ಚಿತ್ರದುರ್ಗ ಬಳಿ ಭೀಕರ ಅಪಘಾತ; ನಾಲ್ವರು ದುರ್ಮರಣ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ.

ಚಳ್ಳಕೆರೆ-ಹಿರಿಯೂರು ನಡುವೆ ಬೀದರ್ -ಶ್ರೀರಂಗಪಟ್ಟಣ ರಸ್ತೆಯ ಗೊಲ್ಲಹಳ್ಳಿ ಬಳಿ KSRTC ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಲಾರಿ ಚಾಲಕ ವಾಹನಗಳನ್ನು ಓವರ್‌ಟೇಕ್ ಮಾಡುವ ಆತುರದಲ್ಲಿ ಬಸ್ಸಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ ಎನ್ಬಲಾಗಿದೆ. ಈ ಅಪಘಾತದಲ್ಲಿ ಬಸ್ಸಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಐಮಂಗಲ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts