ಕೊರೋನಾ ಗೆದ್ದ ಸಿಎಂಗೆ ಮಾಜಿ ಪ್ರಧಾನಿ ಅಭಿನಂದನೆ

ಬೆಂಗಳೂರು: ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿನವರು ಚಿಕಿತ್ಸೆ ಪಡೆದಿರುವ ಅವರು ಮಂಗಳವಾರ ಬಿಡುಗಡೆಯಾಗಿದ್ದಾರೆ. ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ಆತ್ಮವಿಶ್ವಾಸ, ವೈದ್ಯಕೀಯ ಚಿಕಿತ್ಸೆಗಳಿಂದ ಕೊರೋನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ. — B.S.Yediyurappa (Modi Ka Parivar) (@BSYBJP) August 10, 2020 ಕೊರೋನಾ ಗೆದ್ದು ಮನೆಗೆ ಮರಳಿರುವ ಮುಖ್ಯಮಂತ್ರಿಯವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅಭಿನಂದಿಸಿದ್ದಾರೆ. ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಕೋವಿಡ್ ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಸುದ್ದಿ ಕೇಳಿ ಸಂತೋಷವಾಯಿತು , ಮುಖ್ಯಮಂತ್ರಿಗಳು ಎಂದಿನಂತೆ ಕಾರ್ಯಪ್ರವೃತ್ತರಾಗಲಿ ಎಂದು ಆಶಿಸುವೆ ಎಂದಿದ್ದಾರೆ. ರಾಜ್ಯದಲ್ಲಿ ಕೋವಿಡ್ ಮತ್ತು ಅತಿವೃಷ್ಠಿ ಎರಡನ್ನು ನಾವೆಲ್ಲ ಎದುರಿಸಬೇಕಾಗಿದೆ. ಇದರ ಬಗ್ಗೆ ಹೆಚ್ಚಿನ ಗಮನ…

ಸ್ಯಾನಿಟೈಜರ್ ಹಗರಣ ಆರೋಪದಲ್ಲಿ ಯಾವುದೇ ಹುರುಳಿಲ್ಲ; ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಸ್ಯಾನಿಟೈಜರ್ ಹಗರಣ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಪ್ರತಿಪಕ್ಷಗಳು ಮಾಡುತ್ತಿರುವ ಆರೋಪ ಹಾಗೂ ಲೋಕಾಯುಕ್ತದಲ್ಲಿ ದೂರು ಸಲ್ಲಿಕೆಯಾಗಿರುವ ಕುರಿತು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯು ಒಂದು ಲೀಟರ್ ಸ್ಯಾನಿಟೈಜರ್ ಕೂಡ ಖರೀದಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಆರೋಪವು ರಾಜಕೀಯ ಪ್ರೇರಿತ ನಡೆಯಾಗಿದ್ದು, ದೂರು ಕೊಟ್ಟವರ ಬಗ್ಗೆ ಮರುಕ ಹುಟ್ಟಿದೆ. ಯಾವುದೇ ರೀತಿಯ ತನಿಖೆಗಳನ್ನು ನಾನು ಸ್ವಾಗತಿಸುತ್ತೇನೆ ಎಂದರು. ಸಚಿವ ಶ್ರೀರಾಮುಲು ಜೊತೆ ಮಾತುಕತೆ ಈ ನಡುವೆ, ಸಚಿವ ಡಾ.ಕೆ.ಸುಧಾಕರ್ ಬೌರಿಂಗ್ ಆಸ್ಪತ್ರೆಗೆ ತೆರಳಿ, ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ಮಾತನಾಡಿದರು. ‘ಸರ್ಕಾರಿ ಆಸ್ಪತ್ರೆಗೆ ಬಂದು ದಾಖಲಾಗಿ ಇಡೀ ರಾಜ್ಯದ ಜನರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದೀರಿ’ ಎಂದು ಸಚಿವ ಸುಧಾಕರ್ ಅವರು ಶ್ರೀರಾಮುಲು ಅವರನ್ನು ಅಭಿನಂದಿಸಿದರು.

ಕೊರೋನಾ ಹಾವಳಿ; ರೇಷ್ಮೆ ನಾಡಲ್ಲಿ ಕಟ್ಟೆಚ್ಚರ

ರಾಮನಗರ: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಮನಗರದಲ್ಲಿರುವ ಕೋವಿಡ್-19 ಆಸ್ಪತ್ರೆಯು ಬಹುತೇಕ ಭಾರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ತಾಲ್ಲೂಕುಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೆರವಿನಿಂದ ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸಲಾಗುತ್ತಿದೆ. ರಾಮನಗರ ಜಿಲ್ಲೆಯಲ್ಲಿನ ಕೋವಿಡ್ ಸೆಂಟರ್’ಗಳ ಸ್ಥಿತಿಗತಿ ಹಾಗೂ ವ್ಯವಸ್ಥೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರಿಗೆ ಮಾಹಿತಿ ನೀಡಿರು. ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಮೊದಲ ಹಂತದಲ್ಲಿ ದೊಡ್ಡ ಮರಳವಾಡಿಯಲ್ಲಿ 118 ಹಾಸಿಗೆಗಳ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ. ಇನ್ನು ಮುಂದೆ ಈ ಭಾಗದಲ್ಲಿನ ಕೋವಿಡ್ ಸೋಂಕಿತರಿಗೆ ಇಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮಾಗಡಿಯಲ್ಲೂ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರನ್ನು ಇನ್ನೆರಡು ದಿನಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಟಾಪರ್ ತನ್ಮಯಗೆ ಸಚಿವ ಸಿ.ಟಿ.ರವಿ ಸನ್ಮಾನ

ಚಿಕ್ಕಮಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಕಾಫಿ ತವರು ಚಿಕ್ಕಮಗಳೂರಿನ ವಿದ್ಯಾರ್ಥಿನಿ ಕುಮಾರಿ ತನ್ಮಯ 625 ಅಂಕ ಪಡೆದು ರಾಜ್ಯ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಚಿಕ್ಕಮಗಳೂರು ನಗರದ ಸಂತ ಜೋಸೆಫ್ ಪ್ರೌಢಶಾಲೆ ವಿದ್ಯಾರ್ಥಿನಿ ಕುಮಾರಿ ತನ್ಮಯ, ಇಂದಾವರ ನಿವಾಸಿ ಉಪತಹಶೀಲ್ದಾರ್ ಪ್ರಸನ್ನ ಹಾಗೂ ಶಿಕ್ಷಕಿ ಸಂಧ್ಯಾ ಅವರ ಪುತ್ರಿ. ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿದಂತೆಯೇ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ, ಕುಮಾರಿ ತನ್ಮಯ ನಿವಾಸಕ್ಕೆ ತೆರಳಿ ಅಮ್ಮಾನಿಸಿ, ಅಭಿನಂದನೆ ಸಲ್ಲಿಸಿದರು.

ಹೆಚ್ಚಿನ ಕೋವಿಡ್ ಪರೀಕ್ಷೆ ನಡೆಸಿ : ಅಧಿಕಾರಿಗಳಿಗೆ ಡಿಸಿಎಂ ಸೂಚನೆ

ಬೆಂಗಳೂರು: ರಾಮನಗರ ಜಿಲ್ಲೆಗೆ ನಿಗದಿಯಾಗಿರುವ ಗುರಿಗೆ ಮಾತ್ರ ಕೋವಿಡ್ ಪರೀಕ್ಷೆಗೆ ಸೀಮಿತಗೊಳಿಸದೆ ಅವಶ್ಯಕತೆ ಇರುವ ಕಡೆ ಹೆಚ್ಚಿನ ಕೋವಿಡ್-19 ಪರೀಕ್ಷೆ ನಡೆಸುವಂತೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ಐ.ಎಲ್.ಐ ಹಾಗೂ ಎಸ್.ಎ.ಆರ್.ಐ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಿ. ಜಿಲ್ಲೆಯಲ್ಲಿ ಮಧುಮೇಹ, ರಕ್ತದ ಒತ್ತಡ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿರುವವರ ಬಗ್ಗೆ ಹೆಚ್ಚಿನ ನಿಗಾವಹಿಸಿ ಪ್ರಾಥಮಿಕ ಹಂತದಲ್ಲೇ ಕೋವಿಡ್ ಕಾಯಿಲೆಯನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಿ ಎಂದರು. ಆರೋಗ್ಯ ಇಲಾಖೆಯಲ್ಲಿ ನರ್ಸ್ ಗಳ ಕೊರತೆ ಇದ್ದರೆ ಬೇರೆ ಸ್ಥಳದಿಂದ 15 ಮಂದಿ ನರ್ಸ್ ಗಳ ವ್ಯವಸ್ಥೆ ಮಾಡಲಾಗುವುದು. ಅವರಿಗೆ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಆರೋಗ್ಯ ಇಲಾಖೆಯಿಂದ ಕಲ್ಪಿಸಿಕೊಡಬೇಕು ಎಂದವರು ಸೂಚಿಸಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಪ್ರಥಮ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸಂತಸ

ಬೆಂಗಳೂರು: ಎಸ್‍ಎಸ್‍ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಮೊದಲ ಸ್ಥಾನಕ್ಕೆ ಬಂದಿದ್ದು, ಜಿಲ್ಲೆಯ ವಿದ್ಯಾರ್ಥಿಗಳು ಹೊಸ ದಾಖಲೆ ಬರೆದಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಕಳೆದ ವರ್ಷ 20 ನೇ ಸ್ಥಾನದಲ್ಲಿತ್ತು. ಆಗ ನಾನಿನ್ನೂ ಶಾಸಕನಾಗಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುತ್ತಿದ್ದೆ. ಇನ್ನು ಮುಂದೆ ಕನಿಷ್ಠ 10 ಸ್ಥಾನಗಳ ಒಳಗೆ ಬರಬೇಕು ಎಂದು ಹೇಳಿದ್ದೆ. ಆದರೆ ಈ ಬಾರಿ ಜಿಲ್ಲೆಯು ಮೊದಲ ಸ್ಥಾನ ಗಳಿಸಿದೆ. ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಅಧಿಕಾರಿಗಳಿಗೆ ಶುಭ ಕೋರುತ್ತೇನೆ ಎಂದರು. ಅನುತ್ತೀರ್ಣರಾದವರು ಆತ್ಮವಿಶ್ವಾಸ ಕಳೆದುಕೊಳ್ಳುವುದು ಬೇಡ. ಅವರಿಗೆ ಮತ್ತೆ ಅವಕಾಶ ಇದೆ ಎಂದು ಅವರು ಸಲಹೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಲಿಕೆಯಲ್ಲಿ ಹಿಂದುಳಿದ 3,000 ವಿಶೇಷ ವಿದ್ಯಾರ್ಥಿಗಳನ್ನು ಗುರುತಿಸಲಾಗಿತ್ತು. ನಂತರ ಅವರಿಗೆ ವಿಷಯವಾರು 9 ಸಂಪನ್ಮೂಲ ವ್ಯಕ್ತಿಗಳನ್ನು…

ಮಲೆನಾಡಲ್ಲಿ ಅಭಿವೃದ್ಧಿ ಪರ್ವ; ಹಲವು ಯೋಜನೆಗಳಿಗೆ ಮುನ್ನುಡಿ

ಚಿಕ್ಕಮಗಳೂರು: ಮಲೆನಾಡು ಚಿಕ್ಕಮಗಳೂರಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಕ್ಕಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ವಿವಿಧ ಕಾಮಗಾರಿಗಳಿಗೆ ಚಾಲನೆ ದೊರೆತಿದೆ. ಕೆಲವು ದಿನಗಳಿಂದ ತವರು ಜಿಲ್ಲೆಯಲ್ಲೇ ಬೀಡು ಬಿಟ್ಟಿರುವ ಜಿಲ್ಲಾ ಉಸ್ತುವಾರಿ ಮಂತ್ರಿಯೂ ಆದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಮಂಗಳವಾರ ಕಳವಾಸೆ ಗ್ರಾಮ ಉಕ್ಕುಂದ ಗ್ರಾಮ ಪಂಚಾಯಿತಿ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಚಿಕ್ಕಮಗಳೂರಿನ ಇಂದಾವರದಲ್ಲಿ ಸೋಲಾರ್ ಲೈಟ್ ವಿತರಣೆ ಮಾಡಿದರು.   ಈ ನಡುವೆ ನಿರಂತರ ಮಳೆಯಿಂದಾಗಿ ಹಿರೇಕೊಳಲೆ ಕೆರೆ ಭಾರಿಯಾಗಿದ್ದು, ಜಲ ಶ್ರೀಮಂತಿಕೆಯಿಂದ ಕಂಗೊಳಿಸುತ್ತಿರುವ ಈ ಕೆರೆಗೆ ಸಿ.ಟಿ.ರವಿ ದಂಪತಿ ಬಾಗಿನ ಸಮರ್ಪಿಸಿದರು. ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ನಗರಸಭಾ ಆಯುಕ್ತ ಬಸವರಾಜ್ ಸೇರಿದಂತೆ ನೇಕಾ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  

ಮನೋರಂಜನೆಯ ಮಜಲಲ್ಲಿ ಮತ್ತೆ ‘ಬಣ್ಣ ಬಣ್ಣದ ಬದುಕು’

ದಶಕಗಳ ಹಿಂದೆ ತೆರೆಕಂಡ ಗಿರೀಶ್ ಕಾಸರವಳ್ಳಿಯವರ ‘ಬಣ್ಧದ ವೇಷ’ ಸಿನಿಮಾ ಸ್ಯಾಂಡಲ್‌ವುಡ್ ಜಗತ್ತಲ್ಲಿ ಹೆಗ್ಗುರುತು. ಅದನ್ನು ಮೆಲುಕು ಹಾಕುತ್ತಾ ಸಾಗಿದರೆ ಮತ್ತೆ ಮನಸಿನಂಗಳಕ್ಕೆ ಸಮೀಪವಾಗುವುದೇ ‘ಬಣ್ಣಬಣ್ಣದ ಬದುಕು’ ಚಿತ್ರ. ಇದು ಯಕ್ಷಗಾನದ ಒಳನೋಟ ಮತ್ತು ಕಲಾವಿದನ ಕುಟುಂಬದ ಅಸಹಯಕತೆಯನ್ನು ಜಗತ್ತಿಗೆ ಸಾರಿದ ಚಿತ್ರ. ‘ಬಣ್ಣ ಬಣ್ಣದ ಬದುಕು’ ಬೆಳ್ಳಿತೆರೆಯಲ್ಲಿನ ದಾಖಲೆಗಳನ್ನು ಚಿಂದಿ ಮಾಡಿಲ್ಲವಾದರೂ ವಿಮರ್ಶಕರ ಕಡೆಯಿಂದಂತೂ ಗರಿಷ್ಠ ಅಂಕವನ್ನು ಪಡೆದಿದೆ. ಈ ಯಶಸ್ಸಿನ ಗುಟ್ಟೇ ‘ಇಸ್ಮಾಯಿಲ್ ಮೂಡುಶೆಡ್ಡೆ’ ರಹಸ್ಯದ ಬೆನ್ನತ್ತಿದಾಗ..!! ಏನಿದು ಈಗ ಮತ್ತೆ ‘ಬಣ್ಣದ ಬದುಕಿನ’ ವಿಷಯ ಅಂತೀರ..? ಇದಕ್ಕೆ ಕಾರಣವೂ ಇದೆ. ಅದ್ಧೂರಿ ಕಮರ್ಷಿಯಲ್ ಸಿನಿಮಾಗಳ ಮುಂದೆ ಸುಂದರ ಕಥಾನಕದ ಸಿನಿಮಾಗಳಿಗೆ ಥಿಯೇಟರ್‌ಗಳು ಕೊಕ್ ನೀಡುವುದು ಅಚ್ಚರಿಯ ವಿಚಾರವೇನಲ್ಲ. ಕ್ರಿಯಾಶೀಲ ನಿರ್ದೇಶಕನ ಗರಡಿಯಲ್ಲು ಪ್ರತಿಭಾನ್ವಿತ ತಾರೆಯರು ಬಣ್ಣ ಹಚ್ಚಿರಿವ ಈ ಸಿನಿಮಾವೂ ನಿಗೂಢ ಲಾಭಿಯಿಂದಾಗಿ ಅಲ್ಪ ಸಮಯದಲ್ಲೇ ಥಿಯೇಟರ್‌ಗಳಿಂದ ಎತ್ತಂಗಡಿಯಾಗಿತ್ತು. ಅದರೆ ಟಿವಿ ರೈಟ್ಸ್…

ರಸಗೊಬ್ಬರಗಳ ಅಭಾವ ಸೃಷ್ಟಿಸುವವರ ವಿರುದ್ಧ ಕ್ರಮ: ಕೃಷಿ ಸಚಿವ ಎಚ್ಚರಿಕೆ

ಬೆಂಗಳೂರು: ರಸಗೊಬ್ಬರ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಯಾವುದೇ ಕಾರಣಕ್ಕೂ ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದ್ದಲ್ಲಿ ಅಥವಾ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ. ಇಲಾಖೆಯ ನಿಯಮಾನುಸಾರವೇ ರಸಗೊಬ್ಬರವನ್ನು ರೈತರಿಗೆ ವಿತರಿಸಬೇಕು. ರೈತಬಾಂಧವರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗದಂತೆ ಇಲಾಖೆ ಸೂಕ್ತ ಕ್ರಮಕೈಗೊಂಡಿದೆ. ರಸಗೊಬ್ಬರಕ್ಕೆ ಯಾವುದೇ ಕೊರತೆಯಿರುವುದಿಲ್ಲ. ಅಗತ್ಯಕ್ಕನುಗುಣವಾಗಿ ರಸಗೊಬ್ಬರ ಸರಬರಾಜಿಗೆ ಕ್ರಮಕೈಗೊಳ್ಳಲಾಗಿದ್ದು , ರೈತ ಬಾಂಧವರು ಯಾವುದೇ ಇಲ್ಲಸಲ್ಲದ ವದಂತಿಗಾಗಲೀ ಸುಳ್ಳು ಸುದ್ದಿಗಾಗಲೀ ಗಮನ ನೀಡದೇ ತಾಳ್ಮೆ ವಹಿಸಿ ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ರಸಗೊಬ್ಬರ ಖರೀದಿಸುವಂತೆ ಸಚಿವರು ಮನವಿ ಮಾಡಿದ್ದಾರೆ. ಕೆಲವೆಡೆ ಕೆಲ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಕೃತಕ ಅಭಾವ ಸೃಷ್ಟಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಅಂತಹವರನ್ನು ಗುರುತಿಸಿ ಆರೋಪ ಸಾಬೀತಾದಲ್ಲಿ ಅಂತಹವರ ವಿರುದ್ಧ ಕಠಿಣ…

ಕೊಡಗಿನಲ್ಲಿ ನಿಂತರ ಮಳೆ; ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮೈಸೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಕಾವೇರಿ ಕಣಿವೆ ಪ್ರದೇಶದಲ್ಲೂ ವರ್ಷಧಾರೆ ಮುಂದುವರಿದಿದೆ. ಕೊಡಗಿನಲ್ಲಿ ಸುರಿಯುತ್ತಿರುವ ನಿಂತರ ಮಳೆಯಿಂದ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಣೆಕಟ್ಟೆಯಿಂದಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರವಾಸಿಗಳ ಆಕರ್ಷಣೆಯ ಕೇಂದ್ರಗಳಾದ ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ ಶ್ರೀರಂಗನಾಥ ದೇವಸ್ಥಾನದ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿಧಾಮ, ವೆಲ್ಲಿಸ್ಲಿ ಸೇತುವೆ. ಸಂಗಮ, ಗೋಸಾಯಿ ಘಾಟ್, ಮುತ್ತತ್ತಿ ಮೊದಲಾದೆಡೆ ಪೊಲೀಸರ ಕಣ್ಗಾವಲು ಹಾಕಲಾಗಿದೆ.