ರಾಮಭಕ್ತರನ್ನು ರೊಚ್ಚಿಗೆಬ್ಬಿಸಿದ ಹಾಡು.. ಪೂಜಾ ಹಾಡಿನ ಮೋಡಿ ಹೇಗಿದೆ ಗೊತ್ತಾ?

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಂಬಂಧ ಪ್ರಕ್ರಿಯೆಗಳು ಬಿರುಸುಗೊಂಡಿದೆ. ಶಿಲಾನ್ಯಾಸ ಸಮಾರಂಭದ ಸನ್ನಿವೇಶದಿಂದಾಗಿ ರಾಮ ಜನ್ಮಸ್ಥಾನ ಸುತ್ತಮುತ್ತಲ ನಗರಗಳಲ್ಲಿ ಹಬ್ಬದ ವಾತಾವರಣ ಕಂಡುಬಂದಿದೆ. ಈ ಸಡಗರ ಅಯೋಧ್ಯೆಗಷ್ಟೇ ಸೀಮಿತವಾಗಿಲ್ಲ. ದೇಶವ್ಯಾಪಿ ಕೇಸರಿ ಕಾರ್ಯಕರ್ತರಲ್ಲಿ ಸಂಭ್ರಮ ಮೂಡಿಸಿದೆ. ಈ ಸಂದರ್ಭದಲ್ಲಿ ವಿಶೇಷ ಹಾಡೊಂದು ರಾಮಭಕ್ತರನ್ನು ರೊಚ್ಚಿಗೆಬ್ಬಿಸಿದೆ. ‘ಮೇರಾ ಭಾರತ್ ಕ ಬಚ್ಚಾ ಬಚ್ಚಾ ಜೈ ಜೈ ಶ್ರೀ ರಾಮ್ ಬೋಲೆಗ’ ಹಾಡು ಶ್ರೀಮ ಭಕ್ತರ ಉತ್ಸಾಹವನ್ನು ಹೆಚ್ಚಿಸಿದೆ. ಸುಮಾರು 2 ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡು ಹರಿದಾಡಿತ್ತಾದರೂ, ಇತ್ತೀಚಿನ ಕೆಲವು ದಿನಗಳಲ್ಲಿ ಈ ಹಾಡು ಮುನ್ನೆಲೆಗೆ ಬಂದಿದೆ. ಪೂಜಾ ಗೊಲ್ಹಾನಿಯಾ ಹಾಡಿನ ಮೋಡಿ ಎಲ್ಲರ ಗಮನವನ್ನು ಸೂಜಿಗಲ್ಲಿನಂತೆ ಸೆಳೆದಿದೆ. ಎಲ್ಲೆಲ್ಲೂ ಈ ಹಾಡೇ ಝೇಂಕರಿಸುತ್ತಿದ್ದು, ಭಾರೀ ಸುದ್ದಿಯಾಗುತ್ತಿದೆ. ಇದನ್ನೂ ನೋಡಿ..  ‘ದಿ ಕಾರ್ಗಿಲ್ ಗರ್ಲ್..’ ವೀರ ವನಿತೆಯ ಸಾಹಸ ಗಾಥೆ; ಟ್ರೈಲರ್’ನಲ್ಲೇ ಅಡಗಿದೆ ಥ್ರಿಲ್

ಬಿಎಸ್’ವೈ ಪಾಳಯಕ್ಕೆ ಜಿಗಿದರೇ ನಳಿನ್? ಸಿಎಂ ಯಡಿಯೂರಪ್ಪ ಸೇಫ್..!

ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆಗೆ ರಂಗ ಸಜ್ಜಾಗುತ್ತಿದೆ. ಆದರೆ ಆಡಳಿತಾರೂಢ ಬಿಜೆಪಿಯಲ್ಲಿನ ವಿದ್ಯಮಾನಗಳನ್ನು ಗಮನಿಸಿದರೆ ಯಡಿಯೂರಪ್ಪ ಸಂಪುಟದ ವಿಸ್ತರಣೆಯಾಗಲೀ ಸರ್ಜರಿಯಾಗಲೀ ಗಜಪ್ರಸವವೇ ಸರಿ. ಆದರೆ ನಳಿನ್ ಕುಮಾರ್ ಅವರ ರಾಜಿಯ ನಡೆ ಸಿಎಂ ಬಿಎಸ್’ವೈ ಅವರಿಗೆ ವರದಾನವಾಗಲೂ ಬಹುದು. ಪ್ರಸ್ತುತ ಬಿಜೆಪಿಯಲ್ಲೀಗ ಬಣ ರಾಜಕೀಯ ಇಲ್ಲ. ಒಂದೆಡೆ ಬಿ.ಎಲ್.ಸಂತೋಷ್ ಬೆಂಬಲಿಗರು ಸಮರ ವಿರಾಮಕ್ಕೆ ತೀರ್ಮಾನಿಸಿದ್ದಾರೆನ್ನಲಾಗಿದೆ. ಬಿ.ಎಲ್. ಸಂತೋಷ್ ಬಂಟ ನಳಿನ್ ಕುಮಾರ್ ಕೂಡಾ ಯಡಿಯೂರಪ್ಪ ಹಾಗೂ ವಿಜಯೇಂದ್ರ ಜೊತೆ ರಾಜಿಯಾಗಿದ್ದು ರಾಜ್ಯ ಸರ್ಕಾರದ ವಿಚಾರದಲ್ಲಿ ಯಾವುದೇ ತಕರಾರು ಎತ್ತಿಲ್ಲ. ಬಿಜೆಪಿಯು ಭ್ರಷ್ಟಾಚಾರ ನಿರ್ಮೂಲನೆಯ ಮಂತ್ರ ಪಠಿಸುತ್ತಲೇ ಇರುವಾಗ ಕೊರೋನಾ ಹಗರಣದ ಆರೋಪ ತಮ್ಮ ಪಕ್ಷದ ವರ್ಚಸ್ಸಿಗೆ ಕಳಂಕ ಎನಿಸಿದರೂ ಸಂಬಂಧಪಟ್ಟ ಸಚಿವರ ಬಗ್ಗೆ ಆಡಳಿತ ಪಕ್ಷದ ಸಾರಥಿ ನಳಿನ್ ಕುಮಾರ್ ಕಟೀಲ್ ಮೃದು ದೋರಣೆ ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಮುನಿಸಿಕೊಂಡವರಿಂದಲೇ ಹೊಂದಾಣಿಕೆ..! ಭಾರತೀಯ ಜನತಾ ಪಕ್ಷದಲ್ಲೀಗ…

ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಮತ್ತೆ 98 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಮತ್ತೆ 98 ಮಂದಿ ಸಾವಿಗೀಡಾಗಿದ್ದಾರೆ. ಶನಿವಾರ 5,172 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 98 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ವಾರ ಸಂಖ್ಯೆ 2,412 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಶನಿವಾರ 1,852 ಹೊಸ ಪ್ರಕರಣಗಳು ವರದಿಯಾಗಿದ್ದು, 27 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಮೈಸೂರಿನಲ್ಲಿ 65, ಬಳ್ಳಾರಿಯಲ್ಲಿ 269, ಕಲಬುರಗಿಯಲ್ಲಿ 219, ಬೆಳಗಾವಿ 219, ಧಾರವಾಡ 184, ಹಾಸನ 146, ದಕ್ಷಿಣಕನ್ನಡ 139, ಉಡುಪಿ 136, ಬಾಗಲಕೋಟೆ 134, ವಿಜಯಪುರ 129, ಶಿವಮೊಗ್ಗ 119, ರಾಯಚೂರು 109, ದಾವಣಗೆರೆ 108, ಕೊಪ್ಪಳ ಜಿಲ್ಲೆಯಲ್ಲಿ 107 ಹೊಸ ಪಾಸಿಟಿವ್ ಕೇಸ್’ಗಳು ವರದಿಯಾಗಿವೆ. ಇಂದಿನ 01/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka…

ಕೊರೋನಾ ವಿಚಾರ; ಕಣ್ಣಾಮುಚ್ಚಾಳೆಯಾಡುವ ಆಸ್ಪತ್ರೆಗಳಿಗೆ ಸರ್ಕಾರದ ಕಾನೂನು ಪ್ರಹಾರ

ಬೆಂಗಳೂರು: ಕೊರೋನಾ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳ ಕಣ್ಣಾಮುಚ್ಚಾಲೆ ಆಟ ನೇಯುತ್ತಿದೆಯಾ? ರಾಜ್ಯ ಸರ್ಕಾರದ ನಿಯಮದ ಪ್ರಕಾರ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50ರಷ್ಟು ಹಾಸಿಗೆಗಳನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು. ಆದರೆ ಕೆಲವು ಆಸ್ಪತ್ರೆಗಳು ಈ ನಿಯಮವನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಇದರಿಂದ ಕೆಂಡಾಮಂಡಲವಾಗಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ. ಹೀಗಿದ್ದರೂ ನಿಯಮ ಪಾಲಿಸದ ಆಸ್ಪತ್ರೆ ವಿರುದ್ಧ ಸರ್ಕಾರ ಕಾನೂನು ಪ್ರಹಾರ ಮಾಡಿದೆ. ರಾಜ್ಯ ಸರ್ಕಾರ ಬೆಂಗಳೂರಿನ ಮಾರತ್ ಹಳ್ಳಿಯ ಸಾಕ್ರ ಖಾಸಗಿ ಆಸ್ಪತ್ರೆ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಆಸ್ಪತ್ರೆಯ ಮೂವರು ಮುಖ್ಯಸ್ಥರನ್ನು ಆರೋಪಿಗಳಾಗಿ ಹೊಣೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಸರ್ಕಾರದ ನಿಯಮದಂತೆ ಶೇ.50% ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡದೆ ಕಾನೂನು ಉಲ್ಲಂಘಿಸಿರುವ ಮಾರತ್ ಹಳ್ಳಿಯ ಸಾಕ್ರ ಆಸ್ಪತ್ರೆಯ…

ಕೊಂಚಾಡಿ ಕಾಶೀ ಮಠದಲ್ಲಿ 9 ದಿನಗಳ ಮಹಾ ವೈಭವ

ಮಂಗಳೂರು : ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ಲೋಕ ಕಲ್ಯಾಣಾರ್ಥ ವಿವಿಧ ಕಿಂಕರ್ಯಗಳು ಆರಂಭವಾಗಿವೆ. ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶಾರ್ವರಿ ನಾಮ ಸಂವತ್ಸರದ ಚಾತುರ್ಮಾಸ ವ್ರತವು ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ಪ್ರಾರಂಭಗೊಂಡಿದ್ದು ಈ ಸಂದರ್ಭದಲ್ಲಿ ಈ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಪಾರಾಯಣಗಳು ಆಯೋಜಿತವಾಗಿವೆ. ಈ ಪುಣ್ಯಪ್ರದ ಶ್ರಾವಣ ಮಾಸದ ಪ್ರಾರಂಭದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ದೇವರ ಲೀಲೆ – ವೈಭವ , ದೇವರ ಚರಿತ್ರೆ ” ಶ್ರೀ ರಾಮಾಯಣ ಪಾರಾಯಣ ಹಾಗೂ ಪ್ರವಚನ 9 ದಿನಗಳ ಕಾಲ ಜರುಗಲಿರುವುದು. ಆಗಸ್ಟ್ 4ರಂದು ಖುಗೋಪಾಕರ್ಮ, ಆಗಸ್ಟ್ 11ರಂದು ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಇದಲ್ಲದೇ ಆಗಸ್ಟ್ 22-26ರ ವರೆಗೆ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು, ಸೆಪ್ಟಂಬರ್ 1ರಂದು ಅನಂತ ಚತುರ್ದಶಿ ವ್ರತಾಚಾರಣೆ ನಡೆಯಲಿದೆ. ಇದನ್ನೂ…

ಅಮೆರಿಕಾದಲ್ಲೂ ಟಿಕ್ ಟಾಕ್ ಬ್ಯಾನ್?

ವಾಷಿಂಗ್ಟನ್: ಭಾರತ ಮಾದರಿಯಲ್ಲೇ ಅಮೆರಿಕದಲ್ಲೂ ಚೀನಾ ಮೂಲದ ಟಿಕ್ ಟಾಕ್ ಆ್ಯಪ್ ನಿಷೇಧ ಮಾಡಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿದ್ದಾರೆ. ಚೀನಾ ದೇಶದ ಟಿಕ್ ಟಾಕ್ ಅಪ್ಲಿಕೇಷನ‌ನ್ನು ಭಾರತ ಕೆಲವು ವಾರಗಳ ಹಿಂದಷ್ಟೇ ನಿಷೇಧಿಸಿತ್ತು.‌ ದೇಶದ ಭದ್ರತೆಯ ಕಾರಣಕ್ಕಾಗಿ ಭಾರತ ಈ ನಿರ್ಧಾರ ಕೈಗೊಂಡಿದೆ. ಅಮೆರಿಕಾ ಕೂಡಾ ಇದೀಗ ಅದೇ ಹಾದಿ ತುಳಿಯಲು ತೀರ್ಮಾನಿಸಿದೆ. ಚೀನಾದ ಗುಪ್ತಚರಕ್ಕೆ ಟಿಕ್ ಟಾಕ್ ಮೂಲಕ ಮಾಹಿತಿ ರವಾನೆಯಾಗುತ್ತದೆ ಎಂಬ ಆತಂಕದಿಂದ ಟ್ರಂಪ್ ಆಡಳತ ಈ ಕ್ರಮಕ್ಕೆ ಮುಂದಾಗಿದೆ. ತನ್ನ ಗುಪ್ತಚರ ರಹಸ್ಯ ಚಟುವಟಿಕೆಗಳಿಗೆ ಸೋಷಿಯಲ್ ಮೀಡಿಯಾ ಆಪ್ ನ್ನು ಚೀನಾ ಬಳಸುತ್ತದೆ ಎಂದು ಅಮೆರಿಕ ಸರ್ಕಾರದ ಅಧಿಕಾರಿಗಳು ಮಾಹಿತಿ ಕಳೆಹಾಕಿರುವ ಹಿನ್ನೆಲೆಯಲ್ಲಿ ಸದ್ಯವೇ ಈ ಬಗ್ಗೆ ಆದೇಶ ಹೊರಡಿಸಲು ಟ್ರಂಪ್ ನಿರ್ಧರಿಸಿದ್ದಾರೆನ್ನಲಾಗಿದೆ.

ಯವಕರನ್ನೂ ಬಲಿತೆಗೆದುಕೊಳ್ಳುತ್ತದೆ ಕೊರೋನಾ

ದೆಹಲಿ: ಜಗತ್ತಿನಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಾಣು ಯುವಕರನ್ನೂ ಬಲಿತೆಗೆದುಕೊಳ್ಳುತ್ತಿವೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ವಿಶ್ವದಾದ್ಯಂತ ಯುವ ಜನರೂ ಕೊರೋನಾ ವೈರಸ್‌ಗೆ ತುತ್ತಾಗಿ ಬಲಿಯಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್, ವಿಶ್ವದಾದ್ಯಂತ 17.3 ದಶಲಕ್ಷ ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಪೈಕಿ ಯುವಕರನೇಕರು ಬಲಿಯಾಗಿದ್ದಾರೆ ಎಂದು ಬೊಟ್ಟು ಮಾಡಿದ್ದಾರೆ. ವಾಷಿಂಗ್ಟನ್‌ ‌ನಲ್ಲಿ ಹೇಳಿಕೆ ನೀಡಿರುವ ಅವರು, ವಿಷಮ ಪರಿಸ್ಥಿತಿ ಇರುವಾಗ ಯುವಕರೂ ಕೂಡಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಕರೆ ನೀಡಿದ್ದಾರೆ.