ಅರಣ್ಯ ಹಕ್ಕು ಕಾಯ್ದೆ: ಬಾಕಿ ಹಕ್ಕು ಕೋರಿಕೆ ಶೀಘ್ರ ಇತ್ಯರ್ಥಕ್ಕೆ ಕೇಂದ್ರ ಸೂಚನೆ

ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆ (FRA), 2006ರ ಅನುಷ್ಠಾನವನ್ನು ತ್ವರಿತಗೊಳಿಸಿ, ಬಾಕಿ ಇರುವ ಹಕ್ಕು ಕೋರಿಕೆಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ ಐದು ದಕ್ಷಿಣ ರಾಜ್ಯಗಳಿಗೆ ಸೂಚಿಸಿದೆ. ಸಮುದಾಯ ಅರಣ್ಯ ಹಕ್ಕುಗಳು ಹಾಗೂ ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ (PVTGs) ಆವಾಸಸ್ಥಾನ ಹಕ್ಕುಗಳ ಮಾನ್ಯತೆಗೂ ಆದ್ಯತೆ ನೀಡುವಂತೆ ತಿಳಿಸಿದೆ. ಬುಡಕಟ್ಟು ವ್ಯವಹಾರಗಳ ಸಚಿವಾಲಯ (MoTA) ಗುರುವಾರ ಬೆಂಗಳೂರಿನಲ್ಲಿ FRA ಅನುಷ್ಠಾನದ ಕುರಿತು ಮೊದಲ ಪ್ರಾದೇಶಿಕ ಪರಿಶೀಲನಾ ಸಮ್ಮೇಳನ ನಡೆಸಿತು. ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣದ ಬುಡಕಟ್ಟು ಕಲ್ಯಾಣ, ಕಂದಾಯ ಹಾಗೂ ಅರಣ್ಯ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಜೂನ್ 30, 2026ರ ವೇಳೆಗೆ ದೇಶಾದ್ಯಂತ 54 ಲಕ್ಷಕ್ಕೂ ಅಧಿಕ ವೈಯಕ್ತಿಕ ಅರಣ್ಯ ಹಕ್ಕು (IFR) ಕೋರಿಕೆಗಳು ಸ್ವೀಕರಿಸಲಾಗಿವೆ. ಸುಮಾರು 238 ಲಕ್ಷ ಎಕರೆ ಪ್ರದೇಶಕ್ಕೆ ಸಂಬಂಧಿಸಿದ 25.42 ಲಕ್ಷ ಹಕ್ಕುಪತ್ರಗಳನ್ನು…

ಮಾದಕವಸ್ತುಗಳ ವಿರುದ್ಧ ಸಮರ; ಪ್ರತಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸ್ವಸ್ಥ ಹಾಗೂ ಭಯಮುಕ್ತ ಸಮಾಜ ನಿರ್ಮಾಣಕ್ಕೆ ರಾಜ್ಯದ ಗೃಹ ಇಲಾಖೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಮಾದಕವಸ್ತುಗಳ ಪಿಡುಗಿನ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸಿರುವ ಸಂದರ್ಭದಲ್ಲಿ ಸರ್ಕಾರದ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಅವರು ಮಾತನಾಡಿದರು. ಹೊಸ ಚೈತನ್ಯ, ಉತ್ಸಾಹ ಹಾಗೂ ದೃಷ್ಟಿಕೋನದೊಂದಿಗೆ ಸರ್ಕಾರ ಜನಸ್ನೇಹಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು. ‘ಬೇಡ BRO’ ಮೂಲಕ ಜಾಗೃತಿ ಸ್ವಸ್ಥ ಸಮಾಜ ನಿರ್ಮಾಣದ ಉದ್ದೇಶದಿಂದ ಗೃಹ ಇಲಾಖೆ ‘RISE ಕರ್ನಾಟಕ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮಾದಕವಸ್ತುಗಳ ವಿರುದ್ಧ ಕಾರ್ಯಾಚರಣೆಯ ಜತೆಗೆ ‘ಬೇಡ BRO’ ಜಾಗೃತಿ ಅಭಿಯಾನಕ್ಕೂ ಒತ್ತು ನೀಡಲಾಗಿದೆ ಎಂದು ಖರ್ಗೆ ತಿಳಿಸಿದರು. 2026ರ ಜುಲೈ ಮತ್ತು ಆಗಸ್ಟ್‌ನಲ್ಲಿ 1,999 ಎನ್‌ಡಿಪಿಎಸ್ ಪ್ರಕರಣಗಳನ್ನು ದಾಖಲಿಸಿ, 807 ಡ್ರಗ್ಸ್ ಪೆಡ್ಲರ್‌ಗಳನ್ನು…

ಶೋಷಿತರು, ಕಲ್ಯಾಣ ಕರ್ನಾಟಕದ ಹಕ್ಕಿಗಾಗಿ ನಡೆದ ‘ಬಳ್ಳಾರಿ ಚಲೋ’: ಸಿ.ಟಿ. ರವಿ

ಬಳ್ಳಾರಿ: ಶೋಷಿತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಕಲ್ಯಾಣ ಕರ್ನಾಟಕದ ಹಕ್ಕುಗಳಿಗಾಗಿ ಬಿಜೆಪಿ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಐತಿಹಾಸಿಕ ಹೋರಾಟವಾಗಿ ಯಶಸ್ವಿಯಾಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದ್ದಾರೆ. ಲಿಂಗಸುಗೂರಿನಿಂದ ಆರಂಭಗೊಂಡು ಒಂಬತ್ತು ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಿದ ಪಾದಯಾತ್ರೆ ಬಳ್ಳಾರಿಯಲ್ಲಿ ಬೃಹತ್ ಜನಸಮಾವೇಶದೊಂದಿಗೆ ಸಮಾರೋಪಗೊಂಡಿತು. ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರದ ಆಡಳಿತ ಹಾಗೂ ವಿವಿಧ ವಿಚಾರಗಳ ವಿರುದ್ಧ ಧ್ವನಿ ಎತ್ತಲಾಗಿದೆ ಎಂದು ಅವರು ತಿಳಿಸಿದ್ದಾರೆ. ‘ಎಸ್‌ಸಿಪಿ-ಟಿಎಸ್‌ಪಿ ಅನುದಾನ ದುರ್ಬಳಕೆ ತಡೆಯಬೇಕು’ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಸಿ.ಟಿ. ರವಿ, ಇದರಿಂದ ಬಡವರು ಹಾಗೂ ಪರಿಶಿಷ್ಟ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದು ಹೇಳಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ರೈತ ಸಮುದಾಯಕ್ಕೆ ಸರ್ಕಾರದಿಂದ ಆಗಿರುವ ಅನ್ಯಾಯ ಸರಿಪಡಿಸಬೇಕು. ಎಸ್‌ಸಿಪಿ-ಟಿಎಸ್‌ಪಿ ಅನುದಾನದ ದುರ್ಬಳಕೆ ತಡೆಯಬೇಕು. ಕಲ್ಯಾಣ…

2037ರೊಳಗೆ ಕರ್ನಾಟಕ 1 ಟ್ರಿಲಿಯನ್ ಡಾಲರ್ ಆರ್ಥಿಕತೆ: ಡಿ.ಕೆ.ಶಿವಕುಮಾರ್

ಬೆಂಗಳೂರು: 2037ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವನ್ನಾಗಿ ರೂಪಿಸುವುದು ಸರ್ಕಾರದ ‘ಮಹಾಸಂಕಲ್ಪ’ವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು 100 ದಿನ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ತಮ್ಮ ಮುಂದಿನ ಕಾರ್ಯಯೋಜನೆ ಹಾಗೂ ರಾಜ್ಯದ ಅಭಿವೃದ್ಧಿ ಗುರಿಗಳನ್ನು ಅವರು ಪ್ರಕಟಿಸಿದ್ದಾರೆ. ಬಡತನ ಮತ್ತು ಶಾಲೆಯಿಂದ ಹೊರಗುಳಿಯುವ ಪ್ರಮಾಣವನ್ನು ಶೂನ್ಯಕ್ಕೆ ತರುವುದು, ಅಪೌಷ್ಟಿಕತೆಯನ್ನು ಶೇ.5ಕ್ಕಿಂತ ಕಡಿಮೆಗೊಳಿಸುವುದು ಸರ್ಕಾರದ ಪ್ರಮುಖ ಗುರಿಗಳಾಗಿವೆ ಎಂದು ತಿಳಿಸಿದ್ದಾರೆ. ‘ಮಹಾಸಂಕಲ್ಪ’ ಸಾಧನೆಗಾಗಿ ‘ನವಸಂಕಲ್ಪ’ದಡಿ ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳಂತಹ ಜಲ ಭದ್ರತಾ ಯೋಜನೆಗಳಿಗೆ ವೇಗ ನೀಡುವ ಮೂಲಕ ರಾಜ್ಯದ ನೀರಿನ ಭದ್ರತೆ ಬಲಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಮುಂದಿನ 500 ದಿನಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ₹1.5 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡುವ ಗುರಿ ಹೊಂದಲಾಗಿದ್ದು, ₹3…

ಹನೂರಿನಲ್ಲಿ ಗಣೇಶೋತ್ಸವ ತಯಾರಿ: ನಿಯಮ ಉಲ್ಲಂಘಿಸಿದರೆ ಆಯೋಜಕರೇ ಹೊಣೆ

ವರದಿ: ಮಹದೇವ ಸ್ವಾಮಿ ಜಿ. ಗೌಡ ಚಾಮರಾಜನಗರ : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಗಣೇಶೋತ್ಸವ ಸಮಿತಿ ಮುಖಂಡರು ಹಾಗೂ ಯುವಕರ ಸಮ್ಮುಖದಲ್ಲಿ ಪಟ್ಟಣದ ಕಮ್ಮವಾರಿ ಭವನದಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಹನೂರು ಠಾಣೆ ಇನ್ಸ್‌ಪೆಕ್ಟರ್ ಆನಂದಮೂರ್ತಿ, ಗಣೇಶೋತ್ಸವವನ್ನು ಕೇವಲ ಮೋಜು-ಮಸ್ತಿಗೆ ಸೀಮಿತಗೊಳಿಸದೆ ಶ್ರದ್ಧೆ ಮತ್ತು ಸಂಪ್ರದಾಯದೊಂದಿಗೆ ಆಚರಿಸಬೇಕು ಎಂದು ಸಲಹೆ ನೀಡಿದರು. ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ರಸ್ತೆ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಸೇವಕರನ್ನು ನಿಯೋಜಿಸಬೇಕು. ಸಂಜೆ 6 ಗಂಟೆಯೊಳಗೆ ಗಣೇಶ ಮೂರ್ತಿ ವಿಸರ್ಜನೆ ಪೂರ್ಣಗೊಳಿಸಬೇಕು. ಡಿಜೆ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಬದಲಾಗಿ ಡೋಲು, ತಮಟೆ ಸೇರಿದಂತೆ ಸಾಂಪ್ರದಾಯಿಕ ವಾದ್ಯಗಳನ್ನು ಬಳಸಬೇಕು ಎಂದು ತಿಳಿಸಿದರು. ಗ್ರಾಮ ಮಟ್ಟದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಗ್ರಾಮ ಪಂಚಾಯಿತಿ ಪಿಡಿಒಗೆ ಮಾಹಿತಿ ನೀಡಬೇಕು. ಸಾರ್ವಜನಿಕರಿಂದ ಬಲವಂತವಾಗಿ ಹಣ ವಸೂಲಿ…

ಹನೂರು ಬಳಿ ಭೀಕರ ಅಪಘಾತ; ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಚಾಮರಾಜನಗರ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಆರ್‌.ಎಸ್‌. ದೊಡ್ಡಿ ಸಮೀಪ ತಡರಾತ್ರಿ ನಡೆದಿದೆ. ಮೃತರನ್ನು ಹನೂರು ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾದ ರಮೇಶ್, ಸುರೇಶ್ ಹಾಗೂ ಮುನಿಯಪ್ಪ ಎಂದು ಗುರುತಿಸಲಾಗಿದೆ. ಕೊಪ್ಪ ಗ್ರಾಮದಿಂದ ಬೈಕ್‌ನಲ್ಲಿ ಆರ್‌.ಎಸ್‌. ದೊಡ್ಡಿ ಮಾರ್ಗವಾಗಿ ಕೊಳ್ಳೇಗಾಲದ ಕಡೆಗೆ ಮೂವರು ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರಿಗೂ ತೀವ್ರ ಗಾಯಗಳಾಗಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಕರ್ನಾಟಕಕ್ಕೆ ಬರಬೇಕಿರುವ ₹2,186 ಕೋಟಿ ಅನುದಾನ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು, ಸೆ. 10: 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ಬರಬೇಕಿರುವ ₹2,186.20 ಕೋಟಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆಯಾಗಿದ್ದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡದಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಿರುವ ನ್ಯಾಯಯುತ ಪಾಲಿನ ಹಣವನ್ನು ತಡೆಹಿಡಿಯಲಾಗಿದೆ ಎಂದು ರಾಜ್ಯ ಸರ್ಕಾರ ಆಕ್ಷೇಪಿಸಿದೆ. ಬರ ಪರಿಸ್ಥಿತಿಯ ನಡುವೆ ಅನುದಾನ ತಡೆ ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ಪ್ರದೇಶಗಳಲ್ಲಿ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.…

ಅಧಿಕಾರಕ್ಕಿಂತ ಜನರ ನಂಬಿಕೆ ದೊಡ್ಡದು: ಸಿಎಂ ಆಗಿ 100 ದಿನ ಪೂರೈಸಿದ ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು 100 ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್‌ ಅವರು ಬಹಿರಂಗ ಪತ್ರ ಬರೆದಿದ್ದು, ಜನರ ನಂಬಿಕೆ ಮತ್ತು ನಿರೀಕ್ಷೆಗಳೇ ಸರ್ಕಾರದ ಪ್ರಮುಖ ಹೊಣೆಗಾರಿಕೆ ಎಂದು ಹೇಳಿದ್ದಾರೆ. “ಅಧಿಕಾರಕ್ಕಿಂತ ಜನರ ನಂಬಿಕೆ ದೊಡ್ಡದು. ಜನರ ನಿರೀಕ್ಷೆಗಳ ಮುಂದೆ ಹುದ್ದೆ ಚಿಕ್ಕದು. ನಮ್ಮ ಮುಂದಿರುವ ಸವಾಲು, ಜವಾಬ್ದಾರಿ ಮತ್ತು ಹೊಣೆಗಾರಿಕೆಯೇ ದೊಡ್ಡದು” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಗಟ್ಟಿಯಾದ ಅಡಿಪಾಯ ಹಾಕಿದ್ದಾರೆ. ಸರ್ಕಾರ ಎಲ್ಲರಿಗಾಗಿ ಇರಬೇಕು, ಅದರಲ್ಲೂ ಶೋಷಿತ ಮತ್ತು ದಮನಿತ ವರ್ಗಗಳ ಪರವಾಗಿ ನಿಲ್ಲಬೇಕು ಎಂಬ ಬದ್ಧತೆಯನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ ಎಂದು ಶಿವಕುಮಾರ್‌ ಹೇಳಿದ್ದಾರೆ. 100 ದಿನಗಳಲ್ಲಿ ಹಲವು ಹೆಜ್ಜೆ ಐದು ಗ್ಯಾರಂಟಿ ಯೋಜನೆಗಳು ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಚೈತನ್ಯ, ನೆಮ್ಮದಿ ಮತ್ತು ಭದ್ರತೆ ನೀಡಿವೆ ಎಂದು ಅವರು ಹೇಳಿದ್ದಾರೆ. ಇದರ ಜತೆಗೆ…

ಜಾರಕಿಹೊಳಿ ನಿವಾಸ ಮೇಲೆ EDಯಿಂದ ರಾಜಕೀಯ ಪ್ರೇರಿತ ದಾಳಿ ಎಂದ ಕಾಂಗ್ರೆಸ್; ಇದು ಕಾನೂನು ಪ್ರಕ್ರಿಯೆಯಷ್ಟೇ ಎಂದ ಶೆಟ್ಟರ್

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರಿಗೆ ಸಂಬಂಧಿಸಿದ ನಿವಾಸಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ದಾಳಿಯ ಹಿಂದೆ ಬಿಜೆಪಿಯ ದುರುದ್ದೇಶವಿದ್ದು, ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಹಾಗೂ ಪಕ್ಷವನ್ನು ರಾಜಕೀಯವಾಗಿ ಗುರಿಯಾಗಿಸಲು ಇಡಿ ಅಸ್ತ್ರ ಬಳಸಲಾಗುತ್ತಿದೆ ಎಂದು ದೂರಿದರು. ಸಚಿವರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ ಅವರು, ತನಿಖಾ ಸಂಸ್ಥೆಗಳು ಸುಳ್ಳು ಕಥೆ ಮತ್ತು ಆರೋಪಗಳ ಮೂಲಕ ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಆರೋಪಿಸಿದರು. “ED raid against Satish Jarkiholi politically motivated; BJP may target other ministers as well.” – CM DK Shivakumar pic.twitter.com/kQ9p8UvkbI…

“ಎಥನಾಲ್ ಉತ್ಪಾದನೆ ಹೆಚ್ಚಿಸಿ, ಅದರಿಂದ ರೈತರ ಆದಾಯಕ್ಕೂ ಪರಿಸರಕ್ಕೂ ಲಾಭ”: ಕುರುಬೂರು ಶಾಂತಕುಮಾರ್

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಬಳಕೆಯಿಂದ ಉಂಟಾಗುತ್ತಿರುವ ವಾಯುಮಾಲಿನ್ಯ ಮತ್ತು ಕಚ್ಚಾ ತೈಲ ಆಮದು ಅವಲಂಬನೆ ಕಡಿಮೆ ಮಾಡಲು ಎಥನಾಲ್‌ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಮಹಾರಾಷ್ಟ್ರ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಪಾಸಾ ಪಟೇಲ್‌ ಹೇಳಿದರು. ಬೆಂಗಳೂರಿನಲ್ಲಿ ನಡೆದ ಕಬ್ಬಿನಿಂದ ಎಥನಾಲ್‌ ಉತ್ಪಾದನೆ ಮತ್ತು ಬಳಕೆ ಕುರಿತ ರೈತ ಸಹಕಾರಿ ವಿಚಾರ ಸಂಕಿರಣವನ್ನು ಎಥನಾಲ್‌ ಎಣ್ಣೆಯಿಂದ ಬೆಳಗುವ ದೀಪ ಹಚ್ಚುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದ ಮಂಡ್ಯ ಜಿಲ್ಲೆಯ ಮೈಸೂರು ಶುಗರ್‌ ಕಾರ್ಖಾನೆಯಲ್ಲಿ 1840ರಲ್ಲೇ ಕಬ್ಬಿನಿಂದ ಉತ್ಪನ್ನ ತಯಾರಿಸಿ ಮುಂಬೈಗೆ ರವಾನಿಸಿ, ಪೆಟ್ರೋಲ್‌ನೊಂದಿಗೆ ಮಿಶ್ರಣ ಮಾಡಿ ಬಸ್‌ಗಳಲ್ಲಿ ಬಳಸಲಾಗುತ್ತಿತ್ತು ಎಂದು ಪಾಸಾ ಪಟೇಲ್‌ ಹೇಳಿದರು. ಮಂಡ್ಯ ಮತ್ತು ಕರ್ನಾಟಕದಲ್ಲಿ ಈ ರೀತಿಯ ಪ್ರಯೋಗಗಳು ನಡೆದಿರುವುದು ಹೆಮ್ಮೆಯ ಸಂಗತಿ ಎಂದರು. ಎಥನಾಲ್‌ ಉತ್ಪಾದನೆ ಹಾಗೂ ಬಳಕೆಗೆ ಮೊದಲೇ ಆದ್ಯತೆ ದೊರೆತಿದ್ದರೆ ಅದರ ಮಾಲೀಕತ್ವ…