ಹಳೇ ಹುಬ್ಬಳ್ಳಿ ಗಲಭೆ ಕೇಸ್​ ಹಿಂಪಡೆಯಲ್ಲ; ಸಿಎಂ ಸ್ಪಷ್ಟನೆ

ಬೆಳಗಾವಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್​ಗಳು ಹಿಂಪಡೆಯುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್​ಗಳು ಹಿಂಪಡೆಯುವ ವಿಚಾರ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವೇಳೆ, ಗೃಹ ಇಲಾಖೆಗೆ ಡಿಸಿಎಂ ಪತ್ರ ಬರೆದ ಬಗ್ಗೆ ಬೆಳಗಾವಿ ಏರ್​ಪೋರ್ಟ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣಗಳು ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದಿದ್ದಾರೆ.
ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ ಎಂದ ಸಿಎಂ, ಯಾವುದೇ ಕೇಸ್​ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು.

Related posts