ಪಹಲ್ಗಾಮ್ ದಾಳಿ ಹಿನ್ನೆಲೆ: ಸಂಸತ್ ವಿಶೇಷ ಅಧಿವೇಶನಕ್ಕೆ ಚಿಂತನೆ
ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಸಂಸತ್ನ ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಯೋತ್ಪಾದನೆ ವಿರುದ್ಧ ಪರಿಣಾಮಕಾರ ಸಮರ ನಡೆಸುವ ಅನಿವಾರ್ಯತೆ ಇದ್ದು, ಈ ಸಂಬಂಧ ಸರ್ವಪಕ್ಷ ಸಭೆ ಕರೆದಿದ್ದ ಕೇಂದ್ರ ಸರ್ಕಾರ ಇದೀಗ ಸಂಸತ್ ವಿಶೇಷ ಅಧಿವೇಶನ ಕರೆದು ಮಹತ್ವದ ಕ್ರಮಗಳನ್ನು ಕೈಗೊಳ್ಳಲು ಸಿದ್ದತೆ ನಡೆಸುತ್ತಿದೆ ಎನ್ನಲಾಗಿದೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ಸಾರುವ...