(ವರದಿ: ಮಹದೇವಸ್ವಾಮಿ ಜಿ. ಗೌಡ) ಚಾಮರಾಜನಗರ: ಪುಟಾಣಿ ಮಕ್ಕಳ ಹೆಜ್ಜೆ, ಅಜ್ಜಿಯರ ನಗು ಹಾಗೂ ಬಾಂಧವ್ಯದ ಸಂಭ್ರಮಕ್ಕೆ ಹನೂರಿನ ಕ್ರಿಸ್ತರಾಜ ಶಾಲೆ ಸಾಕ್ಷಿಯಾಯಿತು. ಶಾಲೆಯಲ್ಲಿ ಶನಿವಾರ ಎಲ್ಕೆಜಿ ಮತ್ತು ಯುಕೆಜಿ ಮಕ್ಕಳಿಗಾಗಿ ಆಯೋಜಿಸಿದ್ದ ಗ್ರ್ಯಾಂಡ್ ಮದರ್ಸ್ ಡೇ ಕಾರ್ಯಕ್ರಮ ಅಜ್ಜಿ-ಮೊಮ್ಮಕ್ಕಳ ನಡುವಿನ ಪ್ರೀತಿಯ ಬಂಧವನ್ನು ಅನಾವರಣಗೊಳಿಸಿತು. ಶಾಲೆಯ ವ್ಯವಸ್ಥಾಪಕ ಫಾದರ್ ಸಂಜಯ್ ಕುಮಾರ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳನ್ನು ಕೇವಲ ಅಂಕಗಳ ಯಂತ್ರಗಳನ್ನಾಗಿ ರೂಪಿಸುವುದಲ್ಲ, ಪ್ರಗತಿಪರ ಚಿಂತನೆ ಹಾಗೂ ಸಾಮಾಜಿಕ ಪ್ರಜ್ಞೆ ಹೊಂದಿರುವ ಉತ್ತಮ ಪ್ರಜೆಗಳನ್ನಾಗಿ ಬೆಳೆಸುವುದು ಶಿಕ್ಷಣ ಸಂಸ್ಥೆಯ ಉದ್ದೇಶವಾಗಿದೆ ಎಂದರು. ಮಕ್ಕಳಲ್ಲಿರುವ ಸೃಜನಶೀಲ ಪ್ರತಿಭೆಯನ್ನು ಹೊರತರುವಲ್ಲಿ ಶಿಕ್ಷಕರ ಪರಿಶ್ರಮ ಮಹತ್ವದ್ದಾಗಿದೆ. ಮಕ್ಕಳನ್ನು ಹುರಿದುಂಬಿಸಲು ಅಮೂಲ್ಯ ಸಮಯ ನೀಡಿ ಆಗಮಿಸಿದ ಪೋಷಕರು ಹಾಗೂ ಅಜ್ಜಿಯರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯ ಅತಿಥಿ ಶಿಕ್ಷಣ ಸಂಯೋಜಕ (ಇಸಿಒ) ಮಹೇಶ್ ಮಾತನಾಡಿ,…
Category: ರಾಜ್ಯ
ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ
ಬೆಂಗಳೂರು: ನೆದರ್ಲ್ಯಾಂಡ್ನ ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಲಿಯನಾರ್ಡೋ ಬ್ರಾಂಟ್ ಅವರು ಇಂದು ಕರ್ನಾಟಕ ವಿಧಾನ ಪರಿಷತ್ನ ಸಭಾಪತಿ ಶ್ರೀ ಸಲೀಂ ಅಹ್ಮದ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ನ್ಯಾಯಾಂಗ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಾತ್ಮಕ ಸಂಸ್ಥೆಗಳ ಕಾರ್ಯವೈಖರಿ ಕುರಿತು ಇಬ್ಬರೂ ವಿಚಾರ ವಿನಿಮಯ ನಡೆಸಿದರು. ಇದೇ ವೇಳೆ ಶಾಸಕಾಂಗ ಮತ್ತು ನ್ಯಾಯಾಂಗದ ನಡುವಿನ ಪರಸ್ಪರ ಸಹಕಾರ, ಸಂವಿಧಾನಾತ್ಮಕ ಹೊಣೆಗಾರಿಕೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು.
ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ರಾಜೀನಾಮೆ ಮೂಲಕ ಸರ್ಕಾರ ನುಣುಚಿಕೊಳ್ಳಲು ಯತ್ನ: ಕುಮಾರಸ್ವಾಮಿ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಅಕ್ರಮಗಳ ಆರೋಪದಿಂದ ರಾಜ್ಯ ಸರ್ಕಾರಕ್ಕೆ ಎದುರಾಗಿರುವ ಮುಜುಗರವನ್ನು ತಪ್ಪಿಸಲು ಕರ್ನಾಟಕದ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿತ್ತು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗದಂತೆ ತಡೆಯಲು ತಾವು ರಾಜೀನಾಮೆ ನೀಡಿದ್ದಾಗಿ ನಾಗೇಂದ್ರ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದರು. ‘‘ಯಾವ ಮುಜುಗರದ ಬಗ್ಗೆ ಅವರು ಮಾತನಾಡುತ್ತಿದ್ದಾರೆ? ಅವರನ್ನು ರಾಜೀನಾಮೆ ನೀಡುವಂತೆ ಏಕೆ ಒತ್ತಾಯಿಸಲಾಯಿತು? ₹84 ಕೋಟಿ ಹಗರಣದಿಂದ ತಪ್ಪಿಸಿಕೊಳ್ಳಲು ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಯಿತೇ?’’ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣಕಾಸು ಅಕ್ರಮಗಳಿಂದ ರಾಜ್ಯ ಸರ್ಕಾರ ಮುಜುಗರಕ್ಕೊಳಗಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಬುಡಕಟ್ಟು ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರುಪಯೋಗವಾಗಿ ವ್ಯಕ್ತಿಗಳ ನಡುವೆ ಹಂಚಿಕೆಯಾಗಿದೆ ಎಂಬ ಆರೋಪಗಳಿವೆ…
ಬರ ಪರಿಹಾರಕಾಗಿ ಮುಂದಿನ ವಾರದಲ್ಲಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ; ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯ ಕುರಿತು ಮೌಲ್ಯಮಾಪನ ನಡೆಸಿದ ಬಳಿಕ ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲ ವಾರದೊಳಗೆ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಕೋರಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಮುಂದಿನ 15 ದಿನಗಳವರೆಗೆ ಪರಿಸ್ಥಿತಿಯನ್ನು ಪರಿಶೀಲಿಸಲಾಗುವುದು. ಅಗತ್ಯವಿದ್ದರೆ ಇನ್ನಷ್ಟು ತಾಲ್ಲೂಕುಗಳನ್ನು ಪಟ್ಟಿಗೆ ಸೇರಿಸಲಾಗುವುದು ಎಂದರು. ಬೆಳೆ ನಷ್ಟದ ಅಂದಾಜು ಕಾರ್ಯ ನಡೆಯುತ್ತಿದ್ದು, ಅದರ ಆಧಾರದ ಮೇಲೆ ಕೇಂದ್ರಕ್ಕೆ ಜ್ಞಾಪಕ ಪತ್ರ ಸಿದ್ಧಪಡಿಸಲಾಗುವುದು. ಬಳಿಕ ಕೇಂದ್ರದ ತಂಡಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ನಂತರ ಪರಿಹಾರ ಬಿಡುಗಡೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದು ಹಾಗೂ ವಲಸೆ ತಡೆಯಲು ಉದ್ಯೋಗಾವಕಾಶ ಕಲ್ಪಿಸುವುದು…
ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ
ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಕೈಗೆತ್ತಿಕೊಂಡಿರುವ ಮೋಡ ಬಿತ್ತನೆ ಕಾರ್ಯಕ್ರಮದ ಸುಗಮ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ. ಕಾರ್ಯಕ್ರಮದ ಸಮಗ್ರ ಉಸ್ತುವಾರಿ, ಮೇಲ್ವಿಚಾರಣೆ ಹಾಗೂ ಪರಿಶೀಲನೆಗಾಗಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು ಸಮಿತಿಯ ಅಧ್ಯಕ್ಷರಾಗಿದ್ದು, ಜಲಸಂಪನ್ಮೂಲ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೃಷಿ ಇಲಾಖೆ ಹಾಗೂ ಕೆಎಸ್ಎನ್ಡಿಎಂಸಿ ಅಧಿಕಾರಿಗಳು ಸದಸ್ಯರಾಗಿದ್ದಾರೆ. ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ಮೋಡ ಬಿತ್ತನೆಗೆ ಸಂಬಂಧಿಸಿದ ವೈಜ್ಞಾನಿಕ ಹಾಗೂ ತಾಂತ್ರಿಕ ವಿಷಯಗಳಲ್ಲಿ ಕೆಎಸ್ಎನ್ಡಿಎಂಸಿಗೆ ಮಾರ್ಗದರ್ಶನ ನೀಡಲು ತಾಂತ್ರಿಕ ಸಲಹಾ ಮತ್ತು ಮೌಲ್ಯಮಾಪನ ಸಮಿತಿ ರಚಿಸಲಾಗಿದೆ. ಕೆಎಸ್ಎನ್ಡಿಎಂಸಿ ನಿರ್ದೇಶಕರು ಸಮಿತಿಯ ಅಧ್ಯಕ್ಷರಾಗಿದ್ದು, ಕೃಷಿ ಇಲಾಖೆ, ಭಾರತೀಯ ಹವಾಮಾನ ಇಲಾಖೆ (ಐಎಂಡಿ), ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ…
‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್
ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಿರುವುದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಫಲವೂ ಅಲ್ಲ. ಇದು ದಲಿತ ಸಮುದಾಯದ ನಾಯಕರ ವಿರುದ್ಧ ನಡೆದ ಷಡ್ಯಂತ್ರ-ಕುತಂತ್ರಕ್ಕೆ ಸಿಕ್ಕ ಗೆಲುವು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ಬಿಜೆಪಿ ನಾಯಕರು ಇದನ್ನು ‘ಒಂದು ವಿಕೆಟ್ ಬಿದ್ದಿದೆ’ ಎಂದು ಸಂಭ್ರಮಿಸುತ್ತಿರುವುದು ಸರಿಯಲ್ಲ. ರಾಜಕೀಯವೇನೂ ಐಪಿಎಲ್ ಪಂದ್ಯವಲ್ಲ ಎಂದು ಟೀಕಿಸಿದರು. ‘ವಿಕೆಟ್ ಬಿದ್ದಿದೆ’ ಎನ್ನುವವರು ಮೊದಲು ಬಿಜೆಪಿ ತಂಡದಲ್ಲಿ ಎಷ್ಟು ಮಂದಿ ಚಾರ್ಜ್ಶೀಟ್ ಎದುರಿಸುತ್ತಿದ್ದಾರೆ, ಜೈಲಿಗೆ ಹೋಗಿದ್ದಾರೆ, ತನಿಖೆ ಎದುರಿಸುತ್ತಿದ್ದಾರೆ ಹಾಗೂ ಜಾಮೀನಿನ ಮೇಲೆ ಹೊರಗಿದ್ದಾರೆ ಎಂಬುದನ್ನು ನೋಡಿಕೊಳ್ಳಲಿ ಎಂದು ಹರಿಪ್ರಸಾದ್ ವ್ಯಂಗ್ಯವಾಡಿದರು. ಆರೋಪ ಮಾಡುವುದು ತನಿಖಾ ಸಂಸ್ಥೆಗಳ ಕೆಲಸ, ಅಪರಾಧಿ ಹೌದೋ…
NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬದಲಾಗುತ್ತಿರುವ ಅಪರಾಧ ಮತ್ತು ಭದ್ರತಾ ಸವಾಲುಗಳನ್ನು ಎದುರಿಸಲು ಕರ್ನಾಟಕ ಪೊಲೀಸ್ ಪಡೆಯ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಭದ್ರತಾ ಪಡೆ (NSG) ಸಹಯೋಗದಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ಗಾಗಿ ಆಯೋಜಿಸಿರುವ ‘ಸಮಗ್ರ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಕ್ರಮ’ಕ್ಕೆ ಚಾಲನೆ ನೀಡಲಾಯಿತು ಎಂದು ಅವರು ಹೇಳಿದ್ದಾರೆ. ದೇಶದ ಆಂತರಿಕ ಭದ್ರತೆಗೆ ಸರ್ವಸನ್ನದ್ಧವಾಗಿರುವ ವಿಶೇಷ ಪಡೆಯ ಅಗತ್ಯವನ್ನು ಮನಗಂಡು 1984ರಲ್ಲಿ NSG ಸ್ಥಾಪಿಸಲಾಗಿದ್ದು, 1986ರಲ್ಲಿ ಇದಕ್ಕಾಗಿ ಪ್ರತ್ಯೇಕ ಕಾಯ್ದೆ ರೂಪಿಸಲಾಯಿತು. ವಿಶೇಷ ತರಬೇತಿ ಹಾಗೂ ಸಾಮರ್ಥ್ಯ ಹೊಂದಿರುವ NSG ಪಡೆಯ ಅನುಭವವನ್ನು ಕರ್ನಾಟಕ ಪೊಲೀಸರೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಆಧುನಿಕ ಕಾಲದಲ್ಲಿ ಅಪರಾಧಗಳ…
ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತೂ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ವೋಕ್ಸ್ವ್ಯಾಗನ್ ಹಾಗೂ ಕಿಯಾ ಸೋನೆಟ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಚಿಕ್ಕನಾಯಕನಹಳ್ಳಿ ಕಡೆಯಿಂದ ಮೂವರು ಪ್ರಯಾಣಿಸುತ್ತಿದ್ದ ವೋಕ್ಸ್ವ್ಯಾಗನ್ ಕಾರು ಓವರ್ಟೇಕ್ ಮಾಡಲು ಮುಂದಾದ ವೇಳೆ, ಎದುರಿನಿಂದ ತುರುವೇಕೆರೆ ಕಡೆಯಿಂದ ಐವರು ಪ್ರಯಾಣಿಸುತ್ತಿದ್ದ ಕಿಯಾ ಸೋನೆಟ್ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವೋಕ್ಸ್ವ್ಯಾಗನ್ ಕಾರಿನಲ್ಲಿದ್ದ ಚಿಕ್ಕನಾಯಕನಹಳ್ಳಿ ಮೂಲದ ವಿವೇಕ್ ಹಾಗೂ ಪವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಿಯಾ ಸೋನೆಟ್ ಕಾರಿನಲ್ಲಿದ್ದ ತುರುವೇಕೆರೆ ಮೂಲದ ಚಾಲಕ ದಾವೂದ್ ಹಾಗೂ ಮೂರು ವರ್ಷದ ಮಗು ಕೂಡ ಮೃತಪಟ್ಟಿದೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ…
ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿದ್ದ ಹೋರಾಟದ ನಡುವೆಯೇ ಈ ಬೆಳವಣಿಗೆ ನಡೆದಿದೆ. ದೆಹಲಿಯಿಂದ ಬೆಂಗಳೂರಿಗೆ ಮರಳಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ನಾಗೇಂದ್ರ, ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಭಾವುಕರಾಗಿ ಕಣ್ಣೀರಿಟ್ಟರು. ಇದೇ ವೇಳೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿ, ಬಿಜೆಪಿಗೆ ಜನತಾ ನ್ಯಾಯಾಲಯಕ್ಕೆ ಬರುವಂತೆ ಸವಾಲು ಹಾಕಿದರು. ತಮ್ಮ ವಿರುದ್ಧ ‘ಮನುವಾದಿಗಳ ಕುತಂತ್ರ’ದಿಂದ ಪ್ರಕರಣ ದಾಖಲಿಸಿ ಮೂರು ತಿಂಗಳು ಜೈಲಿಗೆ ಕಳುಹಿಸಲಾಗಿತ್ತು ಎಂದು ಆರೋಪಿಸಿದ ಅವರು, ತಾನು ದಲಿತ ಎಂಬ ಕಾರಣಕ್ಕೆ ಗುರಿಯಾಗಿಸಲಾಗಿದೆ ಎಂದು ದೂರಿದರು. “ಮನುವಾದಿಗಳ ಕುತಂತ್ರಕ್ಕೆ ಬಗ್ಗುವುದಿಲ್ಲ. ಸಂವಿಧಾನಕ್ಕೆ…
ಕುಮಾರಸ್ವಾಮಿ ಆರೋಪ ಅವಕಾಶವಾದದ ರಾಜಕಾರಣ: ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಕ್ರೋಶ
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಡಿರುವ ಆರೋಪಗಳು ವೈಯಕ್ತಿಕ ದ್ವೇಷದ ರಾಜಕಾರಣದ ಮುಂದುವರಿದ ಭಾಗ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೇಂದ್ರ ಸಚಿವರಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಕುಮಾರಸ್ವಾಮಿ ಅವರು ಪದೇಪದೇ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಆರೋಪ ಮಾಡುವ ಮೂಲಕ ತಮ್ಮ ನಿಲುವುಗಳನ್ನು ಬಹಿರಂಗಪಡಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ (KPSC) 1951ರಿಂದ ಕಾರ್ಯನಿರ್ವಹಿಸುತ್ತಿದ್ದು, ನೇಮಕಾತಿ ಹಾಗೂ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಹಲವು ಆರೋಪಗಳು ಮತ್ತು ತನಿಖೆಗಳು ನಡೆದಿವೆ. ಪ್ರಸ್ತುತ ಕೇಳಿಬಂದಿರುವ ಆರೋಪಗಳೂ ಇದೇ ಹಿನ್ನೆಲೆಯಲ್ಲಿ ಪರಿಶೀಲನೆಗೆ ಒಳಪಡಬೇಕು ಎಂದು ರಮೇಶ್ ಬಾಬು ಹೇಳಿದ್ದಾರೆ. ಕೆಪಿಎಸ್ಸಿ ಹಿಂದಿನ ಅಧ್ಯಕ್ಷರಾದ ಗೋಮಾಳ್ ಭೀಮಪ್ಪ ಹಾಗೂ ಎಚ್.ಎನ್. ಕೃಷ್ಣ…
