ಪಾಕಿಸ್ತಾನ ವಿರುದ್ಧ ಭಾರತದಿಂದ ರಾಜತಾಂತ್ರಿಕ ಸಮರ ಘೋಷಣೆ
ನವದೆಹಲಿ: ಜಮ್ಮುಕಾಶ್ಮೀರದ ಪಹಲ್ಗಾಮ್ ಬಳಿ ಮಂಗಳವಾರ ಉಗ್ರರು ನಡೆಸಿದ ದಾಳಿ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನ ವಿರುದ್ಧ ರಾಜತಾಂತ್ರಿಕ ಯುದ್ಧ ಘೋಷಿಸಿದೆ. ಪಹಲ್ಗಮ್ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಗೊತ್ತಾಗುತ್ತಿದ್ದಂತೆಯೇ ಮೋದಿ ಸರ್ಕಾರ ಪ್ರಮುಖ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ಸಂಬಂಧ ಪ್ರಧಾನಿ ಉಪಸ್ಥಿತಿಯಲ್ಲಿ ಬುಧವಾರ ಭದ್ರತೆ ಕುರಿತ ಸಂಪುಟ ಉಪಸಮಿತಿ ಸಭೆ ನಡೆಯಿತು. ಪಾಕ್ ಜೊತೆಗಿನ ರಾಜತಾಂತ್ರಿಕ ಸಂಬಂಧ ಮೊಟಕುಗೊಳಿಸುವ ತೀರ್ಮಾನ ಕೈಗೊಳ್ಳಲಾಯಿತು. ಪ್ರಮುಖ ಘೋಷಣೆಗಳು:...