ಬೆಂಗಳೂರು: ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ ಮಧ್ಯವರ್ತಿ ಹಾಗೂ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಅವರನ್ನು ಸಿಐಡಿ ಬಂಧಿಸಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ನಿವಾಸಿಯಾಗಿರುವ ಕನ್ನಾಳೆ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೂ ಆಗಿದ್ದಾರೆ. ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು, ಬಳಿಕ ಭಾಲ್ಕಿಯಲ್ಲಿರುವ ಅವರ ಮನೆಗಳಲ್ಲೂ ಶೋಧ ನಡೆಸಿದ್ದಾರೆ. ಗ್ಯಾನೇಂದ್ರ ಕುಮಾರ್ ಮತ್ತು ಬಸವರಾಜ್ ಕನ್ನಾಳೆ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 9ರವರೆಗೆ ಸಿಐಡಿ ಕಸ್ಟಡಿಗೆ ನೀಡಲಾಗಿದೆ. ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ? ತನಿಖೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಸಿಐಡಿಗೆ ಲಭ್ಯವಾಗಿದೆ. ಪರೀಕ್ಷೆಗಳ ಉಸ್ತುವಾರಿ ಹಾಗೂ ಪರೀಕ್ಷಾ ನಿಯಂತ್ರಕರಾಗಿದ್ದ ಗ್ಯಾನೇಂದ್ರ ಕುಮಾರ್ ಅವರೇ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಮುಖ ಸೂತ್ರಧಾರ ಎನ್ನಲಾಗಿದೆ.…
Category: ರಾಜ್ಯ
ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಬೆಂಗಳೂರು ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯ ಮುಂದುವರಿದ ಭಾಗವಾಗಿ, ನಗರದ ವಿವಿಧೆಡೆ ವಶಕ್ಕೆ ಪಡೆಯಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಸೋಮವಾರ ಗಡಿಪಾರು ಪ್ರಕ್ರಿಯೆಗಾಗಿ ಕಳುಹಿಸಲಾಗಿದೆ. ನಗರದ 10 ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದ್ದ ಇವರನ್ನು ಎಸ್ಎಂವಿಟಿ ಬೆಂಗಳೂರು ರೈಲು ನಿಲ್ದಾಣದಿಂದ ಪಶ್ಚಿಮ ಬಂಗಾಳದ ಮಾಲ್ಡಾ ರೈಲು ನಿಲ್ದಾಣಕ್ಕೆ ರೈಲಿನಲ್ಲಿ ಕರೆದೊಯ್ಯಲಾಯಿತು. 31 ಮಂದಿಯನ್ನು 20 ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಕರೆದೊಯ್ದಿದ್ದು, ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮಾಲ್ಡಾ ತಲುಪುವ ನಿರೀಕ್ಷೆಯಿದೆ. ಬಳಿಕ ಅಲ್ಲಿಂದ ಮುಂದಿನ ಗಡಿಪಾರು ಪ್ರಕ್ರಿಯೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಈ ಕುರಿತು ಮಾಹಿತಿ ನೀಡಿದ್ದು, ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ, ಅಕ್ರಮ ವಲಸಿಗರ ಕುರಿತು ಮಾಹಿತಿ ಇದ್ದರೆ ಪೊಲೀಸರಿಗೆ…
‘ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ, ಸಿಎಂಗೆ ದುಬಾರಿ ಶಾಲು’: ಡಿಕೆಶಿ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸದಿರುವ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದು, ಕೂಡಲೇ ಮಕ್ಕಳಿಗೆ ಶೂ-ಸಾಕ್ಸ್ ವಿತರಿಸುವಂತೆ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅಶೋಕ್, “ಲಕ್ಷಾಂತರ ರೂಪಾಯಿ ಮೌಲ್ಯದ Louis Vuitton ಬ್ರ್ಯಾಂಡ್ ಶಾಲು ಧರಿಸಿ ಮೆರೆಯುವ ನಿಮಗೆ ಸರ್ಕಾರಿ ಶಾಲೆಯ ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ ಹೋಗುತ್ತಿರುವುದು ಕಾಣುತ್ತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ. ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದಿದ್ದರೂ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಇನ್ನೂ ಶೂ ಮತ್ತು ಸಾಕ್ಸ್ ನೀಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ಇದರ ಜೊತೆಗೆ, ಸಕ್ಕರೆ ಬೆಲೆ ಏರಿಕೆಯ ನೆಪವೊಡ್ಡಿ ಕೆಲವೆಡೆ…
ರಾಯರೆಡ್ಡಿ ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿಸಿ, ಇಲ್ಲವೇ ಸಚಿವ ಸ್ಥಾನದಿಂದ ವಜಾ ಮಾಡಿ- ಆರ್. ಅಶೋಕ್
ಬೆಂಗಳೂರು: ಸಚಿವ ಬಸವರಾಜ ರಾಯರೆಡ್ಡಿ ಅವರ ಧಾರ್ಮಿಕ ಹೇಳಿಕೆಯನ್ನು ಖಂಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಮಧ್ಯಪ್ರವೇಶಿಸಿ ಸಚಿವರಿಂದ ಸಾರ್ವಜನಿಕ ಕ್ಷಮೆಯಾಚನೆ ಮಾಡಿಸಬೇಕು. ಇಲ್ಲವಾದಲ್ಲಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಶೋಕ್, “ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ- ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ’!” ಎಂದು ವ್ಯಂಗ್ಯವಾಡಿದ್ದಾರೆ. ಸಚಿವ ಬಸವರಾಜ ರಾಯರೆಡ್ಡಿ ಅವರು “ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ” ಎಂದು ಹೇಳಿರುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಅಶೋಕ್ ಆರೋಪಿಸಿದ್ದಾರೆ. “ಧರ್ಮದ ವಿಚಾರದಲ್ಲಿ ಪ್ರತಿಯೊಬ್ಬರಿಗೂ ಅವರದೇ ಆದ ವೈಯಕ್ತಿಕ ನಂಬಿಕೆ ಇರಬಹುದು. ಆದರೆ ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಕೋಟ್ಯಂತರ ಜನರ ಆರಾಧನೆ, ಮಠ-ಮಾನ್ಯಗಳು ಮತ್ತು ಸನಾತನ ಪರಂಪರೆಯ…
ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರಿನಲ್ಲಿ ನಿರ್ಮಿಸಲಾಗಿರುವ ವೃಕ್ಷೋದ್ಯಾನವನ್ನು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಲೋಕಾರ್ಪಣೆ ಮಾಡಿದರು. ಶ್ರೀ ಬಸಲಿಂಗ ಸ್ವಾಮೀಜಿ ಹಾಗೂ ಶ್ರೀ ಸಿದ್ದಲಿಂಗ ದೇವರು ತಾಳಿಕೋಟಿ ಅವರ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ‘ಪ್ರಕೃತಿಯಲ್ಲಿಯೇ ದೇವರನ್ನು ಕಾಣಬೇಕು’ ಎಂಬ ಸಂದೇಶ ಇಂದಿನ ಸಂದರ್ಭದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಮರ-ಗಿಡಗಳನ್ನು ಬೆಳೆಸುವುದು ಕೇವಲ ಪರಿಸರ ಸಂರಕ್ಷಣೆಯಲ್ಲ; ಮುಂದಿನ ಪೀಳಿಗೆಯ ಬದುಕನ್ನು ಸುರಕ್ಷಿತಗೊಳಿಸುವ ಕಾರ್ಯವೂ ಆಗಿದೆ ಎಂದರು. ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆಶಯದಂತೆ ಸಾವಳಗಸಂಗದ ಬರಡು ಗುಡ್ಡವನ್ನು ಹಸಿರು ಪ್ರದೇಶವನ್ನಾಗಿ ರೂಪಿಸುವ ಸಂಕಲ್ಪವನ್ನು ಶಾಸಕ ಯಶವಂತರಾಯಗೌಡ ಪಾಟೀಲರು ಕೈಗೊಂಡಿರುವುದು ಶ್ಲಾಘನೀಯ. ಅವರ ಜನಪರ ಕಾರ್ಯಗಳು ಸಜ್ಜನರಿಗೆ ಅಧಿಕಾರ ದೊರೆತರೆ ಸಮಾಜಕ್ಕೆ ಒಳಿತಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಗಿವೆ…
ಕಾರವಾರ ಕಡಲಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; 24 ಮೀನುಗಾರರ ರಕ್ಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕರಾವಳಿಯ ಅಂಜದೀವ್ ದ್ವೀಪದ ಸಮೀಪ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ವೊಂದು ಮುಳುಗಿದ ಘಟನೆ ನಡೆದಿದೆ. ಬೋಟ್ನಲ್ಲಿದ್ದ 24 ಮಂದಿ ಮೀನುಗಾರರನ್ನು ಸಕಾಲಿಕ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಹೆಸರಿನ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅಪಾಯಕ್ಕೆ ಸಿಲುಕಿದ್ದು, ಬಳಿಕ ಸಂಪೂರ್ಣವಾಗಿ ಮುಳುಗಿದೆ ಎನ್ನಲಾಗಿದೆ. ಬೋಟ್ ಅಪಾಯದಲ್ಲಿರುವುದನ್ನು ಸಮೀಪದಲ್ಲಿ ಸಂಚರಿಸುತ್ತಿದ್ದ ಐದಾರು ಮೀನುಗಾರಿಕಾ ಬೋಟ್ಗಳಲ್ಲಿದ್ದ ಮೀನುಗಾರರು ಗಮನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಬೋಟ್ನಲ್ಲಿದ್ದ ಎಲ್ಲ 24 ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
‘ಎರಡು ಮುಖಗಳು, ಒಂದೇ ಸಂದೇಶವೇ?’; RSS ಬಗ್ಗೆ ಬಿ.ಕೆ. ಹರಿಪ್ರಸಾದ್ ಟೀಕಾಸ್ತ್ರ
ಬೆಂಗಳೂರು: ‘‘ಎರಡು ಮುಖಗಳು, ಒಂದೇ ಸಂದೇಶವೇ?’’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಆರ್ಎಸ್ಎಸ್ ನಾಯಕರನ್ನು ಪ್ರಶ್ನಿಸಿದ್ದಾರೆ. ನ್ಯೂಯಾರ್ಕ್ನಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ವೈವಿಧ್ಯತೆಯನ್ನು ‘‘ನಮ್ಮ ಅಂತರಂಗದ ಏಕತೆಯ ಅಲಂಕಾರ’’ ಎಂದು ಬಣ್ಣಿಸಿ, ಅದನ್ನು ರಕ್ಷಿಸಬೇಕು ಎಂದು ಹೇಳಿರುವುದನ್ನು ಉಲ್ಲೇಖಿಸಿದ ಹರಿಪ್ರಸಾದ್, ವಿದೇಶದ ವೇದಿಕೆಯಲ್ಲಿ ಹೇಳುವ ಮಾತುಗಳು ಭಾರತದಲ್ಲಿಯೂ ಕಾರ್ಯರೂಪಕ್ಕೆ ಬರಬೇಕು ಎಂದು ಹೇಳಿದ್ದಾರೆ. ‘ನ್ಯೂಯಾರ್ಕ್ನಲ್ಲಿ ಏಕತೆ, ಭಾರತದಲ್ಲಿ ವಿಭಜನೆಯ ರಾಜಕೀಯ?’ ದಶಕಗಳಿಂದ ಆರ್ಎಸ್ಎಸ್ ಹಾಗೂ ಅದರೊಂದಿಗೆ ಸಂಬಂಧ ಹೊಂದಿರುವ ಸಂಘ ಪರಿವಾರದ ವಿವಿಧ ಸಂಘಟನೆಗಳು ಕೋಮು ಧ್ರುವೀಕರಣಕ್ಕೆ ಉತ್ತೇಜನ ನೀಡುತ್ತಿವೆ. ಇದರಿಂದ ಭಾರತದ ಬಹುತ್ವ ಮತ್ತು ವೈವಿಧ್ಯಮಯ ಸಾಮಾಜಿಕ ಸ್ವರೂಪ ದುರ್ಬಲಗೊಳ್ಳುತ್ತಿದೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ. ‘‘ವಿದೇಶದಲ್ಲಿ ವೈವಿಧ್ಯತೆಯನ್ನು ರಕ್ಷಿಸುವ ಬಗ್ಗೆ ಮಾತನಾಡುವಾಗ ಸಹಜವಾಗಿಯೇ ಪ್ರಶ್ನೆ ಮೂಡುತ್ತದೆ. ಇದೇ ತತ್ವವನ್ನು ಭಾರತದಲ್ಲಿ ಏಕೆ ಅನುಸರಿಸಬಾರದು? ನ್ಯೂಯಾರ್ಕ್ನಲ್ಲಿ…
ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ; ಡಿಕೆಶಿ
ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಪ್ರಗತಿ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ಪಡೆದರು. ನವದೆಹಲಿಯ ಕರ್ನಾಟಕ ಭವನದಲ್ಲಿರುವ ನಿವಾಸಿ ಆಯುಕ್ತರಿಂದ ರಕ್ಷಣಾ ಕಾರ್ಯಾಚರಣೆಯ ಕುರಿತು ಸಮಗ್ರ ಮಾಹಿತಿ ಪಡೆದ ಅವರು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 54 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ ಎಂದು ಶಿವಕುಮಾರ್ ಮಾಹಿತಿ ನೀಡಿದ್ದಾರೆ. ‘ಕುಟುಂಬಸ್ಥರು ಆತಂಕಪಡಬೇಡಿ’ ನೇಪಾಳದಲ್ಲಿ ಸಿಲುಕಿರುವವರ ಕುಟುಂಬಸ್ಥರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸರ್ಕಾರ ಸಂತ್ರಸ್ತರ ಕುಟುಂಬಗಳೊಂದಿಗೆ ನಿಂತಿದ್ದು, ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಮುಂದುವರಿಸಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.
‘ಕೆಪಿಎಸ್ಸಿ ಅಕ್ರಮದ ಜಾತಕ ಜಾಲಾಡಿದರೆ ಕುಮಾರಸ್ವಾಮಿ ಕುಂಡಲಿಯೇ ಕಾಣುತ್ತದೆ’: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಕೆಪಿಎಸ್ಸಿ ವಿಚಾರದಲ್ಲಿ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕುಮಾರಸ್ವಾಮಿ ಅವರು ತಾರ್ಕಿಕ ಉತ್ತರ ನೀಡುವ ಬದಲು ಪತ್ರಿಕಾಗೋಷ್ಠಿ ನಡೆಸಿ ಪಲಾಯನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ. 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿರುವುದಾಗಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ, ಅಂದಿನ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ನೇಮಕ ಮಾಡುವಂತೆ ದೇವೇಗೌಡ ಮತ್ತು ಕುಮಾರಸ್ವಾಮಿ ಶಿಫಾರಸು ಪತ್ರ ನೀಡಿದ್ದರು ಎಂದು ಖರ್ಗೆ ಆರೋಪಿಸಿದ್ದಾರೆ. ‘‘ಅಕ್ರಮದ ಆರೋಪಗಳಿದ್ದ ಆಯ್ಕೆಗೆ ಶಿಫಾರಸು ಮಾಡುವ ಹಿಂದೆ ಕುಮಾರಸ್ವಾಮಿ ಅವರ ಹಿತಾಸಕ್ತಿ ಏನಿತ್ತು? ನ್ಯಾಯಾಲಯವೇ ಅಕ್ರಮವನ್ನು ಗುರುತಿಸಿದ್ದರೂ ಕ್ಲೀನ್ಚಿಟ್ ನೀಡಿ ಶಿಫಾರಸು ಮಾಡಿದ್ದೇಕೆ?’’ ಎಂದು ಪ್ರಶ್ನಿಸಿದ್ದಾರೆ.…
‘ಆಗಸ್ಟ್ನಲ್ಲೇ ನಾಲ್ವರು ರೈತರ ಆತ್ಮಹತ್ಯೆ’; ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ರೈತರು ಸಾಲದ ಸಂಕಷ್ಟಕ್ಕೆ ಸಿಲುಕಿದ್ದು, ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಆಗಸ್ಟ್ ತಿಂಗಳೊಂದರಲ್ಲೇ ನಾಲ್ವರು ರೈತರು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುಃಖಕರ ಸಂಗತಿ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಮಳೆ ಕೊರತೆಯಿಂದ ಬೆಳೆ ನಾಶವಾಗಿರುವುದು, ಬ್ಯಾಂಕ್ ಹಾಗೂ ಖಾಸಗಿ ಸಾಲ ತೀರಿಸಲಾಗದೆ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ಕಣ್ಮುಚ್ಚಿ ಕುಳಿತಿದೆ ಎಂದು ಟೀಕಿಸಿದ್ದಾರೆ. ‘ರೈತರಿಗೆ ತಲಾ ₹50 ಸಾವಿರ ಪರಿಹಾರ ನೀಡಿ’ ರಾಜ್ಯ ಸರ್ಕಾರ ಪುನರ್ ರಚನೆಯಾಗಿ ಮೂರು ತಿಂಗಳು ಸಮೀಪಿಸುತ್ತಿದ್ದರೂ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ರೈತರ ಜಮೀನು ವಶಪಡಿಸಿಕೊಳ್ಳುವ ಪ್ರಯತ್ನ ಹಾಗೂ ರಿಯಲ್ ಎಸ್ಟೇಟ್ ಚಟುವಟಿಕೆಗಳಲ್ಲೇ ಮುಖ್ಯಮಂತ್ರಿ…
