ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರೂ ಆಗಿದ್ದ ಸೂರಜ್‌ ಹೆಗ್ಡೆ ವಿಧಿವಶರಾಗಿದ್ದಾರೆ.

ಎಐಸಿಸಿ ಪದಾಧಿಕಾರಿಯಾಗಿ ಮತ್ತು ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಸೂರಜ್ ಹೆಗ್ಡೆ, ಎಐಸಿಸಿ ಪದಾಧಿಕಾರಿಯಾಗಿ ಮತ್ತು ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಕೆಪಿಸಿಸಿ ಉಪಾಧ್ಯಕ್ಷ ಮತ್ತು ರಾಜ್ಯ ಖಾತರಿ ಸಮಿತಿಯ ಉಪಾಧ್ಯಕ್ಷರಾಗಿಯೂ ಸೂರಜ್ ಹೆಗ್ಡೆ ಕೆಲಸ ಮಾಡಿದ್ದಾರೆ.

ಸೂರಜ್ ಹೆಗ್ಡೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಘಟನಾ ಚಾತುರ್ಯ ಮತ್ತು ಸಾರ್ವಜನಿಕ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಅವರ ಕೊಡುಗೆ ಅಪ್ರತಿಮವಾಗಿದೆ. ಇಂದು, ಪಕ್ಷದ ಕಾರ್ಯಕರ್ತರೊಂದಿಗೆ ಯಾವಾಗಲೂ ಅತ್ಯುತ್ತಮ ಬಾಂಧವ್ಯವನ್ನು ಕಾಯ್ದುಕೊಂಡಿದ್ದ ಸಕ್ರಿಯ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ ಎಂದಿದ್ದಾರೆ.

Related posts