ದೆಹಲಿ ಗಡಿಯಲ್ಲಿ ಹೋರಾಟ; ಒತ್ತಡಕ್ಕೆ ಮಣಿದು ಬಂಧಿತ ರೈತ ನಾಯಕರನ್ನು ಸತ್ಯಾಗ್ರಹ ಸ್ಥಳಕ್ಕೆ ಕರೆತಂದ ಪೊಲೀಸ್

ಬೆಂಗಳೂರು: ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತ ಉಪವಾಸ ಮುಷ್ಕರ ಕೈಗೊಳ್ಳುವ ಹಿಂದಿನ ದಿನವೇ ಮಧ್ಯರಾತ್ರಿ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲರನ್ನ ಪೊಲೀಸರು ಬಂಧಿಸಿದರೂ ಸಹ ಲೆಕ್ಕಿಸದೆ ಉಪವಾಸ ಮುಂದುವರಿಕೆ ನಾಲ್ಕನೇ ದಿನದಲ್ಲಿ ಮುಂದುವರಿದಿದೆ. ಬಂಧಿತ ರೈತ ನಾಯಕನನ್ನು ಬಿಡುಗಡೆ ಮಾಡಿ ದಲೈವಾಲರನ್ನು ಚಳುವಳಿ ಜಾಗಕ್ಕೆ ವಾಪಸ್ ಕರೆದುಕೊಂಡು ಬನ್ನಿ ನಂತರ ಸರ್ಕಾರದ ಜೊತೆ ಮಾತುಕತೆ ಎಂದು ಪಂಜಾಬ್ ಸರ್ಕಾರಕ್ಕೆ ಎಚ್ಚರಿಕೆಯನ್ನು ಚಳುವಳಿಗಾರರು ನೀಡಿದ್ದು, ಒತ್ತಡಕ್ಕೆ ಮಣಿದ ಮಣಿದ ಪೊಲೀಸರು ರೈತನಾಯಕರನ್ನು ವಾಪಸ್ ಕರೆತಂಡಿದ್ದಾರೆ. ಈ ಹೋರಾಟ ಕುರಿತಂತೆ ಮಾಹಿತಿ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚ ರಾಜಕೀಯೆತರ ಸಂಘಟನೆಯ ದಕ್ಷಿಣ ಭಾರತ ಸಂಚಾಲಕ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಕರ್ನಾಟಕದಲ್ಲಿಯೂ ದೆಹಲಿಗೆ ರೈತ ಹೋರಾಟ ಬೆಂಬಲಿಸಿ ಡಿಸೆಂಬರ್ 6 ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಸತ್ಯಾಗ್ರಹ…

Cult Movie Shooting Member Suicide Attempt Case

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ಸಿನಿಮಾದ ಶೂಟಿಂಗ್ ವಿಚಾರ ಇದೀಗ ಗೊಂದಲದ ಗೂಡಾಗಿ ಪರಿಣಮಿಸಿದೆ. ಜೈದ್ ಖಾನ್ ಅಭಿನಯದ ಸಿನಿಮಾ ಶೂಟಿಂಗ್ ತಂಡದ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರ ತಂಡದವರು ಮಾಡಿದ ತಪ್ಪಿಗೆ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಈ ಸಂಬಂಧ ಇದೀಗ ನಟ ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದೆ. ‘ಕಲ್ಟ್’ ಸಿನಿಮಾದಲ್ಲಿ ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಕರಣ ನಂತರ ಇಡೀ ಚಿತ್ರ ತಂಡ ವಿವಾದದಲ್ಲಿ ಸಿಲುಕಿದೆ.

ಸ್ವಾಮೀಜಿ ಮೇಲೆ ಕೇಸ್; ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಎಂದ ವಿಜಯೇಂದ್ರ

ಬೆಂಗಳೂರು: ಸ್ವಾಮೀಜಿ ಮೇಲೆ ಕೇಸ್ ಹಾಕುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿಗಳು ತಮ್ಮ ಹೇಳಿಕೆಯ ಕುರಿತಂತೆ ಸೌಹಾರ್ದತೆಯನ್ನು ಪುಷ್ಠೀಕರಿಸಿ ಸೂಕ್ತ ಸ್ಪಷ್ಟನೆ ನೀಡಿ ವಿವಾದಕ್ಕೆ ಇತಿಶ್ರೀ ಹಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಈ ಪ್ರಕರಣವನ್ನು ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ. ದೇಶದ್ರೋಹಿಗಳು, ಸಮಾಜ ಘಾತುಕ ಶಕ್ತಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಬ್ಬ ಸಜ್ಜನಿಕೆಯ ಸಂತರೆಂದು ಕರೆಸಿಕೊಂಡಿರುವ ಹಿರಿಯ…

ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಆರ್.ಅಶೋಕ ಎಚ್ಚರಿಕೆ

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ. ಹಿಂದೂಗಳಿಗಾಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ ಎಂದು ಪ್ರಶ್ನಿಸಿದರು. ಅಸಾದುದ್ಧೀನ್ ಓವೈಸಿ ದೇಶಕ್ಕೆ ಬೆದರಿಕೆ ಹಾಕುತ್ತಾರೆ. ಆಂಧ್ರಪ್ರದೇಶದಲ್ಲಿ…

ಸಂದರ್ಭ ಬಂದಾಗ ಸಂಪುಟ ವಿಸ್ತರಣೆ ಆಗುತ್ತದೆ: ಡಿಕೆಶಿ

ದೆಹಲಿ: ರಾಜ್ಯ ಸಂಪುಟ ವಿಸ್ತರಣೆಯು ಸಂದರ್ಭ ಬಂದಾಗ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಸಂಪುಟ ಪುನಾರಚನೆ ಕುರಿತಂತೆ ಡಿ.ಕೆ.ಶಿ. ಪ್ರತಿಕ್ರಿಯಿಸಿದರು. ಸಂಪುಟ ವಿಸ್ತರಣೆಯ ಬಗ್ಗೆ ಪತ್ರಕರ್ತರು ಕೇಳಿದಾಗ, “ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ” ಎಂದು ಡಿಕೆಶಿ ತಿಳಿಸಿದರು.

KPCC ಅಧ್ಯಕ್ಷರ ಆಯ್ಕೆ; ಮಾಧ್ಯಮಗಳಲ್ಲಿ ಚರ್ಚೆ ನಡೆಸಿದರೆ ರಾಜಕಾರಣ ನಡೆಯಲ್ಲ ಎಂದ ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಸಿದರೆ ರಾಜಕೀಯ ನಡೆಯುವುದಿಲ್ಲ ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, “ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ” ಎಂದು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರವು ಎಐಸಿಸಿಗೆ ಬಂದಿದೆ ಎನ್ನುವ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ.…

ಮಹಿಳೆಯನ್ನು ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಅಧಿಕಾರಿ; ವೀಡಿಯೋ ವೈರಲ್

ಲಕ್ನೋ: ಉತ್ತರ ಪ್ರದೇಶದ ಕುಶಿನಗರದಲ್ಲಿ ಪೊಲೀಸರು ಮಹಿಳೆಯೊಬ್ಬಳ ಕೂದಲು ಹಿಡಿದು ಎಳೆದೊಯ್ದ ಆರೋಪ ಭಾರೀ ವಿವಾದವನ್ನು ಸೃಷ್ಟಿಸಿದೆ. ತಮ್ಕುಹಿರಾಜ್ ಸಮೀಪ ಬೇಡುಪರ್ ಮುಸ್ತಕಿಲ್ ಗ್ರಾಮದಲ್ಲಿ ಭೂ ವಿವಾದಕ್ಕೆ ಸಂಬಂಧ ಗುಂಪುಗಳ ನಡುವೆ ವಿವಾದ ಉಂಟಾಗಿದೆ. ಕುಟುಂಬಗಳ ನಡುವಿನ ಗಲಾಟೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯೊಬ್ಬಳನ್ನು ಕೂದಲು ಹಿಡಿದು ಎಳೆದೊಯ್ದಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳಾ ಪೊಲೀಸ್ ಅಧಿಕಾರಿ ಇದ್ದರೂ ಕೂಡ ಪುರುಷ ಪೊಲೀಸ್ ಅಧಿಕಾರಿಯು ಮಹಿಳೆಯನ್ನು ಈ ರೀತಿ ಎಳೆದೊಯ್ದ ವರ್ತನೆ ಬಗ್ಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. कुशीनगर पुलिस की कार्यशैली पर उठे गंभीर सवाल स्टे के बावजूद भी विवादित जमीन पर निर्माण कराने का आरोप पुलिस पर जबरिया निर्माण कराने का आरोप तरयासुजान थाने के बेदूपार एतमाली…

ನಾಡಿನ ಹಿತಕ್ಕಾಗಿ ಈ ಯುವಕರದ್ದು ಸದ್ದಿಲ್ಲದೆ ಸೇವಾ ಕಾರ್ಯ; ಬೆಳ್ತಂಗಡಿ ‘ವೀರ ಕೇಸರಿ’ ಯುವಕರಿಂದ ‘8ನೇ ಆಸರೆ ಮನೆ’ ಕೊಡುಗೆ

ಮಂಗಳೂರು: ನಾಡಿನ ಒಲಿತಿಗಾಗಿ ಒಂದಿಲ್ಲೊಂದು ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿಯ ‘ವೀರ ಕೇಸರಿ’ ಯುವಕರು ಕೈಗೊಂಡಿರುವ ‘ಆಸರೆ ಕಾರ್ಯಕ್ರಮ ಗಮನಸೆಳೆದಿದೆ. ‘ವೀರಕೇಸರಿ ಬೆಳ್ತಂಗಡಿ’ ಸಂಘಟನೆ ನಿರ್ಗತಿಕರಿಗಾಗಿ ಮನೆಗಳನ್ನು ನಿರ್ಮಿಸಿಕೊಡುತ್ತಿದ್ದು, ಇದೀಗ ಈ ಸೇವಾಯೋಜನೆ ದ್ವಿ ಶತಕ ತಲುಪಿದೆ. ವೈದಿಕ ಕೈಂಕರ್ಯಗಳೊಂದಿಗೆ ನಡೆದ 200ನೇ ಸೇವಾಯೋಜನೆಯಾದ 8ನೇ ಆಸರೆ ಮನೆಯ ಭೂಮಿಪೂಜಾ ಕಾರ್ಯಕ್ರಮವು ಗಮನಸೆಳೆಯಿತು. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಅಂತರಬೈಲು ಪಾದೆಮೇಲಿನಲ್ಲಿ ನವೆಂಬರ್ 25ರಂದು ಭೂಮಿ ಪೂಜೆ ನೆರವೇರಿಸಲಾಯಿತು. ಶ್ರೀನಿರಂಜನಿ ಮಾಯಾಪುರಿ ಹರಿದ್ವಾರ್‌ನ ಪಂಚಾಯಿತಿ ಅಖಾಡದ ನಾಗಸಾಧು ತಪೋನಿಧಿ ಬಾಬಾ ಶ್ರೀ ವಿಠ್ಠಲ್ ಗಿರಿ ಜಿ ಮಹಾರಾಜ್ ಅವರು ಭೂಮಿ ಪೂಜೆ ನೆರವೇರಿಸಿದರು. ‘ವೀರ ಕೇಸರಿ’ ಬಳಗದ ಯುವಕರೇ ಖರ್ಚಿನ ಹಣ ಪೇರಿಸಿ ಈ ಯೋಜನೆ ಸಾಕಾರಗೊಳಿಸುತ್ತಿರುವ ಮೂಲಕ ನಾಡಿಗೆ ಶಕ್ತಿಯಾಗಿ ಗುರುತಾಗಿದ್ದಾರೆ. ಇದರ ಜೊತೆಯಲ್ಲೇ ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳ ಸದಸ್ಯರಿಗೆ…

KSRTC ಅಂತರ ನಿಗಮ ವರ್ಗಾವಣೆ; 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಪ್ರಕಟಿಸಿದ ರಾಮಲಿಂಗ ರೆಡ್ಡಿ

ಬೆಂಗಳೂರು: ನೌಕರರ ಕೋರಿಕೆ‌ ಮೇರೆಗೆ KSRTC ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ‌ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತು. ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪಯಿನಾಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಭಂದಿಸಿದ ಖಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ ಎಂದು ಸಾರಿಗೆ ಸಚಿವರು ಸಾಮಾಜಿಕ ಜಾಲತಾಣ…

ಕಮಲ ಕಿತ್ತಾಟ ಮರೆಮಾಚಲು ‘ಕೈ’ಯತ್ತ ಬೊಟ್ಟು: ಉಗ್ರಪ್ಪ ಬಾಣ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಅಂತರಿಕ ಕೋಲಾಹಲವನ್ನು ಮುಚ್ಚಿಹಾಕಲು ರಾಜ್ಯ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರವರ ಸರ್ಕಾರದ ಮೇಲೆ ಬಿಜೆಪಿ ಪಕ್ಷ ಕೆಸರೆರಚುವ ಕೆಲಸ ಮಾಡುತ್ತಿದೆ. ತಮ್ಮ ಪಕ್ಷದಲ್ಲೇ ಕಿತ್ತಾಟ, ಹುಳುಕುಗಳು ಇಡೀ ರಾಜ್ಯಕ್ಕೆ ಕಾಣುತ್ತಿದ್ದರು ಸುಖಾಸುಮ್ಮನೆ ಮುಡಾ ಹಾಗೂ ವಕ್ಫ್ ವಿಚಾರವನ್ನು ಪದೇ ಪದೇ ಎತ್ತುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್ ಉಗ್ರಪ್ಪ ಆಕ್ರೋಶ ಹೊರಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಉಪಸ್ಥಿತಿಯಲ್ಲಿ ಜಂಟಿ ಜಂಟಿಮಾಧ್ಯಮ ಗೋಷ್ಠಿ ನಡೆಸಿದ ವಿ.ಎಸ್ ಉಗ್ರಪ್ಪ, ರಾಜ್ಯದಲ್ಲಿ ಯಡಿಯೂರಪ್ಪ ಹಾಗು ಬಸವರಾಜ್ ಬೊಮ್ಮಾಯಿ ಕಾಲದಲ್ಲಿ ಸುಮಾರು 2000 ನೋಟೀಸ್ ನೀಡಲಾಗಿತ್ತು . ಆದರೆ ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ 1500 ನೋಟೀಸ್ ನೀಡಲಾಗಿದೆ. ಇಷ್ಟೆಲ್ಲ ತಪ್ಪುಗಳು ತಮಲ್ಲೇ ಇದ್ದರು, ವಿನಾಕಾರಣ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಬೆರಳು ತೋರಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ ಮತ್ತು ಯತ್ನಾಳ್ ಕಿತ್ತಾಟವಿದ್ದರೂ…