ಹುಣಸೋಡು ಬ್ಲಾಸ್ಟ್ ಕೇಸ್; ಹಲವರನ್ನು ವಶಕ್ಕೆ ಪಡೆದ ಪೊಲೀಸರು

ಶಿವಮೊಗ್ಗ: ಮಲೆನಾಡಿನ ಹುಣಸೋಡು ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭೀಕರ ಸ್ಫೋಟದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆಯೇ ಕಾರ್ಯಾಚರಣೆ ಕೈಗೊಂಡ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಕೈಗೊಂಡಿದ್ದಾರೆ.

ಕಲ್ಲು ಗಣಿಗಾರಿಕೆಗೆ ನಂಟು ಹೊಂದಿದ್ದಾರೆನ್ನಲಾದ ಗುತ್ತಿಗೆದಾರ ಸುಧಾಕರ್ ಎಂಬ ವ್ಯಕ್ಕಿ ಹಾಗೂ ಸ್ಥಳೀಯ ರಾಜಕೀಯ ಮುಖಂಡ ನರಸಿಂಹ ಎಂಬವರನ್ನೂ ಇಂದು ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ನಡುವೆ, ಈ ಪ್ರದೇಶದಲ್ಲಿ ನಡೆಯುತ್ತಿದ್ದುದು ಅಕ್ರಮ ಗಣಿಗಾರಿಕೆ ಎಂಬ ಆರೋಪ ಕೇಳಿಬರುತ್ತಿದೆ. ಅಷ್ಟೇ ಅಲ್ಲ, ಅಷ್ಟೋಂದು ಪ್ರಮಾಣದಲ್ಲಿ ಸ್ಪೋಟಕ ತರಿಸಲು ಹಾಗೂ ಸಂಗ್ರಹಣೆಗೆ ಅನುಮಾತಿ ನೀಡಲಾಗಿತ್ತೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts