ಕುಡಿಯುವ ನೀರಿನ ಘಟಕದ ಅವ್ಯವಸ್ಥೆ; ಅಧಿಕಾರಿಗಳ ಬೆವರಿಳಿಸಿದ ಸಚಿವ

ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸುತ್ತಮುತ್ತಲ ಅಸ್ವಚ್ಛತೆ ಕಂಡು ಕೃಷಿ ಸಚಿವ ಬಿ.ಸಿ.ಪಾಟೀಲ್ ಕೆಂಡಾಮಂಡಲರಾದ ಪ್ರಸಂಗ ನಡೆದಿದೆ.

ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ 2019 20 ನೇ ಸಾಲಿನ 5045 ಯೋಜನೆಯಡಿ ಚನ್ನಳ್ಳಿ ಗ್ರಾಮ ದಿಂದ ದೂದಿಹಳ್ಳಿ ಗ್ರಾಮದ ವರೆಗೆ ರಸ್ತೆ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಚನ್ನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಪರಿಶೀಲಿಸಿದರು. ಘಟಕದಲ್ಲಿ ಸರಿಯಾಗಿ ಕುಡಿಯುವ ನೀರು ಬರದಿರುವ ಬಗ್ಗೆ ಬೇಸರಗೊಂಡ ಅವರು, ಸುತ್ತಮುತ್ತ ಅಸ್ವಚ್ಛತೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜನರಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಸರ್ಕಾರ ಕಲ್ಪಿಸಿದೆ. ಕುಡಿಯುವ ನೀರಿನ ಘಟಕವಾಗಲೀ, ಇತರೆ ಏನೇಆಗಲೀ ತೊಂದರೆಕಂಡು ಬಂದಲ್ಲಿ ಅಥವಾ ಸಾರ್ವಜನಿಕರಿಂದ ದೂರು ಕೇಳಿಬಂದಲ್ಲಿ ಅಧಿಕಾರಿಗಳು ಅದರತ್ತ ಗಮನಹರಿಸಿ ಸರಿಪಡಿಸುವಲ್ಲಿ ಮುಂದಾಗಬೇಕು ಎಂದರು.

ಇದನ್ನೂ ಓದಿ.. ಧ್ವನಿವರ್ಧಕದಲ್ಲಿ ಅಜಾನ್ ಬೇಡ; ಮಸೀದಿಗಳಿಗೆ ಕೋರ್ಟ್ ಸೂಚನೆ 

ಚನ್ನಹಳ್ಳಿ ಗ್ರಾಮ ಹಿರೇಕೆರೂರಿನಿಂದ 2 ಕಿ.ಮೀ.ದೂರವಿದೆ ಎಂದು ಇಓ ಶ್ರೀನಿವಾಸ ಹಾಗೂ ಪಿಡಿಓ ಸಬೂಬು ಹೇಳಿದಾಗ, ಇರುವ 2 ಕಿ.ಮೀ.ದೂರದಲ್ಲಿ ಅಧಿಕಾರಿಗಳು ಓಡಾಡುವುದಿಲ್ಲ ಎಂದರೇನು ಅರ್ಥ? ಸ್ವಚ್ಛತೆಯೂ ಇಲ್ಲ ಎಂದು ಸಚಿವರು ಕಿಡಿ ಕಾರಿದರು. ಆದಷ್ಟು ಬೇಗ ಸರಿಪಡಿಸದೇ ಹೋದಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ಎಚ್ಚರಿಸಿದರು.
ಅಧಿಕಾರಿಗಳನ್ನು ಸಚಿವರು ತರಾಟೆಗೆ ಅಲ್ಲಿದ್ದ ಉಗ್ರಾಣ ನಿಗಮದ ಅಧ್ಯಕ್ಷರಾದ ಯು.ಬಿ.ಬಣಕಾರ್, ಬಿಜೆಪಿಯ ಮುಖಂಡರು ಹಾಗೂ ಗ್ರಾಮ ಪಂಚಾಯತಿಯ ಸದಸ್ಯರು ಮೂಕವಿಸ್ಮಿತರಾಗಿದ್ದರು.

ಇದನ್ನೂ ಓದಿ.. ಮುತ್ತಪ್ಪ ರೈ ತಲೆ ತಗ್ಗಿಸಿದ್ದು ಈ ಖಡಕ್ ಅಧಿಕಾರಿಯ ಮಾತಿಗೆ ಮಾತ್ರ 

 

Related posts