ಸಿದ್ದರಾಮಯ್ಯನವರು ಹುಸಿ ಸ್ವಾಭಿಮಾನದ ಕಾಗೆ ಬಂಗಾರ; ಸಾ.ರ.ಮಹೇಶ್ ಟೀಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರದ ಆಸೆಗಾಗಿ ಪಕ್ಷಾಂತರ ಮಾಡಿ ಸಮಾಜವಾದದ ಸೋಗನ್ನು ಕಳಚಿಕೊಂಡವರು ಎಂದು ಶಾಸಕ ಸಾ.ರ.ಮಹೇಶ್ ಟೀಕಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರು ಹುಸಿ ಸ್ವಾಭಿಮಾನದ ಕಾಗೆ ಬಂಗಾರ. ಸ್ವಾರ್ಥ ರಾಜಕಾರಣಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸನ್ಯಾಸಿ ಆದವರಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯೂ ಇಲ್ಲ ಎಂದಿದ್ದಾರೆ.

ತಾವು ಬೆಳೆದು ಬಂದ ಪಕ್ಷಕ್ಕೆ ದ್ರೋಹ ಬಗೆದ, ಹತ್ತಿದ ಏಣಿಯನ್ನು ಒದೆಯುವ ಜಾಯಮಾನದ ಸಿದ್ದರಾಮಯ್ಯ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ.2/2

Related posts