1.5 ಲಕ್ಷ ರೂ ಸಾಲಕ್ಕೆ ಇಡೀ ಕುಟುಂದ ಆತ್ಮಹತ್ಯೆ? ಘಟನೆ ಬಗ್ಗೆ ಗೃಹಸಚಿವರು ಬೇಸರ

ತುಮಕೂರು: ಭಾನುವಾರ ನಡೆದ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ ಬಗ್ಗೆ ತುಮಕೂರು ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ಇದೇ ವೇಳೆ, ಸಾಲದ ಬಾಧೆ ಹಿನ್ನೆಲೆಯಲ್ಲಿ ಈ ಕುಟುಂಬ ಸಾವಿಗೆ ಶರಣಾಗಿದೆ ಎಂಬ ಸಂಗತಿಯನ್ನು ಪೊಲೀಸರು ದೃಢಪಡಿಸಿದ್ದಾರೆ.

ಭಾನುವಾರ ಈ ಸಾವಿ ಸಂಭವಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ತುಮಕೂರಿನ ನಗರದ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದರು. ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ತಿಳಿದಿದೆ. ಅವರು ಡೆತ್ ನೋಟ್ ನಲ್ಲಿ ಬರೆದಿರುವವರ ವಿಚಾರಣೆಯನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡಿರುವವರು ಕೇವಲ 1.5 ಲಕ್ಷ ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಇಷ್ಟು ಹಣಕ್ಕಾಗಿ ಐದು ಜನರ ಪ್ರಾಣ ಹೋಗಿದೆ ಎಂದ ಅವರು, ಈ ಪ್ರಕರಣ ಬಗ್ಗೆ ಸೂಕ್ತ ತನಿಖೆ ಮಾಡಲಾಗುವುದು ಎಂದು ತಿಳಿಸಿದರು.

Related posts