ನವದೆಹಲಿ: ದೇಶದಲ್ಲಿ ವಿದ್ಯುತ್ ವಾಹನಗಳ ಬಳಕೆಯನ್ನು ಹೆಚ್ಚಿಸುವುದು, ಚಾರ್ಜಿಂಗ್ ಮೂಲಸೌಕರ್ಯ ಬಲಪಡಿಸುವುದು ಹಾಗೂ ದೇಶೀಯ ಉತ್ಪಾದನಾ ಸಾಮರ್ಥ್ಯ ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಭಾರೀ ಕೈಗಾರಿಕಾ ಸಚಿವಾಲಯ ತಿಳಿಸಿದೆ. 2019ರ ಏಪ್ರಿಲ್ನಿಂದ 2024ರ ಮಾರ್ಚ್ವರೆಗೆ ₹11,500 ಕೋಟಿ ಬಜೆಟ್ನಲ್ಲಿ ಜಾರಿಗೊಂಡ FAME-II ಯೋಜನೆಯಡಿ ಸುಮಾರು 16.72 ಲಕ್ಷ ವಿದ್ಯುತ್ ವಾಹನಗಳಿಗೆ ಬೆಂಬಲ ನೀಡಲಾಗಿದೆ. ಜುಲೈ 31, 2026ರ ವೇಳೆಗೆ ಈ ಯೋಜನೆಯಡಿ 5,299 ಎಲೆಕ್ಟ್ರಿಕ್ ಬಸ್ಗಳ ನಿಯೋಜನೆಗೂ ನೆರವು ನೀಡಲಾಗಿದೆ. ಸಾರ್ವಜನಿಕ EV ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗೆ FAME-II ಅಡಿಯಲ್ಲಿ ₹912.50 ಕೋಟಿ ಮೀಸಲಿಡಲಾಗಿದ್ದು, 9,583 ಚಾರ್ಜಿಂಗ್ ಕೇಂದ್ರಗಳು ಸ್ಥಾಪನೆಯಾಗಿವೆ. ದೇಶೀಯ ಉತ್ಪಾದನೆಗೆ ಉತ್ತೇಜನ ನೀಡಲು ₹25,938 ಕೋಟಿ ವೆಚ್ಚದ ಆಟೋಮೊಬೈಲ್ ಮತ್ತು ಆಟೋ ಕಾಂಪೊನೆಂಟ್ಗಳ PLI ಯೋಜನೆ ಜಾರಿಯಲ್ಲಿದೆ. ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಭಾಗಗಳ ಉತ್ಪಾದನೆಗೂ ಈ ಯೋಜನೆಯಿಂದ ಉತ್ತೇಜನ…
Category: ರಾಜ್ಯ
ಆಗಸ್ಟ್ 14ರಂದು ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಆಗಸ್ಟ್ 14ರಂದು ಹೊಸ ಸ್ಪೀಕರ್ ಆಯ್ಕೆ ನಡೆಯಲಿದೆ. ಪ್ರಸ್ತುತ ಸ್ಪೀಕರ್ ಹಾಗೂ ಉಪ ಸ್ಪೀಕರ್ ಹುದ್ದೆಗಳು ಖಾಲಿ ಇದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಆಗಸ್ಟ್ 3ರಂದು ಹಿರಿಯ ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದರು. ಕರ್ನಾಟಕ ವಿಧಾನಸಭೆಯ ಬುಲೆಟಿನ್ ಪ್ರಕಾರ, ವಿಧಾನಸಭೆಯ ಕಾರ್ಯವಿಧಾನ ಮತ್ತು ವ್ಯವಹಾರ ನಡವಳಿಕೆಯ ನಿಯಮಗಳ ಉಪನಿಯಮ 7(1)ರಡಿ ರಾಜ್ಯಪಾಲರು 2026ರ ಆಗಸ್ಟ್ 14, ಶುಕ್ರವಾರವನ್ನು ಸ್ಪೀಕರ್ ಚುನಾವಣೆಗೆ ನಿಗದಿಪಡಿಸಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಸ್ಪರ್ಧಿಸಲು ಬಯಸುವ ಸದಸ್ಯರು ಆಗಸ್ಟ್ 13ರಂದು ಮಧ್ಯಾಹ್ನ 12 ಗಂಟೆಯೊಳಗೆ ವಿಧಾನಸಭೆ ಕಾರ್ಯದರ್ಶಿಗೆ ಲಿಖಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು. ಪ್ರಸ್ತಾವನೆಯನ್ನು ಮತ್ತೊಬ್ಬ ಸದಸ್ಯರು ಅನುಮೋದಿಸಬೇಕಿದ್ದು, ಅಭ್ಯರ್ಥಿಯೂ ಆಯ್ಕೆಯಾದಲ್ಲಿ ಸ್ಪೀಕರ್ ಆಗಿ ಸೇವೆ ಸಲ್ಲಿಸಲು ಸಮ್ಮತಿ ನೀಡಿರುವುದಾಗಿ ತಿಳಿಸಬೇಕು. ಅಭ್ಯರ್ಥಿ, ಪ್ರಸ್ತಾಪಕರು ಅಥವಾ ಅನುಮೋದಕರು ಈ ನೋಟಿಸ್ ಅನ್ನು ಕಾರ್ಯದರ್ಶಿಗೆ ಖುದ್ದಾಗಿ…
ಬಿಡದಿ ಟೌನ್ಶಿಪ್ ಜಾರಿಗೆ ರೈತರಿಂದಲೇ ಒತ್ತಡ; ಸಿಎಂಗೆ ಮನವಿ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಯನ್ನು ಜಾರಿಗೊಳಿಸುವುದು ಹಾಗೂ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮಗಳಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಿ ಆಯಾ ಗ್ರಾಮಗಳ ರೈತರ ನಿಯೋಗ ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿ ಕಚೇರಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ರೈತರು ಕಳೆದ ಎರಡು ದಶಕಗಳಿಂದ ರೆಡ್ಜೋನ್ ವ್ಯಾಪ್ತಿಯ ನಿರ್ಬಂಧಗಳಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವುದಾಗಿ ಮುಖ್ಯಮಂತ್ರಿಗಳ ಮುಂದೆ ಅಳಲು ತೋಡಿಕೊಂಡಿದೆ. ವೃಷಭಾವತಿ ನದಿಯ ಕೊಳಚೆ ನೀರಿನಿಂದಾಗಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಹಸಿರಾಗಿ ಕಾಣುವ ತೆಂಗಿನ ತೋಟಗಳಲ್ಲೂ ನಿರೀಕ್ಷಿತ ಇಳುವರಿ ಬರುತ್ತಿಲ್ಲ ಎಂದು ರೈತರು ಹೇಳಿದರು. ಕಲುಷಿತ ನೀರಿನ ಪರಿಣಾಮ ಹಾಲಿನ ಗುಣಮಟ್ಟಕ್ಕೂ ಧಕ್ಕೆಯಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ರೆಡ್ಜೋನ್ ನಿರ್ಬಂಧಗಳಿಂದ ಆಸ್ಪತ್ರೆ, ಕಲ್ಯಾಣ ಮಂಟಪ ಸೇರಿದಂತೆ ಹಲವು ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಗ್ರಾಮಗಳ ಅಭಿವೃದ್ಧಿಯೇ…
ಸಚಿವರಿಗೆ ಖಾತೆ ಹಂಚಿಕೆ: 13 ಮಂದಿಗೆ ಖಾತೆ ಫೈನಲ್, 6 ಮಂದಿಗೆ ಬಾಕಿ
ಬೆಂಗಳೂರು: ಹಲವು ಸುತ್ತಿನ ಸಭೆಗಳ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪಟ್ಟಿಯನ್ನು ಸಿದ್ಧಪಡಿಸಿರುವ ಸಿಎಂ, ಅಧಿಕೃತ ಅನುಮೋದನೆಗಾಗಿ ರಾಜಭವನಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪ್ರಮಾಣವಚನ ಸ್ವೀಕರಿಸಿದ 19 ಸಚಿವರ ಪೈಕಿ 13 ಮಂದಿಗೆ ಮಾತ್ರ ಸದ್ಯ ಖಾತೆ ಹಂಚಿಕೆ ಮಾಡಲಾಗಿದೆ. ಉಳಿದ ಆರು ಸಚಿವರಿಗೆ ಖಾತೆ ಹಂಚಿಕೆ ಇನ್ನೂ ಬಾಕಿ ಉಳಿದಿದೆ. ನೂತನ ಖಾತೆ ಹಂಚಿಕೆಯ ಪ್ರಕಾರ, ಎನ್. ಚಲುವರಾಯಸ್ವಾಮಿ ಅವರಿಗೆ ಕೃಷಿ ಇಲಾಖೆ, ರಿಜ್ವಾನ್ ಅರ್ಷದ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಕೆ.ಎಚ್. ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ನೀಡಲಾಗಿದೆ. ಸಂತೋಷ್ ಲಾಡ್ ಅವರಿಗೆ ಕಾರ್ಮಿಕ ಇಲಾಖೆ, ಬಸಂತಪ್ಪ ಅವರಿಗೆ ಮೀನುಗಾರಿಕೆ ಇಲಾಖೆ ಹಾಗೂ ಮಧು ಬಂಗಾರಪ್ಪ ಅವರಿಗೆ ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತಾ…
ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿವಾದ ತಾರಕಕ್ಕೆ; ಡಿಸಿಎಂ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ತುಮಕೂರು: ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿಚಾರದಲ್ಲಿ ತುಮಕೂರಿನಲ್ಲಿ ಪರ-ವಿರೋಧದ ಹೋರಾಟಗಳು ತೀವ್ರಗೊಂಡಿದ್ದು, ವಿವಾದ ಇದೀಗ ಮತ್ತಷ್ಟು ತಾರಕಕ್ಕೇರಿದೆ. ಕಾಮಗಾರಿ ಶೀಘ್ರ ಆರಂಭಿಸುವಂತೆ ಆಗ್ರಹಿಸಿ ಕುಣಿಗಲ್ ಭಾಗದ ರೈತರು ಡಿಸಿಎಂ ಡಾ. ಜಿ. ಪರಮೇಶ್ವರ್ ಅವರ ಕಾರಿಗೆ ಅಡ್ಡ ಮಲಗಿ ಪ್ರತಿಭಟನೆ ನಡೆಸಿದರು. ಬರ ಪರಿಸ್ಥಿತಿ ವೀಕ್ಷಣೆಗೆ ತೆರಳುತ್ತಿದ್ದ ವೇಳೆ ರೈತರು ಪ್ರತಿಭಟನೆ ನಡೆಸಿ, ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದರು. ರೈತರ ಪ್ರತಿಭಟನೆಯಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು. ಬಳಿಕ ಡಿಸಿಎಂ ಪರಮೇಶ್ವರ್ ಅವರು ರೈತರೊಂದಿಗೆ ಮಾತುಕತೆ ನಡೆಸಿ, ಶೀಘ್ರದಲ್ಲೇ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದರು. ಇದರಿಂದ ಪ್ರತಿಭಟನಾನಿರತ ರೈತರು ಪ್ರತಿಭಟನೆ ಕೈಬಿಟ್ಟರು. ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆಯಿಂದ ಕುಣಿಗಲ್ ಸೇರಿದಂತೆ ಹಲವು ಪ್ರದೇಶಗಳ ರೈತರಿಗೆ ನೀರಿನ ಅನುಕೂಲವಾಗಲಿದೆ ಎಂಬ ನಿರೀಕ್ಷೆ ಇದೆ. ಆದರೆ ಯೋಜನೆಯ ಕಾಮಗಾರಿ ವಿಚಾರದಲ್ಲಿ ವಿವಿಧ ಭಾಗಗಳಲ್ಲಿ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು,…
ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯದ ಚಿಂತನೆ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ತಮಿಳುನಾಡಿಗೆ ಪ್ರತಿದಿನ ಸುಮಾರು 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿದಿನ ಸುಮಾರು 1 ಟಿಎಂಸಿ ನೀರು ಬಿಡುವಂತೆ CWRC ಆದೇಶಿಸಿದೆ. ಕಳೆದ ತಿಂಗಳು ತಮಿಳುನಾಡಿಗೆ 3,500 ಕ್ಯುಸೆಕ್ ನೀರು ಹರಿಸುವಂತೆ ಸೂಚಿಸಿದ ಸಂದರ್ಭದಲ್ಲೇ ರಾಜ್ಯಕ್ಕೆ ನೀರು ಬಿಡುವುದು ಕಷ್ಟವಾಗಿತ್ತು ಎಂದು ಹೇಳಿದರು. ಅದೇ ಸಂದರ್ಭದಲ್ಲಿ ಉತ್ತಮ ಮಳೆಯಾದ ಕಾರಣ ಕಬಿನಿ ಜಲಾಶಯದಿಂದಲೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಹೋಗಿತ್ತು. ಇಂದು ಕಬಿನಿಯಿಂದ ಎಷ್ಟು ಪ್ರಮಾಣದ ನೀರು ಹೊರಹೋಗಿದೆ…
ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳಿರುವ ಆರೋಪಕ್ಕೆ ಪರಮೇಶ್ವರ್ ತಿರುಗೇಟು; ದಾಖಲೆ ಇದ್ದರೆ ಕ್ರಮ
ತುಮಕೂರು: ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳು ವಾಸಿಸುತ್ತಿದ್ದಾರೆ, ಬೆಂಗಳೂರಿನಲ್ಲೇ 4.5 ಲಕ್ಷ ಮಂದಿ ಇದ್ದಾರೆ ಎಂಬ ಆರೋಪವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಳ್ಳಿಹಾಕಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಅಂಕಿ-ಅಂಶಗಳಿಗೆ ವಿಶ್ವಾಸಾರ್ಹ ದಾಖಲೆ ಮತ್ತು ಅಧಿಕೃತ ಮಾಹಿತಿಯ ಆಧಾರ ಇರಬೇಕು ಎಂದು ಹೇಳಿದರು. “ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದೆ. ಅದರ ಅಂಕಿ-ಅಂಶಗಳಿಂದ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳು ಇರುವುದಾಗಿ ದೃಢಪಟ್ಟರೆ, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಆಧಾರವಿಲ್ಲದೆ ಅಂಕಿ-ಅಂಶಗಳನ್ನು ಹೇಳಲು ಸಾಧ್ಯವಿಲ್ಲ,” ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು. ಬರ ಪರಿಹಾರ ವಿಚಾರದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು. “ವಿಸ್ತೃತ ವರದಿ ಸಲ್ಲಿಸಿದ ಬಳಿಕವೂ ಕೇಂದ್ರ ಸರ್ಕಾರ ಪರಿಹಾರ ನಿಧಿ ಬಿಡುಗಡೆ ಮಾಡದಿದ್ದರೆ ಪ್ರತಿಭಟನೆ ನಡೆಸುತ್ತೇವೆ.…
ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ
ವಿಜಯಪುರ: ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಸಚಿವ ಸಂಪುಟದ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದು ತಪ್ಪಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರದಲ್ಲೂ ಅಂತಿಮ ನಿರ್ಧಾರವನ್ನು ಪಕ್ಷದ ನಾಯಕತ್ವ ಹಾಗೂ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. ಸಚಿವರು ತಮಗೆ ನಿರ್ದಿಷ್ಟ ಖಾತೆ ಬೇಕೆಂದು ಕೇಳಬಹುದು. ಆದರೆ, ಯಾರಿಗೆ ಯಾವ ಖಾತೆ ನೀಡಬೇಕು ಎಂಬುದನ್ನು ಅಂತಿಮವಾಗಿ ಹೈಕಮಾಂಡ್ ನಿರ್ಧರಿಸಲಿದೆ ಎಂದರು. ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸು ಮಾಡಿದ ಶಾಸಕರಿಗೆ ಅವಕಾಶ ನೀಡದಿರುವುದಕ್ಕೆ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳನ್ನು ಯತೀಂದ್ರ ತಳ್ಳಿಹಾಕಿದರು. “ಸಿದ್ದರಾಮಯ್ಯ ಅವರು ಎಂದಾದರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ? ಪಕ್ಷ ತಮ್ಮನ್ನು ಕಡೆಗಣಿಸಿದೆ ಎಂದು ಹೇಳಿದ್ದಾರೆಯೇ?” ಎಂದು ಪ್ರಶ್ನಿಸಿದ ಅವರು, ಸಂಪುಟ ವಿಸ್ತರಣೆಗೆ ಮುನ್ನ…
ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ ತಡವಾಗಿ ಚುರುಕುಗೊಂಡಿರುವ ಮುಂಗಾರು ಮಳೆ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೀದರ್, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೆ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ,…
ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ
ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಸ್ಪಂದನಾ ಸೇವಾ ಸಮಿತಿ ವತಿಯಿಂದ ನಂದ್ರೊಳ್ಳಿ ಸೀತಾರಾಮಶೆಟ್ಟಿ ವಿರಚಿತ ಶ್ರೀ ರಾಘವೇಂದ್ರ ಮಹಿಮೆ ಯಕ್ಷಗಾನ ಕಾರ್ಯಕ್ರಮ ಗಮನಸೆಳೆಯಿತು. ಹೈಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀಶಾನಂದ, ರಾಜೇಶ್ ರೈ, ಮಂತ್ರಾಲಯ ಮಠ ಪ್ರತಿನಿಧಿ ಎಸ್.ಎನ್.ವೆಂಕಟೇಶಾಚಾರ್ಯ, ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಉದ್ಯಮಿ ರಾಜೇಶ್ ಶೆಟ್ಟಿ, ಹೋಟೆಲ್ ಮತ್ತು ಬೇಕರಿ, ಕಾಂಡಿಮೆಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಪ್ರತಾಪ್ ಶೆಟ್ಟಿ, ಪ್ರಭು, ಕರುಣಕರ್ ಶೆಟ್ಟಿ ಸ್ಪಂದನಾ ಸೇವಾ ಸಂಸ್ಥೆಯ ಅಧ್ಯಕ್ಷರಾದ ವೆಂಕಟೇಶ್ ಪೈ ರವರು ದೀಪ ಬೆಳಗಿಸಿ ಉದ್ಘಾಟಸಿ, ಯಕ್ಷಗಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನ್ಯಾಯಮೂರ್ತಿ ಶ್ರೀಶಾನಂದರವರು ಮಾತನಾಡಿ, ಅಂದಿನ ಕಾಲದಲ್ಲಿ ಭಾಗವತರ ಕಥೆಯಲ್ಲಿ ರೋಗ ವಾಸಿ ಮಾಡುವ ತಂತ್ರಗಳು ಇರುತ್ತಿತು. ಒಳ್ಳೆಯವರನ್ನ ರಕ್ಷಣೆಬೇಕಾದದ್ದು ದೇವರ ಕೆಲಸ, ಭಕ್ತರ ಮಾತನ್ನ ಸುಳ್ಳು ಮಾಡಬಾರದು ಎಂಬ ನಂಬಿಕೆ. ಪ್ರಹ್ಲಾದ ಮಾತು ಮೀರಬಾರದು ಎಂದು ಹಿರಣ್ಯಕಶಿಪು ಸಂಹಾರ ಮಾಡಿದರು ನರಸಿಂಹ ದೇವರು. ಎಷ್ಟೆ ಕಷ್ಟ ಬಂದರು…
