎಂಆರ್‌ಸಿಎಲ್ ಈ ತಿಂಗಳಾಂತ್ಯದ ಗುರಿ ಹೊಂದಿದೆ. ಗಡುವನ್ನು ಕಟ್ಟುನಿಟ್ಟಾಗಿ ಪಾಲಿಸಿ ಯೋಜನೆಯನ್ನು ಪೂರ್ಣಗೊಳಿಸುವಂತೆ ಸಚಿವರೊಂದಿಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಸೂರ್ಯ ಹೇಳಿದ್ದಾರೆ. ಸುರಕ್ಷತಾ ಅನುಮೋದನೆ ಹಾಗೂ ಕಾಲಮಿತಿಯ ಕುರಿತು ಇಂದು ಬೆಳಗ್ಗೆ ರೈಲ್ವೆ ಸುರಕ್ಷತಾ ಆಯುಕ್ತರ (CMRS)…

ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ. ಹೋರಾಟಗಾರನಾಗಿ ಬದುಕುತ್ತಿರುವ ಅವರು ಹೋರಾಟಗಾರನಾಗಿಯೇ ಸಾಯುತ್ತಾರೆ. ಅವರ ವಿರುದ್ಧ ನೂರು ಪ್ರಕರಣ ದಾಖಲಿಸಿದರೂ ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ. ಬೇರೆಯವರಂತೆ ರಾಹುಲ್ ಗಾಂಧಿ ಮುಚ್ಚಳಿಕೆ ಬರೆದುಕೊಡುವುದೂ ಇಲ್ಲ, ಕ್ಷಮೆ ಕೇಳುವುದೂ ಇಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದಲ್ಲಿ ದುರುದ್ದೇಶಪೂರ್ವಕವಾಗಿ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ದೇಶ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಜನರಿಗೆ ಮನದಟ್ಟು ಮಾಡುವುದು ನಮ್ಮ ಕರ್ತವ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು, ಸ್ವಾತಂತ್ರ್ಯಾನಂತರ ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದವರು ಯಾರು ಎಂಬುದನ್ನು ಜನರಿಗೆ ತಿಳಿಸುವ ಅಗತ್ಯವಿದೆ ಎಂದರು. ಕಾಂಗ್ರೆಸ್‌ನ ಶಕ್ತಿ ದೇಶದ ಶಕ್ತಿ ಹಾಗೂ ಕಾಂಗ್ರೆಸ್‌ನ…

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಯಾವುದೇ ತಪ್ಪು ಮಾಡದಿದ್ದರೂ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದು ಘನಘೋರ ಅನ್ಯಾಯ ಎಂದು ಆರೋಪಿಸಿದರು. ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವುದನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಇದನ್ನೇ ಅಪರಾಧವೆಂಬಂತೆ ಪರಿಗಣಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವುದು ಸಂವಿಧಾನ ವಿರೋಧಿ ಕೃತ್ಯ. ಅಸ್ಪೃಶ್ಯತೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಹೀಗಾಗಿ ಈ ಕೃತ್ಯ ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಸಿದ್ದರಾಮಯ್ಯ ಹೇಳಿದರು. ಶುದ್ಧೀಕರಣದ ಹೆಸರಿನಲ್ಲಿ ಖರ್ಗೆ ಅವರಿಗೆ ಅವಮಾನ ಮಾಡಲಾಗಿದೆ. ಎಫ್‌ಐಆರ್ ದಾಖಲಿಸುವ ಮೂಲಕ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನೂ…

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸಲು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಅಮಿತ್ ಶಾ ಅವರು ಎಫ್‌ಐಆರ್‌ ದಾಖಲಿಸುವ ಮೂಲಕ ಪ್ರಯತ್ನಿಸುತ್ತಿದ್ದಾರೆ ಎಂದು ಬಿ.ಕೆ. ಹರಿಪ್ರಸಾದ್ ಆರೋಪಿಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕೆಪಿಸಿಸಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಧಕ್ಕೆಯಾಗುತ್ತಿರುವುದನ್ನು ಖಂಡಿಸಿ ರಾಜ್ಯದಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು. ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಬಿಜೆಪಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ, ಬಿಜೆಪಿ ನಾಯಕರಿಗೆ ಕಪ್ಪು ಬಾವುಟ ಪ್ರದರ್ಶಿಸಬೇಕು ಎಂದು ಕರೆ ನೀಡಿದರು. “ಸಂವಿಧಾನವನ್ನು ಉಳಿಸಿಕೊಂಡು ದೇಶದ ಉಜ್ವಲ ಭವಿಷ್ಯ ರೂಪಿಸಬೇಕು. ಯುವಕರು ಈ ಹೋರಾಟವನ್ನು ಮುಂದುವರಿಸದಿದ್ದರೆ ದೇಶದ ಭವಿಷ್ಯ ಕರಾಳವಾಗಲಿದೆ,” ಎಂದು ಹೇಳಿದರು. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ದೀರ್ಘ ರಾಜಕೀಯ…

ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

ಚೆನ್ನೈ: ದೇವಾಲಯಗಳ ಪಾವಿತ್ರ್ಯ, ಶಾಂತಿ ಹಾಗೂ ಭದ್ರತೆ ಕಾಪಾಡುವ ಉದ್ದೇಶದಿಂದ ತಮಿಳುನಾಡಿನ 52 ಪ್ರಮುಖ ದೇವಾಲಯಗಳ ಆವರಣದಲ್ಲಿ ಸ್ಮಾರ್ಟ್‌ಫೋನ್‌ ಬಳಕೆ ಮತ್ತು ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೊರಡಿಸಿರುವ ಆದೇಶ ಮಂಗಳವಾರದಿಂದಲೇ ಜಾರಿಗೆ ಬಂದಿದೆ. ದೇವಾಲಯಗಳಲ್ಲಿ ಸೆಲ್ಫಿ, ಫೋಟೋ, ವಿಡಿಯೋ ಹಾಗೂ ರೀಲ್ಸ್ ಮಾಡುವುದನ್ನು ತಡೆಯುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ದೇವಾಲಯಕ್ಕೆ ಬರುವ ಭಕ್ತರು ಪ್ರವೇಶದ್ವಾರದಲ್ಲಿರುವ ವಿಶೇಷ ಕೌಂಟರ್‌ನಲ್ಲಿ ತಮ್ಮ ಸ್ಮಾರ್ಟ್‌ಫೋನ್‌ಗಳನ್ನು ಠೇವಣಿ ಇಡಬೇಕು. ಪ್ರತಿ ಮೊಬೈಲ್‌ಗೆ ₹5 ನಿರ್ವಹಣಾ ಶುಲ್ಕ ಪಾವತಿಸಿದ ಬಳಿಕ ಟೋಕನ್ ಅಥವಾ ಕಂಪ್ಯೂಟರ್ ರಸೀದಿ ನೀಡಲಾಗುತ್ತದೆ. ಪೂಜೆ ಮುಗಿದ ನಂತರ ರಸೀದಿ ತೋರಿಸಿ ಮೊಬೈಲ್‌ ವಾಪಸ್ ಪಡೆಯಬಹುದು. ಆದರೆ ಕ್ಯಾಮೆರಾ ಇಲ್ಲದ ಸಾಮಾನ್ಯ ಕೀಪ್ಯಾಡ್‌ ಫೋನ್‌ಗಳಿಗೆ ವಿನಾಯಿತಿ ನೀಡಲಾಗಿದೆ. ಇಂತಹ ಫೋನ್‌ಗಳನ್ನು ದೇವಾಲಯದೊಳಗೆ ಕೊಂಡೊಯ್ಯಬಹುದು. ಗರ್ಭಗುಡಿಯಲ್ಲಿರುವ ವಿಗ್ರಹಗಳು, ಪೂಜಾ ಕೈಂಕರ್ಯಗಳು ಹಾಗೂ ವಿಐಪಿಗಳ ಆಗಮನದ…

ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

ಇಂದಿನ ಡಿಜಿಟಲ್ ಯುಗದಲ್ಲಿ ಯುವಜನರು ಆನ್‌ಲೈನ್ ಜಗತ್ತಿನಲ್ಲಿ ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ವರ್ತಿಸುವುದು ಅಗತ್ಯವಾಗಿದೆ. ಶಿಕ್ಷಣ, ಸಂವಹನ, ದಾನ ಹಾಗೂ ಸಮಾಜಸೇವೆಗೆ ಇಂಟರ್‌ನೆಟ್ ಹಲವು ಅವಕಾಶಗಳನ್ನು ಒದಗಿಸುತ್ತಿದ್ದರೂ, ಇದರೊಂದಿಗೆ ಸೈಬರ್ ವಂಚನೆ ಮತ್ತು ಇತರ ಅಪಾಯಗಳೂ ಹೆಚ್ಚುತ್ತಿವೆ. ಫಿಶಿಂಗ್ ಲಿಂಕ್‌ಗಳು, ನಕಲಿ ದೇಣಿಗೆ ಮನವಿಗಳು, ಧಾರ್ಮಿಕ ವಿದ್ವಾಂಸರು ಹಾಗೂ ಸಂಸ್ಥೆಗಳ ಹೆಸರಿನಲ್ಲಿ ನಡೆಯುವ ವಂಚನೆ, ಯುವಜನರನ್ನು ದುರುದ್ದೇಶಗಳಿಗೆ ಸೆಳೆಯುವ ಆನ್‌ಲೈನ್ ಚಟುವಟಿಕೆಗಳು, ತೀವ್ರವಾದಿ ವಿಷಯಗಳು ಮತ್ತು ವೈಯಕ್ತಿಕ ಮಾಹಿತಿಯ ದುರ್ಬಳಕೆ ಪ್ರಮುಖ ಅಪಾಯಗಳಾಗಿವೆ. ಇಂತಹ ಸಂದರ್ಭಗಳಲ್ಲಿ ಧಾರ್ಮಿಕ ನಂಬಿಕೆ ಹಾಗೂ ಗುರುತನ್ನೂ ವಂಚನೆಗೆ ಬಳಸಿಕೊಳ್ಳುವ ಸಾಧ್ಯತೆ ಇದೆ. ಇಸ್ಲಾಂನಲ್ಲಿ ‘ಅಮಾನತ್’ ಎಂಬುದು ಜವಾಬ್ದಾರಿಯಿಂದ ಕಾಪಾಡಬೇಕಾದ ಹೊಣೆಗಾರಿಕೆಯನ್ನು ಸೂಚಿಸುತ್ತದೆ. ಡಿಜಿಟಲ್ ಯುಗದಲ್ಲಿ ಪಾಸ್‌ವರ್ಡ್‌ಗಳು, ವೈಯಕ್ತಿಕ ಮಾಹಿತಿ, ಹಣಕಾಸಿನ ವಿವರಗಳು, ಛಾಯಾಚಿತ್ರಗಳು ಸೇರಿದಂತೆ ಇತರರ ಖಾಸಗಿ ಮಾಹಿತಿಯ ರಕ್ಷಣೆಯೂ ಇದೇ ಜವಾಬ್ದಾರಿಯ ಭಾಗವಾಗಿದೆ. ಬಲವಾದ ಹಾಗೂ ಪ್ರತ್ಯೇಕ ಪಾಸ್‌ವರ್ಡ್‌ಗಳನ್ನು ಬಳಸುವುದು,…