ಬಾಂಗ್ಲಾದೇಶದಲ್ಲಿ ಶಾಂತಿಯುತ ಪ್ರಜಾಪ್ರಭುತ್ವ ಪರಿವರ್ತನೆ ನಿರೀಕ್ಷೆ: ಭಾರತ

ನವದೆಹಲಿ: ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ಸಾಮಾನ್ಯ ಚುನಾವಣೆಗಳು ಮುಕ್ತ, ನ್ಯಾಯಯುತ, ವಿಶ್ವಾಸಾರ್ಹ ಹಾಗೂ ಎಲ್ಲರನ್ನೂ ಒಳಗೊಂಡ ರೀತಿಯಲ್ಲಿ ನಡೆಯಬೇಕು ಎಂಬುದು ಭಾರತದ ನಿರೀಕ್ಷೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ MEA ವಕ್ತಾರ ರಣಧೀರ್ ಜೈಸ್ವಾಲ್, “ಫೆಬ್ರವರಿ ಚುನಾವಣೆಯ ಮೂಲಕ ಸುಗಮ ಮತ್ತು ಶಾಂತಿಯುತ ಪ್ರಜಾಪ್ರಭುತ್ವ ಪರಿವರ್ತನೆ ನಡೆಯಬೇಕೆಂಬುದು ನಮ್ಮ ನಿರೀಕ್ಷೆ” ಎಂದು ಸ್ಪಷ್ಟಪಡಿಸಿದರು.

ಈ ನಡುವೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಫೆಬ್ರವರಿ 15, 2026ರೊಳಗೆ ಚುನಾವಣೆಗಳು ನಡೆಯಲಿವೆ ಎಂದು ಘೋಷಿಸಿದ್ದು, ಯಾವುದೇ ಅಡ್ಡಿಪಡಿಸುವ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಎಚ್ಚರಿಸಿದೆ.

ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರದ ಪತನದ ನಂತರದಿಂದ ಬಾಂಗ್ಲಾದೇಶ ರಾಜಕೀಯ ಅನಿಶ್ಚಿತತೆಯಲ್ಲಿ ಸಿಲುಕಿದೆ.

Related posts