ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಭಿವೃದ್ಧಿಯ ಶಕೆ; ಸಚಿವ ರಾಮಲಿಂಗಾ ರೆಡ್ಡಿಗೆ ಸೆಲ್ಯೂಟ್ ಎಂದ ಜನ

ಕೊಪ್ಪಳ: ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮ ವ್ಯಾಪ್ತಿಯಲ್ಲಿ ಹೊಸ ಅಭಿವೃದ್ಧಿಯ ಶಕೆ ಆರಂಭವಾಗಿದೆ. ಸಾರಿಗೆ ನಿಗಮಗಳಲ್ಲಿ ಒಂದಾದ KKRTC ವ್ಯಾಪ್ತಿಯಲ್ಲಿ ಹಲವು ಅಭುದ್ದಿ ಕೆಲಸಗಳಿಗೆ ಸಾರಿಗೆ ಸಚಿವರು ಮುನ್ನುಡಿ ಬರೆದಿದ್ದಾರೆ. ಯೋಜನೆಗಳ ತ್ವರಿತ ಹಾಗೂ ಪರಿಣಾಮಕಾರಿ ಜಾರಿಗಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಕ್ರಮದ ಬಗ್ಗೆ ಕಲ್ಯಾಣ ಕರ್ನಾಟಕ ಭಾಗದ ಜನರು ಅಭಿನಂಧಿಸಿದ ಸನ್ನಿವೇಶ ಗಮನಸೆಳೆಯಿತು.

ಇದಕ್ಕೆ ಸಾಕ್ಷಿಯಾದದ್ದು, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿನ ನೂತನ ಬಸ್ ನಿಲ್ದಾಣಗಳ ಉದ್ಘಾಟನಾ ಸಮಾರಂಭ. ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ನೂತನ ಬಸ್ ನಿಲ್ದಾಣ, ಸಿಬ್ಬಂದಿ ವಸತಿ‌ಗೃಹ, ಘಟಕಗಳಿಗೆ ಶಂಕು ಸ್ಥಾಪನೆ ಮತ್ತು ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಾರಿಗೆ ನಿಗಮಗಳ ಸಿಬ್ಬಂದಿ ಸಮೂಹ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. ತಾವು ಸಚಿವರಾದ ನಂತರ ಸಾರಿಗೆ ನಿಗಮಗಳಲ್ಲಿ ಅಭೂತಪೂರ್ವ ಅಭಿವೃದ್ಧಿಯಾಗಿದೆ ಎಂದರು.

ಹೊಸ ಯೋಜನೆಗಳಿಗೆ ಮುನ್ನುಡಿ..

  • ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಬೇವೂರಿನಲ್ಲಿ 1 ಎಕರೆ ವಿಸ್ತೀರ್ಣದಲ್ಲಿ, ರೂ.450 ಲಕ್ಷಗಳ ವೆಚ್ಚದಲ್ಲಿ ಬಸ್ ನಿಲ್ದಾಣದ ಶಂಕು ಸ್ಥಾಪನೆ ಹಾಗೂ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ 1 ಎಕರೆ ವಿಸ್ತೀರ್ಣದಲ್ಲಿ ರೂ.300 ಲಕ್ಷಗಳ ವೆಚ್ಚದಲ್ಲಿ ಬಸ್ ನಿಲ್ದಾಣದ ಶಂಕು ಸ್ಥಾಪನೆ.

  • ವಿಜಯಪುರ ಜಿಲ್ಲೆಯ ನಾಗಠಾಣದಲ್ಲಿ 10 ಗುಂಟೆ ವಿಸ್ತೀರ್ಣದಲ್ಲಿ ರೂ.150 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ದೇವರ ಹಿಪ್ಪರಗಿಯಲ್ಲಿ 1.16 ಎಕರೆ ಪ್ರದೇಶದಲ್ಲಿ ಅಂದಾಜು ರೂ.400 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣದ ಉದ್ಘಾಟನೆ

  • ಸಿಂದಗಿ ಘಟಕದ ಪಕ್ಕದಲ್ಲಿ ಸಿಬ್ಬಂದಿಗಳಿಗಾಗಿ 3.8 ಎಕರೆ ಪ್ರದೇಶದಲ್ಲಿ ಅಂದಾಜು ರೂ.250 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾದ ನೂತನ ವಸತಿ ಗೃಹಗಳ ಉದ್ಘಾಟನೆ.

  • ಸಿಂದಗಿ ಬಸ್ ನಿಲ್ದಾಣಕ್ಕೆ ಪೂಜ್ಯ ಶ್ರೀ ಚನ್ನವೀರ ಸ್ವಾಮಿಜಿ ಬಸ್ ನಿಲ್ದಾಣ ಎಂದು ನಾಮಕರಣ.

  • ರಾಯಚೂರು ಜಿಲ್ಲೆಯ ಸಿರವಾರದಲ್ಲಿ 1 ಎಕರೆ ಪ್ರದೇಶದಲ್ಲಿ ಅಂದಾಜು ರೂ.250 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಬಸ್ ನಿಲ್ದಾಣದ ಉದ್ಘಾಟನೆ

  • ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನ ಮಾದ್ವಾರದಲ್ಲಿ 1.03 ಗುಂಟೆ ವಿಸ್ತೀರ್ಣದಲ್ಲಿ ರೂ.50 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಬಸ್ ನಿಲ್ದಾಣದ ಉದ್ಘಾಟನೆ.


ನಾರೀ ‘ಶಕ್ತಿ’ಯ ಸನ್ಮಾನ..!

ಇದೇ ಸಂದರ್ಭದಲ್ಲಿ ಇಂಡಿ ತಾಲೂಕಿನ ಬಬಲಾದ ಗ್ರಾಮದ ಒಡಲ ಧನಿ ಸ್ವಹಸಹಾಯ ಸಂಘದ ಭುವನೇಶ್ವರಿ ಕಾಂಬಳೆ ಮಾರ್ಗದರ್ಶನದಲ್ಲಿ ಮಹಿಳಾ ಸ್ವಸಹಾಯ ಸಂಘವು ಸಾವಯವ ಶೇಂಗಾ ಹೋಳಿಗೆ, ರೊಟ್ಟಿ ಇತ್ಯಾದಿ ಗ್ರಾಮೀಣ ಆಹಾರ ಪದಾರ್ಥಗಳು ಮಾರಾಟ ಮಾಡುವ ಯೋಜನೆಗೆ ಸ್ಥಳೀಯವಾಗಿ ಹಿನ್ನಡೆಯಾಗಿದ್ದ ಸಮಯದಲ್ಲಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಗಿ ಕಣಜ, ಸಾವಯವ ಸಂತೆ ಇತ್ಯಾದಿ ಗುಂಪುಗಳಲ್ಲಿ ತಮ್ಮ ಸಾವಯವ ಶೇಂಗಾ ಹೋಳಿಗೆ ಇತ್ಯಾದಿಗಳನ್ನು ಮಾರಾಟ ಮಾಡಲು ಪ್ರಯತ್ನಿಸಿ, ಇದರಿಂದ ಬೆಂಗಳೂರಿನಲ್ಲಿ ಅತಿಹೆಚ್ಚಿನ ಬೇಡಿಕೆ ಬಂದು ಲಕ್ಷ ಲಕ್ಷ ರೂಪಾಯಿಗಳ ಆದಾಯಗಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಮಾರಂಭಕ್ಕೆ ಆಗಮಿಸಿದ ಸಾರಿಗೆ ಸಚಿವರಿಗೆ ಒಡಲ ಧ್ವನಿ ಸಂಘದ ಮಹಿಳೆಯರು ಸನ್ಮಾನ ಮಾಡಿ ಶೇಂಗಾ ಹೋಳಿಗಳನ್ನು ನೀಡಿ ಗೌರವಿಸಿದರು. ‘ಶಕ್ತಿ’ ಯೋಜನೆಯಿಂದ ಮಹಿಳೆಯರಿಗೆ ಆಗುತ್ತಿರುವ ಉಪಯೋಗದ ಕುರಿತು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ವಲಸೆ ಹೋಗದೆ ಉದ್ಯೋಗ ಮಾಡುತ್ತಿರುವ ಕುರಿತ ಮಾಹಿತಿ ಹಂಚಿಕೊಂಡರು. ಮಹಿಳೆಯರ ಸನ್ಮಾನವನ್ನು ಸ್ವೀಕರಿಸಿದ ಸಚಿವರು ಸರ್ಕಾರವು ಜಾರಿಗೆ ತಂದ ಶಕ್ತಿ ಯೋಜನೆಯ ಉಪಯೋಗ ಪಡೆಯುತ್ತಿರುವ ಈ ಮಹಿಳೆಯರ ಕಾರ್ಯವನ್ನು ಪ್ರಶಂಶಿಸಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸಂಸದರಾದ ರಾಜಶೇಖರ ಬಸವರಾಜ ಹಿಟ್ನಾಳ್, ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ವಿಠ್ಠಲ ಕಟಕದೊಂಡ, ಭೀಮನಗೌಡ ಪಾಟೀಲ, ಅಶೋಕ ಮನಗೂಳಿ,ಜಿ ಹಂಪಯ್ಯ ನಾಯಕ, ಶರಣಗೌಡ ಕಂದಕೂರ, KKRTC ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಗಣ್ಯರನೇಕರು ಉಪಸ್ಥಿತರಿದ್ದರು.

Related posts