ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

ಬೆಂಗಳೂರು: ‘ಬಿ ಖಾತಾ’ ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ ಎಂದವರು ತಿಳಿಸಿದ್ದಾರೆ.

Related posts