ಉನ್ನತ ಶಿಕ್ಷಣ ಇಲಾಖೆಯಲ್ಲಿ ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಿದ ನಂತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಕಾರ್ಯಕ್ರಮಗಳ ಕ್ಯಾಲೆಂಡರ್ ರೂಪಿಸುವ ಚಿಂತನೆ ಇದೆ. ಇದರಿಂದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಬೇರೆ ಬೇರೆ ಅವಧಿಯ ವ್ಯತ್ಯಾಸಗಳಿಗೆ ಕಡಿವಾಣ ಬೀಳಬಹುದು. ಹಾಗಾಗಿ ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ಪ್ರಯತ್ನ ನಡೆಸುವಂತೆಯೂ ಅಧಿಕಾರಿಗಳಿಗೆ ಎಂದು ಸಿಎಂ ತಿಳಿಸಿದರು.

Related posts