ಮತ್ಸ್ಯವೋದ್ಯಮಕ್ಕೆ ಆಧುನಿಕತೆಯ ಸ್ಪರ್ಷ; ChefTalk ಪೂಜಾರಿಗೆ ಅಭಿನಂದನೆಗಳ ಮಹಾಮಳೆ

ಉದ್ಯೋಗದಾತನ ಬಗ್ಗೆ ಗುಣಗಾನ ಕೇಳಿ ಮುಖ್ಯಮಂತ್ರಿ ಪುತ್ರ ಸಂಸದ ರಾಘವೇಂದ್ರ ಮೂಡ್ನವಿಸ್ಮಿತ.. ಅಭಿಮಾನ ಸೂಚಿಸಿ ಸನ್ಮಾನಿಸಿದ ಕ್ಷಣವೂ ಅನನ್ಯ ಹಾಗೂ ಅಪರೂಪದ ಪ್ರಸಂಗ ಉಡುಪಿ: ಸಾಂಪ್ರದಾಯಿಕ ಮತ್ಸ್ಯವೋದ್ಯಮಕ್ಕೆ ಇದೀಗ ಆಧುನಿಕತೆಯ ಸ್ಪರ್ಷ ಸಿಕ್ಕಿದೆ. ಮತ್ಸ್ಯಶ್ರೀಮಂತಿಕೆಯ ತವರಾಗಿರುವ ರಾಜ್ಯದ ಕರಾವಳಿ ಇನ್ನು ಮುಂದೆ ‘ಫಿಷ್ ವೇಪರ್ಸ್’ ಉತ್ಪನ್ನಗಳಿಂದಲೂ ಹೆಸರುವಾಸಿಯಾಗಲಿದೆ. ಅರಬ್ಬೀ ಸಮುದ್ರದಿಂದ ಹೇರಳವಾಗಿ ಸಿಗುತ್ತಿರುವ ಮತ್ಸ್ಯ ಸಂಪತ್ತನ್ನು ಆಹಾರವಾಗಿ ಬಳಸುತ್ತಿದ್ದ ಜನರಿಗೆ ಇನ್ನು ಮುಂದೆ ಅದರ ಮೌಲ್ಯವರ್ಧಿತ ಖಾದ್ಯಗಳೂ ಸಿಗಲಿವೆ. ಈ ಫಿಷ್ ವೇಪರ್ಸ್ ಹಾಗೂ ಚಿಪ್ಸ್ ಸಹಿತ ಮೀನಿನಿಂದ ವಿವಿಧ ಖಾದ್ಯಗಳನ್ನು ತಯಾರಿಸುವ ಘಟಕ ಸ್ಥಾಪನೆಗೆ ಮಂಗಳವಾರ ಶಿಲಾನ್ಯಾಸ ನೆರವೇರಿಸಲಾಯಿತು. ದೇಶದ ಪ್ರತಿಷ್ಠಿತ ಆಹಾರೋತ್ಪನ್ನ ಸಂಸ್ಥೆ ChefTalkನ ಮುಖ್ಯಸ್ಥ, ಉದ್ಯಮಿ ಗೋವಿಂದ ಬಾಬು ಪೂಜಾರಿಯವರ ಸಾರಥ್ಯದಲ್ಲಿ, ‘ಮತ್ಸ್ಯಬಂಧನ’ ಎಂಬ ಹೆಸರಲ್ಲಿ ಕರಾವಳಿ ಜನರ ಮಹತ್ವಾಕಾಂಕ್ಷೆಯ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪನ್ನ ಘಟಕ ತಲೆ ಎತ್ತಲಿದ್ದು ಮಂಗಳವಾರ ಉಡುಪಿ…

ಉದ್ಯೋಗದಾತ ಗೋವಿಂದ ಬಾಬು ಪೂಜಾರಿ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ

ಉಡುಪಿ: ಈವರೆಗೂ ಸಾಂಪ್ರದಾಯಿಕ ಗೇರು ಉತ್ಪನ್ನಗಳಿಂದ ದೇಶದ ಗಮನಸೆಳೆಯುತ್ತಿದ್ದ ಕರಾವಳಿ ಇನ್ನು ಮುಂದೆ ‘ಫಿಷ್ ವೇಪರ್ಸ್’ ಉತ್ಪನ್ನಗಳಿಂದಲೂ ಹೆಸರುವಾಸಿಯಾಗಲಿದೆ. ಅರಬ್ಬೀ ಸಮುದ್ರದಿಂದ ಹೇರಳವಾಗಿ ಸಿಗುತ್ತಿರುವ ಮತ್ಸ್ಯ ಸಂಪತ್ತನ್ನು ಆಹಾರವಾಗಿ ಬಳಸುತ್ತಿದ್ದ ಜನರಿಗೆ ಇನ್ನು ಮುಂದೆ ಅದರ ಮೌಲ್ಯವರ್ಧಿತ ಖಾದ್ಯಗಳೂ ಸಿಗಲಿದೆ. ಅರ್ಥಾತ್‌ ಫಿಷ್ ವೇಪರ್ಸ್ ಹಾಗೂ ಚಿಪ್ಸ್ ಸಹಿತ ಮೀನಿನಿಂದ ವಿವಿಧ ಖಾದ್ಯಗಳನ್ನು ತಯಾರಿಸುವ ಘಟಕ ಸ್ಥಾಪನೆಗೆ ಮುನ್ನುಡಿ ಬರೆಯಲಾಗಿದೆ. ದೇಶದ ಹೆಸರಾಂತ ಆಹಾರೋದ್ಯಮಿ ಗೋವಿಂದ ಬಾಬು ಪೂಜಾರಿಯವರ ಸಾರಥ್ಯದಲ್ಲಿ ಉಡುಪಿ ಜಿಲ್ಲೆ ಬೈಂದೂರು ಸಮೀಪದ ಗೋಳಿಹೊಳೆ ಗ್ರಾಮದ ಎಲ್ಲೂರಿನಲ್ಲಿ ಮಂಗಳವಾರ ಕರಾವಳಿ ಜನರ ಮಹತ್ವಾಕಾಂಕ್ಷೆಯ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪನ್ನ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಮತ್ಸ್ಯ ಬಂಧನ ಹೆಸರಿನ ಸಂಸ್ಥೆ ಮೂಲಕ ದೇಶದಲ್ಲೇ ಮೊದಲೆಂಬಂತೆ ಈ ಉದ್ದಿಮೆ ಕಾರ್ಯರೂಪಕ್ಕೆ ಬರಲಿದೆ. ಏನಿದು ಮತ್ಸ್ಯ ಬಂಧನ? ChefTalk ಹೆಸರಲ್ಲಿ ಆಹಾರೋದ್ಯಮ ಕ್ಷೇತ್ರವನ್ನು ಮುನ್ನಡೆಸುತ್ತಿರುವ ಕರಾವಳಿ ಮೂಲದ ಗೋವಿಂದ…

ರಾಜ್ಯ ಖನಿಜ ನಿಗಮದಿಂದ ಸಿಎಂಗೆ 29.79 ಕೋ.ರೂ. ಡಿವಿಡೆಂಡ್ ಹಸ್ತಾಂತರ

ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮಂಗಳವಾರ 29.79 ಕೋಟಿ ರೂ.ಗಳ ಡಿವಿಡೆಂಡ್ ಮೊತ್ತವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹಸ್ತಾಂತರಿಸಿದರು. ಶಾಸಕ ರವಿಸುಬ್ರಹ್ಮಣ್ಯ, ನಿಗಮದ ಅಧ್ಯಕ್ಷ ಲಿಂಗಮೂರ್ತಿ ಉಪಸ್ಥಿತರಿದ್ದರು.

ನಾಗಠಾಣಾದಲ್ಲಿ ಜನಸಂಪರ್ಕ ಸಭೆ: ಪಕ್ಷ ಬಲವರ್ಧನೆ ಗೆ ಶ್ರಮಿಸಲು ಡಿಸಿಎಂ ಕಾರಜೋಳ ಕರೆ

ವಿಜಯಪುರ: ನಾಗಠಾಣ ವಿಧಾನ ಸಭಾ ಕ್ಷೇತ್ರದ ಉಮರಾಣಿ ಗ್ರಾಮದಲ್ಲಿ ಬಿಜೆಪಿ ಪಕ್ಷವು ಏರ್ಪಡಿಸದ್ದ ಜನಸಂಪರ್ಕ ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಭಾಗವಹಿಸಿ ಕಾರ್ಯಕರ್ತರಿಗೆ ಪಕ್ಷ ಸಂಘಟನೆಯ ಮಂತ್ರ ಬೋಧಿಸಿದರು. ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ ಸರ್ಕಾರವು ಅಪರಿಮಿತವಾಗಿ ಶ್ರಮಿಸುತ್ತಿದೆ. ಪಕ್ಷ ಬಲವರ್ಧನೆಗೆ ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಶ್ರಮಿಸಬೇಕು ಎಂದರು. ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ನೂತನ ಸದಸ್ಯರೆಲ್ಲರೂ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಪಕ್ಷದ ಸಂಘಟನೆಗೆ ಶ್ರಮಿಸಬೇಕು ಎಂದು ಮಾರ್ಗದರ್ಶನ ಮಾಡಿದರು. ಸಂಸದರಾದ ರಮೇಶ್ ಜಿಗಜಿಣಗಿ , ತಾಲ್ಲೂಕುಪಂಚಾಯಿತಿ ಸದಸ್ಯರು, ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 13 ಕಾರ್ಮಿಕರ ದುರ್ಮರಣ

ದೆಹಲಿ: ಮೋದಿಯ ನಾಡಲ್ಲಿ ಇಡೀ ದೇಶವೇ ಬೆಚ್ಚಿಬೀಳುವಂತಹ ಭೀಕರ ಅಪಘಾತ. ಮಂಗಳವಾರ ಬೆಳ್ಳಂಬೆಳಿಗ್ಗೆಯೇ ಈ ದುರಂತದಲ್ಲಿ ೧೩ ಮಂದಿ ಬಡಪಾಯಿಗಳ ಬದುಕು ಅಂತ್ಯಗೊಂಡಿದೆ. ಗುಜರಾತ್’ನ ಸೂರತ್ ಸಮೀಪದ ಕೊಸಂಬಾದಲ್ಲಿ ಟ್ರಕ್ ವೊಂದು ಪಾದಚಾರಿ ಮಾರ್ಗಕ್ಕೆ ನುಗ್ಗಿದ್ದು, ಈ ಅಪಘಾತದಲ್ಲಿ 13 ಮಂದಿ ಕಾರ್ಮಿಕರು ಅಪಮೃತ್ಯುಗೊಳಗಾಗಿದ್ದಾರೆ. ಇಂದು ನಸುಕಿನ ವೇಳೆ ದುರ್ಘಟನೆ ಸಂಭವಿಸಿದೆ. ನಿರಾಶ್ರೀತ ಕಾರ್ಮಿಕರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರು. ದುರಾದೃಷ್ಟವಶಾತ್ ಅದೇ ರಸ್ತೆಯಲ್ಲಿ ಬರುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಈ ಕಾರ್ಮಿಕರಿದ್ದ ಪ್ರದೇಶದಲ್ಲಿ ಚಲಿಸಿದೆ. ಆ ವರೆಗೂ ಸುಖನಿದ್ರೆಯಲ್ಲಿದ್ದ ಬಡಪಾಯಿ ಕಾರ್ಮಿಕರು, ಈ ಭೀಕರ ದುರಂತದಿಂದಾಗಿ ಚಿರ ನಿದ್ರೆಗೆ ಜಾರಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿರುವ ಪೊಲೀಸರು ರಕ್ಷಣಾ ಪರಿಹಾರ ಕಾರ್ಯಾಚರಣೆ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದರು ಎನ್ನಲಾಗಿದೆ. ಸಾವನ್ನಪಿದ ನತದ್ರಷ್ಟ ಕಾರ್ಮಿಕರು ರಾಜಸ್ಥಾನ ಮೂಲದವರಾಗಿದ್ದಾರೆಂದು ಹೇಳಲಾಗಿದೆ.

ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯಾದ್ಯಂತ ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ರಾಜ್ಯದಲ್ಲಿ ಮೊದಲ ದಿನವೇ 62% ಮಂದಿಗೆ ಲಸಿಕೆ ನೀಡಿರುವುದು ಆಶಾದಾಯಕವಾಗಿದೆ. ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ ಎಂದರು. ಡಾ.ಸುದರ್ಶನ್ ಬಲ್ಲಾಳ್ ಅವರು ಲಸಿಕೆ ಪಡೆದಿದ್ದು, ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೀಗಾಗಿ ಜನರು ಲಸಿಕೆಯ ಮೇಲೆ ವಿಶ್ವಾಸವಿಡಬೇಕು. ಲಸಿಕೆ ಪಡೆದರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎರಡನೇ ಡೋಸ್ ಪಡೆದ 10 ದಿನಗಳ ಬಳಿಕ ರೋಗ ನಿರೋಧಕ ಶಕ್ತಿ ಬರುತ್ತದೆ. ಅಲ್ಲಿಯವರೆಗೂ ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಸಚಿವರು ಹೇಳಿದರು. ಮಣಿಪಾಲ್ ಆಸ್ಪತ್ರೆಯಲ್ಲಿ 4,200 ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಚುನಾವಣೆಯಲ್ಲಿ ಮಾಡುವಂತೆ ಬೂತ್ ಗಳನ್ನು ರೂಪಿಸಿ ವ್ಯವಸ್ಥಿತವಾಗಿ…

ಕನ್ನಡ ಕಾರ್ಯಕರ್ತರ ಆಕ್ರೋಶ; ಗಡಿನಾಡಲ್ಲಿ ಪ್ರತಿಭಟನೆ; ಬಿಎಸ್’ವೈ ಸರ್ಕಾರದ ವಿರುದ್ದವೂ ಸಿಟ್ಟು.

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಜನರಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ವಿರುದ್ಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವಿಚಾರದಲ್ಲಿ ಯಡಿಯೂರಪ್ಪ ಸರ್ಕಾರದ ವಿರುದ್ದವೂ ಸಿಟ್ಟು ವ್ಯಕ್ತ ಪಡಿಸಿದ ಪ್ರತಿಭಟನಾಕಾರರು, ಇಲ್ಲಿ ಮರಾಠಿ ಅಭಿವೃದ್ಧಿ ನಿಗಮ ಮಾಡ್ತಾರೆ, ಅಲ್ಲಿ ಬೆಳಗಾವಿ ನಮಗೆ ಸೇರಿದ್ದು ಎಂದು ಮರಾಠಿಗರು ಹೇಳುತ್ತಾರೆ. ಹಾಗಾದರೆ ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಸಿಟ್ಟು ಹೊರಹಾಕಿದ್ದಾರೆ.

ಗಡಿ ವಿಚಾರ; ರಾಜ್ಯದ ಶಾಸಕರು ಸಚಿವರು ಎಲ್ಲಿದ್ದಾರೆ? ವಾಟಾಳ್ ಪ್ರಶ್ನೆ

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಜನರಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಕನ್ನಡ ಪರ ಸಂಘಟನೆಗಳ ನಾಯಕರನ್ನು ಕೆರಳುವಂತೆ ಮಾಡಿದೆ. ಉದ್ಧವ್ ಠಾಕ್ರೆ ಹೇಳಿಕೆಯಿಂದ ಸಿಡಿಮಿಡಿಗೊಂಡಿರುವ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಪ್ರಮುಖರು ಈ ಬೆಳವಣಿಗೆಗೆ ರಾಜ್ಯದ ರಾಜಕೀಯ ನಾಯಕರೇ ಹೊಣೆ ಎಂದು ಬೊಟ್ಟು ಮಾಡಿದ್ದಾರೆ. ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಗಡಿ ಜಿಲ್ಲೆಯ ಶಾಸಕರು, ಸಚಿವರು ಏನು ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸೊಲ್ಲಾಪುರ ಸಹಿತ ಮಹಾರಾಷ್ಟ್ರ ವ್ಯಾಪ್ತಿಯಲ್ಲಿರುವ ಅನೇಕ ಪ್ರದೇಶಗಳಲ್ಲಿ ಕನ್ನಡ ಭಾಷಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದು ಆ ಪ್ರದೇಶಗಳು ಕರ್ನಾಟಕಕ್ಕೇ ಸೇರಬೇಕಿದೆ ಎಂದು ವಾಟಾಳ್ ನಾಗರಾಜ್ ಅವರು ಮರಾಠಿ ನಾಯಕರಿಗೆ ಎದಿರೇಟು ನೀಡಿದ್ದಾರೆ.

ಮಹಾರಾಷ್ಟ್ರದಿಂದ ಮತ್ತೆ ಗಡಿ ಕ್ಯಾತೆ; ವಿವಾದ ಸೃಷ್ಟಿಸಿದ ಠಾಕ್ರೆ ಟ್ವೀಟ್

ಮುಂಬೈ: ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಜನರಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಉದ್ಧವ್ ಠಾಕ್ರೆ, ಬಹುಸಂಖ್ಯೆಯಲ್ಲಿ ಮರಾಠಿ ಸಂಸ್ಕೃತಿ ಹೊಂದಿರುವ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಬೆಳಗಾವಿ ಗಡಿ ವಿವಾದವನ್ನು ಕೆದಕಿ ಕನ್ನಡ ಪರ ಸಂಘಟನೆಗಳ ನಾಯರ ಆಕ್ರೋಶಕ್ಕೆ ಗುರಿಯಲಿದ್ದಾರೆ. ಮಹಾರಾಷ್ಟ್ರ ಏಕೀಕರಣಕ್ಕಾಗಿ ಹೋರಾಡಿದವರ ಗೌರವಾರ್ಥಕವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿವರ್ಷ ಜನವರಿ 17 ರಂದು ಆಚರಿಸುವ ಹುತಾತ್ಮರ ದಿನ ಪ್ರಮುಕ್ತ ಉದ್ಧವ್ ಠಾಕ್ರೆ ಈ ಟ್ವೀಟ್ ಮಾಡಿದ್ದಾರೆ. कर्नाटकव्याप्त मराठी भाषिक आणि सांस्कृतिक प्रदेश महाराष्ट्रात आणणे हीच या सीमा लढ्यात हौतात्म्य पत्करलेल्या सैनिकांना आदरांजली ठरणार आहे. त्यासाठी आम्ही एकजूट आणि कटिबद्ध…

ದೇಶದಲ್ಲೇ ಪ್ರಥಮ.. ‘ಫಿಷ್ ವೇಪರ್ಸ್’ ಘಟಕಕ್ಕೆ ಮಂಗಳವಾರ ಶಿಲಾನ್ಯಾಸ

ಉಡುಪಿ: ಫಿಶ್ ಕರಿ, ಫಿಶ್ ಫ್ರೈ, ಹೀಗೆ ಮೀನಿನ ವಿವಿಧ ಖಾದ್ಯಗಳನ್ನು ನೀವು ಸವಿದಿರಬಹುದು. ಆದರೆ ಮೀನಿನ ಚಿಪ್ಸ್ ತಿಂದಿದ್ದೀರಾ? ಇದೀಗ ‘ಫಿಷ್ ವೇಪರ್ಸ್’ ಮೇನಿಯಾ ಸೃಷ್ಟಿಸುವ ಪ್ರಯತ್ನಕ್ಕೆ ಕರಾವಳಿ ಮೂಲದ ಉದ್ಯಮಿ ಮುಂದಾಗಿದ್ದಾರೆ. ಈ ಮಹತ್ವಾಕಾಂಕ್ಷೆಯ ಫಿಷ್ ವೇಪರ್ಸ್ ತಯಾರಿಕಾ ಘಟಕ, ಮೀನಿನ ಮೌಲ್ಯವರ್ಧಿತ ಖಾದ್ಯಗಳ ಈ ಉತ್ಪಾದನಾ ಘಟಕಕ್ಕೆ ಮಂಗಳವಾರ ಶಿಲಾನ್ಯಾಸ ನೆರವೇರಲಿದೆ. ಉಡುಪಿ ಜಿಲ್ಲೆ ಬೈಂದೂರು ಸಮೀಪದ ಎಲ್ಲೂರು ಎಂಬಲ್ಲಿ ಫಿಷ್ ವೇಪರ್ಸ್ ಫ್ಯಾಕ್ಟರಿ ಸ್ಥಾಪನೆಯಾಗಲಿದ್ದು ದೇಶದಲ್ಲೇ ವಿಶೇಷ ಎಂಬಂತೆ ಮೀನಿನಿಂದ ವಿವಿಧ ತಿನಿಸುಗಳು ಇಲ್ಲಿ ತಯಾರಾಗಲಿದೆ. ಕರ್ನಾಟಕ ಸರ್ಕಾರದ ಮೀನುಗಾರಿಕೆ ಇಲಾಖೆಯ ಸಹಭಾಗಿತ್ವದಲ್ಲಿ ಸಾಮಾಜಿಕ ಕಾರ್ಯಕರ್ತರೂ ಆದ ಉದ್ಯಮಿ ಗೋವಿಂದ ಬಾಬು ಪೂಜಾರಿ ಈ ಉದ್ಯಮದ ಮೂಲಕ ಮೀನುಗಾರರ ಪಾಲಿಗೆ ಆಶಾವಾದಿಯಾಗಿದ್ದಾರೆ. ಮತ್ಯೋದ್ಯಮ ಉತ್ತೇಜನ ಉದ್ದೇಶದಿಂದ ಈ ವಿನೂತನ ಉದ್ದಿಮೆಗೆ ಮುನ್ನುಡಿ ಬರೆಯಲಾಗುತ್ತಿದ್ದು, ಮೀನಿನಿಂದ ಚಿಪ್ಸ್ ತಯಾರಿಸುವ ಸುಧಾರಿತ ಅವಿಷ್ಕಾರ ಈ…