ಭಾರೀ ಮಳೆ; ಬೆಂಗಳೂರಿನಲ್ಲಿ ಅವಾಂತರ, ಮರದ ಕೊಂಬೆ ಬಿದ್ದು ಮಗು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶನಿವಾರ ಭಾರೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಂತೂ ಮಳೆ ಅವಾಂತರವನ್ನೇ ಸೃಷ್ಟಿಸಿದೆ.

ಈ ನಡುವೆ, ಮಳೆ ಸಂದರ್ಭದಲ್ಲೇ, ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷದ ಹೆಣ್ಣುಮಗು ಸಾವನ್ನಪ್ಪಿ ಘಟನೆ ಮನಕಲಕುವಂತಿದೆ. ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ರಾತ್ರಿ ಈ ಘಟನೆ ನಡೆದಿದೆ. ಗಾಳಿ ಮಳೆಗೆ ರಸ್ತೆ ಬದಿ ಮರ ಬೈಕ್ ಮೇಲೆ ಬಿದ್ದಿದೆ. ಬೈಕ್ ನಲ್ಲಿತಂದೆ ಜೊತೆ ತೆರಳುತ್ತಿದ್ದ ರಕ್ಷಾ ಎಂಬ ಮಗುವೀಣೆ ತಲೆ ಮೇಲೆಯೇ ಮರದ ತುಂಡು ಬಿದ್ದಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ತೀವ್ರ ರಕ್ತಸ್ರಾವವಾಗಿದ್ದರಿಂದಾಗಿ ಬದುಕುಳಿಯಲಿಲ್ಲ.

Related posts