‘ತಲೆತಗ್ಗಿಸುವ ಯಾವ ಕೆಲಸ ಮಾಡೋದಿಲ್ಲ!; ಜಗ್ಗೇಶ್

ಬೆಂಗಳೂರು: ಹುಲಿ ಉಗುರು ಹೊಂದಿರುವ ಆರೋಪದಲ್ಲಿ ಬಿಗ್ ಬಾಸ್ ಸ್ಪರ್ದಿ ಸೆಲೆಬ್ರೆಟಿಗಳಲ್ಲಿ ನಡುಕ ಉಂಟಾಗಿದೆ. ಇದೇ ವೇಳೆ, ನಟರಾದ ದರ್ಶನ, ಜಗ್ಗೇಶ್, ನಿಖಿಲ್, ರಾಕ್ ಲೈನ್ ವೆಂಕಟೇಶ್ ಅವರೂ ಹುಳು ಉಗುರಿನ ರೀತಿಯ ಪೆಂಡೆಂಟ್ ಧರಿಸಿದ ಫೋಟೋಗಳಿಂದಾಗಿ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹಲವು ಗಣ್ಯರಿಗೆ ಅರಣ್ಯಾಧಿಕಾರಿಗಳು ನೋಟೀಸ್ ಜಾರಿಗೊಳಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ನಟ ಜಗ್ಗೇಶ್ ಕಾನೂನು ದೊಡ್ಡದು ಎಂದು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯಸಭಾ ಸದಸ್ಯರೂ ಆದ ನಟ ಜಗ್ಗೇಶ್, ‘ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ! ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ! ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ ಎಂದು ಒಗಟು ಒಗಟಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲ! ಪಾಚ್ಕೊಳಿ, ಎಂದು…

ಅಮೆರಿಕದಲ್ಲಿ ಗುಂಡಿನ ದಾಳಿ 22 ಮಂದಿ ಸಾವು

ಅಮೆರಿಕದಲ್ಲಿ ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು 22 ಮಂದಿ ಸಾವನ್ನಪ್ಪಿದ್ದಾರೆ. 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಲೆವಿಸ್ಟನ್​ನಲ್ಲಿರುವ ಸೆಂಟ್ರಲ್ ಮೈನೆ ಮೆಡಿಕಲ್ ಸೆಂಟರ್​ನಲ್ಲಿ ಈ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭೀಕರ ದಾಳಿ ಅಮೆರಿಕಾವನ್ನು ಆತಂಕಕ್ಕೀಡು ಮಾಡಿದ್ದು ಕೃತ್ಯ ನಡೆಸಿದವರಿಗಾಗಿ ತನಿಖಾ ಸಂಸ್ಥೆಗಳು ಹುಡುಕಾಟ ನಡೆಸಿದೆ. ಈ ದಾಳಿ ಕುರಿತಂತೆ, ಆಂಡ್ರೊಸ್ಕೋಗ್ಗಿನ್ ಕೌಂಟಿ ಶೆರಿಫ್ ಕಚೇರಿ ಶಂಕಿತನ ಎರಡು ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದೆ.

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; 12 ಮಂದಿ ಸಾವು

ಚಿಕ್ಕಬಳ್ಳಾಫುರ: ಚಿಕ್ಕಬಳ್ಳಾಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ನಸುಕಿನ ವೇಳೆ ಚಿಕ್ಕಬಳ್ಳಾಪುರ ಹೊರ ವಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಲಾರಿ ಹಾಗೂ ಟಾಟಾ ಸುಮೊ ನಡುವೆ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಂದು ಮುಂಜಾನೆ ನಸುಕಿನ ಜಾವ ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದೆ. ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟಾಟಾ ಸುಮೋ ಚಾಲಕ ದಟ್ಟ ಮಂಜು ಹಿನ್ನೆಲೆಯಲ್ಲಿ ಸರಿಯಾಗಿ ರಸ್ತೆ ಕಾಣಿಸದೆ ನಿಂತಿದ್ದ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಟಾಟಾ ಸುಮೊ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ 12 ಜನ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯರು, ಮಕ್ಕಳು ಸೇರಿದಂತೆ ಒಟ್ಟು 12 ಜನ ಮೃತಪಟ್ಟಿದ್ದಾರೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಮೃತರು ಆಂಧ್ರದ ಗೊರಂಟ್ಲ ನಿವಾಸಿಗಳು ಎಂದು ತಿಳಿದುಬಂದಿದೆ.

ಸಿನಿ ಲೋಕದ ಗಣ್ಯರನ್ನೂ ಪರಚಿದ ‘ಹುಲಿ ಉಗುರು’ ಪ್ರಕರಣ

ಬೆಂಗಳೂರು: ಹುಲಿ ಉಗುರು ಹೊಂದಿರುವ ಆರೋಪದಲ್ಲಿ ಬಿಗ್ ಬಾಸ್ ಸ್ಪರ್ದಿ ಸೆಲೆಬ್ರೆಟಿಗಳಲ್ಲಿ ನಡುಕ ಉಂಟಾಗಿದೆ. ಇದೇ ವೇಳೆ, ನಟರಾದ ದರ್ಶನ, ಜಗ್ಗೇಶ್, ನಿಖಿಲ್, ರಾಕ್ ಲೈನ್ ವೆಂಕಟೇಶ್ ಅವರೂ ಹುಳು ಉಗುರಿನ ರೀತಿಯ ಪೆಂಡೆಂಟ್ ಧರಿಸಿದ ಫೋಟೋಗಳಿಂದಾಗಿ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹಲವು ಗಣ್ಯರಿಗೆ ಅರಣ್ಯಾಧಿಕಾರಿಗಳು ನೋಟೀಸ್ ಜಾರಿಗೊಳಿಸಿದ್ದಾರೆ. ಅಷ್ಟೇ ಅಲ್ಲ, ನಟ ದರ್ಶನ ಅವರ ನಿವಾಸಕ್ಕೆ ಲಗ್ಗೆ ಹಾಕಿರುವ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಿಖಿಲ್ ಕುಮಾರಸ್ವಾಮಿ, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ಅವರ ಮನೆಗಳಿಗೂ ತೆರಳಿ ಪರಿಶೀಲನೆ ನಡೆಸಿರುವ ಬೆಳವಣಿಗೆ ತೀವ್ರ ಕುತೂಹಲ ಕೆರಳಿಸಿದೆ.

ಪಂಚರಾಜ್ಯ ಸಮರ: ತೆಲಂಗಾಣದಲ್ಲಿ ನವೆಂಬರ್ ಮೊದಲ ವಾರ ರಾಹುಲ್ ಪ್ರಚಾರ

ತೆಲಂಗಾಣ: ನವೆಂಬರ್ ಮೊದಲ ವಾರದಲ್ಲಿ ರಾಹುಲ್ ಗಾಂಧಿ ತೆಲಂಗಾಣದಲ್ಲಿ ಪ್ರಚಾರ ಪ್ರವಾಸ ಕೈಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಭೇಟಿಯ ನಿಖರವಾದ ವೇಳಾಪಟ್ಟಿಯನ್ನು ಕಾಂಗ್ರೆಸ್ ಇನ್ನೂ ದೃಢೀಕರಿಸಲಾಗಿಲ್ಲ, ಈ ಹಂತದಲ್ಲಿ ಅವರು ತೆಲಂಗಾಣದ ದಕ್ಷಿಣ ಜಿಲ್ಲೆಗಳ ಮೇಲೆ ಕೇಂದ್ರೀಕರಿಸುತ್ತಾರೆ ಎಂದು ನಿರೀಕ್ಷಿಸಲಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರವನ್ನು ರಾಹುಲ್ ಗಾಂಧಿ ಮತ್ತು ಅವರ ಸಹೋದರಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಅಕ್ಟೋಬರ್ 18 ರಂದು ಸಾರ್ವಜನಿಕ ಸಭೆಯೊಂದಿಗೆ ಪ್ರಾರಂಭಿಸಿದ್ದರು. ಅಕ್ಟೋಬರ್ 19 ಮತ್ತು 20 ರಂದು ಉತ್ತರ ತೆಲಂಗಾಣದ ಐದು ಜಿಲ್ಲೆಗಳ ವಿವಿಧ ಕ್ಷೇತ್ರಗಳಲ್ಲಿ ನಡೆದ ವಿಜಯಭೇರಿ ಬಸ್ ಯಾತ್ರೆಯಲ್ಲಿ ರಾಹುಲ್ ಗಾಂಧಿ ಸಕ್ರಿಯವಾಗಿ ಭಾಗವಹಿಸಿದ್ದರು. ಅಕ್ಟೋಬರ್ 28 ರಿಂದ ಎರಡನೇ ಹಂತದ ಬಸ್ ಯಾತ್ರೆ ಆರಂಭವಾಗಲಿದೆ ಎಂದು ರಾಜ್ಯ ಪಕ್ಷದ ಕಾರ್ಯಾಧ್ಯಕ್ಷ ಮಹೇಶ್ ಕುಮಾರ್ ಗೌಡ್ ಘೋಷಿಸಿದ್ದಾರೆ. ಆದರೆ, ವೇಳಾಪಟ್ಟಿ ಮತ್ತು ಅದರಲ್ಲಿ ಭಾಗವಹಿಸುವ…

ಕರ್ನಾಟಕಕ್ಕೆ ಒಂದು ಭಾಗ, ಕೇರಳಕ್ಕೆ ಇನ್ನೊಂದು ಭಾಗ? ಜೆಡಿಎಸ್ ಅಸ್ತಿತ್ವ ಬಗ್ಗೆ ಡಿಕೆಶಿ ವ್ಯಂಗ್ಯ

ಬೆಂಗಳೂರು: “ಕುಮಾರಣ್ಣ ಮೈತ್ರಿ ಕರ್ನಾಟಕಕ್ಕೆ ಮಾತ್ರ ಎನ್ನುತ್ತಿದ್ದಾರೆ. ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇರಳಕ್ಕೆ ಒಂದು ಭಾಗ, ಕರ್ನಾಟಕಕ್ಕೆ ಒಂದು ಭಾಗ ಎಂದು ಹೇಗೆ ಮಾಡುತ್ತಾರೋ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಜೆಡಿಎಸ್ ಎನ್‌ಡಿಎಗೆ ಸೇರಿದ ಕಾರಣ, ಕೇರಳ ಸೇರಿದಂತೆ ಇತರೇ ರಾಜ್ಯಗಳ ಜೆಡಿಎಸ್ ಪಕ್ಷದ ನೂರಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅದರಲ್ಲೂ ‘ಇಂಡಿಯಾ’ ಗೆ ಸೇರುತ್ತಿದ್ದಾರೆ ಎಂದರು. ನಾನು ಕೇವಲ ಪಕ್ಷಕ್ಕೆ ಆಹ್ವಾನ ನೀಡಲು ಬಂದಿಲ್ಲ. ಒಬ್ಬೊಬ್ಬ ನಾಯಕರು, ಕಾರ್ಯಕರ್ತರು ಕನಿಷ್ಠ 10 ಜನರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿ ನೀಡಲು ಬಂದಿದ್ದೇನೆ. ಕಾಂಗ್ರೆಸ್ ಪಕ್ಷವೇ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಎಲ್ಲರೂ ಸೇರಿ ಮತ್ತಷ್ಟು ಪಕ್ಷವನ್ನು ಬಲಪಡಿಸೋಣ ಎಂದ ಅವರು, ಇತರರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ…

ಪಕ್ಷಾಂತರ ಪರ್ವ; ಶಿವಮೊಗ್ಗ ಜಿಲ್ಲೆಯ ಜೆಡಿಎಸ್ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಾಗ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಬೆಂಗಳೂರಿನಲ್ಲಿಂದು ಜೆಡಿಎಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಕಾರ್ಯಕ್ರಮ ಗಮನಸೆಳೆಯಿತು. ಶಿವಮೊಗ್ಗದ ಜೆಡಿಎಸ್ ಮುಖಂಡ ಶ್ರೀಕಾಂತ್, ನಾಗರಾಜ್, ಪಾಲಾಕ್ಷ, ತುಮಕೂರಿನ ಶಫಿ ಅಹ್ಮದ್, ಫಾರ್ಜಾನ ತಮ್ಮ ಅಪಾರ ಬೆಂಬಲಿಗರ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಬಿ.ಎನ್ ಚಂದ್ರಪ್ಪ, ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಜಯಚಂದ್ರ, ಗೀತಾ ಶಿವರಾಜ್ ಕುಮಾರ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹುಲಿ ಉಗುರು ವಿವಾದ; ದರ್ಶನ್ ವಿರುದ್ದವೂ ಕ್ರಮ ಸಾಧ್ಯತೆ: ಸಚಿವ ಖಂಡ್ರೆ ಹೇಳಿದ್ದು ಹೀಗೆ

ಈ ನೆಲದ ಕಾನೂನು ಎಲ್ಲರಿಗೂ ಒಂದೇ ಯಾರೇ ತಪ್ಪು ಮಾಡಿದ್ದರು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ.#PressMeet #Kalburgi @aranya_kfd pic.twitter.com/KoV56nbwVe — Eshwar Khandre (@eshwar_khandre) October 25, 2023

ನಕಲಿ ಆಧಾರ್ ಕಾರ್ಡ್ ಕೇಸ್; ಸಂಫೂರ್ಣ ಜಾಲ ಬೇಧಿಸಲು ಉನ್ನತ ಮಟ್ಟದ ತನಿಖೆ ಅಗತ್ಯ

ಬೆಂಗಳೂರು: ಸಚಿವ ಭೈರತಿ ಸುರೇಶ್ ಆಪ್ತರ ನಕಲಿ ಆಧಾರ್ ಕಾರ್ಡ್ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಇದರ ಹಿಂದಿನ ಜಾಲವನ್ನು ಭೇದಿಸಿ ಪೂರ್ಣ ಜಾಲವನ್ನು ಬಂಧಿಸಲು ಸೂಚಿಸಬೇಕು ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಎಸ್ ರೆಡ್ಡಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ಸುರೇಶ್ ಕುಮಾರ್ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿವೇಕ್ ರೆಡ್ಡಿ, ಚುನಾವಣಾ ಆಯೋಗವು ಇಂಥ ಮತದಾರರ ನಕಲಿ ಗುರುತುಚೀಟಿ ಕುರಿತಂತೆ ತನಿಖೆ ನಡೆಸಬೇಕಿದೆ ಎಂದು ಪ್ರತಿಪಾದಿಸಿದರು. ಭಾರತದಲ್ಲಿ ಪೌರತ್ವ ಗುರುತುಚೀಟಿ ಇಲ್ಲ; ಅದಕ್ಕೆ ಹತ್ತಿರದ ಹೋಲಿಕೆಯ ಕಾರ್ಡ್ ಆಧಾರ್ ಕಾರ್ಡ್. ಇದರ ಮೂಲಕ ಹಲವಾರು ಸೌಲಭ್ಯ ಪಡೆಯಬಹುದು ಎಂದರು. ಬಾಂಗ್ಲಾದೇಶದಿಂದ ಬಂದ ನಿವಾಸಿಗಳು ಅತ್ಯಂತ ಸುಲಭವಾಗಿ ಇಂಥ ನಕಲಿ ಗುರುತಿನ ಚೀಟಿ ಪಡೆಯುವಂತಾಗಿದೆ ಎಂದು ವಿವೇಕ್ ರೆಡ್ಡಿ ಆಕ್ಷೇಪಿಸಿದರು. ಭಾರತೀಯ ನಿವಾಸಿಗಳು ಕೆಲವು ಸಂದರ್ಭಗಳಲ್ಲಿ ಕೋರ್ಟಿಗೆ ಹೋಗಿ, ಪುರಾವೆ…

ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ- ಎನ್‍ಐಎ ತನಿಖೆಗೆ BJP ಆಗ್ರಹ

ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ ಅಥವಾ ಎನ್‍ಐಎ ತನಿಖೆ ಮಾಡಬೇಕು ಎಂದು ಎಂದು ರಾಜ್ಯದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಸಿದ್ಧಪಡಿಸಿದ ನಕಲಿ ಆಧಾರ್ ಕಾರ್ಡ್‍ಗಳನ್ನು ರದ್ದುಪಡಿಸಬೇಕು. ಅಪರಾಧಿಗಳು ತಪ್ಪಿಸಿಕೊಳ್ಳಲು ಬಿಡಬಾರದು. ಇದು ಕೇವಲ ರಾಜಕೀಯದ ಪ್ರಶ್ನೆಯಲ್ಲ; ಸಮಾಜದ ಅಳಿವು ಉಳಿವಿನ ಪ್ರಶ್ನೆ ಎಂದರು. ಜನ್ಮ ದೃಢೀಕರಣ ಪತ್ರವನ್ನೂ ನೀಡದೆ ಆಧಾರ್ ಕಾರ್ಡ್ ಮಾಡಲಾಗಿದೆ ಎಂದರೆ, ಇವರ ಅಟ್ಟಹಾಸ, ಅಹಂಕಾರ ಎಷ್ಟಿರಬೇಕು ಎಂದು ಪ್ರಶ್ನಿಸಿದರು. ಇದನ್ನೂ ಗಂಭೀರವಾಗಿ ಪರಿಗಣಿಸಬೇಕು. ಇದನ್ನು ಚುನಾವಣಾ ಗೆಲುವಿಗಾಗಿ ಮಾಡಿಸಿದ್ದಾರೆ. ಇದರ ಕುರಿತು ಚುನಾವಣಾ ಆಯೋಗಕ್ಕೂ ದೂರು ಕೊಡಲಿದ್ದೇವೆ. ಆಧಾರ್ ಕಾರ್ಡ್, ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, ಎನ್‍ಐಎ ಅಥವಾ ಸಿಬಿಐಗೆ ಇದನ್ನು ಒಪ್ಪಿಸಲು…