ಕಣಿವೆ ರಾಜ್ಯದಲ್ಲಿ ಪಾಕ್ ಕಿತಾಪತಿ; ಭಾರತೀಯ ಯೋಧರಿಂದ ಗುಂಡಿನ ಪ್ರತ್ಯುತ್ತರ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಪಾಕ್ ಕಿತಾಪತಿ ಮತ್ತೆ ಮುಂದುವರಿದಿದೆ. ಜಮ್ಮುವಿನ ಅರ್ನಿಯಾ ಮತ್ತು ಆರ್​.ಎಸ್.ಪುರ ಸೆಕ್ಟರ್​ಗಳ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್​ಎಫ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.

ಸುಮಾರು 5 ಬಿಎಸ್‌ಎಫ್ ಫೋಸ್ಟ್‌ಗಳ ಮೇಲೆ ದಾಳಿ ನಡೆದಿದ್ದು ಇಬ್ಬರು ಭಾರತೀಯ ಯೋಧರು ಹಾಗೂ ಮೂವರು ನಾಗರೀಕರು ಗಾಯಗೊಂಡಿದ್ದಾರೆ. .

ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಪಾಕಿಸ್ತಾನ ಪಡೆಗಳು ಗುಂಡಿನ ದಾಳಿ ಆರಂಭಿಸಿತ್ತು. ಈ ಅಪ್ರಚೋದಿತ ದಾಳಿಗೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ಉತ್ತರ ನೀಡಿದ್ದಾರೆ. ಈ ನಡುವೆ ಗಾಯಾಳು ಯೋಧರನ್ನು ಚಿಕಿತ್ಸೆಗಾಗಿ ಜಮ್ಮುವಿನ ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ‌.

Related posts