ಮಲೆನಾಡಲ್ಲಿ ಅಭಿವೃದ್ಧಿ ಪರ್ವ; ಹಲವು ಯೋಜನೆಗಳಿಗೆ ಮುನ್ನುಡಿ

ಚಿಕ್ಕಮಗಳೂರು: ಮಲೆನಾಡು ಚಿಕ್ಕಮಗಳೂರಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಕ್ಕಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ವಿವಿಧ ಕಾಮಗಾರಿಗಳಿಗೆ ಚಾಲನೆ ದೊರೆತಿದೆ.

ಕೆಲವು ದಿನಗಳಿಂದ ತವರು ಜಿಲ್ಲೆಯಲ್ಲೇ ಬೀಡು ಬಿಟ್ಟಿರುವ ಜಿಲ್ಲಾ ಉಸ್ತುವಾರಿ ಮಂತ್ರಿಯೂ ಆದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಮಂಗಳವಾರ ಕಳವಾಸೆ ಗ್ರಾಮ ಉಕ್ಕುಂದ ಗ್ರಾಮ ಪಂಚಾಯಿತಿ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಚಿಕ್ಕಮಗಳೂರಿನ ಇಂದಾವರದಲ್ಲಿ ಸೋಲಾರ್ ಲೈಟ್ ವಿತರಣೆ ಮಾಡಿದರು.

 

ಈ ನಡುವೆ ನಿರಂತರ ಮಳೆಯಿಂದಾಗಿ ಹಿರೇಕೊಳಲೆ ಕೆರೆ ಭಾರಿಯಾಗಿದ್ದು, ಜಲ ಶ್ರೀಮಂತಿಕೆಯಿಂದ ಕಂಗೊಳಿಸುತ್ತಿರುವ ಈ ಕೆರೆಗೆ ಸಿ.ಟಿ.ರವಿ ದಂಪತಿ ಬಾಗಿನ ಸಮರ್ಪಿಸಿದರು. ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ನಗರಸಭಾ ಆಯುಕ್ತ ಬಸವರಾಜ್ ಸೇರಿದಂತೆ ನೇಕಾ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Related posts