ಮಂಗಳೂರು: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರ ಪರವಾಗಿ ವಿಡಿಯೋ ಮಾಡಿ ಸಾಮಾಜಿಕ ಜಾಲದಲ್ಲಿ ಹರಿಯಬಿಟ್ಟಿರುವ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಿವಾಸಿ ಜಾಕಿರ್ ಎಂಬಾತ ಈ ಕೃತ್ಯ ನಡೆಸಿದ್ದು ಈ ವೀಡಿಯೋ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆಯೇ ಮಂಗಳೂರು ಉತ್ತರ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಹಮಾಸ್ ಬಂಡುಕೋರರ ವಿಜಯಕ್ಕಾಗಿ ಪ್ರಾರ್ಥನೆಗೆ ಈತ ಕರೆ ನೀಡಿದ ವಿಡಿಯೋ ವೈರಲ್ ಆಗಿದೆ. ಪೊಲೀಸ್ ಮೂಲಗಳ ಪ್ರಕಾರ, ಹಮಾಸ್ ಉಗ್ರರನ್ನು ಬೆಂಬಲಿಸಿ ಜಾಕಿರ್ ಸಾಮಾಜಿಕ ಜಾಲತಾಣದಲ್ಲಿ ಈತ ವಿಡಿಯೋ ಹರಿಬಿಟ್ಟಿದ್ದ.
Year: 2023
ಹಮಾಸ್ ಉಗ್ರರನ್ನು ಬೆಂಬಲಿಸಿದ್ದ ಮಂಗಳೂರು ವ್ಯಕ್ತಿ ಅಂದರ್
ವಿಶ್ವಕಪ್ ಕ್ರಿಕೆಟ್: ಪಾಕ್ ವಿರುದ್ಧ ಜಯ; ಭಾರತಕ್ಕೆ ಸತತ 8ನೇ ಗೆಲುವು
ಅಹಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಭಾರತ 7 ವಿಕೆಟ್ಗಳಿಂದ ಜಯಗಳಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ 7 ವಿಕೆಟ್ಗಳಿಂದ ಪಾಕಿಸ್ತಾನವನ್ನು ಮಣಿಸಿದೆ. ಈ ಮೂಲಕ 2023ರ ವಿಶ್ವಕಪ್ನಲ್ಲಿ ಭಾರತ ಸತತ 8ನೇ ಗೆಲುವು ಸಾಧಿಸಿದೆ. ಶನಿವಾರದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಭಾರತದ ಬೌಲರ್’ಗಾಳ ದಾಳಿಗೆ ತತ್ತರಿಸಿದರು. ಪಾಕಿಸ್ತಾನ ತಂಡ 42.5 ಓವರ್ಗಳಲ್ಲ ಕೇವಲ 191 ರನ್ ಗಳಿಸುವಲ್ಲಿ ಶಕ್ತವಾಯಿತು. ಇದಕ್ಕೆ ಉತ್ತರವಾಗಿ ಭಾರತವು 30.3 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಪಂದ್ಯವನ್ನು ನಿರಾಯಾಸವಾಗಿ ಗೆದ್ದುಕೊಂಡಿತು. ಭಾರತದ ಪರ ರೋಹಿತ್ ಶರ್ಮಾ 86, ಶುಭ್ಮನ್ ಗಿಲ್ 16, ವಿರಾಟ್ ಕೊಹ್ಲಿ 16 ರನ್ ಗಳಿಸಿದ್ದಾರೆ. ಶ್ರೇಯಸ್ ಅಯ್ಯರ್ ಅಜೇಯ 53 ಮತ್ತು ಕೆಎಲ್ ರಾಹುಲ್ ಅಜೇಯ 19 ರನ್…
Rishab Shetty Films: ಶರಣಮ್ಮ ಅಭಿನಯದ ‘ಶಿವಮ್ಮ’
ಅಂತರಾಷ್ಟ್ರೀಯ ಒಲಿಂಪಿಕ್ಸ್ಗೆ ಜನಪ್ರಿಯ ಕ್ರಿಕೆಟ್ ಸೇರ್ಪಡೆ
ದೆಹಲಿ: ವಿಶ್ವದ ಅತ್ಯಂತ ಜನಪ್ರಿಯ ಕ್ರೀಡಾಕೂಟವಾದ ಒಲಿಂಪಿಕ್ಸ್ಗೆ ಕ್ರಿಕೆಟ್ ಸೇರ್ಪಡೆಗೊಂಡಿದೆ. ಈ ಮೂಲಕ 128 ವರ್ಷಗಳ ನಂತರ ಒಲಿಂಪಿಕ್ಸ್ಗೆ ಜನಪ್ರಿಯ ಕ್ರಿಕೆಟ್ ಸೇರ್ಪಡೆಗೊಂಡಿದೆ.. ಈ ಬಗ್ಗೆ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ತೆಲಂಗಾಣ ಕದನ: 119 ಅಸೆಂಬ್ಲಿ ಸ್ಥಾನಗಳ ಪೈಕಿ 70 ಸ್ಥಾನಗಳಿಗೆ ಕಾಂಗ್ರೆಸ್ ಚೌಕಾಸಿ
ನವದೆಹಲಿ: ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಸಂಬಂಧ ತೆಲಂಗಾಣ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (CEC) ನಡೆಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಸಂಸದರಾದ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ. ರೇವಂತ್ ರೆಡ್ಡಿ, ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಕೆ. ಮುರಳೀಧರನ್, ರಾಜ್ಯ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ ಮತ್ತು ಇತರ ಹಿರಿಯ ನಾಯಕರು ಸುದೀರ್ಘ ರಣತಂತ್ರ ನಡೆಸಿದರು. ತೆಲಂಗಾಣದ 119 ವಿಧಾನಸಭಾ ಸ್ಥಾನಗಳ ಪೈಕಿ 70 ಸ್ಥಾನಗಳ ಮೇಲೆ ಈ ನಾಯಕರು ಗಮನ ಕೇಂದ್ರೀಕರಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಹಿರಿಯ ನಾಯಕರ ನಡುವೆ ಕನಿಷ್ಠ ಮೂರು ಗಂಟೆಗಳ ಕಾಲ ಚರ್ಚೆನಡೆಯಿತು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ನಾಯಕ ಕೆ.ಮುರಳೀಧರನ್, “ನಾವು 119 ರಲ್ಲಿ…
ಆಪರೇಷನ್ ಅಜಯ್: ಇಸ್ರೇಲ್ನಿಂದ 235 ಭಾರತೀಯರನ್ನು ಕರೆತಂದ ಎರಡನೇ ವಿಮಾನ
ದೆಹಲಿ: ಹಮಾಸ್ ದಾಳಿ ನಂತರ ಇಸ್ರೇಲ್ನಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ, ‘ಆಪರೇಷನ್ ಅಜಯ್’ ಅಡಿಯಲ್ಲಿ ಎರಡನೇ ವಿಮಾನವು 235 ಭಾರತೀಯ ಪ್ರಜೆಗಳನ್ನು ಯಶಸ್ವಿಯಾಗಿ ನವದೆಹಲಿಗೆ ಕರೆತಂದಿದೆ. ವಿದೇಶಾಂಗ ವ್ಯವಹಾರಗಳು ಮತ್ತು ಶಿಕ್ಷಣ ರಾಜ್ಯ ಸಚಿವ ರಾಜ್ಕುಮಾರ್ ರಂಜನ್ ಸಿಂಗ್ ಅವರು ವಿಮಾನ ನಿಲ್ದಾಣದಲ್ಲಿ ಹಿಂದಿರುಗಿದ ನಾಗರಿಕರಿಗೆ ಆತ್ಮೀಯ ಸ್ವಾಗತವನ್ನು ನೀಡಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ‘ಆಪರೇಷನ್ ಅಜಯ್’ ನ ನಿರಂತರ ಪ್ರಯತ್ನಗಳಿಗೆ ತನ್ನ ಬದ್ಧತೆಯನ್ನು ವ್ಯಕ್ತಪಡಿಸಿತು, ನಾಗರಿಕರನ್ನು ಸ್ವದೇಶಕ್ಕೆ ಹಿಂದಿರುಗಿಸುವಲ್ಲಿ ಮಿಷನ್ ಪಾತ್ರವನ್ನು ಒತ್ತಿಹೇಳಿತು. ಅವರು ಗಮನಿಸಿದರು, ಆಪರೇಷನ್ ಅಜಯ್ ನಾಗರಿಕರನ್ನು ಮನೆಗೆ ಕರೆತರುವುದನ್ನು ಮುಂದುವರೆಸಿದೆ. 235 ನಾಗರಿಕರನ್ನು ಹೊತ್ತ 2 ನೇ ವಿಮಾನವು ನವದೆಹಲಿಗೆ ಆಗಮಿಸಿದೆ ಎಂದವರು ಹೇಳಿದರು. ಇಸ್ರೇಲ್ನಿಂದ ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಹಿಂದಿರುಗಿಸುವಲ್ಲಿ ಭಾರತ ಸರ್ಕಾರ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ತ್ವರಿತ ಮತ್ತು ದಕ್ಷ ಪ್ರತಿಕ್ರಿಯೆಗೆ ಸಿಂಗ್ ತೃಪ್ತಿ ವ್ಯಕ್ತಪಡಿಸಿದರು. 212…
ಮಧ್ಯ ಪ್ರಾಚ್ಯ ಸಂಘರ್ಷ: ಇಸ್ರೇಲಿಗಳಿಂದ 14 ಪ್ಯಾಲೆಸ್ಟೀನಿಯನ್ನರ ಹತ್ಯೆ
ತುಲ್ಕರ್ಮ್: ಮಧ್ಯ ಪ್ರಾಚ್ಯ ಸಂಘರ್ಷ ಸಂಕೀರ್ಣ ಸ್ಥಿತಿ ತಲುಪಿದ್ದು ಇಸ್ರೇಲಿ ಸೇನೆ 14 ಪ್ಯಾಲೆಸ್ಟೀನಿಯನ್ನರನ್ನು ಹತ್ಯೆ ಮಾಡಿದೆ. ಪಶ್ಚಿಮ ದಂಡೆಯಾದ್ಯಂತ ಹಲವಾರು ನಗರಗಳಲ್ಲಿ ಇಸ್ರೇಲಿ ಪಡೆಗಳೊಂದಿಗಿನ ಘರ್ಷಣೆಯಲ್ಲಿ 14 ಪ್ಯಾಲೆಸ್ತೀನಿಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಫೆಲೆಸ್ತೀನ್ ಭದ್ರತಾ ಮೂಲಗಳು ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿವೆ. ಪ್ಯಾಲೇಸ್ಟಿನಿಯನ್ ಇಸ್ಲಾಮಿಕ್ ರೆಸಿಸ್ಟೆನ್ಸ್ ಮೂವ್ಮೆಂಟ್ (ಹಮಾಸ್) ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಏಳನೇ ದಿನದಂದು ಮತ್ತಷ್ಟು ಘರ್ಷಣೆಗಳು ಭುಗಿಲೆದ್ದವು. ಕನಿಷ್ಠ ಐವರು ಪ್ಯಾಲೇಸ್ಟಿನಿಯನ್ ಪ್ರಜೆಗಳು ತುಲ್ಕರ್ಮ್ ನಗರದಲ್ಲಿ ಸಾವನ್ನಪ್ಪಿದ್ದಾರೆ. ಇಸ್ರೇಲಿ ಮಾಧ್ಯಮ ವರದಿಗಳ ಪ್ರಕಾರ, ತುಲ್ಕರ್ಮ್ ಬಳಿ ತಮ್ಮ ವೆಸ್ಟ್ ಬ್ಯಾಂಕ್ ಭದ್ರತಾ ತಡೆಗೋಡೆಯನ್ನು ಭೇದಿಸಲು ಪ್ರಯತ್ನಿಸಿದ ಕನಿಷ್ಠ ನಾಲ್ವರು ಪ್ಯಾಲೆಸ್ಟೀನಿಯನ್ನರನ್ನು ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಅಕ್ಟೋಬರ್ 7 ರಿಂದ, ಗಾಜಾ ಮೂಲದ ಹಮಾಸ್ ಉಗ್ರಗಾಮಿಗಳು ಇಸ್ರೇಲಿ ಗುರಿಗಳ ವಿರುದ್ಧ ಹಠಾತ್ ದಾಳಿಯನ್ನು ಪ್ರಾರಂಭಿಸಿದಾಗ, 44 ಪ್ಯಾಲೆಸ್ಟೀನಿಯರು, ಇಸ್ರೇಲಿ ಪಡೆಗಳು ಮತ್ತು ಪಶ್ಚಿಮ…
ಮೈಸೂರು ದಸರಾ ಮತ್ತು ರಜೆಗಳ ಪ್ರಯುಕ್ತ KSRTC ವಿಶೇಷ ವ್ಯವಸ್ಥೆ
ಬೆಂಗಳೂರು: ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಆಗಮಿಸುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿದೆ. ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು KSRTC ತಿಳಿಸಿದೆ. ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮದಿಂದ ೨೦೦೦ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ: ದಸರಾ ಹಬ್ಬದ ರಜೆಗಳ ಪ್ರಯುಕ್ತ ಕರಾರಸಾ ನಿಗಮವು,…
ಮುಜರಾಯಿ ದೇಗುಲ ಅರ್ಚಕರಿಗೆ, ನೌಕರರಿಗೆ ಬಂಪರ್..
ಬೆಂಗಳೂರು: ರಾಜಯದ ಮುಜರಾಯಿ ಇಲಾಖಾ ವ್ಯಾಪ್ತಿಯ ದೇಗುಲಗಳಲ್ಲಿ ಹಿರಿಯ ನಾಗರೀಕರಿಗೆ ದೇವತಾ ಕೈಕರ್ಯ ಸುಲಭವಾಗಲಿದೆ. ಮಹತ್ವದ ನಿರ್ಧಾರದಲ್ಲಿ, 65 ವರ್ಷ ಮೇಲ್ಟಟ್ಟ ಹಿರಿಯ ನಾಗರೀಕರಿಗೆ ದೇವಸ್ಥಾನಗಳಲ್ಲಿ ಸರತಿಯಲ್ಲಿ ನಿಲ್ಲದೆ ನೇರವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಹಿಂದೂ ಧಾರ್ಮಿಕ ದತ್ತಿ ಸಚಿವ ರಾಮಲಿಂಗ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಶುಕ್ರವಾರ (13.10.2023) 4ನೇ ರಾಜ್ಯ ಧಾರ್ಮಿಕ ಪರಿಷತ್ತಿನ ಪ್ರಪ್ರಥಮ ಸಭೆಯಲ್ಲಿ ಹಲವು ಜನಪರ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ದೇವಸ್ಥಾನಗಳಲ್ಲಿ ಮೊಬೈಲ್ ಪೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆಯೂ ಧಾರ್ಮಿಕ ಪರಿಷತ್ ಒಲವು ವ್ಯಕ್ತಪಡಿಸಿದೆ. ಇದೇ ವೇಳೆ, ಕಾಶಿ ಯಾತ್ರೆಯಲ್ಲಿ ಗಯಾ ವನ್ನು ಸೇರ್ಪಡೆಗೊಳಿಸಲಾಗಿದೆ. ಪ್ರಸ್ತುತ ರೂ.5,000/- ಇದ್ದ ಸಹಾಯ ಧನವನ್ನು ರೂ.7,500/-ಕ್ಕೆ ಹೆಚ್ಚಿಸಲಾಗಿದೆ. ಜೊತೆಗೆ ಊಟ ತಿಂಡಿಗಾಗಿ ಪ್ರತ್ಯೇಕ ವ್ಯವಸ್ಥೆ, ವೈದ್ಯರ ಸೇವೆಗಾಗಿ ಪ್ರತ್ಯೇಕ ಭೋಗಿಯನ್ನು ಕಲ್ಪಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿ…
