ಕಾರ್ಕಳ ಸಮೀಪ ಮುಂಡ್ಕೂರು ಬಳಿ ಭೀಕರ ಅಗ್ನಿ ದುರಂತ; ಕಾರ್ಖಾನೆ ಭಸ್ಮ

ಉಡುಪಿ : ಕಾರ್ಕಳ ಸಮೀಪದ ಮುಂಡ್ಕೂರು ಬಳಿ ಭೀಕರ ಅಗ್ನಿ ದುರಂತ ಸಂಭವಿಸಿ ಕಟ್ಟಡವೊಂದು ಧಗಧಗಿಸಿ ಹೊತ್ತಿ ಉರಿದಿದೆ. ಆಭರಣ ಪೆಟ್ಟಿಗೆ ತಯಾರಿಕಾ ಘಟಕದಲ್ಲಿ ಈ ಅಗ್ನಿ ದುರಂತ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುತ್ತು ಕರಕಲಾಗಿವೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೇ ಈ ಘಟಕದಲ್ಲಿ ಸಂಗ್ರಹವಿದ್ದ ಸಿದ್ಧ ವಸ್ತುಗಳು, ಕಚ್ಚಾ ವಸ್ತುಗಳು ಹಾಗೂ ಕಂಪ್ಯೂಟರ್ ಗಳು ಸುಟ್ಟು ಕರಕಲಾಗಿವೆ.

ಸುಮಾರು 15 ಲಕ್ಷ ರೂಪಾಯಿ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ. ಸುಧೀರ್ ಶೆಣೈ ಎಂಬವರಿಗೆ ಸೇರಿದ ಸಂಸ್ಥೆ ಇದಾಗಿದೆ.

Related posts