ಕನ್ನಡವನ್ನು ಅವಹೇಳನ: ‘ನಟ ಕಮಲ್‌ ಹಾಸನ್‌ ವಿರುದ್ಧ ವ್ಯಾಪಕ ಆಕ್ರೋಶ

ಬೆಂಗಳೂರು: ನಟ ಕಮಲ್‌ ಹಾಸನ್‌ ಒಬ್ಬ ಹುಚ್ಚ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ .

ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕನ್ನಡ ಸಿನಿಮಾದಲ್ಲಿ ಆತನಿಗೆ ಅವಕಾಶ ಸಿಕ್ಕಿತ್ತು. ಕನ್ನಡವನ್ನು ಅವಹೇಳನ ಮಾಡುವುದನ್ನು ನೋಡಿದರೆ ಆತನೊಬ್ಬ ನಗರ ನಕ್ಸಲ ಎಂಬುದು ಸ್ಪಷ್ಟವಾಗಿದೆ ಎಂದರು.

ಎಲ್ಲ ಕನ್ನಡಿಗರು ಕಮಲ್‌ ಹಾಸನ್‌ಗೆ ಬಹಿಷ್ಕಾರ ಹಾಕಬೇಕು. ರಾಜ್ಯದೊಳಗೆ ಬರಲು ಕೂಡ ಅವಕಾಶ ನೀಡಬಾರದು. ಕನ್ನಡಕ್ಕೆ ದ್ರೋಹ ಬಗೆದ ಈತನ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಪ್ರತಿಪಾದಿಸಿದರು.

ಕರಾವಳಿ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಒಳ್ಳೆಯದಲ್ಲ. ಹಿಂದೂ ಕಾರ್ಯಕರ್ತರ ಹತ್ಯೆಯಾದಾಗಲೂ ನಾವು ಹೋರಾಟ ಮಾಡಿದ್ದೆವು. ಸರ್ಕಾರ ಯಾರನ್ನೋ ಓಲೈಕೆ ಮಾಡುತ್ತಿದ್ದು, ಕಾನೂನು ಕಾಪಾಡುವಲ್ಲಿ ಸೋತಿದೆ. ಸರ್ಕಾರ ಮತೀಯವಾದಕ್ಕೆ ಪುಷ್ಠಿ ನೀಡುತ್ತಿರುವುದರಿಂದ ಇಂತಹ ಘಟನೆ ನಡೆಯುತ್ತಿದೆ ಎಂದರು.

Related posts