ಸಾಲದ ಬಾಧೆ; ಒಂದೇ ಕಟುಂಬದ ಮೂವರು ಸಾವಿಗೆ ಶರಣು

ತುಮಕೂರು : ಸಾಲ ಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಚ್ಚಿಬೀಳಿಸಿದೆ.

ಮರಳೂರು ನಿವಾಸಿಗಳು ಆತ್ಮಹತ್ಯೆಗೆ ಶರಣಾಗಿದ್ದು, ಈ ಕುಟುಂಬದ ಹಿರಿಯರಾದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ಬೆಸ್ಕಾಂ ಇಲಾಖೆಯಿಂದ ಸೇವನಿವೃತ್ತಿ ಹೊಂದಿದ್ದರು ಎನ್ನಲಾಗಿದೆ. ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts