‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ಕೈ ಬಿಡದ ಕಾಂಗ್ರೆಸ್‌ ಸರ್ಕಾರ ಸಮಿತಿ ರಚಿಸುವ ಹೊಸ ನಾಟಕ ಮಾಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜನರ ಸಿಂಪತಿ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಎಂದಿಗೂ ಸ್ವಾಧೀನಕ್ಕೆ ಆದೇಶ ಹೊರಡಿಸಿರಲಿಲ್ಲ, ಕಾಂಗ್ರೆಸ್‌ ಕೂಡ ಯೋಜನೆಯನ್ನು ವಿರೋಧ ಮಾಡಿತ್ತು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್‌ ವಿರುದ್ಧ ರೈತರು ಉಗ್ರ ಹೋರಾಟ ಮಾಡುತ್ತಿದ್ದರೂ ಸರ್ಕಾರ ಪೊಲೀಸರನ್ನು ಕಳಿಸಿ ಹಲ್ಲೆ ಮಾಡಿದೆ. ಕೊಲೆ, ಬೆದರಿಕೆ ಎಂಬುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈಗ ಇದಕ್ಕಾಗಿ ಸದನ ಸಮಿತಿ ನೇಮಿಸಿರುವುದು ಹಾಸ್ಯಾಸ್ಪದವಾಗಿದೆ. ರೈತರು ಜಮೀನು ಕೊಡುವುದಿಲ್ಲ ಎಂದಮೇಲೂ ಸದನ ಸಮಿತಿ ಅಗತ್ಯವಿರಲಿಲ್ಲ. ಆದರೆ ಅಧಿವೇಶನ ನಡೆಯಲಿರುವುದರಿಂದ, ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡಲಾಗಿದೆ ಎಂದರು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಈ ಹಿಂದೆ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರೇ ಹೊರತು, ಆದೇಶ…

ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ

ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, “2010ರಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಿ ಈಗಿನ ವೈಫಲ್ಯವನ್ನು ಸಮರ್ಥಿಸಿಕೊಳ್ಳಬೇಡಿ. ನಿಮ್ಮ ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಹೇಳಬೇಡಿ” ಎಂದು ಟೀಕಿಸಿದ್ದಾರೆ. “ನಿಮಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಲು ಸಮಯ ಇದೆ. ಆದರೆ ಜೈಲು ಭದ್ರತೆ ಮತ್ತು ಕಾನೂನು-ಸುವ್ಯವಸ್ಥೆ ಕಾಪಾಡಲು ಸಮಯ ಇಲ್ಲವೇ?” ಎಂದು ವ್ಯಂಗ್ಯವಾಡಿದ್ದಾರೆ. ಗೃಹ ಸಚಿವರ ತವರು ಜಿಲ್ಲೆಯಲ್ಲೇ ಕೈದಿಗಳು ಜೈಲಿನಿಂದ ಪರಾರಿಯಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿರುವ ಅವರು, “ಮಹತ್ವದ ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವರು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಅವರ ಯೋಗ್ಯತೆಯನ್ನು ತೋರಿಸುತ್ತದೆ” ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಮೂರು…

‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದ ಬಿಜೆಪಿ ಟೀಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚಿನ ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಖರ್ಗೆ, “ಕೈದಿಗಳ ಪರಾರಿ ಪ್ರಕರಣವನ್ನು ‘ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ’ ಸಂಭ್ರಮಿಸುತ್ತಾ ನನ್ನನ್ನು ಟೀಕಿಸುತ್ತಿರುವ ಬಿಜೆಪಿ ನಾಯಕರು ಮೊದಲು ತಮ್ಮ ಆಡಳಿತದ ವೈಫಲ್ಯವನ್ನು ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದು ಹೇಳಿದ್ದಾರೆ. 2010ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಿಂದ ಒಂದೇ ಬಾರಿ ಎಂಟು ಕೈದಿಗಳು ಪರಾರಿಯಾಗಿದ್ದರು. ಪರಾರಿಯಾದವರಲ್ಲಿ ಇಬ್ಬರನ್ನು 14 ವರ್ಷಗಳ ಬಳಿಕವೇ ಬಂಧಿಸಲು ಸಾಧ್ಯವಾಯಿತು ಎಂದು ಅವರು ಉಲ್ಲೇಖಿಸಿದ್ದಾರೆ. ಬಿಜೆಪಿ ಆಡಳಿತದಲ್ಲಿ 2010ರಲ್ಲಿ 26, 2011ರಲ್ಲಿ 18, 2012ರಲ್ಲಿ 17, 2020ರಲ್ಲಿ 11, 2021ರಲ್ಲಿ 4 ಹಾಗೂ 2022ರಲ್ಲಿ 10 ಕೈದಿಗಳು ಪರಾರಿಯಾಗಿದ್ದರು…

ಬಿಡದಿ ಟೌನ್‌ಶಿಪ್‌; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಯೋಜನೆಗಾಗಿ ಬಿಡದಿ ಹೋಬಳಿಯ ಮೂರು ಗ್ರಾಮಗಳ ಒಟ್ಟು 2,550 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಆದೇಶಿಸಿದೆ. ಅಧಿಸೂಚನೆಯ ಪ್ರಕಾರ ಕೆಜಿ ಗೊಲ್ಲರಪಾಳ್ಯದಲ್ಲಿ 315 ಎಕರೆ, ಬನ್ನಿಗಿರಿ ಗ್ರಾಮದಲ್ಲಿ 775 ಎಕರೆ 6 ಗುಂಟೆ ಹಾಗೂ ಅರಳಾಳುಸಂದ್ರದಲ್ಲಿ 1,460 ಎಕರೆ 21 ಗುಂಟೆ ಭೂಮಿ ಸ್ವಾಧೀನಕ್ಕೆ ಒಳಪಡಲಿದೆ. ಈ ನಡುವೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಬಿಡದಿ ಟೌನ್‌ಶಿಪ್ ನನ್ನ ಕನಸಿನ ಯೋಜನೆಯಲ್ಲ. ಈ ಯೋಜನೆಗೆ ನಾನು ಪಿತಾಮಹನಾಗಲು ಬಯಸುವುದಿಲ್ಲ. ಯಾರ ಆಸ್ತಿಯನ್ನೂ ಬಲವಂತವಾಗಿ ತೆಗೆದುಕೊಳ್ಳುವುದಿಲ್ಲ. ರೈತರು ಸ್ವಇಚ್ಛೆಯಿಂದ ಭೂಮಿ ನೀಡಿದರೆ ಮಾತ್ರ ಸ್ವಾಧೀನ ಪ್ರಕ್ರಿಯೆ ನಡೆಯಲಿದೆ. ಜಮೀನು ನೀಡುವಂತೆ ಯಾರ ಮೇಲೂ ಒತ್ತಡ ಹೇರಲ್ಲ” ಎಂದು ಸ್ಪಷ್ಟಪಡಿಸಿದರು. ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಈ ಹಿಂದೆ…

‘ಶಾಶ್ವತ ನಿವಾಸ ಪ್ರಮಾಣಪತ್ರ’ ಪ್ರಸ್ತಾವನೆ ಕಾನೂನುಬಾಹಿರ; ಒಕ್ಕೂಟ ವ್ಯವಸ್ಥೆಗೂ ಅಪಾಯಕಾರಿ

ಬೆಂಗಳೂರು: ರಾಜ್ಯ ಸರ್ಕಾರವು ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ನೀಡುವ ಅಧಿಕಾರವನ್ನು ಸ್ವತಃ ಪಡೆದುಕೊಳ್ಳಲು ಮುಂದಾಗಿರುವುದು ಕಾನೂನುಬಾಹಿರ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೂ ಧಕ್ಕೆ ತರುವ ಅಪಾಯಕಾರಿ ನಡೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬಿಜೆಪಿ ನಿಯೋಗದೊಂದಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಈ ಸಂಬಂಧ ಅಧಿಸೂಚನೆ ಸಿದ್ಧಪಡಿಸಿದರೆ ಅದಕ್ಕೆ ಅಂಕಿತ ಹಾಕದಂತೆ ರಾಜ್ಯಪಾಲರನ್ನು ಕೋರಿದ್ದೇವೆ ಎಂದು ಹೇಳಿದರು. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅಶೋಕ್, ಪೌರತ್ವ, ವಿದೇಶಿಯರ ಗುರುತಿಸುವಿಕೆ ಹಾಗೂ ವಲಸೆ ಸಂಬಂಧಿತ ವಿಷಯಗಳು ಸಂವಿಧಾನದ ಪ್ರಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಮುಂದಾಗಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ದೇಶಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ…

ಬಡವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಕ್ರಮ ವ್ಯವಹಾರ; ಸಿಬಿಐ, ಇ.ಡಿ ತನಿಖೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಚಿಕ್ಕಮಗಳೂರು, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಬಡಜನರ ಹೆಸರಲ್ಲಿ ನಕಲಿ ಖಾತೆಗಳನ್ನು ತೆರೆದು ಅಕ್ರಮವಾಗಿ ಹಣ ವರ್ಗಾವಣೆ ಮಾಡಿ ವಂಚಿಸಿರುವ ಪ್ರಕರಣವನ್ನು ಸಿಬಿಐ ಹಾಗೂ ಇ.ಡಿ ತನಿಖೆಗೆ ವಹಿಸಲು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹೇಳಿದ್ದಾರೆ. ಮಾನ್ಯ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಡಜನರ ಆಧಾರ್ ಕಾರ್ಡ್ ಪಡೆದು ಅವರ ಹೆಸರಲ್ಲಿ ಹೊಸ ಸಿಮ್ ಖರೀದಿಸಿ, ಜನರಿಗೆ ಯಾವುದೇ ದಾಖಲೆ ನೀಡದೆ ಬ್ಯಾಂಕ್ ಅಧಿಕಾರಿಗಳ ಜೊತೆ ಶಾಮೀಲಾಗಿ ಅವರ ಹೆಸರಲ್ಲಿ ಕೋಟ್ಯಂತರ ರೂ. ವ್ಯವಹಾರ ಮಾಡಿದ್ದರ ಬಗ್ಗೆ ದೂರುಗಳು ಹುಬ್ಬಳ್ಳಿ, ಶಿವಮೊಗ್ಗದಲ್ಲಿ ದಾಖಲಾಗಿವೆ. ̇ರೂ. 87 ಕೋಟಿ ವಹಿವಾಟು ನಡೆದಿರುವುದು ದೃಢಪಡಿಸಲಾಗಿದೆ ಎಂದರು. ಈ ಪ್ರಕರಣದಲ್ಲಿ ಮೂವರ ಬಂಧನವಾಗಿದೆ. ಚಿಕ್ಕಮಗಳೂರಿನಲ್ಲಿ ಪೌರ ಕಾರ್ಮಿಕರು, ಹಮಾಲರು, ಪೇಂಟರ್‍ಗಳು…

ಶಾಶ್ವತ ನಿವಾಸ ಪ್ರಮಾಣಪತ್ರ; ಸರ್ಕಾರದ ನಿರ್ಧಾರ ಹಿಂಪಡೆಯಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು: ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ (PRC) ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತಕ್ಷಣ ಹಿಂಪಡೆಯುವಂತೆ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಸಿ.ಟಿ. ರವಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ನಿಯೋಗದಲ್ಲಿ ಭಾಗವಹಿಸಿದ್ದರು. ರಾಜ್ಯ ಸರ್ಕಾರದ ಈ ನಿರ್ಧಾರವು ಅಕ್ರಮ ಬಾಂಗ್ಲಾದೇಶೀಯರನ್ನು ಶಾಶ್ವತ ನಿವಾಸಿಗಳನ್ನಾಗಿ ಮಾಡಿ ಮತದಾರರನ್ನಾಗಿಸುವ ಹುನ್ನಾರವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯದಲ್ಲಿ 20ರಿಂದ 30 ಲಕ್ಷ ಅಕ್ರಮ ಬಾಂಗ್ಲಾದೇಶೀಯರಿರುವ ಮಾಹಿತಿ ಇದ್ದು, ಅವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರೇಷನ್ ಕಾರ್ಡ್, ಆರೋಗ್ಯ ಕಾರ್ಡ್, ಮನೆ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅವಕಾಶ ಸಿಗಲಿದೆ ಎಂದು ನಿಯೋಗ ರಾಜ್ಯಪಾಲರ ಗಮನಕ್ಕೆ ತಂದಿದೆ. ಇದರಿಂದ ಕಾಂಗ್ರೆಸ್‌ಗೆ ಮತ…

ಒಂದು ತಿಂಗಳಲ್ಲಿ ರಾಜ್ಯಾದ್ಯಂತ ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆ; ಪ್ರತಿ ಸಂಘಕ್ಕೆ ₹10 ಲಕ್ಷ ನೆರವು

ಬೆಂಗಳೂರು: ರಾಜ್ಯ ಸರ್ಕಾರದ ‘ಭಾರತ್ ಜೋಡೋ ಯುವ ಸಂಘ’ ಯೋಜನೆಯಡಿ ಒಂದು ತಿಂಗಳೊಳಗೆ ರಾಜ್ಯಾದ್ಯಂತ ಸಂಘಗಳನ್ನು ಸ್ಥಾಪಿಸಲು ಸಿದ್ಧತೆ ನಡೆಯುತ್ತಿದೆ. ಪ್ರತಿ ಸಂಘದಲ್ಲಿ 100ರಿಂದ 250 ಸದಸ್ಯರು ಇರಲಿದ್ದು, ಸರ್ಕಾರದಿಂದ ₹10 ಲಕ್ಷ ಆರ್ಥಿಕ ನೆರವು ನೀಡಲಾಗುತ್ತದೆ. ಸಚಿವ ಡಾ. ಜಿ. ಪರಮೇಶ್ವರ್ ಈ ಕುರಿತು ಮಾಹಿತಿ ನೀಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಸ್ಮರಣಾರ್ಥ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಯೋಜನೆಗೆ ಅನುಮೋದನೆ ನೀಡಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಯೋಜನೆ ಜಾರಿಯಾಗಲಿದೆ ಎಂದು ತಿಳಿಸಿದರು.

ರಿಯಲ್ ಎಸ್ಟೇಟ್ ಬಿಟ್ಟು ಜನರ ಸಮಸ್ಯೆ ಕಡೆ ಗಮನ ಹರಿಸಿ; ಸಿಎಂಗೆ ವಿಜಯೇಂದ್ರ ತರಾಟೆ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಸಮಸ್ಯೆಗಳ ಕಡೆ ಗಮನಹರಿಸಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬರ ಪರಿಹಾರಕ್ಕಾಗಿ ಪ್ರಧಾನಿಗೆ ಪತ್ರ ಬರೆಯುವ ಬದಲು ರಾಜ್ಯ ಸರ್ಕಾರ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದ್ದಾರೆ. ಕಲಬುರಗಿಯಲ್ಲಿ ಬರ ಅಧ್ಯಯನಕ್ಕೆ ಸಚಿವರನ್ನು ನೇಮಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದನ್ನು ನೆನಪಿಸಿದ ವಿಜಯೇಂದ್ರ, “ರಾಜ್ಯಕ್ಕೆ ಇನ್ನೂ ಕೃಷಿ ಸಚಿವರೇ ಇಲ್ಲ. ಕಂದಾಯ ಸಚಿವರು ಕ್ಷೇತ್ರ ಬಿಟ್ಟು ಹೊರಬರುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಸಚಿವರು ಬೇರೆ ವಿಷಯಗಳಲ್ಲಿ ನಿರತರಾಗಿದ್ದಾರೆ. ಕೈಗಾರಿಕಾ ಸಚಿವರು ರೋಡ್‌ ಶೋಗಳಲ್ಲಿ ಬ್ಯುಸಿಯಾಗಿದ್ದಾರೆ. ಗೃಹ ಸಚಿವರು ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುತ್ತಿದ್ದಾರೆ. ಸಾರಿಗೆ ಸಚಿವರು ಬಸ್‌ ಪ್ರಯಾಣದಲ್ಲಿದ್ದಾರೆ. ನೀರಾವರಿ ಸಚಿವರಿಗೆ ಇಲಾಖೆಯಲ್ಲೇ ಆಸಕ್ತಿ ಇಲ್ಲ. ಜಿಲ್ಲೆಗಳಲ್ಲಿ ಕೆಡಿಪಿ…

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ್ ನಿರ್ದೋಷಿ ಎಂದು ಕೊನೆಗೂ ಒಪ್ಪಿಕೊಂಡ ಸರ್ಕಾರ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ ವಿಜಯೋತ್ಸವದ ವೇಳೆ 2025ರ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರ ವಿರುದ್ಧದ ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿದೆ. 2025ರ ಸೆಪ್ಟೆಂಬರ್ 8ರಂದು ಬಿ. ದಯಾನಂದ ಅವರು ಲಿಖಿತ ಸಮರ್ಥನೆ ಸಲ್ಲಿಸಿ, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿ ತನಗೆ ಕ್ಲೀನ್‌ಚಿಟ್ ನೀಡುವಂತೆ ಮನವಿ ಮಾಡಿದ್ದರು. ಅವರ ಸಮರ್ಥನೆ ಹಾಗೂ ಆಡಳಿತ ಇಲಾಖೆಯ ಅಭಿಪ್ರಾಯವನ್ನು ಪರಿಶೀಲಿಸಿದ ಸರ್ಕಾರ, 2026ರ ಜುಲೈ 14ರಂದು ಹೊರಡಿಸಿದ ಆದೇಶದಲ್ಲಿ ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ನಿಯಮ 8(4)ರಡಿ ಆರಂಭಿಸಿದ್ದ ಇಲಾಖಾ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. ಕಾಲ್ತುಳಿತ ಪ್ರಕರಣದ ಬಳಿಕ ಆಗಿನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ…