ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ: ಅಶೋಕ್

ಬೆಂಗಳೂರು, ಕಾಂಗ್ರೆಸ್‌ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು. ಉಗ್ರರು ಹಿಂದೂ ಎಂದು ಹೇಳಿಯೇ ಹುಡುಕಿ ಕೊಂದಿದ್ದಾರೆ. ಬೇಹುಗಾರಿಕೆ ಸರಿಯಲ್ಲ, ಯೋಧರು ಸರಿಯಲ್ಲ ಎಂದು ಟೀಕೆ ಮಾಡುವುದು ಸರಿಯಿಲ್ಲ ಎಂದರು.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟವಾದಾಗ ಯಾರು ವಿಫಲರಾಗಿದ್ದರು? ಕುಕ್ಕರ್‌ ಬಾಂಬ್‌ ಸ್ಪೋಟಗೊಂಡಾಗ ಯಾರು ವಿಫಲರಾಗಿದ್ದರು? ಸಚಿವರ ವಿರುದ್ಧ ಹನಿಟ್ರ್ಯಾಪ್‌ ನಡೆಯುತ್ತಿರುವಾಗ ಯಾರು ವಿಫಲರಾಗಿದ್ದಾರೆ? ಇಂತಹ ಕಾಂಗ್ರೆಸ್‌ ಪಕ್ಷ ದೇಶದ ಯೋಧರ ಬಗ್ಗೆ ಮಾತಾಡುವುದು ಬೇಡ ಎಂದರು.

ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ. ಅವರಿಗೆ ನೆರವು ಕೊಡುವುದು, ಬೇಲ್‌ ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಕೂಡ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

Related posts