ಶಿವಮೊಗ್ಗ ಸ್ಫೋಟ ಪ್ರಕರಣ; ಘಟನಾ ಸ್ಥಳವನ್ನು ಸೀಲ್’ಡೌನ್ ಮಾಡಿದ ಪೊಲೀಸರು

ಶಿವಮೊಗ್ಗ: ಶಿವಮೊಗ್ಗ ಬಳಿ ಸಂಭವಿಸಿದ ಭೀಕರ ಸ್ಫೋಟದ ದುರಂತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕಳೆದ ರಾತ್ರಿ ಸಂಭವಿಸಿರುವ ಈ ಸ್ಫೋಟ ಘಟನೆಯ ಸ್ಥಳವಾದ ಜಲ್ಲಿ ಕ್ರಷರ್ ಸುತ್ತಮುತ್ತ ಪ್ರದೇಶಗಳನ್ನು ಪೊಲೀಸರು ಸೀಲ್ ಡೌನ್ ಮಾಡಿದ್ದಾರೆ. ರಾತ್ರಿ ಸುಮಾರು 10.30ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಸ್ಫೋಟದ ರಭಸಕ್ಕೆ ಲ್ಡಿಂಆಮೇಟ್ ತುಂಬಿದ್ದ ಲಾರಿ ಛಿದ್ರವಾಗಿದೆ. ಅಕಕಪಕ್ಕದಲ್ಲಿದ್ದ ಕಾರ್ಮಿಕರ ದೇಹಗಳೂ ಛಿದ್ರವಾಗಿ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು ಯಾರೆಲ್ಲಾ ಸಾವನ್ನಪ್ಪಿದ್ದಾರೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ ಘಟನೆ ನಡೆಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿಬಂದು ರಕ್ಷಣಾ ಪರಿಹಾರ ಕಾರ್ಯಾಚರಣೆ ಕೈಗೊಂಡರು. ಆದರೆ ಅಲ್ಲಿನ ಪರಿಸರ ಹಾಗೂ ರಾತ್ರಿಯ ಸ್ಥಿತಿಯಿಂದಾಗಿ ಕಾರ್ಯಾಚರಣೆ ಕಷ್ಟ ಸಾಧ್ಯವಾಯಿತೆನ್ನಲಾಗಿದೆ.

ಜಲ್ಲಿ ಕ್ರಷರ್ ಬಳಿ ಭೀಕರ ಸ್ಫೋಟ; 8 ಕಾರ್ಮಿಕರು ದುರ್ಮರಣ

ಬೆಳ್ಳಂಬೆಳಗ್ಗೆಯೇ ಭೀಕರ ದುರಂತದ ಸುದ್ದಿ ಕೇಳಿ ಇಡೀ ಕರುನಾಡು ಬೆಚ್ಸಿ ಬಿದ್ದಿದೆ. ಶಿವಮೊಗ್ಗ ಜಿಲೀಯಾದ್ಯಂತ ಬುಧವಾರ ರಾತ್ರಿ ಭಾರೀ ಸ್ಫೋಟದೊಂದಿಗೆ ಭೂಕಂಪನದ ಅನುಭವವಾಗಿತ್ತು. ಭೂಕಂಪ ಸಂಭವಿಸಿದೆ ಎಂದೇ ಜನ ಭಯಭೀತರಾಗಿದ್ದರು. ಆದರೆ ಆ ಹೊತ್ತಿಗೆ ಶಿವಮೊಗ್ಗ ಸಮೀಪದ ಅಬ್ಬಲಗೆರೆ- ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸ್ಫೋಟಕ ಸಿಡಿದು ಭಾರೀ ಅನಾಹುತ ಸಂಭವಿಸಿದೆ. ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೆಟ್ ಸ್ಪೋಟಿಸಿದ ಪರಿಣಾಮ ಬಿಹಾರ ಮೂಲದ 15 ಕಾರ್ಮಿಕರು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೆಟ್ ಬಾಕ್ಸ್ ಗಳನ್ನು ಒಂದೆಡೆ ಇಡಲಾಗಿತ್ತು. ಈ ಫೋಟಕಗಳು ಸಿಡಿದು 15 ಮಂದಿ ಬಿಹಾರ ಮೂಲದ ಕಾರ್ಮಿಕರು ಮೃತಪಟ್ಟಿರಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಭೂಮಿ ಕಂಪಿಸಿದ ಅನುಭವವಾದ ಸಮಯದಲ್ಲೇ ಈ ಘಟನೆ ನಡೆದಿದೆ. ಈ ಸ್ಪೋಟದಿಂದಲೇ ಭೂಕಂಪನದ ಅನುಭವವಾಗಿರಬಹುದೆಂದು ಹೇಳಲಾಗುತ್ತಿದೆ.

ಸದ್ಯದಲ್ಲೇ ಸರ್ಕಾರದಿಂದ ಶಾಲಾ ಕಾಲೇಜುಗಳ ಶುಲ್ಕಗಳ ಘೋಷಣೆ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಶೈಕ್ಷಣಿಕ ವ್ಯವಸ್ಥೆಯೇ ಅಲ್ಲೋಲಕಲ್ಲೋಲವಾಗಿದ್ದು ಶಿಕ್ಷಣ ಸಂಸ್ಥೆಗಳೂ ಸಂಕಷ್ಟ ಎದುರಿಸುತ್ತಿದೆ. ಅದರಲ್ಲೂ ಶುಲ್ಕ ವಿಚಾರದಲ್ಲಿ ಪೋಷಕರು, ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆಗಳ ನಡುವೆ ಜಟಾಪಟಿ ನಡೆದಿದೆ. ಈ ನಡುವೆ ಅನುದಾನಿತ ಶಾಲೆಗಳ ಶುಲ್ಕಗಳನ್ನು ಇನ್ನೆರಡು ದಿನಗಳಲ್ಲಿ ನಿಗದಿಪಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಶಿವಮೊಗ್ಗದಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡ ಸಚಿವ ಸುರೇಶ ಕುಮಾರ್, ಶುಲ್ಕ ನಿಗದಿ ಪಡಿಸುವ ಕುರಿತು ಎಲ್ಲಾ ಅಂಶಗಳನ್ನು ಪರಿಗಣಿಸಬೇಕಿದೆ. ಒಂದೆಡೆ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಪೋಷಕರ ಆರ್ಥಿಕ ಸ್ಥಿತಿಗತಿ ಹಾಗೂ ಹದಗೆಟ್ಟಿರುವ ಶಾಲೆಗಳ ಸ್ಥಿತಿಗತಿಗಳನ್ನು ಕೂಡ ಪರಿಗಣಿಸಬೇಕಿದೆ. ಯಾರಿಗೂ ಅನ್ಯಾಯವಾಗದಂತೆ ಶುಲ್ಕ ನಿಗದಿಪಡಿಸಲಾಗುವುದು ಎಂದರು.

ಗಡಿ ಭಾಗಗಳ ಅಭಿವೃದ್ಧಿಗೆ ಸರ್ಕಾರ ಬದ್ಧ; ಸಚಿವ ರಮೇಶ್ ಜಾರಕಿಹೊಳಿ‌

ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆಗಳು ಮತ್ತು ತಾಲ್ಲೂಕುಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ರಾಜ್ಯದ ಬೊಕ್ಕಸಕ್ಕೆ ತುಂಬಾ ಒತ್ತಡವಾಗದಂತೆ ಅನುದಾನ‌ ನೀಡುವಂತೆ ಮುಖ್ಯಮಂತ್ರಿಗಳ‌ ಮನ ಒಲಿಸುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು. ಕರ್ನಾಟಕ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ‌.ಸೋಮಶೇಖರ್ ಅವರೊಂದಿಗೆ ಸಚಿವ ರಮೇಶ್ ಜಾರಕಿಹೊಳಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ 2021-22ನೇ ಸಾಲಿನಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಕೊಡಿಸುವಂತೆ ಡಾ.‌ಸೋಮಶೇಖರ್ ಅವರು ಸಚಿವರಿಗೆ ಮನವಿ ಸಲ್ಲಿಸಿದರು. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಸಚಿವ ರಮೇಶ್ ಜಾರಕಿಹೊಳಿ,‌ ಕರ್ನಾಟಕ ರಾಜ್ಯದ ಒಟ್ಟು 19 ಜಿಲ್ಲೆಗಳು ನೆರೆ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದ್ದು ಆ ಜಿಲ್ಲೆಗಳ 63 ತಾಲ್ಲೂಕುಗಳನ್ನು ಅಭಿವೃದ್ಧಿ ಪಡಿಸುವ ಇಚ್ಚೆ ಸರ್ಕಾರಕ್ಕಿದೆ. ಕಳೆದ ವರ್ಷದ ಬಜೆಟ್ ನಲ್ಲಿ ಘೋಷಿಸಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಮಹಾಮಾರಿ ಕೋವಿಡ್ ನ‌ ಸಾಂಕ್ರಾಮಿಕ…

ಇನ್ನು ಮುಂದೆ ಈ ಹಣ್ಣಿನ ಹೆಸರು ಡ್ರ್ಯಾಗನ್ ಅಲ್ಲ, ‘ಕಮಲಂ’

ಊರುಗಳ ಹೆಸರನ್ನು, ನಗರಗಳ ಹೆಸರನ್ನು ನಮ್ಮ ಇತಿಹಾಸಗಳಿಗೆ ತಕ್ಕಂತೆ ಮರುನಾಮಕರಣ ಮಾಡಿದ್ದುಂಟು. ಇದೀಗ ಹಣ್ಣುಗಳ ಹೆಸರನ್ನೂ ಬದಲಾಯಿಸುವ ಪ್ರಯತ್ನ ನಡೆದಿದೆ. ಕುತೂಹಲಕಾರಿ ತೀರ್ಮಾನವೊಂದರಲ್ಲಿ ಡ್ರ್ಯಾಗನ್ ಫ್ರೂಟ್ ಹೆಸರನ್ನು ಕಮಲಂ ಎಂದು ಬದಲಾಯಿಸಲಾಗಿದೆ. ಗುಜರಾತ್ ನ ಸರ್ಕಾರ ಈ ಮರುನಾಮಕರಣ ಮಾಡಲು ಮುಂದಾಗಿದೆ. ಡ್ರ್ಯಾಗನ್ ಚೀನಾಕ್ಕೆ ಬಲು ಪ್ರೀಯ ಹೆಸರು. ಇತ್ತೀಚಿನ ದಿನಗಳಲ್ಲಿ ಚೀನಾವನ್ನು ಸಾಂಪ್ರದಾಯಿಕ ಎದುರಾಳಿ ಎಂದೇ ಭಾವಿಸಲಾಗುತ್ತಿದ್ದು ಅನೇಕ ವಿಚಾರಗಳಲ್ಲಿ ಆ ದೇಶವನ್ನು ಭಾರತೀಯರು ವಿರೋಧಿಸುತ್ತಲೇ ಇದ್ದಾರೆ. ಅದೇ ಸಂದರ್ಭದಲ್ಲಿ ಹಣ್ಣಿನ ಹೆಸರನ್ನೂ ಚೀನೀ ಪದದ ಬದಲಾಗಿ ಸ್ವದೇಶಿ ಹೂವಿನ ಹೆಸರನ್ನು ಇಡಲಾಗಿದೆ. ಈ ಹಣ್ಣಿನ ಹೊರ ಭಾಗ ಕಮಲದ ಆಕೃತಿಯನ್ನು ಹೋಲುತ್ತದೆ ಆದ್ದರಿಂದ ಅದಕ್ಕೆ ಕಮಲಮ್ ಎಂದು ರಾಜ್ಯ ಸರ್ಕಾರ ನಾಮಕರಣ ಮಾಡಲಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾಣಿ ಹೇಳಿದ್ದಾರೆ.

ಟೀಮ್ ಇಂಡಿಯಾಗೆ ಅಭಿನಂದನೆಗಳ ಮಹಾಪೂರ

ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಗೆದ್ದಿರುವ ಟೀಮ್ ಇಂಡಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿವೆ. ನಮ್ಮ ಯುವ ಆಟಗಾರರ ದೃಢ ಸಂಕಲ್ಪದಿಂದ ಗೆಲುವು ದಕ್ಕಿದೆ ಹೆಮ್ಮೆಯಾಗುತ್ತಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತದ ಗೆಲುವಿಗೆ ಟೀಮ್ ಇಂಡಿಯಾವನ್ನು ಅಭಿನಂದಿಸಿರುವ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ಗಾಯಗಳು, ಅನಿಶ್ಚಿತತೆಯ ನಡುವೆಯೂ ಸಿಕ್ಕಿದ ಗೆಲುವು ಶ್ರೇಷ್ಠವಾದ ಸರಣಿ ಜಯ ಎಂದು ಬಣ್ಣಿಸಿದ್ದಾರೆ. ಈ ಸಾಧನೆಯನ್ನು ಅಭಿನಂದಿಸಿರುವ ವಿವಿಎಸ್ ಲಕ್ಷ್ಮಣ್, ಅಜಿಂಕ್ಯಾ ರೆಹಾನೆಯವರ ಉತ್ತಮ ನಡೆ ಜಾಗತಿಕ ಗಮನಸೆಳೆದಿದೆ ಎಂದಿದ್ದಾರೆ.

ಅಮೆರಿಕಾಗೆ ನೂತನ ಸಾರಥಿ; ಅಧ್ಯಕ್ಷರಾಗಿ ಜೋ ಬೈಡೆನ್ ಪದಗ್ರಹಣ

ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ- ಬೈಡೆನ್ ಅಧಿಕಾರ ಸ್ವೀಕರಿಸಿದ್ದಾರೆ. ಇದೇ ವೇಳೆ, ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪದಗ್ರಹಣ ಮಾಡಿದ್ದಾರೆ. ಯುಎಸ್ ಕ್ಯಾಪಿಟಲ್ ನಲ್ಲಿ ನಡೆದ ಸಮಾರಂಭದಲ್ಲಿ ನೂತನ ಅಧ್ಯಕ್ಷ ಜೋ- ಬೈಡೆನ್ ಅವರಿಗೆ ಅಮೆರಿಕ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಾಬರ್ಟ್ ಜಾನ್ಸ್ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಂಡ ಬೈಡೆನ್, ಪ್ರಜಾತಂತ್ರದ ಗೆಲುವಿನ ಮೂಲಕ ನಾನು ಅಧಿಕಾರವಹಿಸಿಕೊಂಡಿದ್ದೇನೆ ಎಂದರು. ದೇಶದ ಮುಂದೆ ಹಲವಾರು ಸವಾಲುಗಳಿದ್ದು, ಒಗ್ಗಟ್ಟಾಗಿ ಸವಾಲನ್ನು ಎದುರಿಸೋಣ ಎಂದರು. ಇದೇ ವೇಳೆ, ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪದಗ್ರಹಣ ಮಾಡಿದ್ದಾರೆ. ಅಮೆರಿಕಾದ ಇತಿಹಾಸದಲ್ಲಿಮೊದಲೆಂಬಂತೆ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮದಗಜ ತಮಿಳು ಸಿನಿಮಾದ ಟೀಸರ್; ಸಕತ್ ರಂಜನೆ

ಮದಗಜ ತಮಿಳು ಸಿನಿಮಾದ ಟೀಸರ್ ಬಿಡುಗಡೆಯಾಗಿ. ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮದಗಜ ಚಿತ್ರ ದಕ್ಷಿಣ ಭಾರತದ ವಿವಿಧ ಭಾಷೆಗಳಲ್ಲಿ ತೆರೆಕಾಣಲಿದೆ. ಇದರ ತಮಿಳು ಟೀಸರ್ ಅನಾವರಣಗೊಂಡಿದ್ದು ಸಾಮಾಜಿಕ ಜಲತಾಣಗಳಲ್ಲಿ ಸಕತ್ ರಂಜನೆ ಒದಗಿಸುತ್ತಿದೆ.

ಎಲ್ಲ ವಿವಿಗಳಿಗೆ ಎನ್‌ಐಆರ್‌ಎಫ್‌ ರಾಂಕ್‌, ನಾಕ್‌ ಮಾನ್ಯತೆ?

ಬೆಂಗಳೂರು: ಉನ್ನತ ಶಿಕ್ಷಣ ವಿಭಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವತ್ತ ವೇಗದ ಹೆಜ್ಜೆಗಳನ್ನು ಇಡುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯದ ಎಲ್ಲ ವಿಶ್ವವಿದ್ಯಾಲಯ-ಕಾಲೇಜುಗಳ ನಾಕ್‌ ಮಾನ್ಯತೆ, ಎನ್‌ಐಆರ್‌ಎಫ್‌ ರಾಂಕ್‌ ಪಡೆಯುವ ಸಂಬಂಧ 15 ದಿನಗಳ ಒಳಗಾಗಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಡೆಡ್‌ಲೈನ್‌ ವಿಧಿಸಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಸಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಮ್ಮ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲೊಂದು ಬಹುದೊಡ್ಡ ಬದಲಾವಣೆ. ಇದಕ್ಕೆ ಅನುಗುಣವಾಗಿ ನಾವೆಲ್ಲ ಹೆಜ್ಜೆ ಇಡಬೇಕು. ಸ್ಪರ್ಧಾತ್ಮಕವಾಗಿರುವ ಈ ಸಂದರ್ಭದಲ್ಲಿ ಪ್ರತಿ ವಿವಿಯು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನ (National Institutional Ranking Framework-NIRF) ರಾಂಕ್ ಹೊಂದಿರಬೇಕು ಹಾಗೂ ಪ್ರತಿ ಕಾಲೇಜ್‌ಗೂ ನಾಕ್‌ ಮಾನ್ಯತೆ (NAAC Accreditation) ಇರಲೇಬೇಕು ಎಂದು ಹೇಳಿದ್ದಾರೆ. ಮೊದಲಿನಂತೆ ನಿಧಾನಗತಿಯಲ್ಲಿ ಕೆಲಸ ಮಾಡಿದರೆ ಸಾಲುವುದಿಲ್ಲ. ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ…

ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನ ಬ್ರಹ್ಮಕಲಶೋತ್ಸವ; ಸಚಿವ ಪ್ರಭು ಚವ್ಹಾಣ್ ಭೇಟಿ

ಉಡುಪಿ: ಕುಂಜಿಬೆಟ್ಟುವಿನ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವರಿಗೆ, ಶ್ರೀ ಈಶ್ವರ, ಶ್ರೀ ಗಣಪತಿ ಮತ್ತು ಮುಖ್ಯಪ್ರಾಣ ದೇವರಿಗೆ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಕೊನೆಯ ದಿನವಾದ ಮಂಗಳವಾರ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಬಿ. ಚವ್ಹಾಣ್ ಅವರು ಭೇಟಿ ನೀಡಿ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಾಸಕ ಕೆ. ರಘುಪತಿ ಭಟ್ ಸಚಿವರನ್ನು ದೇವಸ್ಥಾನಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶ್ರೀ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರುಗಳಾದ ಕೆ. ಲಕ್ಷ್ಮಣ ಶೇರಿಗಾರ್, ಸುಂದರ ಅಮೀನ್, ಶೈಲಶ್ರೀ ದಿವಾಕರ್ ಶೆಟ್ಟಿ, ಪ್ರಧಾನ ಅರ್ಚಕರಾದ ದಿವಾಕರ ಐತಾಳ್, ಪರ್ಯಾಯ ಅರ್ಚಕರಾದ ಗೋವಿಂದ ಐತಾಳ್ ಹಾಗೂ ರಾಧಾಕೃಷ್ಣ ಭಾರಿತ್ತಾಯ, ರಮೇಶ್ ಭಾರಿತ್ತಾಯ, ವಾಸುದೇವ್ ಭಟ್ ಉಪಸ್ಥಿತರಿದ್ದರು.