ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭಾಪತಿ ಹುದ್ದೆಗೆ ಸಲೀಂ ಅಹ್ಮದ್ ಅವರ ಹೆಸರನ್ನು ಸೂಚಿಸಿದ ಬೆನ್ನಲ್ಲೇ ಈ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮನವಿ ಮಾಡಿದ್ದರು. ರಾಜೀನಾಮೆ ನೀಡದಿದ್ದರೆ ಅವಿಶ್ವಾಸ ನಿರ್ಣಯ ತರಲಾಗುವುದು ಎಂದು ತಿಳಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೊರಟ್ಟಿ, ಗೌರವ ಕಳೆದುಕೊಳ್ಳಲು ಇಷ್ಟವಿಲ್ಲದ ಕಾರಣ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಹೊರಟ್ಟಿ ತಿಳಿಸಿದ್ದಾರೆ. ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊರಟ್ಟಿಯನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿದ್ದರು. ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ಹೊರಟ್ಟಿ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದರು. ಈ ಬೆಳವಣಿಗೆ…
Category: ರಾಜ್ಯ
ಎಸ್ಐಆರ್ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ
ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಕರ್ನಾಟಕದಲ್ಲಿ ಶೇ.20ರಷ್ಟು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದ್ದು, ಇದರ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಹಾಗೂ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 5.40 ಕೋಟಿ ಮತದಾರರಲ್ಲಿ 20 ಪ್ರತಿಶತದಷ್ಟು ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಬೆಂಬಲಿತ ಮತದಾರರನ್ನು ಗುರಿಯಾಗಿಸಿಕೊಂಡು ಈ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಗೈರು, ಮೃತಪಟ್ಟವರು, ವಿಳಾಸ ಬದಲಾವಣೆ ಹಾಗೂ ನಕಲಿ ದಾಖಲೆಗಳ ಹೆಸರಿನಲ್ಲಿ ಅರ್ಹ ಮತದಾರರ ಹೆಸರನ್ನೂ ಕೈಬಿಡಲಾಗುತ್ತಿದೆ. ಹಲವು ಕಡೆ ಮನೆ-ಮನೆಗೆ ತೆರಳಿ ಗಣತಿ ನಮೂನೆ ವಿತರಿಸದೇ ಮತದಾರರನ್ನು ಗೈರು ಎಂದು ಗುರುತಿಸಲಾಗಿದೆ ಎಂದು ದೂರಿದರು. ಅರ್ಹ ಮತದಾರರ ಮತದಾನದ ಹಕ್ಕು ರಕ್ಷಿಸುವುದು…
ಅಸಮಾಧಾನಿತ ‘ಕೈ’ ಶಾಸಕರ ಮನವೊಲಿಕೆಗೆ ‘ಹೈ’ ಕಸರತ್ತು; ಉತ್ತರಕ್ಕೆ ಅನ್ಯಾಯವಾಗಿದೆ ಎಂದ ನಾಯಕ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಮನವೊಲಿಸುವ ಪ್ರಯತ್ನವನ್ನು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಸರಣಿ ಸಭೆಗಳನ್ನು ನಡೆಸಿ ಅಸಮಾಧಾನ ಶಮನಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಎಂ. ಕೃಷ್ಣಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸುರ್ಜೆವಾಲ, ಅವರೊಂದಿಗೆ ಮಾತುಕತೆ ನಡೆಸಿದರು. ಆದರೆ, ಸಚಿವ ಸ್ಥಾನ ಹೊರತುಪಡಿಸಿ ಬೇರೆ ಯಾವುದೇ ಹುದ್ದೆ ಅಥವಾ ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಕೃಷ್ಣಪ್ಪ ಹೇಳಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ಸಚಿವ ಸ್ಥಾನ ವಂಚಿತರಾದ ಹಿರಿಯ ಶಾಸಕ ಹೆಚ್.ಕೆ. ಪಾಟೀಲ್ ಅವರ ನಿವಾಸಕ್ಕೂ ಭೇಟಿ ನೀಡಿ ಚರ್ಚೆ ನಡೆಸಿದರು. ಉತ್ತರ ಕರ್ನಾಟಕಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ. ಪ್ರಾದೇಶಿಕ ಅಸಮಾನತೆ ಇನ್ನೂ ಮುಂದುವರಿದಿದೆ ಎಂದು ಹೆಚ್.ಕೆ. ಪಾಟೀಲ್ ಅಸಮಾಧಾನ…
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ
ಬೆಂಗಳೂರು/ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ ನಾಯಕರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ರಾಜೀನಾಮೆಗಳ ಸರಣಿಯೂ ಆರಂಭವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಬುಧವಾರ ಬಂದ್ಗೆ ಕರೆ ನೀಡಲಾಗಿದೆ. ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬಾಗೇಪಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಟೈರ್ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಬಂದ್ಗೆ ಸುಬ್ಬಾರೆಡ್ಡಿ ಅವರ ನೇರ ಬೆಂಬಲವಿಲ್ಲ, ಸಾರ್ವಜನಿಕರ ಅಸಮಾಧಾನದಿಂದಲೇ ಪ್ರತಿಭಟನೆ ನಡೆಯುತ್ತಿದೆ ಎಂದು ಬೆಂಬಲಿಗರು ತಿಳಿಸಿದ್ದಾರೆ. ಇತ್ತ…
ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ
ಬೆಂಗಳೂರು: ಕಾಂಗ್ರೆಸ್ನ ಅಸಮಾಧಾನಿತ ಶಾಸಕರ ಮನವೊಲಿಕೆ ಕಾರ್ಯಕ್ಕೆ ವೇಗ ಸಿಕ್ಕಿದ್ದು, ಸಚಿವ ಎನ್. ಚಲುವರಾಯಸ್ವಾಮಿ ಇಂದು ಶಾಸಕ ಎಂ. ಕೃಷ್ಣಪ್ಪ ಹಾಗೂ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನಿವಾಸಗಳಿಗೆ ಭೇಟಿ ನೀಡಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಎಂ. ಕೃಷ್ಣಪ್ಪ ನಿವಾಸದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, “ಕೃಷ್ಣಪ್ಪ ಅವರು ಕೆಲವು ವಿಚಾರಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸೂಚನೆ ಮೇರೆಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ” ಎಂದು ಹೇಳಿದರು. “ಬುಧವಾರ ಮುಖ್ಯಮಂತ್ರಿ ಸ್ವತಃ ಕೃಷ್ಣಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಅವರು ನಮಗೆ ಹಿರಿಯಣ್ಣನಂತಹವರು. ಇಲ್ಲಿ ಸಂಧಾನ ಎಂಬ ಪ್ರಶ್ನೆಯೇ ಇಲ್ಲ. ಅಷ್ಟು ದೊಡ್ಡವರು ನಾವಲ್ಲ. ಕುಟುಂಬದೊಳಗಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲಾಗುತ್ತದೆ” ಎಂದು ಅವರು ತಿಳಿಸಿದರು. ಇದೇ ವೇಳೆ, ಈ ಹಿಂದೆ ಉಂಟಾಗಿದ್ದ ಕೆಲವು ಭಿನ್ನಾಭಿಪ್ರಾಯಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು…
ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಮೂಲಕ ಮನವಿ ಮಾಡಿದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ, “ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ದಯವಿಟ್ಟು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ” ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಬಸವರಾಜ ಹೊರಟ್ಟಿ, “ಇದು ಕಲುಷಿತ ರಾಜಕಾರಣ. ಈ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ” ಎಂದು ಹೇಳಿದ್ದಾರೆ. ಇದಲ್ಲದೆ, ಕಾಂಗ್ರೆಸ್ ಪಕ್ಷದ ಲೆಟರ್ಹೆಡ್ನಲ್ಲಿ ನೂತನ ವಿಧಾನ ಪರಿಷತ್ ಸಭಾಪತಿ ಹೆಸರನ್ನು ಪ್ರಕಟಿಸಿರುವ ಕ್ರಮಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಭಾಪತಿ ಹಾಗೂ ಸಭಾಧ್ಯಕ್ಷರ ಹುದ್ದೆಗಳು ಸಾಂವಿಧಾನಿಕ ಹುದ್ದೆಗಳಾಗಿವೆ. ಆ ಹುದ್ದೆಯಲ್ಲಿರುವವರನ್ನು ಬದಲಾಯಿಸಲು ಬಯಸಿದರೆ ಮೊದಲು ನೋಟಿಸ್ ನೀಡಬೇಕು. ಅದಕ್ಕೆ ನಾನು ಸೂಕ್ತ ಉತ್ತರ…
ದಿನೇಶ್ ಗುಂಡೂರಾವ್ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬ್ರಾಹ್ಮಣ ಸಮುದಾಯದ ಮುಖಂಡರು ಮಂಗಳವಾರ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಬ್ರಾಹ್ಮಣ ಸಮುದಾಯದ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷವು ಈ ಬಾರಿ ಬ್ರಾಹ್ಮಣ ಸಮುದಾಯವನ್ನು ಸಚಿವ ಸಂಪುಟದಲ್ಲಿ ಕಡೆಗಣಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಆರು ಬಾರಿ ಶಾಸಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿರುವ ದಿನೇಶ್ ಗುಂಡೂರಾವ್ ಅವರು ಕಳೆದ ಹಲವು ದಶಕಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಇಂತಹ ಹಿರಿಯ ನಾಯಕನಿಗೆ ಸಚಿವ ಸ್ಥಾನ ನೀಡದಿರುವುದು ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.…
‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ
ಬೆಂಗಳೂರು: ಕರ್ನಾಟಕ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವರ ಅಧಿಕಾರಾವಧಿ ಜನಪರ ಹಾಗೂ ಯಶಸ್ವಿಯಾಗಲಿ ಎಂದು ಅವರು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಶುಭಾಶಯ ಕೋರಿರುವ ಸುರ್ಜೇವಾಲ, ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್ನ ಬದ್ಧತೆಯನ್ನು ಪ್ರತಿಬಿಂಬಿಸುವ ಸಚಿವ ಸಂಪುಟ ರಚನೆಯಾಗಿದ್ದು, ಯುವಶಕ್ತಿ ಮತ್ತು ಅನುಭವದ ಸಮನ್ವಯಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆರಂಭಗೊಂಡಿರುವ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವುದು ಹಾಗೂ ಅಭಿವೃದ್ಧಿಯ ಕಾರ್ಯಸೂಚಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ಸಚಿವರು ಮತ್ತು ಕಾರ್ಯಕರ್ತರ ಮೇಲಿದೆ ಎಂದು ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿವೃದ್ಧಿಯ ಪಯಣವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದು, ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು…
ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕವೂ ರಾಜ್ಯದ ಎಂಟು ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ಸಿಕ್ಕಿಲ್ಲ. ವಿಸ್ತರಣೆಯ ನಂತರ ಒಟ್ಟು 23 ಜಿಲ್ಲೆಗಳಿಗೆ ಸಚಿವ ಸ್ಥಾನ ದೊರೆತಿದ್ದರೆ, ಎಂಟು ಜಿಲ್ಲೆಗಳು ಸಂಪುಟದಲ್ಲಿ ಸ್ಥಾನ ಪಡೆಯದೇ ಉಳಿದಿವೆ. ಈ ಬಾರಿ ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಉಡುಪಿ, ರಾಯಚೂರು, ಯಾದಗಿರಿ, ಗದಗ ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿಲ್ಲ. ಇನ್ನೊಂದೆಡೆ, ಬೆಂಗಳೂರು ನಗರ ಜಿಲ್ಲೆ ಅತಿ ಹೆಚ್ಚು ಪ್ರಾತಿನಿಧ್ಯ ಪಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಈ ಜಿಲ್ಲೆಯಿಂದ ಆರು ಸಚಿವರು ಸ್ಥಾನ ಪಡೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಯಿಂದ ಮೂವರು ಸಚಿವರು ಸಂಪುಟದಲ್ಲಿದ್ದಾರೆ. ರಾಮನಗರ, ಬೆಳಗಾವಿ, ಕೊಪ್ಪಳ ಹಾಗೂ ಮಂಡ್ಯ ಜಿಲ್ಲೆಗಳಿಂದ ತಲಾ ಇಬ್ಬರು ಸಚಿವರು ಸ್ಥಾನ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ, ತುಮಕೂರು, ದಕ್ಷಿಣ ಕನ್ನಡ, ಉತ್ತರ…
ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಅಸಮಾಧಾನದ ಅಲೆ ಎದ್ದಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಲವು ಶಾಸಕರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಕೆಲ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮೂಲಗಳು ತಿಳಿಸಿವೆ. ಇದೇ ವೇಳೆ, ಬೇಳೂರು ಶಾಸಕ ಗೋಪಾಲಕೃಷ್ಣ ಅವರು ಉದ್ದೇಶಪೂರ್ವಕವಾಗಿ ಸಚಿವ ಸ್ಥಾನದಿಂದ ವಂಚಿಸಲಾಗಿದೆ ಎಂದು ಆರೋಪಿಸಿ, ಶಾಸಕ ಸ್ಥಾನ ಹಾಗೂ ನಿಗಮ–ಮಂಡಳಿ ಹುದ್ದೆಗೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರು ಮುಂದಿನ ರಾಜಕೀಯ ನಡೆ ಕುರಿತು ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಮೈಸೂರು,…
