ವಂದೇ ಮಾತರಂಗೆ ಅಗೌರವ: ಕಾಂಗ್ರೆಸ್ ಕ್ಷಮೆಯಾಚಿಸಲಿ ಎಂದ ಅಮಿತ್ ಶಾ
ಚಿತ್ತೋರ್ಗಢ: ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಘಟನೆಗಾಗಿ ಕಾಂಗ್ರೆಸ್ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜಸ್ಥಾನದ ಚಿತ್ತೋರ್ಗಢದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವಂದೇ ಮಾತರಂ’ ಗಾಯನವನ್ನು ಮಧ್ಯದಲ್ಲೇ ನಿಲ್ಲಿಸಿರುವುದು ದೇಶಕ್ಕೆ ಮಾಡಿದ ಅವಮಾನ ಎಂದು ಟೀಕಿಸಿದರು. ಈ ಕೃತ್ಯವನ್ನು ದೇಶದ ಜನರು...