ಸರ್ಕಾರದಿಂದ ಕನ್ನಡ ಭಾಷೆಗೆ ಅಪಮಾನ; ಹೆಚ್ಡಿಕೆ ಆರೋಪ

ಬೆಂಗಳೂರು: ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬೊಟ್ಟು ಮಾಡಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದಿದ್ದಾರೆ.

ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಸರ್ಕಾರದ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ ಎಂದವರು ಹೇಳಿದ್ದಾರೆ.

Related posts