ಮುಸ್ಲಿಮರಿಗೆ ಶೇ.4 ಟೆಂಡರ್ ಮೀಸಲಾತಿಗೆ ಬಿಜೆಪಿ ವಿರೋಧ: ರಾಜ್ಯಪಾಲರಿಗೆ ಯತ್ನಾಳ್ ಪತ್ರ

ಬೆಂಗಳೂರು: ಸರ್ಕಾರಿ ಗುತ್ತಿಗೆ ಕಾಮಗಾರಿ ಟೆಂಡರಿನಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಮಸೂದೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧದ ಕಾನೂನು ಜಾರಿಗೆ ಅವಕಾಶ ನೀಡದಂತೆ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.

ಪ್ರತಿಪಕ್ಷಗಳ ವಿರೋಧದ ನಡುವೆಯೂ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದ್ದರು. ಈ ವಿಧೇಯಕ ಮಂಡನೆಯಾದ ಬೆನ್ನಲ್ಲೇ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದು, ವಿವಾದಾದ್ಮಕ ಮಸೂದೆಗೆ ಒಪ್ಪಿಗೆ ನೀಡದಂತೆ ಒತ್ತಾಯಿಸಿದ್ದಾರೆ. ಈ ಪಾತ್ರವನ್ನು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

Related posts